Homeಮುಖಪುಟಜಪಾನ್ ಪರಮಾಣು ಸ್ಥಾವರದ ನೀರು ಸಮುದ್ರಕ್ಕೆ: ಭಾರತದ ಮೇಲೆ ಯಾವ ಪರಿಣಾಮ ಬೀರಲಿದೆ?

ಜಪಾನ್ ಪರಮಾಣು ಸ್ಥಾವರದ ನೀರು ಸಮುದ್ರಕ್ಕೆ: ಭಾರತದ ಮೇಲೆ ಯಾವ ಪರಿಣಾಮ ಬೀರಲಿದೆ?

- Advertisement -
- Advertisement -

ಜಪಾನ್‌ನ ಫುಕುಶಿಮಾ ಪರಮಾಣು ಸ್ಥಾವರದಿಂದ ಒಂದು ದಶಲಕ್ಷ ಟನ್‌ಗಿಂತಲೂ ಹೆಚ್ಚು ಸಂಸ್ಕರಿಸಿದ ನೀರನ್ನು ಸಮುದ್ರಕ್ಕೆ ಬಿಡುಗಡೆ ಮಾಡಲಿದೆ ಎಂದು ಸರ್ಕಾರ ಮಂಗಳವಾರ ತಿಳಿಸಿದೆ. ಇದನ್ನು ಚೀನಾ ಸೇರಿದಂತೆ ಸ್ಥಳೀಯ ಮೀನುಗಾರಿಕಾ ಸಮುದಾಯಗಳು ತೀವ್ರವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಪ್ರಕ್ರಿಯೆಯು ಪ್ರಾರಂಭವಾಗಲು ಇನ್ನೂ ಹಲವಾರು ವರ್ಷಗಳು ಬೇಕಾಗಿದ್ದು, ಪೂರ್ಣಗೊಳ್ಳಲು ದಶಕಗಳೇ ಬೇಕಾಗುತ್ತದೆ ಎನ್ನಲಾಗಿದೆ. ಆದರೆ ಯೋಜನೆಯ ವಿರುದ್ದ ವಿವಾದಗಳು ಮತ್ತು ವಿರೋಧಗಳು ಈಗಾಲೇ ಪ್ರಾರಂಭವಾಗಿದೆ.

ಜಪಾನ್ ಯೋಜನೆಯನ್ನು ಘೋಷಿಸಿದ ಕೆಲವೇ ಗಂಟೆಗಳಲ್ಲಿ, ಚೀನಾ ಈ ನಿರ್ಧಾರವನ್ನು “ಅತ್ಯಂತ ಬೇಜವಾಬ್ದಾರಿಯುತ” ಎಂದು ಕರೆದಿದೆ. ಆದರೆ ಜಪಾನ್ ಸರ್ಕಾರ ತನ್ನ ಯೋಜನೆಯನ್ನು ಸಮರ್ಥಿಸಿಕೊಂಡಿದ್ದು, ನೀರು ಬಿಡುಗಡೆ ಸುರಕ್ಷಿತವಾಗಿರುತ್ತದೆ ಎಂದು ವಾದಿಸಿದೆ. ಯಾಕೆಂದರೆ ನೀರಿನಲ್ಲಿ ಇರುವ ಎಲ್ಲಾ ವಿಕಿರಣದ ಅಂಶಗಳನ್ನು ಸಂಸ್ಕರಿಸಿ, ದುರ್ಬಲಗೊಳಿಸಿ, ತೆಗೆದುಹಾಕಲಾಗುತ್ತದೆ ಎಂದು ಹೇಳಿದೆ.

ಇದನ್ನೂ ಓದಿ: ಗೌರಿ ಕಾರ್ನರ್: ಕೋಮುವಾದಿಗಳ ನಡುವೆ ಇಂಥವರೂ ಉಂಟು; ಧರ್ಮಗಳ ನಡುವಿನ ಬಾಂಧವ್ಯಕ್ಕೆ ಉದಾಹರಣೆಗಳು ಅಸಂಖ್ಯಾತ

ಅಂತರರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆ (ಐಎಇಎ)ಯು ನೀರು ಬಿಡುಗಡೆಯನ್ನು ಅನುಮೋದಿಸಿದೆ, ಇದು ವಿಶ್ವದ ಬೇರೆಡೆ ಪರಮಾಣು ಸ್ಥಾವರಗಳಲ್ಲಿ ತ್ಯಾಜ್ಯ ನೀರನ್ನು ವಿಲೇವಾರಿ ಮಾಡುವಂತೆಯೇ ಇದೆ ಎಂದು ಹೇಳಿದೆ.

2011 ರ ಸುನಾಮಿಯ ನಂತರ ದುರ್ಬಲಗೊಂಡಿರುವ ಪರಮಾಣು ಸ್ಥಾವರವನ್ನು ನಿರ್ಮೂಲನೆ ಮಾಡುವ ದಶಕಗಳ ಪ್ರಕ್ರಿಯೆಯಲ್ಲಿ ನೀರನ್ನು ವಿಲೇವಾರಿ ಮಾಡುವುದು “ಅನಿವಾರ್ಯ ಕಾರ್ಯ” ಎಂದು ಜಪಾನ್ ಪ್ರಧಾನಿ ಯೋಶಿಹಿದೆ ಸುಗಾ ಸಚಿವರ ಸಭೆಯಲ್ಲಿ ಹೇಳಿದ್ದಾರೆ.

