Homeಮುಖಪುಟಬಿಜೆಪಿ ಜೊತೆ ಅಧಿಕಾರಕ್ಕೇರಿದರೂ ಮುಸ್ಲಿಂ ವಿರೋಧಿ ನಿಲುವು ಬೆಂಬಲಿಸುವುದಿಲ್ಲ: ಜೆಡಿಯು ವಕ್ತಾರ ಕೆಸಿ ತ್ಯಾಗಿ

ಬಿಜೆಪಿ ಜೊತೆ ಅಧಿಕಾರಕ್ಕೇರಿದರೂ ಮುಸ್ಲಿಂ ವಿರೋಧಿ ನಿಲುವು ಬೆಂಬಲಿಸುವುದಿಲ್ಲ: ಜೆಡಿಯು ವಕ್ತಾರ ಕೆಸಿ ತ್ಯಾಗಿ

- Advertisement -
- Advertisement -

“ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿರುವ ಎನ್‌ಡಿಎ ಮೈತ್ರಿ ಸರ್ಕಾರ ಮುಸ್ಲಿಮರು ಮತ್ತು ಇತರ ಅಲ್ಪಸಂಖ್ಯಾತ ಸಮುದಾಯಗಳ ವಿರುದ್ದ ನಿಲುವು ತಾಳಲು ಜೆಡಿಯು ಅವಕಾಶ ನೀಡುವುದಿಲ್ಲ” ಎಂದು ಪಕ್ಷದ ರಾಷ್ಟ್ರೀಯ ವಕ್ತಾರ ಕೆಸಿ ತ್ಯಾಗಿ ಶುಕ್ರವಾರ ಡಿಜಿಟಲ್ ಸುದ್ದಿ ವಾಹಿನಿ ರೆಡ್ ಮೈಕ್‌ಗೆ ತಿಳಿಸಿದ್ದಾರೆ.

ಜೆಡಿಯು ಪಕ್ಷ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಪ್ರಮುಖ ಪಕ್ಷವಾಗಿದೆ. ಮೋದಿ ನೇತೃತ್ವದ ಎನ್‌ಡಿಎ ಸಮ್ಮಿಶ್ರ ಸರ್ಕಾರ ರಚನೆಯಾಗಬೇಕಾದರೆ ಬಿಜೆಪಿಗೆ ಜೆಡಿಯು ಬೆಂಬಲ ಅತ್ಯಗತ್ಯವಾಗಿದೆ.

“ನಾವು ಬಿಜೆಪಿಯೊಂದಿಗೆ ಅಧಿಕಾರಕ್ಕೇರಿದರೂ, ಮುಸ್ಲಿಮರು ಸೇರಿದಂತೆ ಇತರ ಅಲ್ಪಸಂಖ್ಯಾತರ ವಿರೋಧಿ ನಿಲುವನ್ನು ಒಪ್ಪುದಿಲ್ಲ” ಎಂದು ತ್ಯಾಗಿ ಹೇಳಿದ್ದು, “ಮುಸ್ಲಿಮರು ನಮ್ಮ ಪಕ್ಷದ ಮೇಲೆ ವಿಶ್ವಾಸ ಇಟ್ಟಿರುವುದರ ಬಗ್ಗೆ ಹೆಮ್ಮೆಪಡುತ್ತೇವೆ” ಎಂದಿದ್ದಾರೆ.

ಲೋಕಸಭೆ ಚುನಾವಣೆಯ ಪ್ರಚಾರದ ವೇಳೆ ಬಿಜೆಪಿ ಮುಸ್ಲಿಮರನ್ನು ಗುರಿಯಾಗಿಸಿ ದ್ವೇಷ ಭಾಷಣ ಮಾಡಿರುವುದನ್ನು ಉಲ್ಲೇಖಿಸಿ, “ಜೆಡಿಯು ಈ ಸರ್ಕಾರದಲ್ಲಿ ಜಾತ್ಯಾತೀತ ತತ್ವವನ್ನು ಎತ್ತಿ ಹಿಡಿಯಲಿದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ತ್ಯಾಗಿ, “ಚುನಾವಣೆಯಲ್ಲಿ ಕೆಸರೆರಚಲು ಬಳಸಿದ ವಿಷಯಗಳನ್ನು ಮರೆತುಬಿಡಬೇಕು” ಎಂದಿದ್ದಾರೆ.

