Homeಕರೋನಾ ತಲ್ಲಣಸಮಗ್ರ ಪ್ಯಾಕೇಜ್ ನೀಡದಿದ್ದರೆ ಸಿಎಂ ನಿವಾಸದ ಮುಂದೆ ಖಾಲಿ ಚೀಲ ಹಿಡಿದು ಪ್ರತಿಭಟನೆ: ಜನಾಗ್ರಹ ಆಂದೋಲನ...

ಸಮಗ್ರ ಪ್ಯಾಕೇಜ್ ನೀಡದಿದ್ದರೆ ಸಿಎಂ ನಿವಾಸದ ಮುಂದೆ ಖಾಲಿ ಚೀಲ ಹಿಡಿದು ಪ್ರತಿಭಟನೆ: ಜನಾಗ್ರಹ ಆಂದೋಲನ ಎಚ್ಚರಿಕೆ

- Advertisement -
- Advertisement -

ರಾಜ್ಯ ಸರ್ಕಾರ ಬಡವರಿಗೆ ಮತ್ತು ಕಾರ್ಮಿಕರಿಗೆ ನೀಡಿರುವ ಎರಡು ಆರ್ಥಿಕ ಪರಿಹಾರ ಪ್ಯಾಕೇಜ್‌ಗಳು ಬಡವರನ್ನು ಅಣಕ ಮಾಡುವಂತಿವೆ. ಈ ಕೂಡಲೇ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸರ್ಕಾರ ಎಚ್ಚೆತ್ತುಕೊಂಡು ಸಮಗ್ರ ಪರಿಹಾರದ ಪ್ಯಾಕೇಜ್‌ ಒಂದನ್ನು ಘೋಷಿಸಬೇಕು. ಇಲ್ಲವಾದಲ್ಲಿ ಜೂನ್‌ 15 ರಂದು ರಾಜ್ಯಾದ್ಯಂತ ಶಾಸಕರು, ಜಿಲ್ಲಾ ಉಸ್ತುವಾರಿ ಮಂತ್ರಿಗಳು, ಮುಖ್ಯಮಂತ್ರಿಗಳ ನಿವಾಸದ ಮುಂದೆ ಖಾಲಿ ಚೀಲ ಹಿಡಿದು ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಜನಾಗ್ರಹ ಆಂದೋಲನ ಸಮಿತಿ ಸರ್ಕಾರಕ್ಕೆ ಕಠಿಣ ಎಚ್ಚರಿಕೆಯನ್ನು ನೀಡಿದೆ.

ಇಂದು ಮಧ್ಯಾಹ್ನ ಆನ್‌ಲೈನ್‌ ಮೂಲಕ ಪತ್ರಿಕಾಗೋಷ್ಠಿಯನ್ನು ನಡೆಸಿ ಸರ್ಕಾರದ ಮುಂದೆ 5 ಅಂಶಗಳ ಆಗ್ರಹ ಪತ್ರವನ್ನು ಮಂಡಿಸಿರುವ ಸಮಿತಿಯು ಮುಖ್ಯಮಂತ್ರಿ ಯಡಿಯೂರಪ್ಪವನವರಿಗೆ ಸಲ್ಲಿಸಲು ಮುಂದಾಗಿದೆ.

ಪತ್ರಿಕಾಗೋಷ್ಠಿಯನ್ನುದ್ಧೇಶಿಸಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷರಾದ ಹೆಚ್‌.ಆರ್ ಬಸವರಾಜಪ್ಪ, “ಕರ್ನಾಟಕ ಸರ್ಕಾರ ಕೊರೋನ ವಿರುದ್ಧ ಹೋರಾಡಲು ಕೈಗೊಂಡಿರುವ ಕ್ರಮ ಯಾವುದಕ್ಕೂ ಸಾಲದು. ಜನರ ಕಣ್ಣೊರೆಸುವ ಈ ಪರಿಹಾರ ಪ್ಯಾಕೇಜ್‌ ನಿಂದ ಯಾರಿಗೂ ಅನುಕೂಲವಿಲ್ಲ. ರಾಜ್ಯ ಸರ್ಕಾರ ಸುಮಾರು 20 ಸಾವಿರ ಕೋಟಿ ಮೊತ್ತದ ಸಮಗ್ರ ಪ್ಯಾಕೇಜ್‌ ಘೋಷಿಸುವ ಮೂಲಕ ಕಷ್ಟದಲ್ಲಿರುವ ಜನರ ಜೊತೆ ನಿಲ್ಲಬೇಕು. ರಾಜ್ಯಕ್ಕೆ ಮುಂಗಾರು ಪ್ರವೇಶಿಸಿ ಎಲ್ಲೆಡೆ ಮಳೆಯಾಗುತ್ತಿದೆ. ಬೀಜ ಗೊಬ್ಬರ ಖರೀದಿಸಲು ರೈತರ ಬಳಿ ಈಗ ಹಣ ಇಲ್ಲ. ಪ್ರತಿ ರೈತರಿಗೆ (50 ಲಕ್ಷ ಕುಟುಂಬಗಳಿಗೆ)  10,000 ಆರ್ಥಿಕ ನೆರವು ಮತ್ತು ಬೀಜ ಗೊಬ್ಬರವನ್ನು ಉಚಿತವಾಗಿ ಅಥವಾ ಸಬ್ಸಿಡಿ ದರದಲ್ಲಿ ನೀಡಬೇಕು” ಎಂದು ಒತ್ತಾಯಿಸಿದರು.