ಆ ಪರಮಾಣು ಸ್ಥಾವರದಲ್ಲಿ ಸುಮಾರು 1.25 ದಶಲಕ್ಷ ಟನ್ ನೀರು ಟ್ಯಾಂಕ್‌ಗಳಲ್ಲಿ ಸಂಗ್ರಹವಾಗಿದೆ ಎನ್ನಲಾಗಿದೆ.

ದೇಶದ ಮೀನುಗಾರಿಕಾ ಸಮುದಾಯಗಳು ನೀರನ್ನು ಬಿಡುಗಡೆ ಮಾಡುವುದರಿಂದ ಈ ಪ್ರದೇಶದಿಂದ ಸಮುದ್ರಾಹಾರದ ಮೇಲೆ ಹೊಡೆತ ಬೀಳುತ್ತದೆ ಮತ್ತುಅದನ್ನು ಮರು ಸ್ಥಾಪಿಸಲು ಹಲವು ವರ್ಷಗಳೆ ಹಿಡಿಯುತ್ತದೆ ಎಂದು ವಾದಿಸಿದೆ.

ಇದನ್ನೂ ಓದಿ: ಬಂಗಾಳ ಚುನಾವಣೆ: ಸೀತಾಲ್ಕುಚ್ಚಿ ಶೂಟೌಟ್ ಬಗ್ಗೆ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕರು

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ವಿಜ್ಞಾನಿ, ಲೇಖಕ ನಾಗೇಶ್ ಹೆಗಡೆ, “ಜಪಾನ್ ಫುಕೋಶಿಮಾದ ನೀರನ್ನು ಕಳೆದ ಏಳು ವರ್ಷದಿಂದ ಸಮುದ್ರಕ್ಕೆ ಬಿಡುತ್ತಿದ್ದಾರೆ. ಒಂದು ಕಡೆ ಅಮೆರಿಕಾ ಒತ್ತಡವಿದ್ದರೆ, ಇನ್ನೊಂದು ಕಡೆ ದಿನ ದಿನ ಫುಕೋಷಿಮಾದ ನೀರು ಜಾಸ್ತಿಯಾಗುತ್ತಿರುವುದರಿಂದ ಜಪಾನ್‌ಗೂ ಅದನ್ನು ಹಿಡಿದಿಟ್ಟುಕೊಳ್ಳಲು ಆಗುವುದಿಲ್ಲ. ಇದೀಗ ಅನಿವಾರ್ಯವಾಗಿ ನೀರು ಬಿಡುಗಡೆ ಬಗ್ಗೆ ಹೇಳುತ್ತಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

May be an image of 1 person
ನಾಗೇಶ್ ಹೆಗಡೆ

“ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವ ಈ ನೀರಿನಲ್ಲಿರುವ ವಿಕಿರಣವನ್ನು ಸಂಸ್ಕರಣೆ ಮಾಡಿ ಬಿಡುಗಡೆ ಮಾಡುತ್ತಿದ್ದೇವೆ ಎಂಬುದು ಸುಳ್ಳು, ಅದನ್ನು ಸಂಸ್ಕರಣೆ ಮಾಡುವ ತಂತ್ರಜ್ಞಾನವೇ ಇಲ್ಲ” ಎಂದು ಅವರು ತಿಳಿಸಿದ್ದಾರೆ.

“ಜಪಾನ್ ನಮ್ಮ ದೇಶಕ್ಕಿಂತ ದೂರವಿರುವುರಿಂದ ಈ ನೀರಿನಿಂದ ಭಾರತಕ್ಕೆ ನೇರ ಪರಿಣಾಮ ಬೀರುವುದಿಲ್ಲ. ಅಮೆರಿಕಾ ಮತ್ತು ಜಪಾನ್ ಈ ವಿಚಾರದಲ್ಲಿ ಜಗಳ ಮಾಡಿದರೆ ನಮ್ಮ ಅಣುಸ್ಥಾವರವನ್ನು ಸುರಕ್ಷಿತವಾಗಿ ಇಡಲು ಅನುಕೂಲವಾಗುತ್ತದೆ. ಅಥವಾ ಇನ್ನೊಂದು ರೀತಿಯಲ್ಲಿ ಹೇಳುವುದಾದರೆ, ಜಪಾನ್‌ ದೇಶದವರೇ ಸಮುದ್ರಕ್ಕೆ ನೀರು ಬಿಡುತ್ತಿದ್ದಾರೆ, ನಾವು ಯಾಕೆ ಕೈಗಾ ಅಣುಸ್ಥಾವರದ್ದು, ಕೊಡಂಕುಳಂನ ಅಣುಸ್ಥಾವರದ ನೀರು ಸಮುದ್ರಕ್ಕೆ ಬಿಡಬಾರದು ಎಂದು ಕೇಳುವ ಅನಾನುಕೂಲ ಕೂಡಾ ಆಗುವ ಸಾಧ್ಯತೆಯಿದೆ” ಎಂದು ನಾಗೇಶ್ ಹೆಗಡೆ ಹೇಳಿದ್ದಾರೆ.

ಭಾರತದಲ್ಲೂ ಇಂತಹ ನೀರನ್ನು ಸಮುದ್ರಕ್ಕೆ ಬಿಡುತ್ತಿದ್ದಾರೆ ಆದರೆ ಅದು ಸ್ವಲ್ಪ ಪ್ರಮಾಣದಲ್ಲಿ ಮಾತ್ರ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಾರಿಗೆ ಮುಷ್ಕರ ಮುಂದುವರಿಕೆ – ಯುಗಾದಿಗೆ ನೌಕರರಿಂದ ಭಿಕ್ಷಾಟನೆ ಪ್ರತಿಭಟನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...