Homeಕರ್ನಾಟಕಪತ್ರಿಕೆಯ ಮೂಲಕ ಜನಪರ ಹೋರಾಟಕ್ಕೆ ಆಖಾಡ ಸಿದ್ಧ!...

ಪತ್ರಿಕೆಯ ಮೂಲಕ ಜನಪರ ಹೋರಾಟಕ್ಕೆ ಆಖಾಡ ಸಿದ್ಧ!…

- Advertisement -
- Advertisement -

ಜನವಾಹಿನಿಯ ನೆನಪುಗಳು: ಅಂಕಣ-7
ನಿಖಿಲ್ ಕೋಲ್ಪೆ

ಕೃಪೆ: ’ಆರ್ಸೋ’ ಕೊಂಕಣಿ ಪತ್ರಿಕೆ

ಮೊದಲೇ ಹೇಳಿದಂತೆ ಕಂಪ್ಯೂಟರ್ ಇತ್ಯಾದಿ ಬಂದಿದ್ದರೂ, ಆಗ ಆನ್ಲೈನ್ ಎಡಿಟಿಂಗ್ ಹೊಸ ವಿಷಯವಾಗಿದ್ದುದರಿಂದ ಅದಕ್ಕಾಗಿಯೇ ಕಂಪ್ಯೂಟರ್ ಮತ್ತು ಸಾಫ್ಟ್‌ವೇರ್ ಪೂರೈಸಿದ ಕಂಪೆನಿಯವರು ವಿಶೇಷ ತರಬೇತಿ ಏರ್ಪಡಿಸಿದ್ದರು.

ನಮ್ಮಲ್ಲಿ ಕೆಲವರು ಪೇಜ್‍ಮೇಕರ್ ಇತ್ಯಾದಿಗಳಲ್ಲಿ ನಿಷ್ಣಾತರಾಗಿದ್ದರೂ, ನನ್ನನ್ನೂ ಸೇರಿದಂತೆ ಕೆಲವರಿಗೆ ಕನ್ನಡ ಟೈಪಿಂಗ್ ಕೂಡಾ ಬರುತ್ತಿರಲಿಲ್ಲ! ವಿಭಾಗ ಮುಖ್ಯಸ್ಥರು ಸುದ್ದಿಗಳನ್ನು ಆಯ್ಕೆ ಮಾಡಿ, ಉಪಸಂಪಾದಕರಿಗೆ ಹಂಚಬೇಕು. ಉಪಸಂಪಾದಕರು ಟೈಪ್ ಮಾಡಿದ್ದನ್ನು ಮತ್ತೊಮ್ಮೆ ಓದಿ ವಿಭಾಗ ಮುಖ್ಯಸ್ಥರಿಗೆ ಆಂತರಿಕ ನೆಟ್ವರ್ಕ್ ಮೂಲಕ ಕಳಿಸಬೇಕು. ಅದನ್ನವರು ಪರಿಶೀಲಿಸಿ, ಹೆಡ್ಡಿಂಗ್ ಇತ್ಯಾದಿ ಸರಿಪಡಿಸಿ ಮರಳಿ ಪೇಜ್ ಮಾಡಲು ಕಳಿಸಬೇಕು. ಪೇಜ್ ಮಾಡಿದ ಬಳಿಕ ಅದರ ಪ್ರಿಂಟ್ ತೆಗೆದು ಮತ್ತೆ ಮುಖ್ಯಸ್ಥರಿಗೆ ತೋರಿಸಿ, ಅವರು ಅಂಗೀಕರಿಸಿದ ಬಳಿಕ ಎ3 ಪ್ರಿಂಟರಲ್ಲಿ ಬಟರ್‍ಶೀಟ್‍ನಲ್ಲಿ, ಬಣ್ಣದ ಪುಟವಾಗಿದ್ದರೆ ಫಿಲ್ಮ್ ಶೀಟ್‌ನಲ್ಲಿ ಪ್ರಿಂಟ್ ತೆಗೆದು ಪ್ರೀಪ್ರೆಸ್‍ಗೆ ಕಳುಹಿಸಬೇಕು. ಅಲ್ಲಿ ಪ್ಲೇಟ್ ತಯಾರಿಸಿ ಮುದ್ರಣ ವಿಭಾಗಕ್ಕೆ ಕಳಿಸುತ್ತಾರೆ. ಇದಕ್ಕಾಗಿ ಎಲ್ಲಾ ಕಂಪ್ಯೂಟರ್‌ಗಳಿಗೆ ಸಿರಿಯಲ್ ನಂಬರ್ ನೀಡಲಾಯಿತು. (ನಂತರ ಬಣ್ಣದ ಪುಟಗಳಿಗೆ ದುಬಾರಿ ಬೆಲೆಯ ಆ ಕಾಲದಲ್ಲಿ ಅತ್ಯಾಧುನಿಕ ಎನಿಸಿದ ಇಮೇಜ್ ಸೆಟ್ಟರ್ ಬಂತು. ಅದು ಕಲರ್ ಸೆಪರೇಶನ್ ಮಾಡಿ ಇಡೀ ಪುಟದ ಫಿಲ್ಮ್ ಹೊರತೆಗೆಯುತ್ತಿತ್ತು.)

