Homeಮುಖಪುಟಜಪಾನ್ ಪರಮಾಣು ಸ್ಥಾವರದ ನೀರು ಸಮುದ್ರಕ್ಕೆ: ಭಾರತದ ಮೇಲೆ ಯಾವ ಪರಿಣಾಮ ಬೀರಲಿದೆ?

ಜಪಾನ್ ಪರಮಾಣು ಸ್ಥಾವರದ ನೀರು ಸಮುದ್ರಕ್ಕೆ: ಭಾರತದ ಮೇಲೆ ಯಾವ ಪರಿಣಾಮ ಬೀರಲಿದೆ?

- Advertisement -
- Advertisement -

ಜಪಾನ್‌ನ ಫುಕುಶಿಮಾ ಪರಮಾಣು ಸ್ಥಾವರದಿಂದ ಒಂದು ದಶಲಕ್ಷ ಟನ್‌ಗಿಂತಲೂ ಹೆಚ್ಚು ಸಂಸ್ಕರಿಸಿದ ನೀರನ್ನು ಸಮುದ್ರಕ್ಕೆ ಬಿಡುಗಡೆ ಮಾಡಲಿದೆ ಎಂದು ಸರ್ಕಾರ ಮಂಗಳವಾರ ತಿಳಿಸಿದೆ. ಇದನ್ನು ಚೀನಾ ಸೇರಿದಂತೆ ಸ್ಥಳೀಯ ಮೀನುಗಾರಿಕಾ ಸಮುದಾಯಗಳು ತೀವ್ರವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಪ್ರಕ್ರಿಯೆಯು ಪ್ರಾರಂಭವಾಗಲು ಇನ್ನೂ ಹಲವಾರು ವರ್ಷಗಳು ಬೇಕಾಗಿದ್ದು, ಪೂರ್ಣಗೊಳ್ಳಲು ದಶಕಗಳೇ ಬೇಕಾಗುತ್ತದೆ ಎನ್ನಲಾಗಿದೆ. ಆದರೆ ಯೋಜನೆಯ ವಿರುದ್ದ ವಿವಾದಗಳು ಮತ್ತು ವಿರೋಧಗಳು ಈಗಾಲೇ ಪ್ರಾರಂಭವಾಗಿದೆ.

ಜಪಾನ್ ಯೋಜನೆಯನ್ನು ಘೋಷಿಸಿದ ಕೆಲವೇ ಗಂಟೆಗಳಲ್ಲಿ, ಚೀನಾ ಈ ನಿರ್ಧಾರವನ್ನು “ಅತ್ಯಂತ ಬೇಜವಾಬ್ದಾರಿಯುತ” ಎಂದು ಕರೆದಿದೆ. ಆದರೆ ಜಪಾನ್ ಸರ್ಕಾರ ತನ್ನ ಯೋಜನೆಯನ್ನು ಸಮರ್ಥಿಸಿಕೊಂಡಿದ್ದು, ನೀರು ಬಿಡುಗಡೆ ಸುರಕ್ಷಿತವಾಗಿರುತ್ತದೆ ಎಂದು ವಾದಿಸಿದೆ. ಯಾಕೆಂದರೆ ನೀರಿನಲ್ಲಿ ಇರುವ ಎಲ್ಲಾ ವಿಕಿರಣದ ಅಂಶಗಳನ್ನು ಸಂಸ್ಕರಿಸಿ, ದುರ್ಬಲಗೊಳಿಸಿ, ತೆಗೆದುಹಾಕಲಾಗುತ್ತದೆ ಎಂದು ಹೇಳಿದೆ.

ಇದನ್ನೂ ಓದಿ: ಗೌರಿ ಕಾರ್ನರ್: ಕೋಮುವಾದಿಗಳ ನಡುವೆ ಇಂಥವರೂ ಉಂಟು; ಧರ್ಮಗಳ ನಡುವಿನ ಬಾಂಧವ್ಯಕ್ಕೆ ಉದಾಹರಣೆಗಳು ಅಸಂಖ್ಯಾತ

ಅಂತರರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆ (ಐಎಇಎ)ಯು ನೀರು ಬಿಡುಗಡೆಯನ್ನು ಅನುಮೋದಿಸಿದೆ, ಇದು ವಿಶ್ವದ ಬೇರೆಡೆ ಪರಮಾಣು ಸ್ಥಾವರಗಳಲ್ಲಿ ತ್ಯಾಜ್ಯ ನೀರನ್ನು ವಿಲೇವಾರಿ ಮಾಡುವಂತೆಯೇ ಇದೆ ಎಂದು ಹೇಳಿದೆ.

2011 ರ ಸುನಾಮಿಯ ನಂತರ ದುರ್ಬಲಗೊಂಡಿರುವ ಪರಮಾಣು ಸ್ಥಾವರವನ್ನು ನಿರ್ಮೂಲನೆ ಮಾಡುವ ದಶಕಗಳ ಪ್ರಕ್ರಿಯೆಯಲ್ಲಿ ನೀರನ್ನು ವಿಲೇವಾರಿ ಮಾಡುವುದು “ಅನಿವಾರ್ಯ ಕಾರ್ಯ” ಎಂದು ಜಪಾನ್ ಪ್ರಧಾನಿ ಯೋಶಿಹಿದೆ ಸುಗಾ ಸಚಿವರ ಸಭೆಯಲ್ಲಿ ಹೇಳಿದ್ದಾರೆ.

