Homeಮುಖಪುಟಜನಶಕ್ತಿ ಮೀಡಿಯ ವೆಬ್‌ ಲೋಕಾರ್ಪಣೆ : ಪರ್ಯಾಯ ಮಾಧ್ಯಮ ಏಕೆ-ಹೇಗೆ ಕುರಿತು ಸಂವಾದ

ಜನಶಕ್ತಿ ಮೀಡಿಯ ವೆಬ್‌ ಲೋಕಾರ್ಪಣೆ : ಪರ್ಯಾಯ ಮಾಧ್ಯಮ ಏಕೆ-ಹೇಗೆ ಕುರಿತು ಸಂವಾದ

ವಿಶ್ಲೇಷಣಾತ್ಮಕ ಲೇಖನಗಳಿಗೆ ಇದೊಂದು ತಾಣವಾಗಲಿದ್ದು, ಕತೆ, ಕವಿತೆ, ಸಿನಿಮಾ, ರಂಗಭೂಮಿ ಮುಂತಾದ ಸಾಂಸ್ಕೃತಿಕ ಅಭಿವ್ಯಕ್ತಿ ಅಥವಾ ಅವುಗಳ ವಿಮರ್ಶೆಗೂ ಇದು ತೆರೆದಿರುತ್ತದೆ ಎಂದು ವೆಬ್‌ಸೈಟ್ ಹೇಳಿದೆ.

- Advertisement -
- Advertisement -

’ಜನಶಕ್ತಿ’ ವಾರಪತ್ರಿಕೆಯ ಜಾಲತಾಣ ರೂಪವಾದ ’ಜನಶಕ್ತಿ ಮೀಡಿಯಾ’ ವೆಬ್‌ ಪತ್ರಿಕೆಯು ಹೊಸ ವಿನ್ಯಾಸದೊಂದಿಗೆ ಲೋಕಾರ್ಪಣೆಯಾಗಲಿದ್ದು, ಸೆಪ್ಟೆಂಬರ್ 15 ರಿಂದ ಅಕ್ಟೋಬರ್ 15 ರ ವರೆಗೆ ಪರ್ಯಾಯ ಮಾಧ್ಯಮ ಏಕೆ? ಹೇಗೆ ? ಕುರಿತು ಬರಹ ಮತ್ತು ವೆಬಿನಾರ್‌ಗಳ ಸಂವಾದ ನಡೆಯಲಿದೆ.

ಜನಶಕ್ತಿ ಮೀಡಿಯಾ ವೆಬ್, ಫೇಸ್‌ಬುಕ್, ಪಾಡ್ಕಾಸ್ಟ್ ಮತ್ತು ಯೂ ಟ್ಯೂಬ್ ಚಾನೆಲುಗಳು ಈಗಾಗಲೇ ಸಕ್ರಿಯವಾಗಿದ್ದು, ಪ್ರಸ್ತುತ ಹೊಸ ವಿನ್ಯಾಸದೊಂದಿಗೆ ಪ್ರಕಟಿಸುವ ಸಿದ್ಧತೆ ನಡೆಯುತ್ತಿದೆ. ವೆಬ್ ಪತ್ರಿಕೆಯಲ್ಲಿ ಪ್ರಸಕ್ತ ವಿದ್ಯಮಾನಗಳ ವಸ್ತುನಿಷ್ಠ ವರದಿ, ಟೀಕೆ ಟಿಪ್ಪಣಿ ವಿಮರ್ಶೆಗಳಿರುತ್ತವೆ ಎಂದು ಹೇಳಿಕೆಯಲ್ಲಿ ವಸಂತರಾಜು ಎನ್‌.ಕೆ ತಿಳಿಸಿದ್ದಾರೆ.