ಆಗ ಈಗಿನಂತೆ ಎಲ್ಲವೂ ಡಿಜಿಟಲ್ ಫೋಟೋಗಳಾಗಿರಲಿಲ್ಲ. ಪ್ರಿಂಟ್‍ಗಳೂ ಇರುತ್ತಿದ್ದವು. ಅವುಗಳನ್ನು ತಾಂತ್ರಿಕ ವಿಭಾಗಕ್ಕೆ ಕಳುಹಿಸಿದರೆ, ಅಲ್ಲಿ ಸ್ಕ್ಯಾನ್ ಮಾಡಿ ಆಯಾ ಫೋಲ್ಡರ್‌ಗಳಿಗೆ ಹಾಕುತ್ತಿದ್ದರು. ದೇಶ, ವಿದೇಶಗಳ ಫೋಟೋಗಳಿಗೆ ವ್ಯವಸ್ಥೆ ಮಾಡಲಾಗಿದ್ದು, ಅವು ಸಂಜೆಯ ಹೊತ್ತಿಗೆ ಇಂಟರ್‌ನೆಟ್ ಮೂಲಕ ಬರುತ್ತಿದ್ದವು. ನೆಟ್‍ಗಾಗಿಯೇ ಡೆಡಿಕೇಟೆಡ್ ಕೇಬಲ್ ಅಳವಡಿಸಲಾಗಿತ್ತು. ಆದರೂ, ಆಗಿನ ಸ್ಪೀಡ್ ನೆನೆಸಿಕೊಂಡರೆ ನಗು ಬರುತ್ತದೆ! ಒಂದು ಫೋಟೋ ಬರಲು ಹೆಂಡತಿಯ ಹೆರಿಗೆಗಾಗಿ ಆಸ್ಪತ್ರೆಯಲ್ಲಿ ಕಾಯುವ ಗಂಡನ ಸ್ಥಿತಿ!

ಇವೆಲ್ಲವೂ ಈಗ ನೆನಸುವಷ್ಟು ಸುಲಭವಾಗಿ ಇರಲಿಲ್ಲ! ಇದಕ್ಕೆ ಹೊಂದಿಕೊಳ್ಳಲು ಕೆಲವು ದಿನಗಳೇ ಹಿಡಿದವು! ಅದಕ್ಕಾಗಿಯೇ ತರಬೇತಿ. ಕಂಪೆನಿಯಿಂದ ಸೌರಭ್ ಎಂಬ ಯುವಕ ಬಂದಿದ್ದರು. ಆತ ಒಳ್ಳೆಯ ಶಿಕ್ಷಕ. ನಡುವೆ ಪ್ರಶ್ನೆಗಳನ್ನು ಕೇಳಿ ಸರಿ ಉತ್ತರ ಹೇಳಿದವರಿಗೆ ಒಂದು ಚಾಕಲೇಟ್ ಬಹುಮಾನ! ಕಂಪ್ಯೂಟರ್ ಅಜ್ಞಾನಿಯಾಗಿದ್ದ ನನಗೆ ಮೂರು ಚಾಕಲೇಟ್ ಸಿಕ್ಕಿದ್ದು ಇವತ್ತೂ ನೆನಪಿದೆ. ನಾವೆಲ್ಲ ಬಿಡುವಿನ ಸಂದರ್ಭದಲ್ಲಿ ಕನ್ನಡ ಟೈಪಿಂಗ್ ಕಲಿತೆವು. ಮೊದಲೇ ಹೇಳಿದಂತೆ DOS ಆಧರಿತ ‘ಪ್ರಕಾಶಕ್’ ಎಂಬ ಸಾಫ್ಟ್‌ವೇರ್. ಕಲಿಯಲು ಕಷ್ಟ. ಯಾಕೆಂದರೆ ಕೀ ಬೋರ್ಡ್ ಅಸಂಬದ್ಧ ಎಂಬಂತೆ ಕಾಣುತ್ತಿತ್ತು. ಇಂಗ್ಲೀಷ್ ಅಕ್ಷರಗಳಿಗೂ ಅದಕ್ಕೂ ಸಂಬಂಧವೇ ಇಲ್ಲ! ಒಮ್ಮೆ ಕಲಿತರೆ ಅತ್ಯಂತ ಸರಳ ಮತ್ತು ಅನುಕೂಲಕರ. ನಾನಂತೂ ಸ್ವಲ್ಪ ಸಮಯದಲ್ಲೇ ಹೆಚ್ಚುಕಡಿಮೆ ಮಾತಿನ ವೇಗದಲ್ಲಿ ಟೈಪ್ ಮಾಡಲು ಕಲಿತೆ! ಆಗ ಕಲಿತ ಒಂದು ಪಾಠವೆಂದರೆ, ಏನನ್ನಾದರೂ ಕಲಿಯಲು ಇರುವ ಅಡ್ಡಿಯೆಂದರೆ ಮಾನಸಿಕ ಹಿಂಜರಿಕೆ (mental block). ಇದನ್ನು ನಿವಾರಿಸಿದ್ದಕ್ಕಾಗಿ ಸೌರಭ್‌ರನ್ನು ನೆನಪಿಸಿಕೊಳ್ಳುತ್ತೇನೆ.

