Homeಕರೋನಾ ತಲ್ಲಣಸಮಗ್ರ ಪ್ಯಾಕೇಜ್ ನೀಡದಿದ್ದರೆ ಸಿಎಂ ನಿವಾಸದ ಮುಂದೆ ಖಾಲಿ ಚೀಲ ಹಿಡಿದು ಪ್ರತಿಭಟನೆ: ಜನಾಗ್ರಹ ಆಂದೋಲನ...

ಸಮಗ್ರ ಪ್ಯಾಕೇಜ್ ನೀಡದಿದ್ದರೆ ಸಿಎಂ ನಿವಾಸದ ಮುಂದೆ ಖಾಲಿ ಚೀಲ ಹಿಡಿದು ಪ್ರತಿಭಟನೆ: ಜನಾಗ್ರಹ ಆಂದೋಲನ ಎಚ್ಚರಿಕೆ

- Advertisement -
- Advertisement -

ರಾಜ್ಯ ಸರ್ಕಾರ ಬಡವರಿಗೆ ಮತ್ತು ಕಾರ್ಮಿಕರಿಗೆ ನೀಡಿರುವ ಎರಡು ಆರ್ಥಿಕ ಪರಿಹಾರ ಪ್ಯಾಕೇಜ್‌ಗಳು ಬಡವರನ್ನು ಅಣಕ ಮಾಡುವಂತಿವೆ. ಈ ಕೂಡಲೇ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸರ್ಕಾರ ಎಚ್ಚೆತ್ತುಕೊಂಡು ಸಮಗ್ರ ಪರಿಹಾರದ ಪ್ಯಾಕೇಜ್‌ ಒಂದನ್ನು ಘೋಷಿಸಬೇಕು. ಇಲ್ಲವಾದಲ್ಲಿ ಜೂನ್‌ 15 ರಂದು ರಾಜ್ಯಾದ್ಯಂತ ಶಾಸಕರು, ಜಿಲ್ಲಾ ಉಸ್ತುವಾರಿ ಮಂತ್ರಿಗಳು, ಮುಖ್ಯಮಂತ್ರಿಗಳ ನಿವಾಸದ ಮುಂದೆ ಖಾಲಿ ಚೀಲ ಹಿಡಿದು ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಜನಾಗ್ರಹ ಆಂದೋಲನ ಸಮಿತಿ ಸರ್ಕಾರಕ್ಕೆ ಕಠಿಣ ಎಚ್ಚರಿಕೆಯನ್ನು ನೀಡಿದೆ.

ಇಂದು ಮಧ್ಯಾಹ್ನ ಆನ್‌ಲೈನ್‌ ಮೂಲಕ ಪತ್ರಿಕಾಗೋಷ್ಠಿಯನ್ನು ನಡೆಸಿ ಸರ್ಕಾರದ ಮುಂದೆ 5 ಅಂಶಗಳ ಆಗ್ರಹ ಪತ್ರವನ್ನು ಮಂಡಿಸಿರುವ ಸಮಿತಿಯು ಮುಖ್ಯಮಂತ್ರಿ ಯಡಿಯೂರಪ್ಪವನವರಿಗೆ ಸಲ್ಲಿಸಲು ಮುಂದಾಗಿದೆ.

ಪತ್ರಿಕಾಗೋಷ್ಠಿಯನ್ನುದ್ಧೇಶಿಸಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷರಾದ ಹೆಚ್‌.ಆರ್ ಬಸವರಾಜಪ್ಪ, “ಕರ್ನಾಟಕ ಸರ್ಕಾರ ಕೊರೋನ ವಿರುದ್ಧ ಹೋರಾಡಲು ಕೈಗೊಂಡಿರುವ ಕ್ರಮ ಯಾವುದಕ್ಕೂ ಸಾಲದು. ಜನರ ಕಣ್ಣೊರೆಸುವ ಈ ಪರಿಹಾರ ಪ್ಯಾಕೇಜ್‌ ನಿಂದ ಯಾರಿಗೂ ಅನುಕೂಲವಿಲ್ಲ. ರಾಜ್ಯ ಸರ್ಕಾರ ಸುಮಾರು 20 ಸಾವಿರ ಕೋಟಿ ಮೊತ್ತದ ಸಮಗ್ರ ಪ್ಯಾಕೇಜ್‌ ಘೋಷಿಸುವ ಮೂಲಕ ಕಷ್ಟದಲ್ಲಿರುವ ಜನರ ಜೊತೆ ನಿಲ್ಲಬೇಕು. ರಾಜ್ಯಕ್ಕೆ ಮುಂಗಾರು ಪ್ರವೇಶಿಸಿ ಎಲ್ಲೆಡೆ ಮಳೆಯಾಗುತ್ತಿದೆ. ಬೀಜ ಗೊಬ್ಬರ ಖರೀದಿಸಲು ರೈತರ ಬಳಿ ಈಗ ಹಣ ಇಲ್ಲ. ಪ್ರತಿ ರೈತರಿಗೆ (50 ಲಕ್ಷ ಕುಟುಂಬಗಳಿಗೆ)  10,000 ಆರ್ಥಿಕ ನೆರವು ಮತ್ತು ಬೀಜ ಗೊಬ್ಬರವನ್ನು ಉಚಿತವಾಗಿ ಅಥವಾ ಸಬ್ಸಿಡಿ ದರದಲ್ಲಿ ನೀಡಬೇಕು” ಎಂದು ಒತ್ತಾಯಿಸಿದರು.