ಇದು ರಾಜ್ಯ, ರಾಷ್ಟ್ರ ಮತ್ತು ಅಂರ‍್ರಾಷ್ಟ್ರೀಯ ಮಟ್ಟದ ಚಿಂತಕರ, ಪರಿಣಿತರ, ಬರಹಗಾರರ, ಪತ್ರಕರ್ತರ ವೈವಿಧ್ಯಮಯ ಅಭಿಪ್ರಾಯಗಳಿಗೆ ವೇದಿಕೆಯಾಗಿರುತ್ತದೆ. ಆರ್ಥಿಕ, ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ, ವಿಜ್ಙಾನ-ತಂತ್ರಜ್ಙಾನ ಇತ್ಯಾದಿ ವಿಷಯಗಳ ಕುರಿತು ವಿಶ್ಲೇಷಣಾತ್ಮಕ ಲೇಖನಗಳಿಗೂ ಇದೊಂದು ತಾಣವಾಗಲಿದ್ದು, ಕತೆ, ಕವಿತೆ, ಸಿನಿಮಾ, ರಂಗಭೂಮಿ ಮುಂತಾದ ಸಾಂಸ್ಕೃತಿಕ ಅಭಿವ್ಯಕ್ತಿ ಅಥವಾ ಅವುಗಳ ವಿಮರ್ಶೆಗೂ ಇದು ತೆರೆದಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

“ಕರ್ನಾಟಕ 2020: ಕೊರೊನಾ ಕಾಲದಲ್ಲಿ ಮತ್ತು ನಂತರ” ವಿಷಯದ ಕುರಿತು ಮುಖ್ಯವಾಹಿನಿ ಮಾಧ್ಯಮಗಳು ಕೊರೊನಾ ಕಾಲದಲ್ಲಿ ಹೇಗೆ ವರ್ತಿಸಿದವು? ಈ ವರ್ತನೆಗೆ ಕೊರೊನಾ ಕಾರಣವೇ?  ಅಲ್ಲದಿದ್ದರೆ ಇದಕ್ಕೆ ಕಾರಣಗಳೇನು? ಮುಖ್ಯವಾಹಿನಿ ಮಾಧ್ಯಮಗಳನ್ನು ‘ಸುಧಾರಿಸಲು’ ಸಾಧ್ಯವಿಲ್ಲವೇ? ಇದೆ ಎನ್ನುವುದಾದರೆ ಏನು ಮಾಡಬೇಕು? ಇಲ್ಲವಾದರೆ ಪರ್ಯಾಯ ಏನು? ಪರ್ಯಾಯ ಮಾಧ್ಯಮದ ಸ್ವರೂಪ, ಕಾರ್ಯವಿಧಾನ ಹೇಗಿರಬೇಕು? ಅದಕ್ಕೆ ಸಂಪನ್ಮೂಲ ಹೊಂದಿಸುವುದು ಹೇಗೆ? ಇನ್ನಿತ್ಯಾದಿ ಪ್ರಶ್ನೆಗಳನ್ನಿಟ್ಟುಕೊಂಡು ಸರಣಿ ಬರಹ ಮತ್ತು ಚರ್ಚೆ ನಡೆಸಲು ಮೀಡಿಯ ತಂದ ಮುಂದಾಗಿದೆ.

ಇದನ್ನೂ ಓದಿ: ವೃತ್ತಿನಿಷ್ಠೆಯಿಲ್ಲದ ಮಾಧ್ಯಮಗಳು ಯಾವ ಹುನ್ನಾರದಲ್ಲಿ ಭಾಗಿಯಾಗುತ್ತಿವೆ?

ಥೀಮ್‌ ಕುರಿತ ಅಭಿಪ್ರಾಯಗಳನ್ನು ಬರಹ, ಅಡಿಯೋ ಅಥವಾ ವಿಡಿಯೋ ರೂಪದಲ್ಲಿ ಸೆಪ್ಟೆಂಬರ್ 20 ರೊಳಗಾಗಿ 9845172249, 9449260183/ [email protected] ಮೈಲ್/ವಾಟ್ಸಪ್ ಗೆ ಕಳಿಸಿಕೊಡಬೇಕು ಎಂದು ಜನಶಕ್ತಿ ಮೀಡಿಯ ತಂಡ ವಿನಂತಿಸಿದೆ.


ಓದಿ: ಸುಶಾಂತ್ ಸಿಂಗ್ ಪ್ರಕರಣ: ರಿಯಾ ಜೊತೆ ಮಾಧ್ಯಮಗಳ ನಡೆ ಖಂಡನೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...