ಮೊದಲೇ ದುಬಾರಿ ಕಂಪ್ಯೂಟರ್! ಏನು ಮಾಡಿದರೆ ಏನು ಹಾಳಾಗುತ್ತದೋ ಎಂಬ ಭಯ ಬೇರೆ! “ನೀವು ಇದನ್ನು ಎತ್ತಿ ಹಾಕದ ಹೊರತು ಏನೂ ಆಗುವುದಿಲ್ಲ. ಪ್ರೋಗ್ರಾಂ ಫೈಲ್ಸ್ ಮುಟ್ಟಬೇಡಿ. ಮುಟ್ಟಿದರೂ ಅದು ಕನ್ಫರ್ಮೇಶನ್ ಕೇಳುತ್ತದೆ. ಡಿಲೀಟ್ ಮಾಡಬೇಡಿ. ಉಳಿದಂತೆ ನೀವು ಕಂಪ್ಯೂಟರ್ ಹಾಳು ಮಾಡಿ ತೋರಿಸಿ. ನಾನು ಬೇರೆ ಕಂಪ್ಯೂಟರ್ ಕೊಡುತ್ತೇನೆ” ಎಂದು ಅವರು ಧೈರ್ಯ ತುಂಬಿದ್ದರು! ಇದರಿಂದ ಮುಂದೆ ನಾವಾಗಿಯೇ ಒಂದೊಂದನ್ನೇ ಧೈರ್ಯವಾಗಿ ಕಲಿಯಲು ಸಾಧ್ಯವಾಯಿತು.

ಎಷ್ಟರ ಮಟ್ಟಿಗೆ ಎಂದರೆ, ಅವರು ಫೈಲ್ ಶೇರಿಂಗ್ ಮಾಡಲು ಇ-ಮೈಲ್‍ನಂತಹ ಸಾಫ್ಟ್‌ವೇರ್ ಕೊಟ್ಟಿದ್ದರು. ಅದು ಕಿರಿಕಿರಿ ಉಂಟು ಮಾಡುತ್ತಿತ್ತು! ಮುಂದೆ ನಾವೇ explorer ಮೂಲಕ ಕಾಪಿ ಪೇಸ್ಟ್ ಮಾಡುವ ಸರಳ ಉಪಾಯ ಕಂಡು ಹಿಡಿದೆವು!

