Homeಕರ್ನಾಟಕಬದುಕಲು ಬೇಕಾದಷ್ಟು ಭೂಮಿ, ಗೌರವದಿಂದ ಬಾಳುವಂತಹ ವಸತಿ ನಮ್ಮ ಜನ್ಮ ಸಿದ್ಧ ಹಕ್ಕು: ಭೂಮಿ ಹೋರಾಟದ...

ಬದುಕಲು ಬೇಕಾದಷ್ಟು ಭೂಮಿ, ಗೌರವದಿಂದ ಬಾಳುವಂತಹ ವಸತಿ ನಮ್ಮ ಜನ್ಮ ಸಿದ್ಧ ಹಕ್ಕು: ಭೂಮಿ ಹೋರಾಟದ ನಿರ್ಣಯಗಳು

ಪ್ರತಿಭಟನಾ ಸ್ಥಳಕ್ಕೆ ಇಂದು ಜೆಡಿಎಸ್ ಶಾಸಕ ಎಚ್‌.ಡಿ ರೇವಣ್ಣ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ ನೀಡಿ ತಮ್ಮ ಬೆಂಬಲ ಘೋಷಿಸಿದರು. ಜನತಾ ಅಧಿವೇಶನ ನಾಳೆಯು ಮುಂದುವರೆಯಲಿದೆ.

- Advertisement -
- Advertisement -

ರಾಜ್ಯ ಸರ್ಕಾರ ತಂದಿರುವ ಭೂಸುಧಾರಣಾ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆಯನ್ನು ವಿರೋಧಿಸಿ ರೈತ, ದಲಿತ, ಕಾರ್ಮಿಕ ಸಂಘಟನೆಗಳ ಐಕ್ಯ ಹೋರಾಟವು ಬೆಂಗಳೂರಿನ ಫ್ರೀಡಂ ಪಾಕ್‌ನಲ್ಲಿ ನಡೆಯುತ್ತಿದ್ದು, ಎರಡನೆ ದಿನವು ಮುಂದುವರೆದಿದೆ. ತಮ್ಮ ಹೋರಾಟವನ್ನು, “ಜನ ಚಳವಳಿಗಳ ಪರ್ಯಾಯ ಜನತಾ ಅಧಿವೇಶನ” ಎಂದು ಐಕ್ಯ ಹೋರಾಟ ಸಮಿತಿಯು ಕರೆದಿದ್ದು, ಇಂದು ಭೂಮಿ, ವಸತಿ ಹಕ್ಕು ವಂಚಿತರ ವಿಚಾರವಾಗಿ ಪ್ರತಿಭಟನಾಕಾರರು ತಮ್ಮ ನಿರ್ಣಯಗಳನ್ನು ರಾಜ್ಯ ಸರ್ಕಾರದ ಮುಂದಿಟ್ಟಿದ್ದಾರೆ.

ಇದನ್ನೂ ಓದಿ: ಆಗ ಉಳುವವನೆ ಭೂಮಿಯ ಒಡೆಯ, ಈಗ ದುಡ್ಡಿದ್ದವನೇ ಭೂಮಿಯ ಒಡೆಯ: ಸಿದ್ದರಾಮಯ್ಯ ಆತಂಕ

ಭೂಮಿ ವಸತಿ ಹಕ್ಕು ವಂಚಿತರು ಇಂದು ’ಬದುಕಲು ಬೇಕಾದಷ್ಟು ಭೂಮಿ, ಗೌರವದಿಂದ ಬಾಳುವಂತಹ ವಸತಿ ನಮ್ಮ ಜನ್ಮ ಸಿದ್ಧ ಹಕ್ಕು’ ಎಂದು ಘೋಷಿಸಿದ್ದು, ತಮ್ಮ ನಿರ್ಣಯಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ.

