Homeಮುಖಪುಟಜಪಾನ್ ಪರಮಾಣು ಸ್ಥಾವರದ ನೀರು ಸಮುದ್ರಕ್ಕೆ: ಭಾರತದ ಮೇಲೆ ಯಾವ ಪರಿಣಾಮ ಬೀರಲಿದೆ?

ಜಪಾನ್ ಪರಮಾಣು ಸ್ಥಾವರದ ನೀರು ಸಮುದ್ರಕ್ಕೆ: ಭಾರತದ ಮೇಲೆ ಯಾವ ಪರಿಣಾಮ ಬೀರಲಿದೆ?

- Advertisement -
- Advertisement -

ಜಪಾನ್‌ನ ಫುಕುಶಿಮಾ ಪರಮಾಣು ಸ್ಥಾವರದಿಂದ ಒಂದು ದಶಲಕ್ಷ ಟನ್‌ಗಿಂತಲೂ ಹೆಚ್ಚು ಸಂಸ್ಕರಿಸಿದ ನೀರನ್ನು ಸಮುದ್ರಕ್ಕೆ ಬಿಡುಗಡೆ ಮಾಡಲಿದೆ ಎಂದು ಸರ್ಕಾರ ಮಂಗಳವಾರ ತಿಳಿಸಿದೆ. ಇದನ್ನು ಚೀನಾ ಸೇರಿದಂತೆ ಸ್ಥಳೀಯ ಮೀನುಗಾರಿಕಾ ಸಮುದಾಯಗಳು ತೀವ್ರವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಪ್ರಕ್ರಿಯೆಯು ಪ್ರಾರಂಭವಾಗಲು ಇನ್ನೂ ಹಲವಾರು ವರ್ಷಗಳು ಬೇಕಾಗಿದ್ದು, ಪೂರ್ಣಗೊಳ್ಳಲು ದಶಕಗಳೇ ಬೇಕಾಗುತ್ತದೆ ಎನ್ನಲಾಗಿದೆ. ಆದರೆ ಯೋಜನೆಯ ವಿರುದ್ದ ವಿವಾದಗಳು ಮತ್ತು ವಿರೋಧಗಳು ಈಗಾಲೇ ಪ್ರಾರಂಭವಾಗಿದೆ.

ಜಪಾನ್ ಯೋಜನೆಯನ್ನು ಘೋಷಿಸಿದ ಕೆಲವೇ ಗಂಟೆಗಳಲ್ಲಿ, ಚೀನಾ ಈ ನಿರ್ಧಾರವನ್ನು “ಅತ್ಯಂತ ಬೇಜವಾಬ್ದಾರಿಯುತ” ಎಂದು ಕರೆದಿದೆ. ಆದರೆ ಜಪಾನ್ ಸರ್ಕಾರ ತನ್ನ ಯೋಜನೆಯನ್ನು ಸಮರ್ಥಿಸಿಕೊಂಡಿದ್ದು, ನೀರು ಬಿಡುಗಡೆ ಸುರಕ್ಷಿತವಾಗಿರುತ್ತದೆ ಎಂದು ವಾದಿಸಿದೆ. ಯಾಕೆಂದರೆ ನೀರಿನಲ್ಲಿ ಇರುವ ಎಲ್ಲಾ ವಿಕಿರಣದ ಅಂಶಗಳನ್ನು ಸಂಸ್ಕರಿಸಿ, ದುರ್ಬಲಗೊಳಿಸಿ, ತೆಗೆದುಹಾಕಲಾಗುತ್ತದೆ ಎಂದು ಹೇಳಿದೆ.

ಇದನ್ನೂ ಓದಿ: ಗೌರಿ ಕಾರ್ನರ್: ಕೋಮುವಾದಿಗಳ ನಡುವೆ ಇಂಥವರೂ ಉಂಟು; ಧರ್ಮಗಳ ನಡುವಿನ ಬಾಂಧವ್ಯಕ್ಕೆ ಉದಾಹರಣೆಗಳು ಅಸಂಖ್ಯಾತ

ಅಂತರರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆ (ಐಎಇಎ)ಯು ನೀರು ಬಿಡುಗಡೆಯನ್ನು ಅನುಮೋದಿಸಿದೆ, ಇದು ವಿಶ್ವದ ಬೇರೆಡೆ ಪರಮಾಣು ಸ್ಥಾವರಗಳಲ್ಲಿ ತ್ಯಾಜ್ಯ ನೀರನ್ನು ವಿಲೇವಾರಿ ಮಾಡುವಂತೆಯೇ ಇದೆ ಎಂದು ಹೇಳಿದೆ.

2011 ರ ಸುನಾಮಿಯ ನಂತರ ದುರ್ಬಲಗೊಂಡಿರುವ ಪರಮಾಣು ಸ್ಥಾವರವನ್ನು ನಿರ್ಮೂಲನೆ ಮಾಡುವ ದಶಕಗಳ ಪ್ರಕ್ರಿಯೆಯಲ್ಲಿ ನೀರನ್ನು ವಿಲೇವಾರಿ ಮಾಡುವುದು “ಅನಿವಾರ್ಯ ಕಾರ್ಯ” ಎಂದು ಜಪಾನ್ ಪ್ರಧಾನಿ ಯೋಶಿಹಿದೆ ಸುಗಾ ಸಚಿವರ ಸಭೆಯಲ್ಲಿ ಹೇಳಿದ್ದಾರೆ.

