Homeಕರ್ನಾಟಕಪತ್ರಿಕೆಯ ಮೂಲಕ ಜನಪರ ಹೋರಾಟಕ್ಕೆ ಆಖಾಡ ಸಿದ್ಧ!...

ಪತ್ರಿಕೆಯ ಮೂಲಕ ಜನಪರ ಹೋರಾಟಕ್ಕೆ ಆಖಾಡ ಸಿದ್ಧ!…

- Advertisement -
- Advertisement -

ಜನವಾಹಿನಿಯ ನೆನಪುಗಳು: ಅಂಕಣ-7
ನಿಖಿಲ್ ಕೋಲ್ಪೆ

ಕೃಪೆ: ’ಆರ್ಸೋ’ ಕೊಂಕಣಿ ಪತ್ರಿಕೆ

ಮೊದಲೇ ಹೇಳಿದಂತೆ ಕಂಪ್ಯೂಟರ್ ಇತ್ಯಾದಿ ಬಂದಿದ್ದರೂ, ಆಗ ಆನ್ಲೈನ್ ಎಡಿಟಿಂಗ್ ಹೊಸ ವಿಷಯವಾಗಿದ್ದುದರಿಂದ ಅದಕ್ಕಾಗಿಯೇ ಕಂಪ್ಯೂಟರ್ ಮತ್ತು ಸಾಫ್ಟ್‌ವೇರ್ ಪೂರೈಸಿದ ಕಂಪೆನಿಯವರು ವಿಶೇಷ ತರಬೇತಿ ಏರ್ಪಡಿಸಿದ್ದರು.

ನಮ್ಮಲ್ಲಿ ಕೆಲವರು ಪೇಜ್‍ಮೇಕರ್ ಇತ್ಯಾದಿಗಳಲ್ಲಿ ನಿಷ್ಣಾತರಾಗಿದ್ದರೂ, ನನ್ನನ್ನೂ ಸೇರಿದಂತೆ ಕೆಲವರಿಗೆ ಕನ್ನಡ ಟೈಪಿಂಗ್ ಕೂಡಾ ಬರುತ್ತಿರಲಿಲ್ಲ! ವಿಭಾಗ ಮುಖ್ಯಸ್ಥರು ಸುದ್ದಿಗಳನ್ನು ಆಯ್ಕೆ ಮಾಡಿ, ಉಪಸಂಪಾದಕರಿಗೆ ಹಂಚಬೇಕು. ಉಪಸಂಪಾದಕರು ಟೈಪ್ ಮಾಡಿದ್ದನ್ನು ಮತ್ತೊಮ್ಮೆ ಓದಿ ವಿಭಾಗ ಮುಖ್ಯಸ್ಥರಿಗೆ ಆಂತರಿಕ ನೆಟ್ವರ್ಕ್ ಮೂಲಕ ಕಳಿಸಬೇಕು. ಅದನ್ನವರು ಪರಿಶೀಲಿಸಿ, ಹೆಡ್ಡಿಂಗ್ ಇತ್ಯಾದಿ ಸರಿಪಡಿಸಿ ಮರಳಿ ಪೇಜ್ ಮಾಡಲು ಕಳಿಸಬೇಕು. ಪೇಜ್ ಮಾಡಿದ ಬಳಿಕ ಅದರ ಪ್ರಿಂಟ್ ತೆಗೆದು ಮತ್ತೆ ಮುಖ್ಯಸ್ಥರಿಗೆ ತೋರಿಸಿ, ಅವರು ಅಂಗೀಕರಿಸಿದ ಬಳಿಕ ಎ3 ಪ್ರಿಂಟರಲ್ಲಿ ಬಟರ್‍ಶೀಟ್‍ನಲ್ಲಿ, ಬಣ್ಣದ ಪುಟವಾಗಿದ್ದರೆ ಫಿಲ್ಮ್ ಶೀಟ್‌ನಲ್ಲಿ ಪ್ರಿಂಟ್ ತೆಗೆದು ಪ್ರೀಪ್ರೆಸ್‍ಗೆ ಕಳುಹಿಸಬೇಕು. ಅಲ್ಲಿ ಪ್ಲೇಟ್ ತಯಾರಿಸಿ ಮುದ್ರಣ ವಿಭಾಗಕ್ಕೆ ಕಳಿಸುತ್ತಾರೆ. ಇದಕ್ಕಾಗಿ ಎಲ್ಲಾ ಕಂಪ್ಯೂಟರ್‌ಗಳಿಗೆ ಸಿರಿಯಲ್ ನಂಬರ್ ನೀಡಲಾಯಿತು. (ನಂತರ ಬಣ್ಣದ ಪುಟಗಳಿಗೆ ದುಬಾರಿ ಬೆಲೆಯ ಆ ಕಾಲದಲ್ಲಿ ಅತ್ಯಾಧುನಿಕ ಎನಿಸಿದ ಇಮೇಜ್ ಸೆಟ್ಟರ್ ಬಂತು. ಅದು ಕಲರ್ ಸೆಪರೇಶನ್ ಮಾಡಿ ಇಡೀ ಪುಟದ ಫಿಲ್ಮ್ ಹೊರತೆಗೆಯುತ್ತಿತ್ತು.)

