Homeಮುಖಪುಟಜನಶಕ್ತಿ ಮೀಡಿಯ ವೆಬ್‌ ಲೋಕಾರ್ಪಣೆ : ಪರ್ಯಾಯ ಮಾಧ್ಯಮ ಏಕೆ-ಹೇಗೆ ಕುರಿತು ಸಂವಾದ

ಜನಶಕ್ತಿ ಮೀಡಿಯ ವೆಬ್‌ ಲೋಕಾರ್ಪಣೆ : ಪರ್ಯಾಯ ಮಾಧ್ಯಮ ಏಕೆ-ಹೇಗೆ ಕುರಿತು ಸಂವಾದ

ವಿಶ್ಲೇಷಣಾತ್ಮಕ ಲೇಖನಗಳಿಗೆ ಇದೊಂದು ತಾಣವಾಗಲಿದ್ದು, ಕತೆ, ಕವಿತೆ, ಸಿನಿಮಾ, ರಂಗಭೂಮಿ ಮುಂತಾದ ಸಾಂಸ್ಕೃತಿಕ ಅಭಿವ್ಯಕ್ತಿ ಅಥವಾ ಅವುಗಳ ವಿಮರ್ಶೆಗೂ ಇದು ತೆರೆದಿರುತ್ತದೆ ಎಂದು ವೆಬ್‌ಸೈಟ್ ಹೇಳಿದೆ.

- Advertisement -
- Advertisement -

’ಜನಶಕ್ತಿ’ ವಾರಪತ್ರಿಕೆಯ ಜಾಲತಾಣ ರೂಪವಾದ ’ಜನಶಕ್ತಿ ಮೀಡಿಯಾ’ ವೆಬ್‌ ಪತ್ರಿಕೆಯು ಹೊಸ ವಿನ್ಯಾಸದೊಂದಿಗೆ ಲೋಕಾರ್ಪಣೆಯಾಗಲಿದ್ದು, ಸೆಪ್ಟೆಂಬರ್ 15 ರಿಂದ ಅಕ್ಟೋಬರ್ 15 ರ ವರೆಗೆ ಪರ್ಯಾಯ ಮಾಧ್ಯಮ ಏಕೆ? ಹೇಗೆ ? ಕುರಿತು ಬರಹ ಮತ್ತು ವೆಬಿನಾರ್‌ಗಳ ಸಂವಾದ ನಡೆಯಲಿದೆ.

ಜನಶಕ್ತಿ ಮೀಡಿಯಾ ವೆಬ್, ಫೇಸ್‌ಬುಕ್, ಪಾಡ್ಕಾಸ್ಟ್ ಮತ್ತು ಯೂ ಟ್ಯೂಬ್ ಚಾನೆಲುಗಳು ಈಗಾಗಲೇ ಸಕ್ರಿಯವಾಗಿದ್ದು, ಪ್ರಸ್ತುತ ಹೊಸ ವಿನ್ಯಾಸದೊಂದಿಗೆ ಪ್ರಕಟಿಸುವ ಸಿದ್ಧತೆ ನಡೆಯುತ್ತಿದೆ. ವೆಬ್ ಪತ್ರಿಕೆಯಲ್ಲಿ ಪ್ರಸಕ್ತ ವಿದ್ಯಮಾನಗಳ ವಸ್ತುನಿಷ್ಠ ವರದಿ, ಟೀಕೆ ಟಿಪ್ಪಣಿ ವಿಮರ್ಶೆಗಳಿರುತ್ತವೆ ಎಂದು ಹೇಳಿಕೆಯಲ್ಲಿ ವಸಂತರಾಜು ಎನ್‌.ಕೆ ತಿಳಿಸಿದ್ದಾರೆ.

