Homeಕರೋನಾ ತಲ್ಲಣಸಮಗ್ರ ಪ್ಯಾಕೇಜ್ ನೀಡದಿದ್ದರೆ ಸಿಎಂ ನಿವಾಸದ ಮುಂದೆ ಖಾಲಿ ಚೀಲ ಹಿಡಿದು ಪ್ರತಿಭಟನೆ: ಜನಾಗ್ರಹ ಆಂದೋಲನ...

ಸಮಗ್ರ ಪ್ಯಾಕೇಜ್ ನೀಡದಿದ್ದರೆ ಸಿಎಂ ನಿವಾಸದ ಮುಂದೆ ಖಾಲಿ ಚೀಲ ಹಿಡಿದು ಪ್ರತಿಭಟನೆ: ಜನಾಗ್ರಹ ಆಂದೋಲನ ಎಚ್ಚರಿಕೆ

- Advertisement -
- Advertisement -

ರಾಜ್ಯ ಸರ್ಕಾರ ಬಡವರಿಗೆ ಮತ್ತು ಕಾರ್ಮಿಕರಿಗೆ ನೀಡಿರುವ ಎರಡು ಆರ್ಥಿಕ ಪರಿಹಾರ ಪ್ಯಾಕೇಜ್‌ಗಳು ಬಡವರನ್ನು ಅಣಕ ಮಾಡುವಂತಿವೆ. ಈ ಕೂಡಲೇ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸರ್ಕಾರ ಎಚ್ಚೆತ್ತುಕೊಂಡು ಸಮಗ್ರ ಪರಿಹಾರದ ಪ್ಯಾಕೇಜ್‌ ಒಂದನ್ನು ಘೋಷಿಸಬೇಕು. ಇಲ್ಲವಾದಲ್ಲಿ ಜೂನ್‌ 15 ರಂದು ರಾಜ್ಯಾದ್ಯಂತ ಶಾಸಕರು, ಜಿಲ್ಲಾ ಉಸ್ತುವಾರಿ ಮಂತ್ರಿಗಳು, ಮುಖ್ಯಮಂತ್ರಿಗಳ ನಿವಾಸದ ಮುಂದೆ ಖಾಲಿ ಚೀಲ ಹಿಡಿದು ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಜನಾಗ್ರಹ ಆಂದೋಲನ ಸಮಿತಿ ಸರ್ಕಾರಕ್ಕೆ ಕಠಿಣ ಎಚ್ಚರಿಕೆಯನ್ನು ನೀಡಿದೆ.

ಇಂದು ಮಧ್ಯಾಹ್ನ ಆನ್‌ಲೈನ್‌ ಮೂಲಕ ಪತ್ರಿಕಾಗೋಷ್ಠಿಯನ್ನು ನಡೆಸಿ ಸರ್ಕಾರದ ಮುಂದೆ 5 ಅಂಶಗಳ ಆಗ್ರಹ ಪತ್ರವನ್ನು ಮಂಡಿಸಿರುವ ಸಮಿತಿಯು ಮುಖ್ಯಮಂತ್ರಿ ಯಡಿಯೂರಪ್ಪವನವರಿಗೆ ಸಲ್ಲಿಸಲು ಮುಂದಾಗಿದೆ.

ಪತ್ರಿಕಾಗೋಷ್ಠಿಯನ್ನುದ್ಧೇಶಿಸಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷರಾದ ಹೆಚ್‌.ಆರ್ ಬಸವರಾಜಪ್ಪ, “ಕರ್ನಾಟಕ ಸರ್ಕಾರ ಕೊರೋನ ವಿರುದ್ಧ ಹೋರಾಡಲು ಕೈಗೊಂಡಿರುವ ಕ್ರಮ ಯಾವುದಕ್ಕೂ ಸಾಲದು. ಜನರ ಕಣ್ಣೊರೆಸುವ ಈ ಪರಿಹಾರ ಪ್ಯಾಕೇಜ್‌ ನಿಂದ ಯಾರಿಗೂ ಅನುಕೂಲವಿಲ್ಲ. ರಾಜ್ಯ ಸರ್ಕಾರ ಸುಮಾರು 20 ಸಾವಿರ ಕೋಟಿ ಮೊತ್ತದ ಸಮಗ್ರ ಪ್ಯಾಕೇಜ್‌ ಘೋಷಿಸುವ ಮೂಲಕ ಕಷ್ಟದಲ್ಲಿರುವ ಜನರ ಜೊತೆ ನಿಲ್ಲಬೇಕು. ರಾಜ್ಯಕ್ಕೆ ಮುಂಗಾರು ಪ್ರವೇಶಿಸಿ ಎಲ್ಲೆಡೆ ಮಳೆಯಾಗುತ್ತಿದೆ. ಬೀಜ ಗೊಬ್ಬರ ಖರೀದಿಸಲು ರೈತರ ಬಳಿ ಈಗ ಹಣ ಇಲ್ಲ. ಪ್ರತಿ ರೈತರಿಗೆ (50 ಲಕ್ಷ ಕುಟುಂಬಗಳಿಗೆ)  10,000 ಆರ್ಥಿಕ ನೆರವು ಮತ್ತು ಬೀಜ ಗೊಬ್ಬರವನ್ನು ಉಚಿತವಾಗಿ ಅಥವಾ ಸಬ್ಸಿಡಿ ದರದಲ್ಲಿ ನೀಡಬೇಕು” ಎಂದು ಒತ್ತಾಯಿಸಿದರು.