ಆಗ ಈಗಿನಂತೆ ಎಲ್ಲವೂ ಡಿಜಿಟಲ್ ಫೋಟೋಗಳಾಗಿರಲಿಲ್ಲ. ಪ್ರಿಂಟ್‍ಗಳೂ ಇರುತ್ತಿದ್ದವು. ಅವುಗಳನ್ನು ತಾಂತ್ರಿಕ ವಿಭಾಗಕ್ಕೆ ಕಳುಹಿಸಿದರೆ, ಅಲ್ಲಿ ಸ್ಕ್ಯಾನ್ ಮಾಡಿ ಆಯಾ ಫೋಲ್ಡರ್‌ಗಳಿಗೆ ಹಾಕುತ್ತಿದ್ದರು. ದೇಶ, ವಿದೇಶಗಳ ಫೋಟೋಗಳಿಗೆ ವ್ಯವಸ್ಥೆ ಮಾಡಲಾಗಿದ್ದು, ಅವು ಸಂಜೆಯ ಹೊತ್ತಿಗೆ ಇಂಟರ್‌ನೆಟ್ ಮೂಲಕ ಬರುತ್ತಿದ್ದವು. ನೆಟ್‍ಗಾಗಿಯೇ ಡೆಡಿಕೇಟೆಡ್ ಕೇಬಲ್ ಅಳವಡಿಸಲಾಗಿತ್ತು. ಆದರೂ, ಆಗಿನ ಸ್ಪೀಡ್ ನೆನೆಸಿಕೊಂಡರೆ ನಗು ಬರುತ್ತದೆ! ಒಂದು ಫೋಟೋ ಬರಲು ಹೆಂಡತಿಯ ಹೆರಿಗೆಗಾಗಿ ಆಸ್ಪತ್ರೆಯಲ್ಲಿ ಕಾಯುವ ಗಂಡನ ಸ್ಥಿತಿ!

ಇವೆಲ್ಲವೂ ಈಗ ನೆನಸುವಷ್ಟು ಸುಲಭವಾಗಿ ಇರಲಿಲ್ಲ! ಇದಕ್ಕೆ ಹೊಂದಿಕೊಳ್ಳಲು ಕೆಲವು ದಿನಗಳೇ ಹಿಡಿದವು! ಅದಕ್ಕಾಗಿಯೇ ತರಬೇತಿ. ಕಂಪೆನಿಯಿಂದ ಸೌರಭ್ ಎಂಬ ಯುವಕ ಬಂದಿದ್ದರು. ಆತ ಒಳ್ಳೆಯ ಶಿಕ್ಷಕ. ನಡುವೆ ಪ್ರಶ್ನೆಗಳನ್ನು ಕೇಳಿ ಸರಿ ಉತ್ತರ ಹೇಳಿದವರಿಗೆ ಒಂದು ಚಾಕಲೇಟ್ ಬಹುಮಾನ! ಕಂಪ್ಯೂಟರ್ ಅಜ್ಞಾನಿಯಾಗಿದ್ದ ನನಗೆ ಮೂರು ಚಾಕಲೇಟ್ ಸಿಕ್ಕಿದ್ದು ಇವತ್ತೂ ನೆನಪಿದೆ. ನಾವೆಲ್ಲ ಬಿಡುವಿನ ಸಂದರ್ಭದಲ್ಲಿ ಕನ್ನಡ ಟೈಪಿಂಗ್ ಕಲಿತೆವು. ಮೊದಲೇ ಹೇಳಿದಂತೆ DOS ಆಧರಿತ ‘ಪ್ರಕಾಶಕ್’ ಎಂಬ ಸಾಫ್ಟ್‌ವೇರ್. ಕಲಿಯಲು ಕಷ್ಟ. ಯಾಕೆಂದರೆ ಕೀ ಬೋರ್ಡ್ ಅಸಂಬದ್ಧ ಎಂಬಂತೆ ಕಾಣುತ್ತಿತ್ತು. ಇಂಗ್ಲೀಷ್ ಅಕ್ಷರಗಳಿಗೂ ಅದಕ್ಕೂ ಸಂಬಂಧವೇ ಇಲ್ಲ! ಒಮ್ಮೆ ಕಲಿತರೆ ಅತ್ಯಂತ ಸರಳ ಮತ್ತು ಅನುಕೂಲಕರ. ನಾನಂತೂ ಸ್ವಲ್ಪ ಸಮಯದಲ್ಲೇ ಹೆಚ್ಚುಕಡಿಮೆ ಮಾತಿನ ವೇಗದಲ್ಲಿ ಟೈಪ್ ಮಾಡಲು ಕಲಿತೆ! ಆಗ ಕಲಿತ ಒಂದು ಪಾಠವೆಂದರೆ, ಏನನ್ನಾದರೂ ಕಲಿಯಲು ಇರುವ ಅಡ್ಡಿಯೆಂದರೆ ಮಾನಸಿಕ ಹಿಂಜರಿಕೆ (mental block). ಇದನ್ನು ನಿವಾರಿಸಿದ್ದಕ್ಕಾಗಿ ಸೌರಭ್‌ರನ್ನು ನೆನಪಿಸಿಕೊಳ್ಳುತ್ತೇನೆ.