ಸರ್ಕಾರ ಈಗ ಘೋಷಿಸಿರುವ ಪ್ಯಾಕೇಜ್‌ ಎಲ್ಲಾ ಬಡವರನ್ನು ತಲುಪಿಲ್ಲ. ಹಾಗಾಗಿ ಹೊಸ ಪ್ಯಾಕೇಜ್‌ ಘೋಷಿಸಬೇಕು.  ರಾಜ್ಯ ಸರ್ಕಾರದ ಬಳಿ ಹಣ ಇಲ್ಲವಾದರೆ ಕೇಂದ್ರದಿಂದ ಬರಬೇಕಾದ ಜಿಎಸ್‌ಟಿ ಬಾಕಿ 30 ಸಾವಿರ ಕೋಟಿ ಹಣ, ಬೆಂಗಳೂರು ಅಭಿವೃದ್ಧಿಗೆ ಮೀಸಲಿಟ್ಟಿರುವ 26 ಸಾವಿರ ಕೋಟಿ ಹಣ ಇದೆ. ಅದೇ ರೀತಿ ದೊಡ್ಡ ದೊಡ್ಡ ಉದ್ಯಮಿಗಳು ಮತ್ತು ಐಷಾರಾಮಿ ಸೇವೆಗಳ ಮೇಲೆ 2% ಕೊರೋನಾ ತೆರಿಗೆಯನ್ನು ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಜನಾಗ್ರಹ ಆಂದೋಲನ ಸಮಿತಿಯ ಆಗ್ರಹ ಪತ್ರದಲ್ಲಿ ಹೇಳಲಾದ 5 ಅಂಶಗಳು..

  1. ಸರ್ಕಾರ ವೈದ್ಯಕೀಯ ಸೌಲಭ್ಯವನ್ನು ಬಲಪಡಿಸಬೇಕು. ಗ್ರಾಮೀಣ ಭಾಗದಲ್ಲಿ ಕೊರೋನಾ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಬೇಕು.
  2. ಸರ್ಕಾರ ರಾಜ್ಯದ ಪ್ರತಿಯೊಬ್ಬ ನಾಗರಿಕನಿಗೂ ಉಚಿತ ವ್ಯಾಕ್ಸೀನ್‌ ನೀಡಬೇಕು.
  3. ಸಮಗ್ರ ಪಡಿತರ, ಎಲ್ಲಾ ಬಡ ಕುಟುಂಬಗಳಿಗೆ (72 ಲಕ್ಷ ಕುಟುಂಬಗಳಿಗೆ) ಅಕ್ಕಿ, ಬೇಳೆ, ಗೋದಿ ಒಳಗೊಂಡ ಸಮಗ್ರ ರೇಷನ್‌ ಕಿಟ್‌ ನೀಡಬೇಕು. ರಾಜ್ಯದ 72 ಲಕ್ಷ ಬಡ ಕುಟುಂಬಗಳಿಗೆ ತಿಂಗಳಿಗೆ 5000 ರೂಪಾಯಿಯಂತೆ (ಮೇ ಮತ್ತು ಜೂನ್‌) 2 ತಿಂಗಳಿಗೆ 10,000 ರೂಪಾಯಿ ಪರಿಹಾರವನ್ನು ನೀಡಬೇಕು.
  4. ಕೊರೋನಾ ಸೋಂಕಿನಿಂದ ತಂದೆ ತಾಯಿ, ಪೋಷಕರನ್ನು ಕಳೆದುಕೊಂಡು ಅನಾಥವಾದ ಮಕ್ಕಳಿಗೆ 5 ಲಕ್ಷ ರೂಪಾಯಿ ಪರಿಹಾರವನ್ನು ನೀಡಬೇಕು.
  5. ಮುಂಗಾರು ಆರಂಭವಾಗಿದೆ, ರೈತರಿಗೆ ಸಾಲ, ಸಬ್ಸಿಡಿ ದರದಲ್ಲಿ ಬೀಜ ಮತ್ತು ಗೊಬ್ಬರವನ್ನು ಸರ್ಕಾರ ನೀಡಲು ಮುಂದಾಗಬೇಕು.