“ನಮ್ಮ ಪಕ್ಷದ ಅಭ್ಯರ್ಥಿ ಮುಜಾಹಿದ್ ಆಲಂ ಅವರು ಬಿಹಾರದ ಮುಸ್ಲಿಂ ಬಾಹುಳ್ಯದ ಕಿಶನ್‌ಗಂಜ್ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಎರಡನೇ ಸ್ಥಾನ ಪಡೆದಿದ್ದಾರೆ. ಈ ಕ್ಷೇತ್ರದಲ್ಲಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಪಕ್ಷದಿಂದ ಕಣಕ್ಕಿಳಿದಿದ್ದ ಅಭ್ಯರ್ಥಿಗಿಂತ ಹೆಚ್ಚು ಮತ ಗಳಿಸಿದ್ದಾರೆ” ಎಂದು ಕೆಸಿ ತ್ಯಾಗಿ ಹೇಳಿದ್ದು, ಮುಸ್ಲಿಮರು ಓವೈಸಿ ಪಕ್ಷಕ್ಕಿಂತ ಜೆಡಿಯು ಮೇಲೆ ವಿಶ್ವಾಸವಿಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಕಿಶನ್‌ಗಂಜ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಹಮ್ಮದ್ ಜಾವೇದ್ ಗೆಲುವು ದಾಖಲಿಸಿದ್ದಾರೆ.

“ಎಲ್ಲಾ ಜಾತಿ, ಧರ್ಮಗಳನ್ನು ಒಟ್ಟಿಗೆ ಮುನ್ನಡೆಸಲು ಭಯಸುತ್ತದೆ. ಜನರ ಮೇಲೆ ನೀತಿಗಳನ್ನು ಹೇರುವ ಮೊದಲು ಅವುಗಳ ಕುರಿತು ವಿಸ್ಕೃತವಾದ ಚರ್ಚೆ ನಡೆಸಲು ನಮ್ಮ ಪಕ್ಷ ಸಲಹೆ ನೀಡುತ್ತದೆ” ಎಂದು ಕೆಸಿ ತ್ಯಾಗಿ ಹೇಳಿದ್ದಾರೆ.

ಏಕರೂಪ ನಾಗರಿಕ ಸಂಹಿತೆ ಜಾರಿಯ ಬಗ್ಗೆ ಪ್ರತಿಕ್ರಿಯಿಸಿದ ತ್ಯಾಗಿ, “ನಮ್ಮ ಪಕ್ಷ ‘ಸುಧಾರಣೆ ವಿರೋಧಿಯಲ್ಲ’. ಆದರೆ ಸಂಹಿತೆಯ ಕರಡು ತಯಾರಿಸಲು ಎಲ್ಲಾ ಪಾಲುದಾರರು, ಮುಖ್ಯಮಂತ್ರಿಗಳು, ರಾಜಕೀಯ ಪಕ್ಷಗಳು ಮತ್ತು ಪಂಗಡಗಳನ್ನು ಸಂಪರ್ಕಿಸಬೇಕು” ಎಂದಿದ್ದಾರೆ.

ಇದನ್ನೂ ಓದಿ : ಲೋಕಸಭೆಯ ತೀರ್ಪನ್ನು ಹೆಚ್ಚಿನ ಮುಸ್ಲಿಮರು ಭರವಸೆಯಿಂದ ಏಕೆ ನೋಡುತ್ತಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...