Homeಕರೋನಾ ತಲ್ಲಣಸಮಗ್ರ ಪ್ಯಾಕೇಜ್ ನೀಡದಿದ್ದರೆ ಸಿಎಂ ನಿವಾಸದ ಮುಂದೆ ಖಾಲಿ ಚೀಲ ಹಿಡಿದು ಪ್ರತಿಭಟನೆ: ಜನಾಗ್ರಹ ಆಂದೋಲನ...

ಸಮಗ್ರ ಪ್ಯಾಕೇಜ್ ನೀಡದಿದ್ದರೆ ಸಿಎಂ ನಿವಾಸದ ಮುಂದೆ ಖಾಲಿ ಚೀಲ ಹಿಡಿದು ಪ್ರತಿಭಟನೆ: ಜನಾಗ್ರಹ ಆಂದೋಲನ ಎಚ್ಚರಿಕೆ

- Advertisement -
- Advertisement -

ರಾಜ್ಯ ಸರ್ಕಾರ ಬಡವರಿಗೆ ಮತ್ತು ಕಾರ್ಮಿಕರಿಗೆ ನೀಡಿರುವ ಎರಡು ಆರ್ಥಿಕ ಪರಿಹಾರ ಪ್ಯಾಕೇಜ್‌ಗಳು ಬಡವರನ್ನು ಅಣಕ ಮಾಡುವಂತಿವೆ. ಈ ಕೂಡಲೇ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸರ್ಕಾರ ಎಚ್ಚೆತ್ತುಕೊಂಡು ಸಮಗ್ರ ಪರಿಹಾರದ ಪ್ಯಾಕೇಜ್‌ ಒಂದನ್ನು ಘೋಷಿಸಬೇಕು. ಇಲ್ಲವಾದಲ್ಲಿ ಜೂನ್‌ 15 ರಂದು ರಾಜ್ಯಾದ್ಯಂತ ಶಾಸಕರು, ಜಿಲ್ಲಾ ಉಸ್ತುವಾರಿ ಮಂತ್ರಿಗಳು, ಮುಖ್ಯಮಂತ್ರಿಗಳ ನಿವಾಸದ ಮುಂದೆ ಖಾಲಿ ಚೀಲ ಹಿಡಿದು ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಜನಾಗ್ರಹ ಆಂದೋಲನ ಸಮಿತಿ ಸರ್ಕಾರಕ್ಕೆ ಕಠಿಣ ಎಚ್ಚರಿಕೆಯನ್ನು ನೀಡಿದೆ.

ಇಂದು ಮಧ್ಯಾಹ್ನ ಆನ್‌ಲೈನ್‌ ಮೂಲಕ ಪತ್ರಿಕಾಗೋಷ್ಠಿಯನ್ನು ನಡೆಸಿ ಸರ್ಕಾರದ ಮುಂದೆ 5 ಅಂಶಗಳ ಆಗ್ರಹ ಪತ್ರವನ್ನು ಮಂಡಿಸಿರುವ ಸಮಿತಿಯು ಮುಖ್ಯಮಂತ್ರಿ ಯಡಿಯೂರಪ್ಪವನವರಿಗೆ ಸಲ್ಲಿಸಲು ಮುಂದಾಗಿದೆ.

ಪತ್ರಿಕಾಗೋಷ್ಠಿಯನ್ನುದ್ಧೇಶಿಸಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷರಾದ ಹೆಚ್‌.ಆರ್ ಬಸವರಾಜಪ್ಪ, “ಕರ್ನಾಟಕ ಸರ್ಕಾರ ಕೊರೋನ ವಿರುದ್ಧ ಹೋರಾಡಲು ಕೈಗೊಂಡಿರುವ ಕ್ರಮ ಯಾವುದಕ್ಕೂ ಸಾಲದು. ಜನರ ಕಣ್ಣೊರೆಸುವ ಈ ಪರಿಹಾರ ಪ್ಯಾಕೇಜ್‌ ನಿಂದ ಯಾರಿಗೂ ಅನುಕೂಲವಿಲ್ಲ. ರಾಜ್ಯ ಸರ್ಕಾರ ಸುಮಾರು 20 ಸಾವಿರ ಕೋಟಿ ಮೊತ್ತದ ಸಮಗ್ರ ಪ್ಯಾಕೇಜ್‌ ಘೋಷಿಸುವ ಮೂಲಕ ಕಷ್ಟದಲ್ಲಿರುವ ಜನರ ಜೊತೆ ನಿಲ್ಲಬೇಕು. ರಾಜ್ಯಕ್ಕೆ ಮುಂಗಾರು ಪ್ರವೇಶಿಸಿ ಎಲ್ಲೆಡೆ ಮಳೆಯಾಗುತ್ತಿದೆ. ಬೀಜ ಗೊಬ್ಬರ ಖರೀದಿಸಲು ರೈತರ ಬಳಿ ಈಗ ಹಣ ಇಲ್ಲ. ಪ್ರತಿ ರೈತರಿಗೆ (50 ಲಕ್ಷ ಕುಟುಂಬಗಳಿಗೆ)  10,000 ಆರ್ಥಿಕ ನೆರವು ಮತ್ತು ಬೀಜ ಗೊಬ್ಬರವನ್ನು ಉಚಿತವಾಗಿ ಅಥವಾ ಸಬ್ಸಿಡಿ ದರದಲ್ಲಿ ನೀಡಬೇಕು” ಎಂದು ಒತ್ತಾಯಿಸಿದರು.