ನಾವು ಸೀನಿಯರ್‌ಗಳಿಗೆ ಈ ತರಬೇತಿಗಳಲ್ಲಿ ನಿರಂತರ ಭಾಗವಹಿಸಲು ಸಾಧ್ಯವಾಗುತ್ತಿರಲಿಲ್ಲ ಎಂದು ಹೇಳಿದ್ದೆ. ಕಾರಣ ನಾವು ಪತ್ರಿಕೆಯಲ್ಲಿ ಇರಬೇಕಾದ ಸ್ಥಿರ ಶೀರ್ಷಿಕೆ, ವಿಭಾಗಗಳು ಇತ್ಯಾದಿಗಳ ಬಗ್ಗೆ ತಲೆಕೆರೆದುಕೊಳ್ಳುತ್ತಿದ್ದೆವು. ಪಟ್ಟಣಗಳ ಸುದ್ದಿ ಪುಟಗಳಿಗೆ ‘ಪೇಟೆ-ಪಟ್ಟಣ’, ಗ್ರಾಮೀಣ ಸುದ್ದಿಗಳ ಪುಟಗಳಿಗೆ ’ಊರು-ಕೇರಿ’, ಕ್ರೀಡಾಪುಟಗಳಿಗೆ ‘ಆಟ-ಕೂಟ’ ಹೀಗೆ ಹೆಸರುಗಳನ್ನು ಪಟ್ಟಿ ಮಾಡಿ ಅಂತಿಮಗೊಳಿಸುವುದೂ ದೊಡ್ಡ ಕೆಲಸವಾಗಿತ್ತು.

ಇನ್ನೊಂದು ದೊಡ್ಡ ಕೆಲಸವೆಂದರೆ ಬೇರೆ ಬೇರೆ ಆವೃತ್ತಿಗಳನ್ನು ಯೋಜಿಸುವುದು! ಆಗಿನ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಉಡುಪಿಗೆ ಒಂದು, ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯಕ್ಕೆ ಒಂದು, ಮಂಗಳೂರಿಗೆ ಒಂದು ಮತ್ತು ಅಂತಿಮವಾಗಿ ಲೇಟ್ ಸಿಟಿ ಎಡಿಷನ್! ಜೊತೆಗೆ ಉತ್ತರ ಕನ್ನಡ, ಶಿವಮೊಗ್ಗ ಇತ್ಯಾದಿ ಜಿಲ್ಲೆಗಳಿಗೆ ಪ್ರತ್ಯೇಕ- ಹೀಗೆ ಹಲವು ಆವೃತ್ತಿಗಳು! ಇವುಗಳು ಎಷ್ಟು ದೂರ ಇವೆ, ಎಷ್ಟು ಗಂಟೆಗೆ ತಲುಪಬೇಕು, ಪುಟ ಎಷ್ಟು ಗಂಟೆಗೆ ಮುಗಿಯಬೇಕು, ಅದಕ್ಕೆ ತಕ್ಕಂತೆ ಸಿಬ್ಬಂದಿಗಳಿಗೆ ಶಿಫ್ಟ್ ಮತ್ತು ಕೆಲಸಕ್ಕೆ ಹಾಜರಾಗುವ ಸಮಯ ನಿಗದಿ ಪಡಿಸುವುದು ಇತ್ಯಾದಿಯಾಗಿ ಹಲವಾರು ತಲೆನೋವಿನ ಕೆಲಸಗಳು ನಮಗಿದ್ದವು!

ಇವೆಲ್ಲವನ್ನು ಅನುಷ್ಠಾನಕ್ಕೆ ತರಲು ಬೇರೆಬೇರೆ ವಿಭಾಗಗಳನ್ನು ರಚಿಸಲಾಯಿತು. ಆ ಕುರಿತು ಮತ್ತು ಅವುಗಳಲ್ಲಿ ನನಗೆ ನೆನಪಿರುವಂತೆ ಇದ್ದವರು ಯಾರು ಇತ್ಯಾದಿಗಳ ಕುರಿತು ಮುಂದೆ ಬರೆಯುತ್ತೇನೆ.
***

ಕಚೇರಿಯೇ ಮನೆಯಾಯಿತು!