ಸರ್ಕಾರ ಈಗ ಘೋಷಿಸಿರುವ ಪ್ಯಾಕೇಜ್‌ ಎಲ್ಲಾ ಬಡವರನ್ನು ತಲುಪಿಲ್ಲ. ಹಾಗಾಗಿ ಹೊಸ ಪ್ಯಾಕೇಜ್‌ ಘೋಷಿಸಬೇಕು.  ರಾಜ್ಯ ಸರ್ಕಾರದ ಬಳಿ ಹಣ ಇಲ್ಲವಾದರೆ ಕೇಂದ್ರದಿಂದ ಬರಬೇಕಾದ ಜಿಎಸ್‌ಟಿ ಬಾಕಿ 30 ಸಾವಿರ ಕೋಟಿ ಹಣ, ಬೆಂಗಳೂರು ಅಭಿವೃದ್ಧಿಗೆ ಮೀಸಲಿಟ್ಟಿರುವ 26 ಸಾವಿರ ಕೋಟಿ ಹಣ ಇದೆ. ಅದೇ ರೀತಿ ದೊಡ್ಡ ದೊಡ್ಡ ಉದ್ಯಮಿಗಳು ಮತ್ತು ಐಷಾರಾಮಿ ಸೇವೆಗಳ ಮೇಲೆ 2% ಕೊರೋನಾ ತೆರಿಗೆಯನ್ನು ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಜನಾಗ್ರಹ ಆಂದೋಲನ ಸಮಿತಿಯ ಆಗ್ರಹ ಪತ್ರದಲ್ಲಿ ಹೇಳಲಾದ 5 ಅಂಶಗಳು..

  1. ಸರ್ಕಾರ ವೈದ್ಯಕೀಯ ಸೌಲಭ್ಯವನ್ನು ಬಲಪಡಿಸಬೇಕು. ಗ್ರಾಮೀಣ ಭಾಗದಲ್ಲಿ ಕೊರೋನಾ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಬೇಕು.
  2. ಸರ್ಕಾರ ರಾಜ್ಯದ ಪ್ರತಿಯೊಬ್ಬ ನಾಗರಿಕನಿಗೂ ಉಚಿತ ವ್ಯಾಕ್ಸೀನ್‌ ನೀಡಬೇಕು.
  3. ಸಮಗ್ರ ಪಡಿತರ, ಎಲ್ಲಾ ಬಡ ಕುಟುಂಬಗಳಿಗೆ (72 ಲಕ್ಷ ಕುಟುಂಬಗಳಿಗೆ) ಅಕ್ಕಿ, ಬೇಳೆ, ಗೋದಿ ಒಳಗೊಂಡ ಸಮಗ್ರ ರೇಷನ್‌ ಕಿಟ್‌ ನೀಡಬೇಕು. ರಾಜ್ಯದ 72 ಲಕ್ಷ ಬಡ ಕುಟುಂಬಗಳಿಗೆ ತಿಂಗಳಿಗೆ 5000 ರೂಪಾಯಿಯಂತೆ (ಮೇ ಮತ್ತು ಜೂನ್‌) 2 ತಿಂಗಳಿಗೆ 10,000 ರೂಪಾಯಿ ಪರಿಹಾರವನ್ನು ನೀಡಬೇಕು.
  4. ಕೊರೋನಾ ಸೋಂಕಿನಿಂದ ತಂದೆ ತಾಯಿ, ಪೋಷಕರನ್ನು ಕಳೆದುಕೊಂಡು ಅನಾಥವಾದ ಮಕ್ಕಳಿಗೆ 5 ಲಕ್ಷ ರೂಪಾಯಿ ಪರಿಹಾರವನ್ನು ನೀಡಬೇಕು.
  5. ಮುಂಗಾರು ಆರಂಭವಾಗಿದೆ, ರೈತರಿಗೆ ಸಾಲ, ಸಬ್ಸಿಡಿ ದರದಲ್ಲಿ ಬೀಜ ಮತ್ತು ಗೊಬ್ಬರವನ್ನು ಸರ್ಕಾರ ನೀಡಲು ಮುಂದಾಗಬೇಕು.