ಸರ್ಕಾರ ಈಗ ಘೋಷಿಸಿರುವ ಪ್ಯಾಕೇಜ್‌ ಎಲ್ಲಾ ಬಡವರನ್ನು ತಲುಪಿಲ್ಲ. ಹಾಗಾಗಿ ಹೊಸ ಪ್ಯಾಕೇಜ್‌ ಘೋಷಿಸಬೇಕು.  ರಾಜ್ಯ ಸರ್ಕಾರದ ಬಳಿ ಹಣ ಇಲ್ಲವಾದರೆ ಕೇಂದ್ರದಿಂದ ಬರಬೇಕಾದ ಜಿಎಸ್‌ಟಿ ಬಾಕಿ 30 ಸಾವಿರ ಕೋಟಿ ಹಣ, ಬೆಂಗಳೂರು ಅಭಿವೃದ್ಧಿಗೆ ಮೀಸಲಿಟ್ಟಿರುವ 26 ಸಾವಿರ ಕೋಟಿ ಹಣ ಇದೆ. ಅದೇ ರೀತಿ ದೊಡ್ಡ ದೊಡ್ಡ ಉದ್ಯಮಿಗಳು ಮತ್ತು ಐಷಾರಾಮಿ ಸೇವೆಗಳ ಮೇಲೆ 2% ಕೊರೋನಾ ತೆರಿಗೆಯನ್ನು ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಜನಾಗ್ರಹ ಆಂದೋಲನ ಸಮಿತಿಯ ಆಗ್ರಹ ಪತ್ರದಲ್ಲಿ ಹೇಳಲಾದ 5 ಅಂಶಗಳು..

  1. ಸರ್ಕಾರ ವೈದ್ಯಕೀಯ ಸೌಲಭ್ಯವನ್ನು ಬಲಪಡಿಸಬೇಕು. ಗ್ರಾಮೀಣ ಭಾಗದಲ್ಲಿ ಕೊರೋನಾ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಬೇಕು.
  2. ಸರ್ಕಾರ ರಾಜ್ಯದ ಪ್ರತಿಯೊಬ್ಬ ನಾಗರಿಕನಿಗೂ ಉಚಿತ ವ್ಯಾಕ್ಸೀನ್‌ ನೀಡಬೇಕು.
  3. ಸಮಗ್ರ ಪಡಿತರ, ಎಲ್ಲಾ ಬಡ ಕುಟುಂಬಗಳಿಗೆ (72 ಲಕ್ಷ ಕುಟುಂಬಗಳಿಗೆ) ಅಕ್ಕಿ, ಬೇಳೆ, ಗೋದಿ ಒಳಗೊಂಡ ಸಮಗ್ರ ರೇಷನ್‌ ಕಿಟ್‌ ನೀಡಬೇಕು. ರಾಜ್ಯದ 72 ಲಕ್ಷ ಬಡ ಕುಟುಂಬಗಳಿಗೆ ತಿಂಗಳಿಗೆ 5000 ರೂಪಾಯಿಯಂತೆ (ಮೇ ಮತ್ತು ಜೂನ್‌) 2 ತಿಂಗಳಿಗೆ 10,000 ರೂಪಾಯಿ ಪರಿಹಾರವನ್ನು ನೀಡಬೇಕು.
  4. ಕೊರೋನಾ ಸೋಂಕಿನಿಂದ ತಂದೆ ತಾಯಿ, ಪೋಷಕರನ್ನು ಕಳೆದುಕೊಂಡು ಅನಾಥವಾದ ಮಕ್ಕಳಿಗೆ 5 ಲಕ್ಷ ರೂಪಾಯಿ ಪರಿಹಾರವನ್ನು ನೀಡಬೇಕು.
  5. ಮುಂಗಾರು ಆರಂಭವಾಗಿದೆ, ರೈತರಿಗೆ ಸಾಲ, ಸಬ್ಸಿಡಿ ದರದಲ್ಲಿ ಬೀಜ ಮತ್ತು ಗೊಬ್ಬರವನ್ನು ಸರ್ಕಾರ ನೀಡಲು ಮುಂದಾಗಬೇಕು.