ಸರ್ಕಾರ ಈಗ ಘೋಷಿಸಿರುವ ಪ್ಯಾಕೇಜ್‌ ಎಲ್ಲಾ ಬಡವರನ್ನು ತಲುಪಿಲ್ಲ. ಹಾಗಾಗಿ ಹೊಸ ಪ್ಯಾಕೇಜ್‌ ಘೋಷಿಸಬೇಕು.  ರಾಜ್ಯ ಸರ್ಕಾರದ ಬಳಿ ಹಣ ಇಲ್ಲವಾದರೆ ಕೇಂದ್ರದಿಂದ ಬರಬೇಕಾದ ಜಿಎಸ್‌ಟಿ ಬಾಕಿ 30 ಸಾವಿರ ಕೋಟಿ ಹಣ, ಬೆಂಗಳೂರು ಅಭಿವೃದ್ಧಿಗೆ ಮೀಸಲಿಟ್ಟಿರುವ 26 ಸಾವಿರ ಕೋಟಿ ಹಣ ಇದೆ. ಅದೇ ರೀತಿ ದೊಡ್ಡ ದೊಡ್ಡ ಉದ್ಯಮಿಗಳು ಮತ್ತು ಐಷಾರಾಮಿ ಸೇವೆಗಳ ಮೇಲೆ 2% ಕೊರೋನಾ ತೆರಿಗೆಯನ್ನು ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಜನಾಗ್ರಹ ಆಂದೋಲನ ಸಮಿತಿಯ ಆಗ್ರಹ ಪತ್ರದಲ್ಲಿ ಹೇಳಲಾದ 5 ಅಂಶಗಳು..

  1. ಸರ್ಕಾರ ವೈದ್ಯಕೀಯ ಸೌಲಭ್ಯವನ್ನು ಬಲಪಡಿಸಬೇಕು. ಗ್ರಾಮೀಣ ಭಾಗದಲ್ಲಿ ಕೊರೋನಾ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಬೇಕು.
  2. ಸರ್ಕಾರ ರಾಜ್ಯದ ಪ್ರತಿಯೊಬ್ಬ ನಾಗರಿಕನಿಗೂ ಉಚಿತ ವ್ಯಾಕ್ಸೀನ್‌ ನೀಡಬೇಕು.
  3. ಸಮಗ್ರ ಪಡಿತರ, ಎಲ್ಲಾ ಬಡ ಕುಟುಂಬಗಳಿಗೆ (72 ಲಕ್ಷ ಕುಟುಂಬಗಳಿಗೆ) ಅಕ್ಕಿ, ಬೇಳೆ, ಗೋದಿ ಒಳಗೊಂಡ ಸಮಗ್ರ ರೇಷನ್‌ ಕಿಟ್‌ ನೀಡಬೇಕು. ರಾಜ್ಯದ 72 ಲಕ್ಷ ಬಡ ಕುಟುಂಬಗಳಿಗೆ ತಿಂಗಳಿಗೆ 5000 ರೂಪಾಯಿಯಂತೆ (ಮೇ ಮತ್ತು ಜೂನ್‌) 2 ತಿಂಗಳಿಗೆ 10,000 ರೂಪಾಯಿ ಪರಿಹಾರವನ್ನು ನೀಡಬೇಕು.
  4. ಕೊರೋನಾ ಸೋಂಕಿನಿಂದ ತಂದೆ ತಾಯಿ, ಪೋಷಕರನ್ನು ಕಳೆದುಕೊಂಡು ಅನಾಥವಾದ ಮಕ್ಕಳಿಗೆ 5 ಲಕ್ಷ ರೂಪಾಯಿ ಪರಿಹಾರವನ್ನು ನೀಡಬೇಕು.
  5. ಮುಂಗಾರು ಆರಂಭವಾಗಿದೆ, ರೈತರಿಗೆ ಸಾಲ, ಸಬ್ಸಿಡಿ ದರದಲ್ಲಿ ಬೀಜ ಮತ್ತು ಗೊಬ್ಬರವನ್ನು ಸರ್ಕಾರ ನೀಡಲು ಮುಂದಾಗಬೇಕು.

