Homeಕರ್ನಾಟಕಬದುಕಲು ಬೇಕಾದಷ್ಟು ಭೂಮಿ, ಗೌರವದಿಂದ ಬಾಳುವಂತಹ ವಸತಿ ನಮ್ಮ ಜನ್ಮ ಸಿದ್ಧ ಹಕ್ಕು: ಭೂಮಿ ಹೋರಾಟದ...

ಬದುಕಲು ಬೇಕಾದಷ್ಟು ಭೂಮಿ, ಗೌರವದಿಂದ ಬಾಳುವಂತಹ ವಸತಿ ನಮ್ಮ ಜನ್ಮ ಸಿದ್ಧ ಹಕ್ಕು: ಭೂಮಿ ಹೋರಾಟದ ನಿರ್ಣಯಗಳು

ಪ್ರತಿಭಟನಾ ಸ್ಥಳಕ್ಕೆ ಇಂದು ಜೆಡಿಎಸ್ ಶಾಸಕ ಎಚ್‌.ಡಿ ರೇವಣ್ಣ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ ನೀಡಿ ತಮ್ಮ ಬೆಂಬಲ ಘೋಷಿಸಿದರು. ಜನತಾ ಅಧಿವೇಶನ ನಾಳೆಯು ಮುಂದುವರೆಯಲಿದೆ.

- Advertisement -
- Advertisement -

ರಾಜ್ಯ ಸರ್ಕಾರ ತಂದಿರುವ ಭೂಸುಧಾರಣಾ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆಯನ್ನು ವಿರೋಧಿಸಿ ರೈತ, ದಲಿತ, ಕಾರ್ಮಿಕ ಸಂಘಟನೆಗಳ ಐಕ್ಯ ಹೋರಾಟವು ಬೆಂಗಳೂರಿನ ಫ್ರೀಡಂ ಪಾಕ್‌ನಲ್ಲಿ ನಡೆಯುತ್ತಿದ್ದು, ಎರಡನೆ ದಿನವು ಮುಂದುವರೆದಿದೆ. ತಮ್ಮ ಹೋರಾಟವನ್ನು, “ಜನ ಚಳವಳಿಗಳ ಪರ್ಯಾಯ ಜನತಾ ಅಧಿವೇಶನ” ಎಂದು ಐಕ್ಯ ಹೋರಾಟ ಸಮಿತಿಯು ಕರೆದಿದ್ದು, ಇಂದು ಭೂಮಿ, ವಸತಿ ಹಕ್ಕು ವಂಚಿತರ ವಿಚಾರವಾಗಿ ಪ್ರತಿಭಟನಾಕಾರರು ತಮ್ಮ ನಿರ್ಣಯಗಳನ್ನು ರಾಜ್ಯ ಸರ್ಕಾರದ ಮುಂದಿಟ್ಟಿದ್ದಾರೆ.

ಇದನ್ನೂ ಓದಿ: ಆಗ ಉಳುವವನೆ ಭೂಮಿಯ ಒಡೆಯ, ಈಗ ದುಡ್ಡಿದ್ದವನೇ ಭೂಮಿಯ ಒಡೆಯ: ಸಿದ್ದರಾಮಯ್ಯ ಆತಂಕ

ಭೂಮಿ ವಸತಿ ಹಕ್ಕು ವಂಚಿತರು ಇಂದು ’ಬದುಕಲು ಬೇಕಾದಷ್ಟು ಭೂಮಿ, ಗೌರವದಿಂದ ಬಾಳುವಂತಹ ವಸತಿ ನಮ್ಮ ಜನ್ಮ ಸಿದ್ಧ ಹಕ್ಕು’ ಎಂದು ಘೋಷಿಸಿದ್ದು, ತಮ್ಮ ನಿರ್ಣಯಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ.

