Homeಕರ್ನಾಟಕಪತ್ರಿಕೆಯ ಮೂಲಕ ಜನಪರ ಹೋರಾಟಕ್ಕೆ ಆಖಾಡ ಸಿದ್ಧ!...

ಪತ್ರಿಕೆಯ ಮೂಲಕ ಜನಪರ ಹೋರಾಟಕ್ಕೆ ಆಖಾಡ ಸಿದ್ಧ!…

- Advertisement -
- Advertisement -

ಜನವಾಹಿನಿಯ ನೆನಪುಗಳು: ಅಂಕಣ-7
ನಿಖಿಲ್ ಕೋಲ್ಪೆ

ಕೃಪೆ: ’ಆರ್ಸೋ’ ಕೊಂಕಣಿ ಪತ್ರಿಕೆ

ಮೊದಲೇ ಹೇಳಿದಂತೆ ಕಂಪ್ಯೂಟರ್ ಇತ್ಯಾದಿ ಬಂದಿದ್ದರೂ, ಆಗ ಆನ್ಲೈನ್ ಎಡಿಟಿಂಗ್ ಹೊಸ ವಿಷಯವಾಗಿದ್ದುದರಿಂದ ಅದಕ್ಕಾಗಿಯೇ ಕಂಪ್ಯೂಟರ್ ಮತ್ತು ಸಾಫ್ಟ್‌ವೇರ್ ಪೂರೈಸಿದ ಕಂಪೆನಿಯವರು ವಿಶೇಷ ತರಬೇತಿ ಏರ್ಪಡಿಸಿದ್ದರು.

ನಮ್ಮಲ್ಲಿ ಕೆಲವರು ಪೇಜ್‍ಮೇಕರ್ ಇತ್ಯಾದಿಗಳಲ್ಲಿ ನಿಷ್ಣಾತರಾಗಿದ್ದರೂ, ನನ್ನನ್ನೂ ಸೇರಿದಂತೆ ಕೆಲವರಿಗೆ ಕನ್ನಡ ಟೈಪಿಂಗ್ ಕೂಡಾ ಬರುತ್ತಿರಲಿಲ್ಲ! ವಿಭಾಗ ಮುಖ್ಯಸ್ಥರು ಸುದ್ದಿಗಳನ್ನು ಆಯ್ಕೆ ಮಾಡಿ, ಉಪಸಂಪಾದಕರಿಗೆ ಹಂಚಬೇಕು. ಉಪಸಂಪಾದಕರು ಟೈಪ್ ಮಾಡಿದ್ದನ್ನು ಮತ್ತೊಮ್ಮೆ ಓದಿ ವಿಭಾಗ ಮುಖ್ಯಸ್ಥರಿಗೆ ಆಂತರಿಕ ನೆಟ್ವರ್ಕ್ ಮೂಲಕ ಕಳಿಸಬೇಕು. ಅದನ್ನವರು ಪರಿಶೀಲಿಸಿ, ಹೆಡ್ಡಿಂಗ್ ಇತ್ಯಾದಿ ಸರಿಪಡಿಸಿ ಮರಳಿ ಪೇಜ್ ಮಾಡಲು ಕಳಿಸಬೇಕು. ಪೇಜ್ ಮಾಡಿದ ಬಳಿಕ ಅದರ ಪ್ರಿಂಟ್ ತೆಗೆದು ಮತ್ತೆ ಮುಖ್ಯಸ್ಥರಿಗೆ ತೋರಿಸಿ, ಅವರು ಅಂಗೀಕರಿಸಿದ ಬಳಿಕ ಎ3 ಪ್ರಿಂಟರಲ್ಲಿ ಬಟರ್‍ಶೀಟ್‍ನಲ್ಲಿ, ಬಣ್ಣದ ಪುಟವಾಗಿದ್ದರೆ ಫಿಲ್ಮ್ ಶೀಟ್‌ನಲ್ಲಿ ಪ್ರಿಂಟ್ ತೆಗೆದು ಪ್ರೀಪ್ರೆಸ್‍ಗೆ ಕಳುಹಿಸಬೇಕು. ಅಲ್ಲಿ ಪ್ಲೇಟ್ ತಯಾರಿಸಿ ಮುದ್ರಣ ವಿಭಾಗಕ್ಕೆ ಕಳಿಸುತ್ತಾರೆ. ಇದಕ್ಕಾಗಿ ಎಲ್ಲಾ ಕಂಪ್ಯೂಟರ್‌ಗಳಿಗೆ ಸಿರಿಯಲ್ ನಂಬರ್ ನೀಡಲಾಯಿತು. (ನಂತರ ಬಣ್ಣದ ಪುಟಗಳಿಗೆ ದುಬಾರಿ ಬೆಲೆಯ ಆ ಕಾಲದಲ್ಲಿ ಅತ್ಯಾಧುನಿಕ ಎನಿಸಿದ ಇಮೇಜ್ ಸೆಟ್ಟರ್ ಬಂತು. ಅದು ಕಲರ್ ಸೆಪರೇಶನ್ ಮಾಡಿ ಇಡೀ ಪುಟದ ಫಿಲ್ಮ್ ಹೊರತೆಗೆಯುತ್ತಿತ್ತು.)

