Homeಕರೋನಾ ತಲ್ಲಣಸಮಗ್ರ ಪ್ಯಾಕೇಜ್ ನೀಡದಿದ್ದರೆ ಸಿಎಂ ನಿವಾಸದ ಮುಂದೆ ಖಾಲಿ ಚೀಲ ಹಿಡಿದು ಪ್ರತಿಭಟನೆ: ಜನಾಗ್ರಹ ಆಂದೋಲನ...

ಸಮಗ್ರ ಪ್ಯಾಕೇಜ್ ನೀಡದಿದ್ದರೆ ಸಿಎಂ ನಿವಾಸದ ಮುಂದೆ ಖಾಲಿ ಚೀಲ ಹಿಡಿದು ಪ್ರತಿಭಟನೆ: ಜನಾಗ್ರಹ ಆಂದೋಲನ ಎಚ್ಚರಿಕೆ

- Advertisement -
- Advertisement -

ರಾಜ್ಯ ಸರ್ಕಾರ ಬಡವರಿಗೆ ಮತ್ತು ಕಾರ್ಮಿಕರಿಗೆ ನೀಡಿರುವ ಎರಡು ಆರ್ಥಿಕ ಪರಿಹಾರ ಪ್ಯಾಕೇಜ್‌ಗಳು ಬಡವರನ್ನು ಅಣಕ ಮಾಡುವಂತಿವೆ. ಈ ಕೂಡಲೇ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸರ್ಕಾರ ಎಚ್ಚೆತ್ತುಕೊಂಡು ಸಮಗ್ರ ಪರಿಹಾರದ ಪ್ಯಾಕೇಜ್‌ ಒಂದನ್ನು ಘೋಷಿಸಬೇಕು. ಇಲ್ಲವಾದಲ್ಲಿ ಜೂನ್‌ 15 ರಂದು ರಾಜ್ಯಾದ್ಯಂತ ಶಾಸಕರು, ಜಿಲ್ಲಾ ಉಸ್ತುವಾರಿ ಮಂತ್ರಿಗಳು, ಮುಖ್ಯಮಂತ್ರಿಗಳ ನಿವಾಸದ ಮುಂದೆ ಖಾಲಿ ಚೀಲ ಹಿಡಿದು ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಜನಾಗ್ರಹ ಆಂದೋಲನ ಸಮಿತಿ ಸರ್ಕಾರಕ್ಕೆ ಕಠಿಣ ಎಚ್ಚರಿಕೆಯನ್ನು ನೀಡಿದೆ.

ಇಂದು ಮಧ್ಯಾಹ್ನ ಆನ್‌ಲೈನ್‌ ಮೂಲಕ ಪತ್ರಿಕಾಗೋಷ್ಠಿಯನ್ನು ನಡೆಸಿ ಸರ್ಕಾರದ ಮುಂದೆ 5 ಅಂಶಗಳ ಆಗ್ರಹ ಪತ್ರವನ್ನು ಮಂಡಿಸಿರುವ ಸಮಿತಿಯು ಮುಖ್ಯಮಂತ್ರಿ ಯಡಿಯೂರಪ್ಪವನವರಿಗೆ ಸಲ್ಲಿಸಲು ಮುಂದಾಗಿದೆ.

ಪತ್ರಿಕಾಗೋಷ್ಠಿಯನ್ನುದ್ಧೇಶಿಸಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷರಾದ ಹೆಚ್‌.ಆರ್ ಬಸವರಾಜಪ್ಪ, “ಕರ್ನಾಟಕ ಸರ್ಕಾರ ಕೊರೋನ ವಿರುದ್ಧ ಹೋರಾಡಲು ಕೈಗೊಂಡಿರುವ ಕ್ರಮ ಯಾವುದಕ್ಕೂ ಸಾಲದು. ಜನರ ಕಣ್ಣೊರೆಸುವ ಈ ಪರಿಹಾರ ಪ್ಯಾಕೇಜ್‌ ನಿಂದ ಯಾರಿಗೂ ಅನುಕೂಲವಿಲ್ಲ. ರಾಜ್ಯ ಸರ್ಕಾರ ಸುಮಾರು 20 ಸಾವಿರ ಕೋಟಿ ಮೊತ್ತದ ಸಮಗ್ರ ಪ್ಯಾಕೇಜ್‌ ಘೋಷಿಸುವ ಮೂಲಕ ಕಷ್ಟದಲ್ಲಿರುವ ಜನರ ಜೊತೆ ನಿಲ್ಲಬೇಕು. ರಾಜ್ಯಕ್ಕೆ ಮುಂಗಾರು ಪ್ರವೇಶಿಸಿ ಎಲ್ಲೆಡೆ ಮಳೆಯಾಗುತ್ತಿದೆ. ಬೀಜ ಗೊಬ್ಬರ ಖರೀದಿಸಲು ರೈತರ ಬಳಿ ಈಗ ಹಣ ಇಲ್ಲ. ಪ್ರತಿ ರೈತರಿಗೆ (50 ಲಕ್ಷ ಕುಟುಂಬಗಳಿಗೆ)  10,000 ಆರ್ಥಿಕ ನೆರವು ಮತ್ತು ಬೀಜ ಗೊಬ್ಬರವನ್ನು ಉಚಿತವಾಗಿ ಅಥವಾ ಸಬ್ಸಿಡಿ ದರದಲ್ಲಿ ನೀಡಬೇಕು” ಎಂದು ಒತ್ತಾಯಿಸಿದರು.