ಪತ್ರಿಕೆಗಾಗಿ ಯೋಜನೆ, ತರಬೇತಿ ನಡೆಯುತ್ತಿದ್ದಾಗ ಮತ್ತು ನಂತರ ಪತ್ರಿಕೆ ಆರಂಭಗೊಂಡ ಬಳಿಕವೂ ನಾವು ಕೆಲವರು ಕಚೇರಿಯಲ್ಲಿಯೇ ಮಲಗುತ್ತಿದ್ದೆವು. ಕೆಲಸ ಅಷ್ಟಿತ್ತು! ಮುಖಪುಟ ನೋಡಿಕೊಳ್ಳಬೇಕಾಗಿದ್ದ ನನಗಂತೂ ನಿತ್ಯ ರಾತ್ರಿ ಪಾಳಿ ಖಾಯಂ! ರಾತ್ರಿ ಎಡಿಷನ್ ಮುಗಿಸಿ ಪತ್ರಿಕೆ ಪ್ರಕಟವಾಗಿ ಬಂಟ್ವಾಳ ಎಡಿಷನ್ ಸಾಗಿಸುವ ಕಾರಿನಲ್ಲಿ ಹೋಗಿ ಪಾಣೆಮಂಗಳೂರಿನಲ್ಲಿ ಇಳಿದು ಎರಡು ಕಿ.ಮೀ. ನಿಶಾಚರ ಪಿಶಾಚಿಯಂತೆ ನಡೆದು ಮನೆ ಸೇರಬೇಕು. ಮತ್ತೆ ನಿದ್ದೆಯ ಶಾಸ್ತ್ರ ಮಾಡಿ ಮರುದಿನ ಹಾಜರಾಗಬೇಕು. ಪ್ರಯಾಣದ ಸಮಯವೂ ವ್ಯರ್ಥ! ವಿಲ್ಫ್ರೆಡ್ ಡಿ’ಸೋಜಾ ಅವರಿಗೆ ಇನ್ನೂ ದೂರ- ಉಪ್ಪಿನಂಗಡಿ ದಾಟಿ ಹೋಗಬೇಕು. ಅಲ್ಲದೆ ಉಳಿದವರೂ ಬೈಕಂಪಾಡಿಯಿಂದ ರಾತ್ರಿ ಹೊತ್ತು ಸ್ವಂತ ವಾಹನವಿಲ್ಲದೇ ಹೊರಡುವುದು ಕಷ್ಟ. ನಗರದೊಳಗಿನ ಸಿಬ್ಬಂದಿಗೆ ವಾಹನ ವ್ಯವಸ್ಥೆ ಇತ್ತು.

ಒಂದು ದಿನ ಬೆಳ್ಳಂಬೆಳಗೆ ಆಡಳಿತ ನಿರ್ದೇಶಕ ಸ್ಯಾಮುಯೆಲ್ ಸಿಕ್ವೇರಾ ಕಚೇರಿಗೆ ಬಂದವರೇ ದಂಗು ಬಡಿದುಹೋದರು! ನಾವು ಕೆಲವರು ಕಚೇರಿಯಲ್ಲಿಯೇ ಸಿಕ್ಕಸಿಕ್ಕಲ್ಲಿ ಪೇಪರ್ ಹಾಸಿ ಮಲಗಿದ್ದೆವು. “ಹಾಂ! ನೀವು ಇಲ್ಲಿಯೇ ಮಲಗುತ್ತಿದ್ದೀರಾ!?” ಎಂದವರೇ, ಆಗ ಅವರ ಬಳಿ ಮಾತ್ರವಿದ್ದ ವಾಕಿಟಾಕಿ ಗಾತ್ರದ ಮೊಬೈಲ್ ಫೋನಿನಲ್ಲಿ ಮಾತನಾಡಲಾರಂಭಿಸಿದರು.

ಮಧ್ಯಾಹ್ನದ ಹೊತ್ತಿಗೆ ನಮ್ಮ ದೊಡ್ಡ ಹಾಲ್‍ನಲ್ಲಿ ಪಾರ್ಟಿಷನ್ ಆಯಿತು. ಫ್ಯಾನ್‍ಗಳು ಫಿಕ್ಸ್ ಆದವು. ಐದು ಮಂಚಗಳು, ಹಾಸಿಗೆ, ದಿಂಬು, ಹೊದಿಕೆ, ಬಟ್ಟೆಬರೆ ಇಡಲು ಲಾಕರ್ ಎಲ್ಲವೂ ಬಂದವು. ಅದೇ ರಾತ್ರಿಯಿಂದ ನಮ್ಮ ಪೇಪರ್ ಹಾಸಿಗೆಗೆ ವಿದಾಯ ಹೇಳಿದೆವು. ಇದಕ್ಕಾಗಿಯೇ ನಾನವರನ್ನು ಇಂದೂ ನೆನಪಿಸಿಕೊಳ್ಳುತ್ತೇನೆ. ನಾವೂ ಕೂಡಾ ಇಮ್ಮಡಿ ಪ್ರೀತಿಯಿಂದ ದುಡಿಯಲಾರಂಭಿಸಿದೆವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Thanks for this great write up on Janawahini by Nikhil Kolpe sir.. it manifests their struggle to get the newspaper published in time with perfection must be applauded.. Waiting for further episodes.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...