ಆಗ ಈಗಿನಂತೆ ಎಲ್ಲವೂ ಡಿಜಿಟಲ್ ಫೋಟೋಗಳಾಗಿರಲಿಲ್ಲ. ಪ್ರಿಂಟ್‍ಗಳೂ ಇರುತ್ತಿದ್ದವು. ಅವುಗಳನ್ನು ತಾಂತ್ರಿಕ ವಿಭಾಗಕ್ಕೆ ಕಳುಹಿಸಿದರೆ, ಅಲ್ಲಿ ಸ್ಕ್ಯಾನ್ ಮಾಡಿ ಆಯಾ ಫೋಲ್ಡರ್‌ಗಳಿಗೆ ಹಾಕುತ್ತಿದ್ದರು. ದೇಶ, ವಿದೇಶಗಳ ಫೋಟೋಗಳಿಗೆ ವ್ಯವಸ್ಥೆ ಮಾಡಲಾಗಿದ್ದು, ಅವು ಸಂಜೆಯ ಹೊತ್ತಿಗೆ ಇಂಟರ್‌ನೆಟ್ ಮೂಲಕ ಬರುತ್ತಿದ್ದವು. ನೆಟ್‍ಗಾಗಿಯೇ ಡೆಡಿಕೇಟೆಡ್ ಕೇಬಲ್ ಅಳವಡಿಸಲಾಗಿತ್ತು. ಆದರೂ, ಆಗಿನ ಸ್ಪೀಡ್ ನೆನೆಸಿಕೊಂಡರೆ ನಗು ಬರುತ್ತದೆ! ಒಂದು ಫೋಟೋ ಬರಲು ಹೆಂಡತಿಯ ಹೆರಿಗೆಗಾಗಿ ಆಸ್ಪತ್ರೆಯಲ್ಲಿ ಕಾಯುವ ಗಂಡನ ಸ್ಥಿತಿ!

ಇವೆಲ್ಲವೂ ಈಗ ನೆನಸುವಷ್ಟು ಸುಲಭವಾಗಿ ಇರಲಿಲ್ಲ! ಇದಕ್ಕೆ ಹೊಂದಿಕೊಳ್ಳಲು ಕೆಲವು ದಿನಗಳೇ ಹಿಡಿದವು! ಅದಕ್ಕಾಗಿಯೇ ತರಬೇತಿ. ಕಂಪೆನಿಯಿಂದ ಸೌರಭ್ ಎಂಬ ಯುವಕ ಬಂದಿದ್ದರು. ಆತ ಒಳ್ಳೆಯ ಶಿಕ್ಷಕ. ನಡುವೆ ಪ್ರಶ್ನೆಗಳನ್ನು ಕೇಳಿ ಸರಿ ಉತ್ತರ ಹೇಳಿದವರಿಗೆ ಒಂದು ಚಾಕಲೇಟ್ ಬಹುಮಾನ! ಕಂಪ್ಯೂಟರ್ ಅಜ್ಞಾನಿಯಾಗಿದ್ದ ನನಗೆ ಮೂರು ಚಾಕಲೇಟ್ ಸಿಕ್ಕಿದ್ದು ಇವತ್ತೂ ನೆನಪಿದೆ. ನಾವೆಲ್ಲ ಬಿಡುವಿನ ಸಂದರ್ಭದಲ್ಲಿ ಕನ್ನಡ ಟೈಪಿಂಗ್ ಕಲಿತೆವು. ಮೊದಲೇ ಹೇಳಿದಂತೆ DOS ಆಧರಿತ ‘ಪ್ರಕಾಶಕ್’ ಎಂಬ ಸಾಫ್ಟ್‌ವೇರ್. ಕಲಿಯಲು ಕಷ್ಟ. ಯಾಕೆಂದರೆ ಕೀ ಬೋರ್ಡ್ ಅಸಂಬದ್ಧ ಎಂಬಂತೆ ಕಾಣುತ್ತಿತ್ತು. ಇಂಗ್ಲೀಷ್ ಅಕ್ಷರಗಳಿಗೂ ಅದಕ್ಕೂ ಸಂಬಂಧವೇ ಇಲ್ಲ! ಒಮ್ಮೆ ಕಲಿತರೆ ಅತ್ಯಂತ ಸರಳ ಮತ್ತು ಅನುಕೂಲಕರ. ನಾನಂತೂ ಸ್ವಲ್ಪ ಸಮಯದಲ್ಲೇ ಹೆಚ್ಚುಕಡಿಮೆ ಮಾತಿನ ವೇಗದಲ್ಲಿ ಟೈಪ್ ಮಾಡಲು ಕಲಿತೆ! ಆಗ ಕಲಿತ ಒಂದು ಪಾಠವೆಂದರೆ, ಏನನ್ನಾದರೂ ಕಲಿಯಲು ಇರುವ ಅಡ್ಡಿಯೆಂದರೆ ಮಾನಸಿಕ ಹಿಂಜರಿಕೆ (mental block). ಇದನ್ನು ನಿವಾರಿಸಿದ್ದಕ್ಕಾಗಿ ಸೌರಭ್‌ರನ್ನು ನೆನಪಿಸಿಕೊಳ್ಳುತ್ತೇನೆ.