ಸರ್ಕಾರ ಈಗ ಘೋಷಿಸಿರುವ ಪ್ಯಾಕೇಜ್‌ ಎಲ್ಲಾ ಬಡವರನ್ನು ತಲುಪಿಲ್ಲ. ಹಾಗಾಗಿ ಹೊಸ ಪ್ಯಾಕೇಜ್‌ ಘೋಷಿಸಬೇಕು.  ರಾಜ್ಯ ಸರ್ಕಾರದ ಬಳಿ ಹಣ ಇಲ್ಲವಾದರೆ ಕೇಂದ್ರದಿಂದ ಬರಬೇಕಾದ ಜಿಎಸ್‌ಟಿ ಬಾಕಿ 30 ಸಾವಿರ ಕೋಟಿ ಹಣ, ಬೆಂಗಳೂರು ಅಭಿವೃದ್ಧಿಗೆ ಮೀಸಲಿಟ್ಟಿರುವ 26 ಸಾವಿರ ಕೋಟಿ ಹಣ ಇದೆ. ಅದೇ ರೀತಿ ದೊಡ್ಡ ದೊಡ್ಡ ಉದ್ಯಮಿಗಳು ಮತ್ತು ಐಷಾರಾಮಿ ಸೇವೆಗಳ ಮೇಲೆ 2% ಕೊರೋನಾ ತೆರಿಗೆಯನ್ನು ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಜನಾಗ್ರಹ ಆಂದೋಲನ ಸಮಿತಿಯ ಆಗ್ರಹ ಪತ್ರದಲ್ಲಿ ಹೇಳಲಾದ 5 ಅಂಶಗಳು..

  1. ಸರ್ಕಾರ ವೈದ್ಯಕೀಯ ಸೌಲಭ್ಯವನ್ನು ಬಲಪಡಿಸಬೇಕು. ಗ್ರಾಮೀಣ ಭಾಗದಲ್ಲಿ ಕೊರೋನಾ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಬೇಕು.
  2. ಸರ್ಕಾರ ರಾಜ್ಯದ ಪ್ರತಿಯೊಬ್ಬ ನಾಗರಿಕನಿಗೂ ಉಚಿತ ವ್ಯಾಕ್ಸೀನ್‌ ನೀಡಬೇಕು.
  3. ಸಮಗ್ರ ಪಡಿತರ, ಎಲ್ಲಾ ಬಡ ಕುಟುಂಬಗಳಿಗೆ (72 ಲಕ್ಷ ಕುಟುಂಬಗಳಿಗೆ) ಅಕ್ಕಿ, ಬೇಳೆ, ಗೋದಿ ಒಳಗೊಂಡ ಸಮಗ್ರ ರೇಷನ್‌ ಕಿಟ್‌ ನೀಡಬೇಕು. ರಾಜ್ಯದ 72 ಲಕ್ಷ ಬಡ ಕುಟುಂಬಗಳಿಗೆ ತಿಂಗಳಿಗೆ 5000 ರೂಪಾಯಿಯಂತೆ (ಮೇ ಮತ್ತು ಜೂನ್‌) 2 ತಿಂಗಳಿಗೆ 10,000 ರೂಪಾಯಿ ಪರಿಹಾರವನ್ನು ನೀಡಬೇಕು.
  4. ಕೊರೋನಾ ಸೋಂಕಿನಿಂದ ತಂದೆ ತಾಯಿ, ಪೋಷಕರನ್ನು ಕಳೆದುಕೊಂಡು ಅನಾಥವಾದ ಮಕ್ಕಳಿಗೆ 5 ಲಕ್ಷ ರೂಪಾಯಿ ಪರಿಹಾರವನ್ನು ನೀಡಬೇಕು.
  5. ಮುಂಗಾರು ಆರಂಭವಾಗಿದೆ, ರೈತರಿಗೆ ಸಾಲ, ಸಬ್ಸಿಡಿ ದರದಲ್ಲಿ ಬೀಜ ಮತ್ತು ಗೊಬ್ಬರವನ್ನು ಸರ್ಕಾರ ನೀಡಲು ಮುಂದಾಗಬೇಕು.

