Homeಮುಖಪುಟಜಪಾನ್ ಪರಮಾಣು ಸ್ಥಾವರದ ನೀರು ಸಮುದ್ರಕ್ಕೆ: ಭಾರತದ ಮೇಲೆ ಯಾವ ಪರಿಣಾಮ ಬೀರಲಿದೆ?

ಜಪಾನ್ ಪರಮಾಣು ಸ್ಥಾವರದ ನೀರು ಸಮುದ್ರಕ್ಕೆ: ಭಾರತದ ಮೇಲೆ ಯಾವ ಪರಿಣಾಮ ಬೀರಲಿದೆ?

- Advertisement -
- Advertisement -

ಜಪಾನ್‌ನ ಫುಕುಶಿಮಾ ಪರಮಾಣು ಸ್ಥಾವರದಿಂದ ಒಂದು ದಶಲಕ್ಷ ಟನ್‌ಗಿಂತಲೂ ಹೆಚ್ಚು ಸಂಸ್ಕರಿಸಿದ ನೀರನ್ನು ಸಮುದ್ರಕ್ಕೆ ಬಿಡುಗಡೆ ಮಾಡಲಿದೆ ಎಂದು ಸರ್ಕಾರ ಮಂಗಳವಾರ ತಿಳಿಸಿದೆ. ಇದನ್ನು ಚೀನಾ ಸೇರಿದಂತೆ ಸ್ಥಳೀಯ ಮೀನುಗಾರಿಕಾ ಸಮುದಾಯಗಳು ತೀವ್ರವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಪ್ರಕ್ರಿಯೆಯು ಪ್ರಾರಂಭವಾಗಲು ಇನ್ನೂ ಹಲವಾರು ವರ್ಷಗಳು ಬೇಕಾಗಿದ್ದು, ಪೂರ್ಣಗೊಳ್ಳಲು ದಶಕಗಳೇ ಬೇಕಾಗುತ್ತದೆ ಎನ್ನಲಾಗಿದೆ. ಆದರೆ ಯೋಜನೆಯ ವಿರುದ್ದ ವಿವಾದಗಳು ಮತ್ತು ವಿರೋಧಗಳು ಈಗಾಲೇ ಪ್ರಾರಂಭವಾಗಿದೆ.

ಜಪಾನ್ ಯೋಜನೆಯನ್ನು ಘೋಷಿಸಿದ ಕೆಲವೇ ಗಂಟೆಗಳಲ್ಲಿ, ಚೀನಾ ಈ ನಿರ್ಧಾರವನ್ನು “ಅತ್ಯಂತ ಬೇಜವಾಬ್ದಾರಿಯುತ” ಎಂದು ಕರೆದಿದೆ. ಆದರೆ ಜಪಾನ್ ಸರ್ಕಾರ ತನ್ನ ಯೋಜನೆಯನ್ನು ಸಮರ್ಥಿಸಿಕೊಂಡಿದ್ದು, ನೀರು ಬಿಡುಗಡೆ ಸುರಕ್ಷಿತವಾಗಿರುತ್ತದೆ ಎಂದು ವಾದಿಸಿದೆ. ಯಾಕೆಂದರೆ ನೀರಿನಲ್ಲಿ ಇರುವ ಎಲ್ಲಾ ವಿಕಿರಣದ ಅಂಶಗಳನ್ನು ಸಂಸ್ಕರಿಸಿ, ದುರ್ಬಲಗೊಳಿಸಿ, ತೆಗೆದುಹಾಕಲಾಗುತ್ತದೆ ಎಂದು ಹೇಳಿದೆ.

ಇದನ್ನೂ ಓದಿ: ಗೌರಿ ಕಾರ್ನರ್: ಕೋಮುವಾದಿಗಳ ನಡುವೆ ಇಂಥವರೂ ಉಂಟು; ಧರ್ಮಗಳ ನಡುವಿನ ಬಾಂಧವ್ಯಕ್ಕೆ ಉದಾಹರಣೆಗಳು ಅಸಂಖ್ಯಾತ

ಅಂತರರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆ (ಐಎಇಎ)ಯು ನೀರು ಬಿಡುಗಡೆಯನ್ನು ಅನುಮೋದಿಸಿದೆ, ಇದು ವಿಶ್ವದ ಬೇರೆಡೆ ಪರಮಾಣು ಸ್ಥಾವರಗಳಲ್ಲಿ ತ್ಯಾಜ್ಯ ನೀರನ್ನು ವಿಲೇವಾರಿ ಮಾಡುವಂತೆಯೇ ಇದೆ ಎಂದು ಹೇಳಿದೆ.

2011 ರ ಸುನಾಮಿಯ ನಂತರ ದುರ್ಬಲಗೊಂಡಿರುವ ಪರಮಾಣು ಸ್ಥಾವರವನ್ನು ನಿರ್ಮೂಲನೆ ಮಾಡುವ ದಶಕಗಳ ಪ್ರಕ್ರಿಯೆಯಲ್ಲಿ ನೀರನ್ನು ವಿಲೇವಾರಿ ಮಾಡುವುದು “ಅನಿವಾರ್ಯ ಕಾರ್ಯ” ಎಂದು ಜಪಾನ್ ಪ್ರಧಾನಿ ಯೋಶಿಹಿದೆ ಸುಗಾ ಸಚಿವರ ಸಭೆಯಲ್ಲಿ ಹೇಳಿದ್ದಾರೆ.