ಮೊದಲೇ ದುಬಾರಿ ಕಂಪ್ಯೂಟರ್! ಏನು ಮಾಡಿದರೆ ಏನು ಹಾಳಾಗುತ್ತದೋ ಎಂಬ ಭಯ ಬೇರೆ! “ನೀವು ಇದನ್ನು ಎತ್ತಿ ಹಾಕದ ಹೊರತು ಏನೂ ಆಗುವುದಿಲ್ಲ. ಪ್ರೋಗ್ರಾಂ ಫೈಲ್ಸ್ ಮುಟ್ಟಬೇಡಿ. ಮುಟ್ಟಿದರೂ ಅದು ಕನ್ಫರ್ಮೇಶನ್ ಕೇಳುತ್ತದೆ. ಡಿಲೀಟ್ ಮಾಡಬೇಡಿ. ಉಳಿದಂತೆ ನೀವು ಕಂಪ್ಯೂಟರ್ ಹಾಳು ಮಾಡಿ ತೋರಿಸಿ. ನಾನು ಬೇರೆ ಕಂಪ್ಯೂಟರ್ ಕೊಡುತ್ತೇನೆ” ಎಂದು ಅವರು ಧೈರ್ಯ ತುಂಬಿದ್ದರು! ಇದರಿಂದ ಮುಂದೆ ನಾವಾಗಿಯೇ ಒಂದೊಂದನ್ನೇ ಧೈರ್ಯವಾಗಿ ಕಲಿಯಲು ಸಾಧ್ಯವಾಯಿತು.

ಎಷ್ಟರ ಮಟ್ಟಿಗೆ ಎಂದರೆ, ಅವರು ಫೈಲ್ ಶೇರಿಂಗ್ ಮಾಡಲು ಇ-ಮೈಲ್‍ನಂತಹ ಸಾಫ್ಟ್‌ವೇರ್ ಕೊಟ್ಟಿದ್ದರು. ಅದು ಕಿರಿಕಿರಿ ಉಂಟು ಮಾಡುತ್ತಿತ್ತು! ಮುಂದೆ ನಾವೇ explorer ಮೂಲಕ ಕಾಪಿ ಪೇಸ್ಟ್ ಮಾಡುವ ಸರಳ ಉಪಾಯ ಕಂಡು ಹಿಡಿದೆವು!