ಸಾಮಾಜಿಕ ಹೋರಾಟಗಾರ ಮತ್ತು ಮಾಜಿ ಐಎಎಸ್‌ ಅಧಿಕಾರಿ ಶಶಿಕಾಂತ್‌ ಸೇಂಥಿಲ್‌ ಮಾತನಾಡಿ “ಈಗ ದೇಶದ ಜನರ ಬಳಿ ಹಣ ಇಲ್ಲ. ಜನರಲ್ಲಿ ಬೇಡಿಕೆ ಇಳಿದಾಗ ದೇಶದ ಆರ್ಥಿಕತೆಯೂ ಕುಸಿಯುತ್ತದೆ. ನಿರುದ್ಯೋಗ ಹೆಚ್ಚಾಗುತ್ತದೆ. ಜನರಿಗೆ  ನೀಡುವ ಪರಿಹಾರದ ಪ್ಯಾಕೇಜ್‌ ಕೇವಲ ಬಡವರಿಗೆ ಸಹಾಯ ಮಾಡಲಿಕ್ಕಾಗಿ ಕೊಡುವುದಲ್ಲ. ದೇಶದ ಆರ್ಥಿಕತೆ ಜೀವಂತವಾಗಿರಬೇಕಾದರೆ ಕರ್ನಾಟಕ ರಾಜ್ಯ ಸರ್ಕಾರ ಈಗ ಘೋಷಿಸಿರುವ ಕಣ್ಣೊರೆಸುವ 1250 ಕೋಟಿ ಮೊತ್ತದ ಚಿಕ್ಕ ಪ್ಯಾಕೇಜ್‌ ಬಿಟ್ಟು ಎಲ್ಲರಿಗೂ ನೆರವಾಗುವಂತಹ ದೊಡ್ಡ ಪ್ಯಾಕೇಜ್ ಘೋಷಿಸಬೇಕು. ರೈತರ ಜೊತೆ ನಿಂತು ಪರಿಹಾರ ಮತ್ತು ಆರ್ಥಿಕ ಸಹಾಯವನ್ನು ಮಾಡಬೇಕು. ಇಲ್ಲವಾದಲ್ಲಿ ಈ ವರ್ಷ ಕರ್ನಾಟಕದಲ್ಲಿ ಅನ್ನಕ್ಕೂ ಕೊರತೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ, ದಲಿತ ಸಂಘರ್ಷ ಸಮಿತಿ, ಕರ್ನಾಟಕ ಜನಶಕ್ತಿ, ಸ್ವರಾಜ್‌ ಇಂಡಿಯಾ, ಎಸ್‌ಡಿಪಿಐ ಸೇರಿದಂತೆ ವಿವಿಧ ಸಂಘಟನೆಗಳ ಮುಖ್ಯಸ್ಥರು ಮತ್ತು ಜನಪರ ಹೋರಾಟಗಾರರು ಭಾಗವಹಿಸಿದ್ದರು. ಸಾಮಾಜಿಕ ಹೋರಾಟಗಾರರಾದ ಮಾಜಿ ಐಎಎಸ್‌ ಅಧಿಕಾರಿ ಸಸಿಕಾಂತ್‌ ಸೆಂಥಿಲ್‌, ಕೆ.ಎಲ್‌. ಅಶೋಕ್‌, ಉಮರ್‌ ಯು.ಹೆಚ್.‌ಮಹಮದ್ದ ಯೂಸುಫ್‌ ಕನ್ನಿ ಮುಂತಾದವರು ಪತ್ರಿಕಾಗೋಷ್ಠೀಯಲ್ಲಿ ಹಾಜರಿದ್ದರು.

ಸ್ವರಾಜ್‌ ಇಂಡಿಯಾದ ಚಾಮರಸ ಮಾಲಿ ಪಾಟೀಲ್‌, ಕರ್ನಾಟಕ ಜನಶಕ್ತಿ ಸಂಘಟನೆಯ ಅಧ್ಯಕ್ಷ ನೂರ್‌ ಶ್ರೀಧರ್‌, ರಾಜ್ಯ ದಲಿತ ಸಂಘರ್ಷ ಸಮಿತಿಯ ಮುಖಂಡ ಮಾವಳ್ಳಿ ಶ್ರೀಧರ್,  ರಾಜ್ಯ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್‌ ವಾದ) ಕಾರ್ಯದರ್ಶಿ ಇಂಧುದರ ಹೊನ್ನಾಪುರ, ಎಸ್‌ಡಿಪಿಐ ಸಂಘಟನೆಯ ರಾಜ್ಯ ಕಾರ್ಯದರ್ಶಿ ಅಫ್ಸರ್‌ ಕೊಡ್ಲಿಪೇಟೆ ಮುಂತಾದವರು ಪತ್ರಿಕಾಘೋಷ್ಠಿಯನ್ನು ಉದ್ಧೇಶಿಸಿ ಮಾತನಾಡಿದರು.


ಇದನ್ನೂ ಓದಿ: ಹೊಟ್ಟೆಗೆ ಅನ್ನ, ಬದುಕಿಗೆ ಭರವಸೆ ನೀಡುವ ಸಮಗ್ರ ಪ್ಯಾಕೇಜ್ ನೀಡಿ: ಜನಾಗ್ರಹ ಆಂದೋಲನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....