ಮೊದಲೇ ದುಬಾರಿ ಕಂಪ್ಯೂಟರ್! ಏನು ಮಾಡಿದರೆ ಏನು ಹಾಳಾಗುತ್ತದೋ ಎಂಬ ಭಯ ಬೇರೆ! “ನೀವು ಇದನ್ನು ಎತ್ತಿ ಹಾಕದ ಹೊರತು ಏನೂ ಆಗುವುದಿಲ್ಲ. ಪ್ರೋಗ್ರಾಂ ಫೈಲ್ಸ್ ಮುಟ್ಟಬೇಡಿ. ಮುಟ್ಟಿದರೂ ಅದು ಕನ್ಫರ್ಮೇಶನ್ ಕೇಳುತ್ತದೆ. ಡಿಲೀಟ್ ಮಾಡಬೇಡಿ. ಉಳಿದಂತೆ ನೀವು ಕಂಪ್ಯೂಟರ್ ಹಾಳು ಮಾಡಿ ತೋರಿಸಿ. ನಾನು ಬೇರೆ ಕಂಪ್ಯೂಟರ್ ಕೊಡುತ್ತೇನೆ” ಎಂದು ಅವರು ಧೈರ್ಯ ತುಂಬಿದ್ದರು! ಇದರಿಂದ ಮುಂದೆ ನಾವಾಗಿಯೇ ಒಂದೊಂದನ್ನೇ ಧೈರ್ಯವಾಗಿ ಕಲಿಯಲು ಸಾಧ್ಯವಾಯಿತು.

ಎಷ್ಟರ ಮಟ್ಟಿಗೆ ಎಂದರೆ, ಅವರು ಫೈಲ್ ಶೇರಿಂಗ್ ಮಾಡಲು ಇ-ಮೈಲ್‍ನಂತಹ ಸಾಫ್ಟ್‌ವೇರ್ ಕೊಟ್ಟಿದ್ದರು. ಅದು ಕಿರಿಕಿರಿ ಉಂಟು ಮಾಡುತ್ತಿತ್ತು! ಮುಂದೆ ನಾವೇ explorer ಮೂಲಕ ಕಾಪಿ ಪೇಸ್ಟ್ ಮಾಡುವ ಸರಳ ಉಪಾಯ ಕಂಡು ಹಿಡಿದೆವು!