ನಾವು ಸೀನಿಯರ್‌ಗಳಿಗೆ ಈ ತರಬೇತಿಗಳಲ್ಲಿ ನಿರಂತರ ಭಾಗವಹಿಸಲು ಸಾಧ್ಯವಾಗುತ್ತಿರಲಿಲ್ಲ ಎಂದು ಹೇಳಿದ್ದೆ. ಕಾರಣ ನಾವು ಪತ್ರಿಕೆಯಲ್ಲಿ ಇರಬೇಕಾದ ಸ್ಥಿರ ಶೀರ್ಷಿಕೆ, ವಿಭಾಗಗಳು ಇತ್ಯಾದಿಗಳ ಬಗ್ಗೆ ತಲೆಕೆರೆದುಕೊಳ್ಳುತ್ತಿದ್ದೆವು. ಪಟ್ಟಣಗಳ ಸುದ್ದಿ ಪುಟಗಳಿಗೆ ‘ಪೇಟೆ-ಪಟ್ಟಣ’, ಗ್ರಾಮೀಣ ಸುದ್ದಿಗಳ ಪುಟಗಳಿಗೆ ’ಊರು-ಕೇರಿ’, ಕ್ರೀಡಾಪುಟಗಳಿಗೆ ‘ಆಟ-ಕೂಟ’ ಹೀಗೆ ಹೆಸರುಗಳನ್ನು ಪಟ್ಟಿ ಮಾಡಿ ಅಂತಿಮಗೊಳಿಸುವುದೂ ದೊಡ್ಡ ಕೆಲಸವಾಗಿತ್ತು.

ಇನ್ನೊಂದು ದೊಡ್ಡ ಕೆಲಸವೆಂದರೆ ಬೇರೆ ಬೇರೆ ಆವೃತ್ತಿಗಳನ್ನು ಯೋಜಿಸುವುದು! ಆಗಿನ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಉಡುಪಿಗೆ ಒಂದು, ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯಕ್ಕೆ ಒಂದು, ಮಂಗಳೂರಿಗೆ ಒಂದು ಮತ್ತು ಅಂತಿಮವಾಗಿ ಲೇಟ್ ಸಿಟಿ ಎಡಿಷನ್! ಜೊತೆಗೆ ಉತ್ತರ ಕನ್ನಡ, ಶಿವಮೊಗ್ಗ ಇತ್ಯಾದಿ ಜಿಲ್ಲೆಗಳಿಗೆ ಪ್ರತ್ಯೇಕ- ಹೀಗೆ ಹಲವು ಆವೃತ್ತಿಗಳು! ಇವುಗಳು ಎಷ್ಟು ದೂರ ಇವೆ, ಎಷ್ಟು ಗಂಟೆಗೆ ತಲುಪಬೇಕು, ಪುಟ ಎಷ್ಟು ಗಂಟೆಗೆ ಮುಗಿಯಬೇಕು, ಅದಕ್ಕೆ ತಕ್ಕಂತೆ ಸಿಬ್ಬಂದಿಗಳಿಗೆ ಶಿಫ್ಟ್ ಮತ್ತು ಕೆಲಸಕ್ಕೆ ಹಾಜರಾಗುವ ಸಮಯ ನಿಗದಿ ಪಡಿಸುವುದು ಇತ್ಯಾದಿಯಾಗಿ ಹಲವಾರು ತಲೆನೋವಿನ ಕೆಲಸಗಳು ನಮಗಿದ್ದವು!

ಇವೆಲ್ಲವನ್ನು ಅನುಷ್ಠಾನಕ್ಕೆ ತರಲು ಬೇರೆಬೇರೆ ವಿಭಾಗಗಳನ್ನು ರಚಿಸಲಾಯಿತು. ಆ ಕುರಿತು ಮತ್ತು ಅವುಗಳಲ್ಲಿ ನನಗೆ ನೆನಪಿರುವಂತೆ ಇದ್ದವರು ಯಾರು ಇತ್ಯಾದಿಗಳ ಕುರಿತು ಮುಂದೆ ಬರೆಯುತ್ತೇನೆ.
***

ಕಚೇರಿಯೇ ಮನೆಯಾಯಿತು!

