Homeಮುಖಪುಟಬಿಜೆಪಿ ಜೊತೆ ಅಧಿಕಾರಕ್ಕೇರಿದರೂ ಮುಸ್ಲಿಂ ವಿರೋಧಿ ನಿಲುವು ಬೆಂಬಲಿಸುವುದಿಲ್ಲ: ಜೆಡಿಯು ವಕ್ತಾರ ಕೆಸಿ ತ್ಯಾಗಿ

ಬಿಜೆಪಿ ಜೊತೆ ಅಧಿಕಾರಕ್ಕೇರಿದರೂ ಮುಸ್ಲಿಂ ವಿರೋಧಿ ನಿಲುವು ಬೆಂಬಲಿಸುವುದಿಲ್ಲ: ಜೆಡಿಯು ವಕ್ತಾರ ಕೆಸಿ ತ್ಯಾಗಿ

- Advertisement -
- Advertisement -

“ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿರುವ ಎನ್‌ಡಿಎ ಮೈತ್ರಿ ಸರ್ಕಾರ ಮುಸ್ಲಿಮರು ಮತ್ತು ಇತರ ಅಲ್ಪಸಂಖ್ಯಾತ ಸಮುದಾಯಗಳ ವಿರುದ್ದ ನಿಲುವು ತಾಳಲು ಜೆಡಿಯು ಅವಕಾಶ ನೀಡುವುದಿಲ್ಲ” ಎಂದು ಪಕ್ಷದ ರಾಷ್ಟ್ರೀಯ ವಕ್ತಾರ ಕೆಸಿ ತ್ಯಾಗಿ ಶುಕ್ರವಾರ ಡಿಜಿಟಲ್ ಸುದ್ದಿ ವಾಹಿನಿ ರೆಡ್ ಮೈಕ್‌ಗೆ ತಿಳಿಸಿದ್ದಾರೆ.

ಜೆಡಿಯು ಪಕ್ಷ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಪ್ರಮುಖ ಪಕ್ಷವಾಗಿದೆ. ಮೋದಿ ನೇತೃತ್ವದ ಎನ್‌ಡಿಎ ಸಮ್ಮಿಶ್ರ ಸರ್ಕಾರ ರಚನೆಯಾಗಬೇಕಾದರೆ ಬಿಜೆಪಿಗೆ ಜೆಡಿಯು ಬೆಂಬಲ ಅತ್ಯಗತ್ಯವಾಗಿದೆ.

“ನಾವು ಬಿಜೆಪಿಯೊಂದಿಗೆ ಅಧಿಕಾರಕ್ಕೇರಿದರೂ, ಮುಸ್ಲಿಮರು ಸೇರಿದಂತೆ ಇತರ ಅಲ್ಪಸಂಖ್ಯಾತರ ವಿರೋಧಿ ನಿಲುವನ್ನು ಒಪ್ಪುದಿಲ್ಲ” ಎಂದು ತ್ಯಾಗಿ ಹೇಳಿದ್ದು, “ಮುಸ್ಲಿಮರು ನಮ್ಮ ಪಕ್ಷದ ಮೇಲೆ ವಿಶ್ವಾಸ ಇಟ್ಟಿರುವುದರ ಬಗ್ಗೆ ಹೆಮ್ಮೆಪಡುತ್ತೇವೆ” ಎಂದಿದ್ದಾರೆ.

ಲೋಕಸಭೆ ಚುನಾವಣೆಯ ಪ್ರಚಾರದ ವೇಳೆ ಬಿಜೆಪಿ ಮುಸ್ಲಿಮರನ್ನು ಗುರಿಯಾಗಿಸಿ ದ್ವೇಷ ಭಾಷಣ ಮಾಡಿರುವುದನ್ನು ಉಲ್ಲೇಖಿಸಿ, “ಜೆಡಿಯು ಈ ಸರ್ಕಾರದಲ್ಲಿ ಜಾತ್ಯಾತೀತ ತತ್ವವನ್ನು ಎತ್ತಿ ಹಿಡಿಯಲಿದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ತ್ಯಾಗಿ, “ಚುನಾವಣೆಯಲ್ಲಿ ಕೆಸರೆರಚಲು ಬಳಸಿದ ವಿಷಯಗಳನ್ನು ಮರೆತುಬಿಡಬೇಕು” ಎಂದಿದ್ದಾರೆ.

“ನಮ್ಮ ಪಕ್ಷದ ಅಭ್ಯರ್ಥಿ ಮುಜಾಹಿದ್ ಆಲಂ ಅವರು ಬಿಹಾರದ ಮುಸ್ಲಿಂ ಬಾಹುಳ್ಯದ ಕಿಶನ್‌ಗಂಜ್ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಎರಡನೇ ಸ್ಥಾನ ಪಡೆದಿದ್ದಾರೆ. ಈ ಕ್ಷೇತ್ರದಲ್ಲಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಪಕ್ಷದಿಂದ ಕಣಕ್ಕಿಳಿದಿದ್ದ ಅಭ್ಯರ್ಥಿಗಿಂತ ಹೆಚ್ಚು ಮತ ಗಳಿಸಿದ್ದಾರೆ” ಎಂದು ಕೆಸಿ ತ್ಯಾಗಿ ಹೇಳಿದ್ದು, ಮುಸ್ಲಿಮರು ಓವೈಸಿ ಪಕ್ಷಕ್ಕಿಂತ ಜೆಡಿಯು ಮೇಲೆ ವಿಶ್ವಾಸವಿಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಕಿಶನ್‌ಗಂಜ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಹಮ್ಮದ್ ಜಾವೇದ್ ಗೆಲುವು ದಾಖಲಿಸಿದ್ದಾರೆ.