  1. ಯಾವುದೇ ಕಾರಣಕ್ಕೂ ಬಡಜನರನ್ನು (ಕನಿಷ್ಠ ಪರ್ಯಾಯ ವ್ಯವಸ್ಥೆಯನ್ನಾದರೂ ಮಾಡದೆ) ಅವರ ಭೂಮಿಯಿಂದಾಗಲೀ, ಮನೆಗಳಿಂದಾಗಲಿ ಒಕ್ಕಲೆಬ್ಬಿಸಬಾರದು.
  2. ಫಾರಂ 50, 57, 94ಸಿ, 94ಸಿಸಿ ಮತ್ತು ಅರಣ್ಯ ಹಕ್ಕು ಅರ್ಜಿಗಳನ್ನು ನವೆಂಬರ್ ಅಧಿವೇಶನದೊಳಗಾಗಿ ಇತ್ಯರ್ಥಗೊಳಿಸಿ ಬಡಜನರಿಗೆ ಹಕ್ಕುಪತ್ರ ನೀಡಬೇಕು.
  3. ಒಟ್ಟು ಸರ್ಕಾರಿ ಭೂಮಿಯ ಆಡಿಟಿಂಗ್ ನಡೆಸಬೇಕು. ಲಭ್ಯವಿರುವ ಭೂಮಿಯನ್ನು ನಿವೇಶನಕ್ಕಾಗಿ ಮತ್ತು ಉಳುಮೆಗಾಗಿ ಕೂಡಲೇ ವಿತರಣೆ ಮಾಡಬೇಕು.
  4. ರೈತ ವಿರೋಧಿ, ದಲಿತ ವಿರೋಧಿ, ಕಾರ್ಮಿಕ ವಿರೋಧಿ ಸುಗ್ರೀವಾಜ್ಞೆಗಳನ್ನು ಈ ಕೂಡಲೇ ರದ್ದುಗೊಳಿಸಬೇಕು. ಅಂತಹ ಕಾಯ್ದೆಯ ತಿದ್ದುಪಡಿಯ ಎಲ್ಲಾ ಪ್ರಸ್ತಾಪಗಳನ್ನು ಕೈಬಿಡಬೇಕು.
  5. ಭೂಮಿಯು ಉಳುವವರಿಗೆ ಮತ್ತು ವಾಸಿಸುವವರಿಗೆ ಸೇರಿದ್ದು, ಭೂಗಳ್ಳರಿಗಲ್ಲ, ಕಂಪನಿಗಳಿಗಲ್ಲ.
  6. ಕೊರೊನಾದಿಂದ ತತ್ತರಿಸುವ ರೈತರ ಮತ್ತು ಕಾರ್ಮಿಕರ ನೆರವಿಗೆ ಸರ್ಕಾರ ಸಮಗ್ರ ಪ್ಯಾಕೇಜ್ ಘೋಷಿಸಬೇಕು.

ಪ್ರತಿಭಟನಾ ಸ್ಥಳಕ್ಕೆ ಇಂದು ಜೆಡಿಎಸ್ ಶಾಸಕ ಎಚ್‌.ಡಿ ರೇವಣ್ಣ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ ನೀಡಿ ತಮ್ಮ ಬೆಂಬಲ ಘೋಷಿಸಿದರು. ಜನತಾ ಅಧಿವೇಶನ ನಾಳೆಯು ಮುಂದುವರೆಯಲಿದೆ.

ಇದನ್ನೂ ಓದಿ: ಅಂಬೇಡ್ಕರ್ ಕನಸಿನ ಭೂ ಹಂಚಿಕೆ ಜಾರಿಯಾಗಲಿ: ನೂರ್ ಶ್ರೀಧರ್

ವಿಡಿಯೋ ನೋಡಿ:

’ಜನತಾ ಅಧಿವೇಶನ’ವನ್ನು ಬೆಂಬಲಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿದರು.

Posted by Naanu Gauri on Tuesday, September 22, 2020

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...