ಪತ್ರಿಕೆಗಾಗಿ ಯೋಜನೆ, ತರಬೇತಿ ನಡೆಯುತ್ತಿದ್ದಾಗ ಮತ್ತು ನಂತರ ಪತ್ರಿಕೆ ಆರಂಭಗೊಂಡ ಬಳಿಕವೂ ನಾವು ಕೆಲವರು ಕಚೇರಿಯಲ್ಲಿಯೇ ಮಲಗುತ್ತಿದ್ದೆವು. ಕೆಲಸ ಅಷ್ಟಿತ್ತು! ಮುಖಪುಟ ನೋಡಿಕೊಳ್ಳಬೇಕಾಗಿದ್ದ ನನಗಂತೂ ನಿತ್ಯ ರಾತ್ರಿ ಪಾಳಿ ಖಾಯಂ! ರಾತ್ರಿ ಎಡಿಷನ್ ಮುಗಿಸಿ ಪತ್ರಿಕೆ ಪ್ರಕಟವಾಗಿ ಬಂಟ್ವಾಳ ಎಡಿಷನ್ ಸಾಗಿಸುವ ಕಾರಿನಲ್ಲಿ ಹೋಗಿ ಪಾಣೆಮಂಗಳೂರಿನಲ್ಲಿ ಇಳಿದು ಎರಡು ಕಿ.ಮೀ. ನಿಶಾಚರ ಪಿಶಾಚಿಯಂತೆ ನಡೆದು ಮನೆ ಸೇರಬೇಕು. ಮತ್ತೆ ನಿದ್ದೆಯ ಶಾಸ್ತ್ರ ಮಾಡಿ ಮರುದಿನ ಹಾಜರಾಗಬೇಕು. ಪ್ರಯಾಣದ ಸಮಯವೂ ವ್ಯರ್ಥ! ವಿಲ್ಫ್ರೆಡ್ ಡಿ’ಸೋಜಾ ಅವರಿಗೆ ಇನ್ನೂ ದೂರ- ಉಪ್ಪಿನಂಗಡಿ ದಾಟಿ ಹೋಗಬೇಕು. ಅಲ್ಲದೆ ಉಳಿದವರೂ ಬೈಕಂಪಾಡಿಯಿಂದ ರಾತ್ರಿ ಹೊತ್ತು ಸ್ವಂತ ವಾಹನವಿಲ್ಲದೇ ಹೊರಡುವುದು ಕಷ್ಟ. ನಗರದೊಳಗಿನ ಸಿಬ್ಬಂದಿಗೆ ವಾಹನ ವ್ಯವಸ್ಥೆ ಇತ್ತು.

ಒಂದು ದಿನ ಬೆಳ್ಳಂಬೆಳಗೆ ಆಡಳಿತ ನಿರ್ದೇಶಕ ಸ್ಯಾಮುಯೆಲ್ ಸಿಕ್ವೇರಾ ಕಚೇರಿಗೆ ಬಂದವರೇ ದಂಗು ಬಡಿದುಹೋದರು! ನಾವು ಕೆಲವರು ಕಚೇರಿಯಲ್ಲಿಯೇ ಸಿಕ್ಕಸಿಕ್ಕಲ್ಲಿ ಪೇಪರ್ ಹಾಸಿ ಮಲಗಿದ್ದೆವು. “ಹಾಂ! ನೀವು ಇಲ್ಲಿಯೇ ಮಲಗುತ್ತಿದ್ದೀರಾ!?” ಎಂದವರೇ, ಆಗ ಅವರ ಬಳಿ ಮಾತ್ರವಿದ್ದ ವಾಕಿಟಾಕಿ ಗಾತ್ರದ ಮೊಬೈಲ್ ಫೋನಿನಲ್ಲಿ ಮಾತನಾಡಲಾರಂಭಿಸಿದರು.

ಮಧ್ಯಾಹ್ನದ ಹೊತ್ತಿಗೆ ನಮ್ಮ ದೊಡ್ಡ ಹಾಲ್‍ನಲ್ಲಿ ಪಾರ್ಟಿಷನ್ ಆಯಿತು. ಫ್ಯಾನ್‍ಗಳು ಫಿಕ್ಸ್ ಆದವು. ಐದು ಮಂಚಗಳು, ಹಾಸಿಗೆ, ದಿಂಬು, ಹೊದಿಕೆ, ಬಟ್ಟೆಬರೆ ಇಡಲು ಲಾಕರ್ ಎಲ್ಲವೂ ಬಂದವು. ಅದೇ ರಾತ್ರಿಯಿಂದ ನಮ್ಮ ಪೇಪರ್ ಹಾಸಿಗೆಗೆ ವಿದಾಯ ಹೇಳಿದೆವು. ಇದಕ್ಕಾಗಿಯೇ ನಾನವರನ್ನು ಇಂದೂ ನೆನಪಿಸಿಕೊಳ್ಳುತ್ತೇನೆ. ನಾವೂ ಕೂಡಾ ಇಮ್ಮಡಿ ಪ್ರೀತಿಯಿಂದ ದುಡಿಯಲಾರಂಭಿಸಿದೆವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Thanks for this great write up on Janawahini by Nikhil Kolpe sir.. it manifests their struggle to get the newspaper published in time with perfection must be applauded.. Waiting for further episodes.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....