“ಎಲ್ಲಾ ಜಾತಿ, ಧರ್ಮಗಳನ್ನು ಒಟ್ಟಿಗೆ ಮುನ್ನಡೆಸಲು ಭಯಸುತ್ತದೆ. ಜನರ ಮೇಲೆ ನೀತಿಗಳನ್ನು ಹೇರುವ ಮೊದಲು ಅವುಗಳ ಕುರಿತು ವಿಸ್ಕೃತವಾದ ಚರ್ಚೆ ನಡೆಸಲು ನಮ್ಮ ಪಕ್ಷ ಸಲಹೆ ನೀಡುತ್ತದೆ” ಎಂದು ಕೆಸಿ ತ್ಯಾಗಿ ಹೇಳಿದ್ದಾರೆ.

ಏಕರೂಪ ನಾಗರಿಕ ಸಂಹಿತೆ ಜಾರಿಯ ಬಗ್ಗೆ ಪ್ರತಿಕ್ರಿಯಿಸಿದ ತ್ಯಾಗಿ, “ನಮ್ಮ ಪಕ್ಷ ‘ಸುಧಾರಣೆ ವಿರೋಧಿಯಲ್ಲ’. ಆದರೆ ಸಂಹಿತೆಯ ಕರಡು ತಯಾರಿಸಲು ಎಲ್ಲಾ ಪಾಲುದಾರರು, ಮುಖ್ಯಮಂತ್ರಿಗಳು, ರಾಜಕೀಯ ಪಕ್ಷಗಳು ಮತ್ತು ಪಂಗಡಗಳನ್ನು ಸಂಪರ್ಕಿಸಬೇಕು” ಎಂದಿದ್ದಾರೆ.

ಇದನ್ನೂ ಓದಿ : ಲೋಕಸಭೆಯ ತೀರ್ಪನ್ನು ಹೆಚ್ಚಿನ ಮುಸ್ಲಿಮರು ಭರವಸೆಯಿಂದ ಏಕೆ ನೋಡುತ್ತಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2025 ರ ಏಷ್ಯಾ ಪವರ್ ಇಂಡೆಕ್ಸ್‌: ಮೊದಲೆರಡು ಸ್ಥಾನದಲ್ಲಿ ಅಮೆರಿಕ-ಚೀನಾ, ಭಾರತಕ್ಕೆ ಮೂರನೇ ಶ್ರೇಯಾಂಕ

2025 ರ ಏಷ್ಯಾ ಪವರ್ ಇಂಡೆಕ್ಸ್‌ನಲ್ಲಿ ಭಾರತ ಮೂರನೇ ಶ್ರೇಯಾಂಕವನ್ನು ಪಡೆದುಕೊಂಡಿದೆ. ಆದರೆ, ಯುನೈಟೆಡ್ ಸ್ಟೇಟ್ಸ್-ಚೀನಾ ಕ್ರಮವಾಗಿ ಮೊದಲ ಮತ್ತು ಎರಡನೇ ಸ್ಥಾನವನ್ನು ಪಡೆದುಕೊಂಡಿವೆ ಎಂದು ಜಾಗತಿಕವಾಗಿ ಪ್ರಸಿದ್ಧವಾದ ಚಿಂತಕರ ಚಾವಡಿ ತನ್ನ...

ಸಾಮೂಹಿಕ ಶರಣಾಗತಿ ಘೋಷಿಸಿದ ಎಂಎಂಸಿ-ವಲಯ ಮಾವೋವಾದಿಗಳು; ಭದ್ರತೆ ಒದಗಿಸುವಂತೆ ಮನವಿ

ಮಹಾರಾಷ್ಟ್ರ-ಮಧ್ಯಪ್ರದೇಶ-ಛತ್ತೀಸ್‌ಗಢ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾವೋವಾದಿಗಳು ಜನವರಿ 1, 2026 ರಂದು ಸಾಮೂಹಿಕವಾಗಿ ಶರಣಾಗಲು ಸಿದ್ಧರಿರುವುದಾಗಿ ಘೋಷಿಸಿದ್ದಾರೆ. ಎಂಎಂಸಿ ವಲಯದ ವಕ್ತಾರ ಅನಂತ್ ಹೆಸರಿನಲ್ಲಿ ಹೊರಡಿಸಲಾದ ಪತ್ರದಲ್ಲಿ, ನಮ್ಮ ಗುಂಪು ವೈಯಕ್ತಿಕ ಶರಣಾಗತಿಗಳ ಬದಲಿಗೆ...

ಸಾವರ್ಕರ್ ಮಾನನಷ್ಟ ಮೊಕದ್ದಮೆ ಪ್ರಕರಣ: ಯೂಟ್ಯೂಬ್‌ನಿಂದ ರಾಹುಲ್ ಗಾಂಧಿ ಭಾಷಣ ಪ್ರದರ್ಶನದ ಮನವಿ ತಿರಸ್ಕರಿಸಿದ ಪುಣೆ ನ್ಯಾಯಾಲಯ

ಲಂಡನ್‌ನಲ್ಲಿ ನಡೆದ ಭಾಷಣದಲ್ಲಿ ಬಲಪಂಥೀಯ ನಾಯಕ ವಿನಾಯಕ ಸಾವರ್ಕರ್ ಅವರನ್ನು ಮಾನನಷ್ಟ ಮಾಡಿದ್ದಾರೆ ಎಂಬ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ನಡೆಯುತ್ತಿರುವ ಮಾನನಷ್ಟ ಮೊಕದ್ದಮೆಯ ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ, ಯೂಟ್ಯೂಬ್...

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...