ಸಾಮಾಜಿಕ ಹೋರಾಟಗಾರ ಮತ್ತು ಮಾಜಿ ಐಎಎಸ್‌ ಅಧಿಕಾರಿ ಶಶಿಕಾಂತ್‌ ಸೇಂಥಿಲ್‌ ಮಾತನಾಡಿ “ಈಗ ದೇಶದ ಜನರ ಬಳಿ ಹಣ ಇಲ್ಲ. ಜನರಲ್ಲಿ ಬೇಡಿಕೆ ಇಳಿದಾಗ ದೇಶದ ಆರ್ಥಿಕತೆಯೂ ಕುಸಿಯುತ್ತದೆ. ನಿರುದ್ಯೋಗ ಹೆಚ್ಚಾಗುತ್ತದೆ. ಜನರಿಗೆ  ನೀಡುವ ಪರಿಹಾರದ ಪ್ಯಾಕೇಜ್‌ ಕೇವಲ ಬಡವರಿಗೆ ಸಹಾಯ ಮಾಡಲಿಕ್ಕಾಗಿ ಕೊಡುವುದಲ್ಲ. ದೇಶದ ಆರ್ಥಿಕತೆ ಜೀವಂತವಾಗಿರಬೇಕಾದರೆ ಕರ್ನಾಟಕ ರಾಜ್ಯ ಸರ್ಕಾರ ಈಗ ಘೋಷಿಸಿರುವ ಕಣ್ಣೊರೆಸುವ 1250 ಕೋಟಿ ಮೊತ್ತದ ಚಿಕ್ಕ ಪ್ಯಾಕೇಜ್‌ ಬಿಟ್ಟು ಎಲ್ಲರಿಗೂ ನೆರವಾಗುವಂತಹ ದೊಡ್ಡ ಪ್ಯಾಕೇಜ್ ಘೋಷಿಸಬೇಕು. ರೈತರ ಜೊತೆ ನಿಂತು ಪರಿಹಾರ ಮತ್ತು ಆರ್ಥಿಕ ಸಹಾಯವನ್ನು ಮಾಡಬೇಕು. ಇಲ್ಲವಾದಲ್ಲಿ ಈ ವರ್ಷ ಕರ್ನಾಟಕದಲ್ಲಿ ಅನ್ನಕ್ಕೂ ಕೊರತೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ, ದಲಿತ ಸಂಘರ್ಷ ಸಮಿತಿ, ಕರ್ನಾಟಕ ಜನಶಕ್ತಿ, ಸ್ವರಾಜ್‌ ಇಂಡಿಯಾ, ಎಸ್‌ಡಿಪಿಐ ಸೇರಿದಂತೆ ವಿವಿಧ ಸಂಘಟನೆಗಳ ಮುಖ್ಯಸ್ಥರು ಮತ್ತು ಜನಪರ ಹೋರಾಟಗಾರರು ಭಾಗವಹಿಸಿದ್ದರು. ಸಾಮಾಜಿಕ ಹೋರಾಟಗಾರರಾದ ಮಾಜಿ ಐಎಎಸ್‌ ಅಧಿಕಾರಿ ಸಸಿಕಾಂತ್‌ ಸೆಂಥಿಲ್‌, ಕೆ.ಎಲ್‌. ಅಶೋಕ್‌, ಉಮರ್‌ ಯು.ಹೆಚ್.‌ಮಹಮದ್ದ ಯೂಸುಫ್‌ ಕನ್ನಿ ಮುಂತಾದವರು ಪತ್ರಿಕಾಗೋಷ್ಠೀಯಲ್ಲಿ ಹಾಜರಿದ್ದರು.

ಸ್ವರಾಜ್‌ ಇಂಡಿಯಾದ ಚಾಮರಸ ಮಾಲಿ ಪಾಟೀಲ್‌, ಕರ್ನಾಟಕ ಜನಶಕ್ತಿ ಸಂಘಟನೆಯ ಅಧ್ಯಕ್ಷ ನೂರ್‌ ಶ್ರೀಧರ್‌, ರಾಜ್ಯ ದಲಿತ ಸಂಘರ್ಷ ಸಮಿತಿಯ ಮುಖಂಡ ಮಾವಳ್ಳಿ ಶ್ರೀಧರ್,  ರಾಜ್ಯ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್‌ ವಾದ) ಕಾರ್ಯದರ್ಶಿ ಇಂಧುದರ ಹೊನ್ನಾಪುರ, ಎಸ್‌ಡಿಪಿಐ ಸಂಘಟನೆಯ ರಾಜ್ಯ ಕಾರ್ಯದರ್ಶಿ ಅಫ್ಸರ್‌ ಕೊಡ್ಲಿಪೇಟೆ ಮುಂತಾದವರು ಪತ್ರಿಕಾಘೋಷ್ಠಿಯನ್ನು ಉದ್ಧೇಶಿಸಿ ಮಾತನಾಡಿದರು.


ಇದನ್ನೂ ಓದಿ: ಹೊಟ್ಟೆಗೆ ಅನ್ನ, ಬದುಕಿಗೆ ಭರವಸೆ ನೀಡುವ ಸಮಗ್ರ ಪ್ಯಾಕೇಜ್ ನೀಡಿ: ಜನಾಗ್ರಹ ಆಂದೋಲನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...