ಸಾಮಾಜಿಕ ಹೋರಾಟಗಾರ ಮತ್ತು ಮಾಜಿ ಐಎಎಸ್‌ ಅಧಿಕಾರಿ ಶಶಿಕಾಂತ್‌ ಸೇಂಥಿಲ್‌ ಮಾತನಾಡಿ “ಈಗ ದೇಶದ ಜನರ ಬಳಿ ಹಣ ಇಲ್ಲ. ಜನರಲ್ಲಿ ಬೇಡಿಕೆ ಇಳಿದಾಗ ದೇಶದ ಆರ್ಥಿಕತೆಯೂ ಕುಸಿಯುತ್ತದೆ. ನಿರುದ್ಯೋಗ ಹೆಚ್ಚಾಗುತ್ತದೆ. ಜನರಿಗೆ  ನೀಡುವ ಪರಿಹಾರದ ಪ್ಯಾಕೇಜ್‌ ಕೇವಲ ಬಡವರಿಗೆ ಸಹಾಯ ಮಾಡಲಿಕ್ಕಾಗಿ ಕೊಡುವುದಲ್ಲ. ದೇಶದ ಆರ್ಥಿಕತೆ ಜೀವಂತವಾಗಿರಬೇಕಾದರೆ ಕರ್ನಾಟಕ ರಾಜ್ಯ ಸರ್ಕಾರ ಈಗ ಘೋಷಿಸಿರುವ ಕಣ್ಣೊರೆಸುವ 1250 ಕೋಟಿ ಮೊತ್ತದ ಚಿಕ್ಕ ಪ್ಯಾಕೇಜ್‌ ಬಿಟ್ಟು ಎಲ್ಲರಿಗೂ ನೆರವಾಗುವಂತಹ ದೊಡ್ಡ ಪ್ಯಾಕೇಜ್ ಘೋಷಿಸಬೇಕು. ರೈತರ ಜೊತೆ ನಿಂತು ಪರಿಹಾರ ಮತ್ತು ಆರ್ಥಿಕ ಸಹಾಯವನ್ನು ಮಾಡಬೇಕು. ಇಲ್ಲವಾದಲ್ಲಿ ಈ ವರ್ಷ ಕರ್ನಾಟಕದಲ್ಲಿ ಅನ್ನಕ್ಕೂ ಕೊರತೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ, ದಲಿತ ಸಂಘರ್ಷ ಸಮಿತಿ, ಕರ್ನಾಟಕ ಜನಶಕ್ತಿ, ಸ್ವರಾಜ್‌ ಇಂಡಿಯಾ, ಎಸ್‌ಡಿಪಿಐ ಸೇರಿದಂತೆ ವಿವಿಧ ಸಂಘಟನೆಗಳ ಮುಖ್ಯಸ್ಥರು ಮತ್ತು ಜನಪರ ಹೋರಾಟಗಾರರು ಭಾಗವಹಿಸಿದ್ದರು. ಸಾಮಾಜಿಕ ಹೋರಾಟಗಾರರಾದ ಮಾಜಿ ಐಎಎಸ್‌ ಅಧಿಕಾರಿ ಸಸಿಕಾಂತ್‌ ಸೆಂಥಿಲ್‌, ಕೆ.ಎಲ್‌. ಅಶೋಕ್‌, ಉಮರ್‌ ಯು.ಹೆಚ್.‌ಮಹಮದ್ದ ಯೂಸುಫ್‌ ಕನ್ನಿ ಮುಂತಾದವರು ಪತ್ರಿಕಾಗೋಷ್ಠೀಯಲ್ಲಿ ಹಾಜರಿದ್ದರು.

ಸ್ವರಾಜ್‌ ಇಂಡಿಯಾದ ಚಾಮರಸ ಮಾಲಿ ಪಾಟೀಲ್‌, ಕರ್ನಾಟಕ ಜನಶಕ್ತಿ ಸಂಘಟನೆಯ ಅಧ್ಯಕ್ಷ ನೂರ್‌ ಶ್ರೀಧರ್‌, ರಾಜ್ಯ ದಲಿತ ಸಂಘರ್ಷ ಸಮಿತಿಯ ಮುಖಂಡ ಮಾವಳ್ಳಿ ಶ್ರೀಧರ್,  ರಾಜ್ಯ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್‌ ವಾದ) ಕಾರ್ಯದರ್ಶಿ ಇಂಧುದರ ಹೊನ್ನಾಪುರ, ಎಸ್‌ಡಿಪಿಐ ಸಂಘಟನೆಯ ರಾಜ್ಯ ಕಾರ್ಯದರ್ಶಿ ಅಫ್ಸರ್‌ ಕೊಡ್ಲಿಪೇಟೆ ಮುಂತಾದವರು ಪತ್ರಿಕಾಘೋಷ್ಠಿಯನ್ನು ಉದ್ಧೇಶಿಸಿ ಮಾತನಾಡಿದರು.


ಇದನ್ನೂ ಓದಿ: ಹೊಟ್ಟೆಗೆ ಅನ್ನ, ಬದುಕಿಗೆ ಭರವಸೆ ನೀಡುವ ಸಮಗ್ರ ಪ್ಯಾಕೇಜ್ ನೀಡಿ: ಜನಾಗ್ರಹ ಆಂದೋಲನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...