Homeಅಂತರಾಷ್ಟ್ರೀಯ10 ವರ್ಷಗಳಿಂದ ಏಕಾಂತವಾಸದಲ್ಲೇ ಇರುವ ಜಪಾನಿನ ವ್ಯಕ್ತಿ: ಕಾರಣ?

10 ವರ್ಷಗಳಿಂದ ಏಕಾಂತವಾಸದಲ್ಲೇ ಇರುವ ಜಪಾನಿನ ವ್ಯಕ್ತಿ: ಕಾರಣ?

- Advertisement -
- Advertisement -

ಕರೊನಾ ಸಾಂಕ್ರಾಮಿಕ ಜಗತ್ತಿಗೆ ಕಾಲಿಟ್ಟ ಕಳೆದ ಒಂದುವರೆ ವರ್ಷದಲ್ಲಿ ಲಾಕ್‌ಡೌನ್, ಕ್ವಾರಂಟೈನ್, ಏಕಾಂತವಾಸಗಳು ಅತ್ಯಂತ ಸಾಮಾನ್ಯವಾಗಿ ಬಿಟ್ಟಿವೆ. ಜನ ಸಂಪರ್ಕಕ್ಕೆ ಬಾರದೇ ಮನೆಯಲ್ಲಿಯೇ ಉಳಿಯುವುದೂ ಸರ್ವೇ ಸಾಮಾನ್ಯವಾಗಿಬಿಟ್ಟಿದೆ. ಜಪಾನಿನ ವ್ಯಕ್ತಿಯೊಬ್ಬ ಕರೊನಾ ಜಗತ್ತಿಗೆ ಕಾಲಿಡುವ ಹಲವು ವರ್ಷ ಮೊದಲೇ ಏಕಾಂತವಾಸದಲ್ಲಿ ಇದ್ದಾರೆ. ಅದು ಕೂಡ ಬರೋಬ್ಬರಿ 10 ವರ್ಷಗಳ ಕಾಲ. ಜೈಲುವಾಸ ಅಥವಾ ಯಾವುದೋ ಖಾಯಿಲೆಯ ಕಾರಣಕ್ಕಾಗಿ ಸೆಲ್ಪ್ ಐಸೋಲೇಶನ್ ಅಲ್ಲ. ವಿಶ್ವ ಪ್ರಸಿದ್ಧ ಬರಹಗಾರ ಗೇಬ್ರಿಯಲ್ ಗಾರ್ಸಿಯಾ ಮಾರ್ಕ್ವೆಜ್ ನೂರು ವರ್ಷಗಳ ಏಕಾಂತ ಎಂಬ ಕೃತಿ ಬರೆದಿದ್ದರು. ಆದರೆ ಇದು ಕತೆಯಲ್ಲ. ನಿಜಜೀವನದಲ್ಲಿ 10 ವರ್ಷಗಳಿಂದ ಏಕಾಂತದಲ್ಲಿರುವ ವ್ಯಕ್ತಿಯ ಜೀವನ. ನಂಬಲಿಕ್ಕೆ ಆಶ್ಚರ್ಯವಾದರೂ ಸತ್ಯ.

ಜಪಾನಿನಲ್ಲಿ ಜಾಗತಿಕ ಕರೊನಾ ಬಿಕ್ಕಟ್ಟು ಕಾಣಿಸಿಕೊಳ್ಳುವ ಮೊದಲೇ ಏಕಾಂತವಾಸದ ಸಂಸ್ಕೃತಿ ಇದೆ. ಸುಮಾರು 10 ಲಕ್ಷ ಜನ ಈ ರೀತಿ ಏಕಾಂತವಾಸದಲ್ಲಿ ಇದ್ದಾರೆ ಎಂದು ಜಪಾನಿನ ಆರೋಗ್ಯ ಇಲಾಖೆ ಹೇಳಿದೆ. ಹೀಗೆ ಏಕಾಂತವಾಸದಲ್ಲಿ ಇರುವ ಪದ್ಧತಿಗಳನ್ನು ಹಿಕಿಕೊಮೋರಿ ಎಂದು ಕರೆಯಲಾಗುತ್ತದೆ. ಕೆಲವರು ವರ್ಷ ತಿಂಗಳು ಐಸೋಲೇಶನ್‌ನಲ್ಲಿ ಇರುತ್ತಾರೆ. ನಿಟೋ ಸೌಜಿ ಎನ್ನುವ ಕಲಾವಿದ ಬರೋಬ್ಬರಿ 10 ವರ್ಷದಿಂದ ಏಕಾಂತವಾಸವನ್ನು ಅನುಭವಿಸುತ್ತಿದ್ದಾರೆ. ವೃತ್ತಿಯಿಂದ ಗೇಮ್ ಡೆವಲಪರ್ ಆಗಿರುವ ನಿಟೋ ಸೌಜಿ ಮೂಲತಃ ಸಂಗೀತ ಕಲಾವಿದ. ಎರಡು ತಿಂಗಳಿಗೊಮ್ಮೆ ಕ್ಷೌರಕ್ಕಾಗಿ ಮಾತ್ರ ನಿಟೋ ಮನೆ ಬಿಟ್ಟು ಹೊರಬಂದು ಜಗತ್ತನ್ನು ನೋಡುತ್ತಾರೆ.