ನಾವು ಸೀನಿಯರ್‌ಗಳಿಗೆ ಈ ತರಬೇತಿಗಳಲ್ಲಿ ನಿರಂತರ ಭಾಗವಹಿಸಲು ಸಾಧ್ಯವಾಗುತ್ತಿರಲಿಲ್ಲ ಎಂದು ಹೇಳಿದ್ದೆ. ಕಾರಣ ನಾವು ಪತ್ರಿಕೆಯಲ್ಲಿ ಇರಬೇಕಾದ ಸ್ಥಿರ ಶೀರ್ಷಿಕೆ, ವಿಭಾಗಗಳು ಇತ್ಯಾದಿಗಳ ಬಗ್ಗೆ ತಲೆಕೆರೆದುಕೊಳ್ಳುತ್ತಿದ್ದೆವು. ಪಟ್ಟಣಗಳ ಸುದ್ದಿ ಪುಟಗಳಿಗೆ ‘ಪೇಟೆ-ಪಟ್ಟಣ’, ಗ್ರಾಮೀಣ ಸುದ್ದಿಗಳ ಪುಟಗಳಿಗೆ ’ಊರು-ಕೇರಿ’, ಕ್ರೀಡಾಪುಟಗಳಿಗೆ ‘ಆಟ-ಕೂಟ’ ಹೀಗೆ ಹೆಸರುಗಳನ್ನು ಪಟ್ಟಿ ಮಾಡಿ ಅಂತಿಮಗೊಳಿಸುವುದೂ ದೊಡ್ಡ ಕೆಲಸವಾಗಿತ್ತು.

ಇನ್ನೊಂದು ದೊಡ್ಡ ಕೆಲಸವೆಂದರೆ ಬೇರೆ ಬೇರೆ ಆವೃತ್ತಿಗಳನ್ನು ಯೋಜಿಸುವುದು! ಆಗಿನ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಉಡುಪಿಗೆ ಒಂದು, ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯಕ್ಕೆ ಒಂದು, ಮಂಗಳೂರಿಗೆ ಒಂದು ಮತ್ತು ಅಂತಿಮವಾಗಿ ಲೇಟ್ ಸಿಟಿ ಎಡಿಷನ್! ಜೊತೆಗೆ ಉತ್ತರ ಕನ್ನಡ, ಶಿವಮೊಗ್ಗ ಇತ್ಯಾದಿ ಜಿಲ್ಲೆಗಳಿಗೆ ಪ್ರತ್ಯೇಕ- ಹೀಗೆ ಹಲವು ಆವೃತ್ತಿಗಳು! ಇವುಗಳು ಎಷ್ಟು ದೂರ ಇವೆ, ಎಷ್ಟು ಗಂಟೆಗೆ ತಲುಪಬೇಕು, ಪುಟ ಎಷ್ಟು ಗಂಟೆಗೆ ಮುಗಿಯಬೇಕು, ಅದಕ್ಕೆ ತಕ್ಕಂತೆ ಸಿಬ್ಬಂದಿಗಳಿಗೆ ಶಿಫ್ಟ್ ಮತ್ತು ಕೆಲಸಕ್ಕೆ ಹಾಜರಾಗುವ ಸಮಯ ನಿಗದಿ ಪಡಿಸುವುದು ಇತ್ಯಾದಿಯಾಗಿ ಹಲವಾರು ತಲೆನೋವಿನ ಕೆಲಸಗಳು ನಮಗಿದ್ದವು!

ಇವೆಲ್ಲವನ್ನು ಅನುಷ್ಠಾನಕ್ಕೆ ತರಲು ಬೇರೆಬೇರೆ ವಿಭಾಗಗಳನ್ನು ರಚಿಸಲಾಯಿತು. ಆ ಕುರಿತು ಮತ್ತು ಅವುಗಳಲ್ಲಿ ನನಗೆ ನೆನಪಿರುವಂತೆ ಇದ್ದವರು ಯಾರು ಇತ್ಯಾದಿಗಳ ಕುರಿತು ಮುಂದೆ ಬರೆಯುತ್ತೇನೆ.
***

ಕಚೇರಿಯೇ ಮನೆಯಾಯಿತು!