ಸಾಮಾಜಿಕ ಹೋರಾಟಗಾರ ಮತ್ತು ಮಾಜಿ ಐಎಎಸ್‌ ಅಧಿಕಾರಿ ಶಶಿಕಾಂತ್‌ ಸೇಂಥಿಲ್‌ ಮಾತನಾಡಿ “ಈಗ ದೇಶದ ಜನರ ಬಳಿ ಹಣ ಇಲ್ಲ. ಜನರಲ್ಲಿ ಬೇಡಿಕೆ ಇಳಿದಾಗ ದೇಶದ ಆರ್ಥಿಕತೆಯೂ ಕುಸಿಯುತ್ತದೆ. ನಿರುದ್ಯೋಗ ಹೆಚ್ಚಾಗುತ್ತದೆ. ಜನರಿಗೆ  ನೀಡುವ ಪರಿಹಾರದ ಪ್ಯಾಕೇಜ್‌ ಕೇವಲ ಬಡವರಿಗೆ ಸಹಾಯ ಮಾಡಲಿಕ್ಕಾಗಿ ಕೊಡುವುದಲ್ಲ. ದೇಶದ ಆರ್ಥಿಕತೆ ಜೀವಂತವಾಗಿರಬೇಕಾದರೆ ಕರ್ನಾಟಕ ರಾಜ್ಯ ಸರ್ಕಾರ ಈಗ ಘೋಷಿಸಿರುವ ಕಣ್ಣೊರೆಸುವ 1250 ಕೋಟಿ ಮೊತ್ತದ ಚಿಕ್ಕ ಪ್ಯಾಕೇಜ್‌ ಬಿಟ್ಟು ಎಲ್ಲರಿಗೂ ನೆರವಾಗುವಂತಹ ದೊಡ್ಡ ಪ್ಯಾಕೇಜ್ ಘೋಷಿಸಬೇಕು. ರೈತರ ಜೊತೆ ನಿಂತು ಪರಿಹಾರ ಮತ್ತು ಆರ್ಥಿಕ ಸಹಾಯವನ್ನು ಮಾಡಬೇಕು. ಇಲ್ಲವಾದಲ್ಲಿ ಈ ವರ್ಷ ಕರ್ನಾಟಕದಲ್ಲಿ ಅನ್ನಕ್ಕೂ ಕೊರತೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ, ದಲಿತ ಸಂಘರ್ಷ ಸಮಿತಿ, ಕರ್ನಾಟಕ ಜನಶಕ್ತಿ, ಸ್ವರಾಜ್‌ ಇಂಡಿಯಾ, ಎಸ್‌ಡಿಪಿಐ ಸೇರಿದಂತೆ ವಿವಿಧ ಸಂಘಟನೆಗಳ ಮುಖ್ಯಸ್ಥರು ಮತ್ತು ಜನಪರ ಹೋರಾಟಗಾರರು ಭಾಗವಹಿಸಿದ್ದರು. ಸಾಮಾಜಿಕ ಹೋರಾಟಗಾರರಾದ ಮಾಜಿ ಐಎಎಸ್‌ ಅಧಿಕಾರಿ ಸಸಿಕಾಂತ್‌ ಸೆಂಥಿಲ್‌, ಕೆ.ಎಲ್‌. ಅಶೋಕ್‌, ಉಮರ್‌ ಯು.ಹೆಚ್.‌ಮಹಮದ್ದ ಯೂಸುಫ್‌ ಕನ್ನಿ ಮುಂತಾದವರು ಪತ್ರಿಕಾಗೋಷ್ಠೀಯಲ್ಲಿ ಹಾಜರಿದ್ದರು.

ಸ್ವರಾಜ್‌ ಇಂಡಿಯಾದ ಚಾಮರಸ ಮಾಲಿ ಪಾಟೀಲ್‌, ಕರ್ನಾಟಕ ಜನಶಕ್ತಿ ಸಂಘಟನೆಯ ಅಧ್ಯಕ್ಷ ನೂರ್‌ ಶ್ರೀಧರ್‌, ರಾಜ್ಯ ದಲಿತ ಸಂಘರ್ಷ ಸಮಿತಿಯ ಮುಖಂಡ ಮಾವಳ್ಳಿ ಶ್ರೀಧರ್,  ರಾಜ್ಯ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್‌ ವಾದ) ಕಾರ್ಯದರ್ಶಿ ಇಂಧುದರ ಹೊನ್ನಾಪುರ, ಎಸ್‌ಡಿಪಿಐ ಸಂಘಟನೆಯ ರಾಜ್ಯ ಕಾರ್ಯದರ್ಶಿ ಅಫ್ಸರ್‌ ಕೊಡ್ಲಿಪೇಟೆ ಮುಂತಾದವರು ಪತ್ರಿಕಾಘೋಷ್ಠಿಯನ್ನು ಉದ್ಧೇಶಿಸಿ ಮಾತನಾಡಿದರು.


ಇದನ್ನೂ ಓದಿ: ಹೊಟ್ಟೆಗೆ ಅನ್ನ, ಬದುಕಿಗೆ ಭರವಸೆ ನೀಡುವ ಸಮಗ್ರ ಪ್ಯಾಕೇಜ್ ನೀಡಿ: ಜನಾಗ್ರಹ ಆಂದೋಲನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....