ಇದು ರಾಜ್ಯ, ರಾಷ್ಟ್ರ ಮತ್ತು ಅಂರ‍್ರಾಷ್ಟ್ರೀಯ ಮಟ್ಟದ ಚಿಂತಕರ, ಪರಿಣಿತರ, ಬರಹಗಾರರ, ಪತ್ರಕರ್ತರ ವೈವಿಧ್ಯಮಯ ಅಭಿಪ್ರಾಯಗಳಿಗೆ ವೇದಿಕೆಯಾಗಿರುತ್ತದೆ. ಆರ್ಥಿಕ, ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ, ವಿಜ್ಙಾನ-ತಂತ್ರಜ್ಙಾನ ಇತ್ಯಾದಿ ವಿಷಯಗಳ ಕುರಿತು ವಿಶ್ಲೇಷಣಾತ್ಮಕ ಲೇಖನಗಳಿಗೂ ಇದೊಂದು ತಾಣವಾಗಲಿದ್ದು, ಕತೆ, ಕವಿತೆ, ಸಿನಿಮಾ, ರಂಗಭೂಮಿ ಮುಂತಾದ ಸಾಂಸ್ಕೃತಿಕ ಅಭಿವ್ಯಕ್ತಿ ಅಥವಾ ಅವುಗಳ ವಿಮರ್ಶೆಗೂ ಇದು ತೆರೆದಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

“ಕರ್ನಾಟಕ 2020: ಕೊರೊನಾ ಕಾಲದಲ್ಲಿ ಮತ್ತು ನಂತರ” ವಿಷಯದ ಕುರಿತು ಮುಖ್ಯವಾಹಿನಿ ಮಾಧ್ಯಮಗಳು ಕೊರೊನಾ ಕಾಲದಲ್ಲಿ ಹೇಗೆ ವರ್ತಿಸಿದವು? ಈ ವರ್ತನೆಗೆ ಕೊರೊನಾ ಕಾರಣವೇ?  ಅಲ್ಲದಿದ್ದರೆ ಇದಕ್ಕೆ ಕಾರಣಗಳೇನು? ಮುಖ್ಯವಾಹಿನಿ ಮಾಧ್ಯಮಗಳನ್ನು ‘ಸುಧಾರಿಸಲು’ ಸಾಧ್ಯವಿಲ್ಲವೇ? ಇದೆ ಎನ್ನುವುದಾದರೆ ಏನು ಮಾಡಬೇಕು? ಇಲ್ಲವಾದರೆ ಪರ್ಯಾಯ ಏನು? ಪರ್ಯಾಯ ಮಾಧ್ಯಮದ ಸ್ವರೂಪ, ಕಾರ್ಯವಿಧಾನ ಹೇಗಿರಬೇಕು? ಅದಕ್ಕೆ ಸಂಪನ್ಮೂಲ ಹೊಂದಿಸುವುದು ಹೇಗೆ? ಇನ್ನಿತ್ಯಾದಿ ಪ್ರಶ್ನೆಗಳನ್ನಿಟ್ಟುಕೊಂಡು ಸರಣಿ ಬರಹ ಮತ್ತು ಚರ್ಚೆ ನಡೆಸಲು ಮೀಡಿಯ ತಂದ ಮುಂದಾಗಿದೆ.

ಇದನ್ನೂ ಓದಿ: ವೃತ್ತಿನಿಷ್ಠೆಯಿಲ್ಲದ ಮಾಧ್ಯಮಗಳು ಯಾವ ಹುನ್ನಾರದಲ್ಲಿ ಭಾಗಿಯಾಗುತ್ತಿವೆ?

ಥೀಮ್‌ ಕುರಿತ ಅಭಿಪ್ರಾಯಗಳನ್ನು ಬರಹ, ಅಡಿಯೋ ಅಥವಾ ವಿಡಿಯೋ ರೂಪದಲ್ಲಿ ಸೆಪ್ಟೆಂಬರ್ 20 ರೊಳಗಾಗಿ 9845172249, 9449260183/ [email protected] ಮೈಲ್/ವಾಟ್ಸಪ್ ಗೆ ಕಳಿಸಿಕೊಡಬೇಕು ಎಂದು ಜನಶಕ್ತಿ ಮೀಡಿಯ ತಂಡ ವಿನಂತಿಸಿದೆ.


ಓದಿ: ಸುಶಾಂತ್ ಸಿಂಗ್ ಪ್ರಕರಣ: ರಿಯಾ ಜೊತೆ ಮಾಧ್ಯಮಗಳ ನಡೆ ಖಂಡನೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...