ಆ ಪರಮಾಣು ಸ್ಥಾವರದಲ್ಲಿ ಸುಮಾರು 1.25 ದಶಲಕ್ಷ ಟನ್ ನೀರು ಟ್ಯಾಂಕ್‌ಗಳಲ್ಲಿ ಸಂಗ್ರಹವಾಗಿದೆ ಎನ್ನಲಾಗಿದೆ.

ದೇಶದ ಮೀನುಗಾರಿಕಾ ಸಮುದಾಯಗಳು ನೀರನ್ನು ಬಿಡುಗಡೆ ಮಾಡುವುದರಿಂದ ಈ ಪ್ರದೇಶದಿಂದ ಸಮುದ್ರಾಹಾರದ ಮೇಲೆ ಹೊಡೆತ ಬೀಳುತ್ತದೆ ಮತ್ತುಅದನ್ನು ಮರು ಸ್ಥಾಪಿಸಲು ಹಲವು ವರ್ಷಗಳೆ ಹಿಡಿಯುತ್ತದೆ ಎಂದು ವಾದಿಸಿದೆ.

ಇದನ್ನೂ ಓದಿ: ಬಂಗಾಳ ಚುನಾವಣೆ: ಸೀತಾಲ್ಕುಚ್ಚಿ ಶೂಟೌಟ್ ಬಗ್ಗೆ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕರು

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ವಿಜ್ಞಾನಿ, ಲೇಖಕ ನಾಗೇಶ್ ಹೆಗಡೆ, “ಜಪಾನ್ ಫುಕೋಶಿಮಾದ ನೀರನ್ನು ಕಳೆದ ಏಳು ವರ್ಷದಿಂದ ಸಮುದ್ರಕ್ಕೆ ಬಿಡುತ್ತಿದ್ದಾರೆ. ಒಂದು ಕಡೆ ಅಮೆರಿಕಾ ಒತ್ತಡವಿದ್ದರೆ, ಇನ್ನೊಂದು ಕಡೆ ದಿನ ದಿನ ಫುಕೋಷಿಮಾದ ನೀರು ಜಾಸ್ತಿಯಾಗುತ್ತಿರುವುದರಿಂದ ಜಪಾನ್‌ಗೂ ಅದನ್ನು ಹಿಡಿದಿಟ್ಟುಕೊಳ್ಳಲು ಆಗುವುದಿಲ್ಲ. ಇದೀಗ ಅನಿವಾರ್ಯವಾಗಿ ನೀರು ಬಿಡುಗಡೆ ಬಗ್ಗೆ ಹೇಳುತ್ತಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

May be an image of 1 person
ನಾಗೇಶ್ ಹೆಗಡೆ

“ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವ ಈ ನೀರಿನಲ್ಲಿರುವ ವಿಕಿರಣವನ್ನು ಸಂಸ್ಕರಣೆ ಮಾಡಿ ಬಿಡುಗಡೆ ಮಾಡುತ್ತಿದ್ದೇವೆ ಎಂಬುದು ಸುಳ್ಳು, ಅದನ್ನು ಸಂಸ್ಕರಣೆ ಮಾಡುವ ತಂತ್ರಜ್ಞಾನವೇ ಇಲ್ಲ” ಎಂದು ಅವರು ತಿಳಿಸಿದ್ದಾರೆ.

“ಜಪಾನ್ ನಮ್ಮ ದೇಶಕ್ಕಿಂತ ದೂರವಿರುವುರಿಂದ ಈ ನೀರಿನಿಂದ ಭಾರತಕ್ಕೆ ನೇರ ಪರಿಣಾಮ ಬೀರುವುದಿಲ್ಲ. ಅಮೆರಿಕಾ ಮತ್ತು ಜಪಾನ್ ಈ ವಿಚಾರದಲ್ಲಿ ಜಗಳ ಮಾಡಿದರೆ ನಮ್ಮ ಅಣುಸ್ಥಾವರವನ್ನು ಸುರಕ್ಷಿತವಾಗಿ ಇಡಲು ಅನುಕೂಲವಾಗುತ್ತದೆ. ಅಥವಾ ಇನ್ನೊಂದು ರೀತಿಯಲ್ಲಿ ಹೇಳುವುದಾದರೆ, ಜಪಾನ್‌ ದೇಶದವರೇ ಸಮುದ್ರಕ್ಕೆ ನೀರು ಬಿಡುತ್ತಿದ್ದಾರೆ, ನಾವು ಯಾಕೆ ಕೈಗಾ ಅಣುಸ್ಥಾವರದ್ದು, ಕೊಡಂಕುಳಂನ ಅಣುಸ್ಥಾವರದ ನೀರು ಸಮುದ್ರಕ್ಕೆ ಬಿಡಬಾರದು ಎಂದು ಕೇಳುವ ಅನಾನುಕೂಲ ಕೂಡಾ ಆಗುವ ಸಾಧ್ಯತೆಯಿದೆ” ಎಂದು ನಾಗೇಶ್ ಹೆಗಡೆ ಹೇಳಿದ್ದಾರೆ.

ಭಾರತದಲ್ಲೂ ಇಂತಹ ನೀರನ್ನು ಸಮುದ್ರಕ್ಕೆ ಬಿಡುತ್ತಿದ್ದಾರೆ ಆದರೆ ಅದು ಸ್ವಲ್ಪ ಪ್ರಮಾಣದಲ್ಲಿ ಮಾತ್ರ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಾರಿಗೆ ಮುಷ್ಕರ ಮುಂದುವರಿಕೆ – ಯುಗಾದಿಗೆ ನೌಕರರಿಂದ ಭಿಕ್ಷಾಟನೆ ಪ್ರತಿಭಟನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...