  1. ಯಾವುದೇ ಕಾರಣಕ್ಕೂ ಬಡಜನರನ್ನು (ಕನಿಷ್ಠ ಪರ್ಯಾಯ ವ್ಯವಸ್ಥೆಯನ್ನಾದರೂ ಮಾಡದೆ) ಅವರ ಭೂಮಿಯಿಂದಾಗಲೀ, ಮನೆಗಳಿಂದಾಗಲಿ ಒಕ್ಕಲೆಬ್ಬಿಸಬಾರದು.
  2. ಫಾರಂ 50, 57, 94ಸಿ, 94ಸಿಸಿ ಮತ್ತು ಅರಣ್ಯ ಹಕ್ಕು ಅರ್ಜಿಗಳನ್ನು ನವೆಂಬರ್ ಅಧಿವೇಶನದೊಳಗಾಗಿ ಇತ್ಯರ್ಥಗೊಳಿಸಿ ಬಡಜನರಿಗೆ ಹಕ್ಕುಪತ್ರ ನೀಡಬೇಕು.
  3. ಒಟ್ಟು ಸರ್ಕಾರಿ ಭೂಮಿಯ ಆಡಿಟಿಂಗ್ ನಡೆಸಬೇಕು. ಲಭ್ಯವಿರುವ ಭೂಮಿಯನ್ನು ನಿವೇಶನಕ್ಕಾಗಿ ಮತ್ತು ಉಳುಮೆಗಾಗಿ ಕೂಡಲೇ ವಿತರಣೆ ಮಾಡಬೇಕು.
  4. ರೈತ ವಿರೋಧಿ, ದಲಿತ ವಿರೋಧಿ, ಕಾರ್ಮಿಕ ವಿರೋಧಿ ಸುಗ್ರೀವಾಜ್ಞೆಗಳನ್ನು ಈ ಕೂಡಲೇ ರದ್ದುಗೊಳಿಸಬೇಕು. ಅಂತಹ ಕಾಯ್ದೆಯ ತಿದ್ದುಪಡಿಯ ಎಲ್ಲಾ ಪ್ರಸ್ತಾಪಗಳನ್ನು ಕೈಬಿಡಬೇಕು.
  5. ಭೂಮಿಯು ಉಳುವವರಿಗೆ ಮತ್ತು ವಾಸಿಸುವವರಿಗೆ ಸೇರಿದ್ದು, ಭೂಗಳ್ಳರಿಗಲ್ಲ, ಕಂಪನಿಗಳಿಗಲ್ಲ.
  6. ಕೊರೊನಾದಿಂದ ತತ್ತರಿಸುವ ರೈತರ ಮತ್ತು ಕಾರ್ಮಿಕರ ನೆರವಿಗೆ ಸರ್ಕಾರ ಸಮಗ್ರ ಪ್ಯಾಕೇಜ್ ಘೋಷಿಸಬೇಕು.

ಪ್ರತಿಭಟನಾ ಸ್ಥಳಕ್ಕೆ ಇಂದು ಜೆಡಿಎಸ್ ಶಾಸಕ ಎಚ್‌.ಡಿ ರೇವಣ್ಣ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ ನೀಡಿ ತಮ್ಮ ಬೆಂಬಲ ಘೋಷಿಸಿದರು. ಜನತಾ ಅಧಿವೇಶನ ನಾಳೆಯು ಮುಂದುವರೆಯಲಿದೆ.

ಇದನ್ನೂ ಓದಿ: ಅಂಬೇಡ್ಕರ್ ಕನಸಿನ ಭೂ ಹಂಚಿಕೆ ಜಾರಿಯಾಗಲಿ: ನೂರ್ ಶ್ರೀಧರ್

ವಿಡಿಯೋ ನೋಡಿ:

’ಜನತಾ ಅಧಿವೇಶನ’ವನ್ನು ಬೆಂಬಲಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿದರು.

Posted by Naanu Gauri on Tuesday, September 22, 2020

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...