ಆ ಪರಮಾಣು ಸ್ಥಾವರದಲ್ಲಿ ಸುಮಾರು 1.25 ದಶಲಕ್ಷ ಟನ್ ನೀರು ಟ್ಯಾಂಕ್‌ಗಳಲ್ಲಿ ಸಂಗ್ರಹವಾಗಿದೆ ಎನ್ನಲಾಗಿದೆ.

ದೇಶದ ಮೀನುಗಾರಿಕಾ ಸಮುದಾಯಗಳು ನೀರನ್ನು ಬಿಡುಗಡೆ ಮಾಡುವುದರಿಂದ ಈ ಪ್ರದೇಶದಿಂದ ಸಮುದ್ರಾಹಾರದ ಮೇಲೆ ಹೊಡೆತ ಬೀಳುತ್ತದೆ ಮತ್ತುಅದನ್ನು ಮರು ಸ್ಥಾಪಿಸಲು ಹಲವು ವರ್ಷಗಳೆ ಹಿಡಿಯುತ್ತದೆ ಎಂದು ವಾದಿಸಿದೆ.

ಇದನ್ನೂ ಓದಿ: ಬಂಗಾಳ ಚುನಾವಣೆ: ಸೀತಾಲ್ಕುಚ್ಚಿ ಶೂಟೌಟ್ ಬಗ್ಗೆ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕರು

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ವಿಜ್ಞಾನಿ, ಲೇಖಕ ನಾಗೇಶ್ ಹೆಗಡೆ, “ಜಪಾನ್ ಫುಕೋಶಿಮಾದ ನೀರನ್ನು ಕಳೆದ ಏಳು ವರ್ಷದಿಂದ ಸಮುದ್ರಕ್ಕೆ ಬಿಡುತ್ತಿದ್ದಾರೆ. ಒಂದು ಕಡೆ ಅಮೆರಿಕಾ ಒತ್ತಡವಿದ್ದರೆ, ಇನ್ನೊಂದು ಕಡೆ ದಿನ ದಿನ ಫುಕೋಷಿಮಾದ ನೀರು ಜಾಸ್ತಿಯಾಗುತ್ತಿರುವುದರಿಂದ ಜಪಾನ್‌ಗೂ ಅದನ್ನು ಹಿಡಿದಿಟ್ಟುಕೊಳ್ಳಲು ಆಗುವುದಿಲ್ಲ. ಇದೀಗ ಅನಿವಾರ್ಯವಾಗಿ ನೀರು ಬಿಡುಗಡೆ ಬಗ್ಗೆ ಹೇಳುತ್ತಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

May be an image of 1 person
ನಾಗೇಶ್ ಹೆಗಡೆ

“ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವ ಈ ನೀರಿನಲ್ಲಿರುವ ವಿಕಿರಣವನ್ನು ಸಂಸ್ಕರಣೆ ಮಾಡಿ ಬಿಡುಗಡೆ ಮಾಡುತ್ತಿದ್ದೇವೆ ಎಂಬುದು ಸುಳ್ಳು, ಅದನ್ನು ಸಂಸ್ಕರಣೆ ಮಾಡುವ ತಂತ್ರಜ್ಞಾನವೇ ಇಲ್ಲ” ಎಂದು ಅವರು ತಿಳಿಸಿದ್ದಾರೆ.

“ಜಪಾನ್ ನಮ್ಮ ದೇಶಕ್ಕಿಂತ ದೂರವಿರುವುರಿಂದ ಈ ನೀರಿನಿಂದ ಭಾರತಕ್ಕೆ ನೇರ ಪರಿಣಾಮ ಬೀರುವುದಿಲ್ಲ. ಅಮೆರಿಕಾ ಮತ್ತು ಜಪಾನ್ ಈ ವಿಚಾರದಲ್ಲಿ ಜಗಳ ಮಾಡಿದರೆ ನಮ್ಮ ಅಣುಸ್ಥಾವರವನ್ನು ಸುರಕ್ಷಿತವಾಗಿ ಇಡಲು ಅನುಕೂಲವಾಗುತ್ತದೆ. ಅಥವಾ ಇನ್ನೊಂದು ರೀತಿಯಲ್ಲಿ ಹೇಳುವುದಾದರೆ, ಜಪಾನ್‌ ದೇಶದವರೇ ಸಮುದ್ರಕ್ಕೆ ನೀರು ಬಿಡುತ್ತಿದ್ದಾರೆ, ನಾವು ಯಾಕೆ ಕೈಗಾ ಅಣುಸ್ಥಾವರದ್ದು, ಕೊಡಂಕುಳಂನ ಅಣುಸ್ಥಾವರದ ನೀರು ಸಮುದ್ರಕ್ಕೆ ಬಿಡಬಾರದು ಎಂದು ಕೇಳುವ ಅನಾನುಕೂಲ ಕೂಡಾ ಆಗುವ ಸಾಧ್ಯತೆಯಿದೆ” ಎಂದು ನಾಗೇಶ್ ಹೆಗಡೆ ಹೇಳಿದ್ದಾರೆ.

ಭಾರತದಲ್ಲೂ ಇಂತಹ ನೀರನ್ನು ಸಮುದ್ರಕ್ಕೆ ಬಿಡುತ್ತಿದ್ದಾರೆ ಆದರೆ ಅದು ಸ್ವಲ್ಪ ಪ್ರಮಾಣದಲ್ಲಿ ಮಾತ್ರ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಾರಿಗೆ ಮುಷ್ಕರ ಮುಂದುವರಿಕೆ – ಯುಗಾದಿಗೆ ನೌಕರರಿಂದ ಭಿಕ್ಷಾಟನೆ ಪ್ರತಿಭಟನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...