Homeಕರ್ನಾಟಕಬದುಕಲು ಬೇಕಾದಷ್ಟು ಭೂಮಿ, ಗೌರವದಿಂದ ಬಾಳುವಂತಹ ವಸತಿ ನಮ್ಮ ಜನ್ಮ ಸಿದ್ಧ ಹಕ್ಕು: ಭೂಮಿ ಹೋರಾಟದ...

ಬದುಕಲು ಬೇಕಾದಷ್ಟು ಭೂಮಿ, ಗೌರವದಿಂದ ಬಾಳುವಂತಹ ವಸತಿ ನಮ್ಮ ಜನ್ಮ ಸಿದ್ಧ ಹಕ್ಕು: ಭೂಮಿ ಹೋರಾಟದ ನಿರ್ಣಯಗಳು

ಪ್ರತಿಭಟನಾ ಸ್ಥಳಕ್ಕೆ ಇಂದು ಜೆಡಿಎಸ್ ಶಾಸಕ ಎಚ್‌.ಡಿ ರೇವಣ್ಣ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ ನೀಡಿ ತಮ್ಮ ಬೆಂಬಲ ಘೋಷಿಸಿದರು. ಜನತಾ ಅಧಿವೇಶನ ನಾಳೆಯು ಮುಂದುವರೆಯಲಿದೆ.

- Advertisement -
- Advertisement -

ರಾಜ್ಯ ಸರ್ಕಾರ ತಂದಿರುವ ಭೂಸುಧಾರಣಾ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆಯನ್ನು ವಿರೋಧಿಸಿ ರೈತ, ದಲಿತ, ಕಾರ್ಮಿಕ ಸಂಘಟನೆಗಳ ಐಕ್ಯ ಹೋರಾಟವು ಬೆಂಗಳೂರಿನ ಫ್ರೀಡಂ ಪಾಕ್‌ನಲ್ಲಿ ನಡೆಯುತ್ತಿದ್ದು, ಎರಡನೆ ದಿನವು ಮುಂದುವರೆದಿದೆ. ತಮ್ಮ ಹೋರಾಟವನ್ನು, “ಜನ ಚಳವಳಿಗಳ ಪರ್ಯಾಯ ಜನತಾ ಅಧಿವೇಶನ” ಎಂದು ಐಕ್ಯ ಹೋರಾಟ ಸಮಿತಿಯು ಕರೆದಿದ್ದು, ಇಂದು ಭೂಮಿ, ವಸತಿ ಹಕ್ಕು ವಂಚಿತರ ವಿಚಾರವಾಗಿ ಪ್ರತಿಭಟನಾಕಾರರು ತಮ್ಮ ನಿರ್ಣಯಗಳನ್ನು ರಾಜ್ಯ ಸರ್ಕಾರದ ಮುಂದಿಟ್ಟಿದ್ದಾರೆ.

ಇದನ್ನೂ ಓದಿ: ಆಗ ಉಳುವವನೆ ಭೂಮಿಯ ಒಡೆಯ, ಈಗ ದುಡ್ಡಿದ್ದವನೇ ಭೂಮಿಯ ಒಡೆಯ: ಸಿದ್ದರಾಮಯ್ಯ ಆತಂಕ

ಭೂಮಿ ವಸತಿ ಹಕ್ಕು ವಂಚಿತರು ಇಂದು ’ಬದುಕಲು ಬೇಕಾದಷ್ಟು ಭೂಮಿ, ಗೌರವದಿಂದ ಬಾಳುವಂತಹ ವಸತಿ ನಮ್ಮ ಜನ್ಮ ಸಿದ್ಧ ಹಕ್ಕು’ ಎಂದು ಘೋಷಿಸಿದ್ದು, ತಮ್ಮ ನಿರ್ಣಯಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ.