ಸಾಮಾಜಿಕ ಹೋರಾಟಗಾರ ಮತ್ತು ಮಾಜಿ ಐಎಎಸ್‌ ಅಧಿಕಾರಿ ಶಶಿಕಾಂತ್‌ ಸೇಂಥಿಲ್‌ ಮಾತನಾಡಿ “ಈಗ ದೇಶದ ಜನರ ಬಳಿ ಹಣ ಇಲ್ಲ. ಜನರಲ್ಲಿ ಬೇಡಿಕೆ ಇಳಿದಾಗ ದೇಶದ ಆರ್ಥಿಕತೆಯೂ ಕುಸಿಯುತ್ತದೆ. ನಿರುದ್ಯೋಗ ಹೆಚ್ಚಾಗುತ್ತದೆ. ಜನರಿಗೆ  ನೀಡುವ ಪರಿಹಾರದ ಪ್ಯಾಕೇಜ್‌ ಕೇವಲ ಬಡವರಿಗೆ ಸಹಾಯ ಮಾಡಲಿಕ್ಕಾಗಿ ಕೊಡುವುದಲ್ಲ. ದೇಶದ ಆರ್ಥಿಕತೆ ಜೀವಂತವಾಗಿರಬೇಕಾದರೆ ಕರ್ನಾಟಕ ರಾಜ್ಯ ಸರ್ಕಾರ ಈಗ ಘೋಷಿಸಿರುವ ಕಣ್ಣೊರೆಸುವ 1250 ಕೋಟಿ ಮೊತ್ತದ ಚಿಕ್ಕ ಪ್ಯಾಕೇಜ್‌ ಬಿಟ್ಟು ಎಲ್ಲರಿಗೂ ನೆರವಾಗುವಂತಹ ದೊಡ್ಡ ಪ್ಯಾಕೇಜ್ ಘೋಷಿಸಬೇಕು. ರೈತರ ಜೊತೆ ನಿಂತು ಪರಿಹಾರ ಮತ್ತು ಆರ್ಥಿಕ ಸಹಾಯವನ್ನು ಮಾಡಬೇಕು. ಇಲ್ಲವಾದಲ್ಲಿ ಈ ವರ್ಷ ಕರ್ನಾಟಕದಲ್ಲಿ ಅನ್ನಕ್ಕೂ ಕೊರತೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ, ದಲಿತ ಸಂಘರ್ಷ ಸಮಿತಿ, ಕರ್ನಾಟಕ ಜನಶಕ್ತಿ, ಸ್ವರಾಜ್‌ ಇಂಡಿಯಾ, ಎಸ್‌ಡಿಪಿಐ ಸೇರಿದಂತೆ ವಿವಿಧ ಸಂಘಟನೆಗಳ ಮುಖ್ಯಸ್ಥರು ಮತ್ತು ಜನಪರ ಹೋರಾಟಗಾರರು ಭಾಗವಹಿಸಿದ್ದರು. ಸಾಮಾಜಿಕ ಹೋರಾಟಗಾರರಾದ ಮಾಜಿ ಐಎಎಸ್‌ ಅಧಿಕಾರಿ ಸಸಿಕಾಂತ್‌ ಸೆಂಥಿಲ್‌, ಕೆ.ಎಲ್‌. ಅಶೋಕ್‌, ಉಮರ್‌ ಯು.ಹೆಚ್.‌ಮಹಮದ್ದ ಯೂಸುಫ್‌ ಕನ್ನಿ ಮುಂತಾದವರು ಪತ್ರಿಕಾಗೋಷ್ಠೀಯಲ್ಲಿ ಹಾಜರಿದ್ದರು.

ಸ್ವರಾಜ್‌ ಇಂಡಿಯಾದ ಚಾಮರಸ ಮಾಲಿ ಪಾಟೀಲ್‌, ಕರ್ನಾಟಕ ಜನಶಕ್ತಿ ಸಂಘಟನೆಯ ಅಧ್ಯಕ್ಷ ನೂರ್‌ ಶ್ರೀಧರ್‌, ರಾಜ್ಯ ದಲಿತ ಸಂಘರ್ಷ ಸಮಿತಿಯ ಮುಖಂಡ ಮಾವಳ್ಳಿ ಶ್ರೀಧರ್,  ರಾಜ್ಯ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್‌ ವಾದ) ಕಾರ್ಯದರ್ಶಿ ಇಂಧುದರ ಹೊನ್ನಾಪುರ, ಎಸ್‌ಡಿಪಿಐ ಸಂಘಟನೆಯ ರಾಜ್ಯ ಕಾರ್ಯದರ್ಶಿ ಅಫ್ಸರ್‌ ಕೊಡ್ಲಿಪೇಟೆ ಮುಂತಾದವರು ಪತ್ರಿಕಾಘೋಷ್ಠಿಯನ್ನು ಉದ್ಧೇಶಿಸಿ ಮಾತನಾಡಿದರು.


ಇದನ್ನೂ ಓದಿ: ಹೊಟ್ಟೆಗೆ ಅನ್ನ, ಬದುಕಿಗೆ ಭರವಸೆ ನೀಡುವ ಸಮಗ್ರ ಪ್ಯಾಕೇಜ್ ನೀಡಿ: ಜನಾಗ್ರಹ ಆಂದೋಲನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...