ಪತ್ರಿಕೆಗಾಗಿ ಯೋಜನೆ, ತರಬೇತಿ ನಡೆಯುತ್ತಿದ್ದಾಗ ಮತ್ತು ನಂತರ ಪತ್ರಿಕೆ ಆರಂಭಗೊಂಡ ಬಳಿಕವೂ ನಾವು ಕೆಲವರು ಕಚೇರಿಯಲ್ಲಿಯೇ ಮಲಗುತ್ತಿದ್ದೆವು. ಕೆಲಸ ಅಷ್ಟಿತ್ತು! ಮುಖಪುಟ ನೋಡಿಕೊಳ್ಳಬೇಕಾಗಿದ್ದ ನನಗಂತೂ ನಿತ್ಯ ರಾತ್ರಿ ಪಾಳಿ ಖಾಯಂ! ರಾತ್ರಿ ಎಡಿಷನ್ ಮುಗಿಸಿ ಪತ್ರಿಕೆ ಪ್ರಕಟವಾಗಿ ಬಂಟ್ವಾಳ ಎಡಿಷನ್ ಸಾಗಿಸುವ ಕಾರಿನಲ್ಲಿ ಹೋಗಿ ಪಾಣೆಮಂಗಳೂರಿನಲ್ಲಿ ಇಳಿದು ಎರಡು ಕಿ.ಮೀ. ನಿಶಾಚರ ಪಿಶಾಚಿಯಂತೆ ನಡೆದು ಮನೆ ಸೇರಬೇಕು. ಮತ್ತೆ ನಿದ್ದೆಯ ಶಾಸ್ತ್ರ ಮಾಡಿ ಮರುದಿನ ಹಾಜರಾಗಬೇಕು. ಪ್ರಯಾಣದ ಸಮಯವೂ ವ್ಯರ್ಥ! ವಿಲ್ಫ್ರೆಡ್ ಡಿ’ಸೋಜಾ ಅವರಿಗೆ ಇನ್ನೂ ದೂರ- ಉಪ್ಪಿನಂಗಡಿ ದಾಟಿ ಹೋಗಬೇಕು. ಅಲ್ಲದೆ ಉಳಿದವರೂ ಬೈಕಂಪಾಡಿಯಿಂದ ರಾತ್ರಿ ಹೊತ್ತು ಸ್ವಂತ ವಾಹನವಿಲ್ಲದೇ ಹೊರಡುವುದು ಕಷ್ಟ. ನಗರದೊಳಗಿನ ಸಿಬ್ಬಂದಿಗೆ ವಾಹನ ವ್ಯವಸ್ಥೆ ಇತ್ತು.

ಒಂದು ದಿನ ಬೆಳ್ಳಂಬೆಳಗೆ ಆಡಳಿತ ನಿರ್ದೇಶಕ ಸ್ಯಾಮುಯೆಲ್ ಸಿಕ್ವೇರಾ ಕಚೇರಿಗೆ ಬಂದವರೇ ದಂಗು ಬಡಿದುಹೋದರು! ನಾವು ಕೆಲವರು ಕಚೇರಿಯಲ್ಲಿಯೇ ಸಿಕ್ಕಸಿಕ್ಕಲ್ಲಿ ಪೇಪರ್ ಹಾಸಿ ಮಲಗಿದ್ದೆವು. “ಹಾಂ! ನೀವು ಇಲ್ಲಿಯೇ ಮಲಗುತ್ತಿದ್ದೀರಾ!?” ಎಂದವರೇ, ಆಗ ಅವರ ಬಳಿ ಮಾತ್ರವಿದ್ದ ವಾಕಿಟಾಕಿ ಗಾತ್ರದ ಮೊಬೈಲ್ ಫೋನಿನಲ್ಲಿ ಮಾತನಾಡಲಾರಂಭಿಸಿದರು.

ಮಧ್ಯಾಹ್ನದ ಹೊತ್ತಿಗೆ ನಮ್ಮ ದೊಡ್ಡ ಹಾಲ್‍ನಲ್ಲಿ ಪಾರ್ಟಿಷನ್ ಆಯಿತು. ಫ್ಯಾನ್‍ಗಳು ಫಿಕ್ಸ್ ಆದವು. ಐದು ಮಂಚಗಳು, ಹಾಸಿಗೆ, ದಿಂಬು, ಹೊದಿಕೆ, ಬಟ್ಟೆಬರೆ ಇಡಲು ಲಾಕರ್ ಎಲ್ಲವೂ ಬಂದವು. ಅದೇ ರಾತ್ರಿಯಿಂದ ನಮ್ಮ ಪೇಪರ್ ಹಾಸಿಗೆಗೆ ವಿದಾಯ ಹೇಳಿದೆವು. ಇದಕ್ಕಾಗಿಯೇ ನಾನವರನ್ನು ಇಂದೂ ನೆನಪಿಸಿಕೊಳ್ಳುತ್ತೇನೆ. ನಾವೂ ಕೂಡಾ ಇಮ್ಮಡಿ ಪ್ರೀತಿಯಿಂದ ದುಡಿಯಲಾರಂಭಿಸಿದೆವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Thanks for this great write up on Janawahini by Nikhil Kolpe sir.. it manifests their struggle to get the newspaper published in time with perfection must be applauded.. Waiting for further episodes.

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....