ಆ ಪರಮಾಣು ಸ್ಥಾವರದಲ್ಲಿ ಸುಮಾರು 1.25 ದಶಲಕ್ಷ ಟನ್ ನೀರು ಟ್ಯಾಂಕ್‌ಗಳಲ್ಲಿ ಸಂಗ್ರಹವಾಗಿದೆ ಎನ್ನಲಾಗಿದೆ.

ದೇಶದ ಮೀನುಗಾರಿಕಾ ಸಮುದಾಯಗಳು ನೀರನ್ನು ಬಿಡುಗಡೆ ಮಾಡುವುದರಿಂದ ಈ ಪ್ರದೇಶದಿಂದ ಸಮುದ್ರಾಹಾರದ ಮೇಲೆ ಹೊಡೆತ ಬೀಳುತ್ತದೆ ಮತ್ತುಅದನ್ನು ಮರು ಸ್ಥಾಪಿಸಲು ಹಲವು ವರ್ಷಗಳೆ ಹಿಡಿಯುತ್ತದೆ ಎಂದು ವಾದಿಸಿದೆ.

ಇದನ್ನೂ ಓದಿ: ಬಂಗಾಳ ಚುನಾವಣೆ: ಸೀತಾಲ್ಕುಚ್ಚಿ ಶೂಟೌಟ್ ಬಗ್ಗೆ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕರು

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ವಿಜ್ಞಾನಿ, ಲೇಖಕ ನಾಗೇಶ್ ಹೆಗಡೆ, “ಜಪಾನ್ ಫುಕೋಶಿಮಾದ ನೀರನ್ನು ಕಳೆದ ಏಳು ವರ್ಷದಿಂದ ಸಮುದ್ರಕ್ಕೆ ಬಿಡುತ್ತಿದ್ದಾರೆ. ಒಂದು ಕಡೆ ಅಮೆರಿಕಾ ಒತ್ತಡವಿದ್ದರೆ, ಇನ್ನೊಂದು ಕಡೆ ದಿನ ದಿನ ಫುಕೋಷಿಮಾದ ನೀರು ಜಾಸ್ತಿಯಾಗುತ್ತಿರುವುದರಿಂದ ಜಪಾನ್‌ಗೂ ಅದನ್ನು ಹಿಡಿದಿಟ್ಟುಕೊಳ್ಳಲು ಆಗುವುದಿಲ್ಲ. ಇದೀಗ ಅನಿವಾರ್ಯವಾಗಿ ನೀರು ಬಿಡುಗಡೆ ಬಗ್ಗೆ ಹೇಳುತ್ತಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

May be an image of 1 person
ನಾಗೇಶ್ ಹೆಗಡೆ

“ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವ ಈ ನೀರಿನಲ್ಲಿರುವ ವಿಕಿರಣವನ್ನು ಸಂಸ್ಕರಣೆ ಮಾಡಿ ಬಿಡುಗಡೆ ಮಾಡುತ್ತಿದ್ದೇವೆ ಎಂಬುದು ಸುಳ್ಳು, ಅದನ್ನು ಸಂಸ್ಕರಣೆ ಮಾಡುವ ತಂತ್ರಜ್ಞಾನವೇ ಇಲ್ಲ” ಎಂದು ಅವರು ತಿಳಿಸಿದ್ದಾರೆ.

“ಜಪಾನ್ ನಮ್ಮ ದೇಶಕ್ಕಿಂತ ದೂರವಿರುವುರಿಂದ ಈ ನೀರಿನಿಂದ ಭಾರತಕ್ಕೆ ನೇರ ಪರಿಣಾಮ ಬೀರುವುದಿಲ್ಲ. ಅಮೆರಿಕಾ ಮತ್ತು ಜಪಾನ್ ಈ ವಿಚಾರದಲ್ಲಿ ಜಗಳ ಮಾಡಿದರೆ ನಮ್ಮ ಅಣುಸ್ಥಾವರವನ್ನು ಸುರಕ್ಷಿತವಾಗಿ ಇಡಲು ಅನುಕೂಲವಾಗುತ್ತದೆ. ಅಥವಾ ಇನ್ನೊಂದು ರೀತಿಯಲ್ಲಿ ಹೇಳುವುದಾದರೆ, ಜಪಾನ್‌ ದೇಶದವರೇ ಸಮುದ್ರಕ್ಕೆ ನೀರು ಬಿಡುತ್ತಿದ್ದಾರೆ, ನಾವು ಯಾಕೆ ಕೈಗಾ ಅಣುಸ್ಥಾವರದ್ದು, ಕೊಡಂಕುಳಂನ ಅಣುಸ್ಥಾವರದ ನೀರು ಸಮುದ್ರಕ್ಕೆ ಬಿಡಬಾರದು ಎಂದು ಕೇಳುವ ಅನಾನುಕೂಲ ಕೂಡಾ ಆಗುವ ಸಾಧ್ಯತೆಯಿದೆ” ಎಂದು ನಾಗೇಶ್ ಹೆಗಡೆ ಹೇಳಿದ್ದಾರೆ.

ಭಾರತದಲ್ಲೂ ಇಂತಹ ನೀರನ್ನು ಸಮುದ್ರಕ್ಕೆ ಬಿಡುತ್ತಿದ್ದಾರೆ ಆದರೆ ಅದು ಸ್ವಲ್ಪ ಪ್ರಮಾಣದಲ್ಲಿ ಮಾತ್ರ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಾರಿಗೆ ಮುಷ್ಕರ ಮುಂದುವರಿಕೆ – ಯುಗಾದಿಗೆ ನೌಕರರಿಂದ ಭಿಕ್ಷಾಟನೆ ಪ್ರತಿಭಟನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...