  1. ಯಾವುದೇ ಕಾರಣಕ್ಕೂ ಬಡಜನರನ್ನು (ಕನಿಷ್ಠ ಪರ್ಯಾಯ ವ್ಯವಸ್ಥೆಯನ್ನಾದರೂ ಮಾಡದೆ) ಅವರ ಭೂಮಿಯಿಂದಾಗಲೀ, ಮನೆಗಳಿಂದಾಗಲಿ ಒಕ್ಕಲೆಬ್ಬಿಸಬಾರದು.
  2. ಫಾರಂ 50, 57, 94ಸಿ, 94ಸಿಸಿ ಮತ್ತು ಅರಣ್ಯ ಹಕ್ಕು ಅರ್ಜಿಗಳನ್ನು ನವೆಂಬರ್ ಅಧಿವೇಶನದೊಳಗಾಗಿ ಇತ್ಯರ್ಥಗೊಳಿಸಿ ಬಡಜನರಿಗೆ ಹಕ್ಕುಪತ್ರ ನೀಡಬೇಕು.
  3. ಒಟ್ಟು ಸರ್ಕಾರಿ ಭೂಮಿಯ ಆಡಿಟಿಂಗ್ ನಡೆಸಬೇಕು. ಲಭ್ಯವಿರುವ ಭೂಮಿಯನ್ನು ನಿವೇಶನಕ್ಕಾಗಿ ಮತ್ತು ಉಳುಮೆಗಾಗಿ ಕೂಡಲೇ ವಿತರಣೆ ಮಾಡಬೇಕು.
  4. ರೈತ ವಿರೋಧಿ, ದಲಿತ ವಿರೋಧಿ, ಕಾರ್ಮಿಕ ವಿರೋಧಿ ಸುಗ್ರೀವಾಜ್ಞೆಗಳನ್ನು ಈ ಕೂಡಲೇ ರದ್ದುಗೊಳಿಸಬೇಕು. ಅಂತಹ ಕಾಯ್ದೆಯ ತಿದ್ದುಪಡಿಯ ಎಲ್ಲಾ ಪ್ರಸ್ತಾಪಗಳನ್ನು ಕೈಬಿಡಬೇಕು.
  5. ಭೂಮಿಯು ಉಳುವವರಿಗೆ ಮತ್ತು ವಾಸಿಸುವವರಿಗೆ ಸೇರಿದ್ದು, ಭೂಗಳ್ಳರಿಗಲ್ಲ, ಕಂಪನಿಗಳಿಗಲ್ಲ.
  6. ಕೊರೊನಾದಿಂದ ತತ್ತರಿಸುವ ರೈತರ ಮತ್ತು ಕಾರ್ಮಿಕರ ನೆರವಿಗೆ ಸರ್ಕಾರ ಸಮಗ್ರ ಪ್ಯಾಕೇಜ್ ಘೋಷಿಸಬೇಕು.

ಪ್ರತಿಭಟನಾ ಸ್ಥಳಕ್ಕೆ ಇಂದು ಜೆಡಿಎಸ್ ಶಾಸಕ ಎಚ್‌.ಡಿ ರೇವಣ್ಣ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ ನೀಡಿ ತಮ್ಮ ಬೆಂಬಲ ಘೋಷಿಸಿದರು. ಜನತಾ ಅಧಿವೇಶನ ನಾಳೆಯು ಮುಂದುವರೆಯಲಿದೆ.

ಇದನ್ನೂ ಓದಿ: ಅಂಬೇಡ್ಕರ್ ಕನಸಿನ ಭೂ ಹಂಚಿಕೆ ಜಾರಿಯಾಗಲಿ: ನೂರ್ ಶ್ರೀಧರ್

ವಿಡಿಯೋ ನೋಡಿ:

’ಜನತಾ ಅಧಿವೇಶನ’ವನ್ನು ಬೆಂಬಲಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿದರು.

Posted by Naanu Gauri on Tuesday, September 22, 2020

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...