ನಿಟೋ ಸೌಜಿ ಟೋಕಿಯೋ ವಿಶ್ವ ವಿದ್ಯಾಲಯದ ಪದವೀಧರನಾಗಿ ಹೊರ ಬಂದಾಗ ನಿರುದ್ಯೋಗ ಸಮಸ್ಯೆ ಎದುರಾಯಿತು. ಚಿತ್ರಕಲೆಯನ್ನು ಅಭ್ಯಾಸಿಸುವ ಸಲುವಾಗಿ ನಿಟೋ 3 ವರ್ಷಗಳ ಕಾಲ ಮನೆಯಿಂದ ಆಚೆಗೇ ಬರಲಿಲ್ಲ. ನಂತರ ಅದು ಅವರ ಜೀವನ ಶೈಲಿಯಾಯಿತು. ಆರ್ಥಿಕವಾಗಿ ಸ್ವಾವಲಂಬಿಯಾಗಬೇಕೆಂಬ ಪ್ರಯತ್ನದಲ್ಲಿ ಆತ ತಮ್ಮ ಮನೆಯಲ್ಲಿ ಸತತವಾಗಿ ಕಲೆಯ ಅಭ್ಯಾಸ ನಡೆಸಿದ್ದಾರೆ. ಇವರಿಗೆ ಬೇಕಾದ ಅಗತ್ಯ ವಸ್ತುಗಳನ್ನು ಮನೆಗೆ ತಲುಪುವ ವ್ಯವಸ್ಥೆಯನ್ನು ಮಾಡಿಕೊಂಡಿದ್ದಾರೆ. ಸದ್ಯ ತಮ್ಮ ಚಿಕ್ಕಮ್ಮನ ಅಪಾರ್ಟಮೆಂಟ್‌ನಲ್ಲಿ ವಾಸವಿದ್ದು ತಮ್ಮ ಏಕಾಂತವಾಸದ ಅನುಭವವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ನಿಟೋ ಬೆಳಿಗ್ಗೆ 11 ಗಂಟೆಗೆ ತಮ್ಮ ದಿನವನ್ನು ಆರಂಭಿಸಿದರೆ ತಿಂಡಿ ತಿಂದು ಇಮೇಲ್‌ಗಳನ್ನು ಚೆಕ್ ಮಾಡಿ, ಸುದ್ದಿಗಳನ್ನು ನೋಡಿ, ಕೆಲಸಕ್ಕೆ  ಸಂಬಂಧಿಸಿದ  ಸಂದೇಶಗಳಿಗೆ ಪ್ರತಿಕ್ರಿಯಿಸಿ ಮತ್ತೆ ತಮ್ಮ ಕೆಲಸವನ್ನು ಆರಂಭಿಸಿದರೆ ಬಿಡುವಾಗುವುದು ಸಂಜೆ. ಒಂದಷ್ಟು ಕಾಲ ದೈಹಿಕ ವ್ಯಾಯಾಮ, ರಾತ್ರಿಯ ಊಟ ಮತ್ತೆ ಗೇಮ್ ಡೆವಲಪ್‌ಮೆಂಟ್ ಕೆಲಸ. ನಡುವೆ ಹೊರ ಜಗತ್ತಿನೊಂದಿಗೆ ನೇರ ಸಂಪರ್ಕವಿಲ್ಲ. ಹೊರಗಡೆ ಸುತ್ತಾಟವಿಲ್ಲ. ಮತ್ತೆ ರಾತ್ರಿ ತಮ್ಮ ಕಲೆಯ ಅಭ್ಯಾಸಕ್ಕೆ ತೊಡಗಿದರೆ ಬೆಳಗಿನ ಜಾವ 4 ಗಂಟೆಗೆ ನಿದ್ರೆಗೆ ಜಾರುತ್ತಾರೆ.

ಎರಡು ಸಾವಿರದ ಹದಿನೈದರಿಂದ ನಿಟೋ ಸೌಜಿ ಇಂಗ್ಲೀಷ್ ಭಾಷೆಯ ಕಲಿಕೆಯಲ್ಲಿ ತೊಡಗಿದ್ದಾರೆ. ಕಂಪ್ಯೂಟರ್ ಮತ್ತು ಮೊಬೈಲ್ ಗೇಮ್‌ಗಳನ್ನು ಅಭಿವೃದ್ಧಿಪಡಿಸುವುದರಲ್ಲಿ ತೊಡಗಿಸಿಕೊಂಡಿದ್ದಾರೆ. ಸ್ವಂತ ಜೀವನದ ಪ್ರೇರಣೆಯಿಂದ ಅವರು ಪುಲ್ ಸ್ಟೇ ಎಂಬ ಡಿಜಿಟಲ್ ಗೇಮ್ ಅನ್ನು ಅಭಿವೃದ್ಧಿಪಡಿಸಿದ್ದಾರೆ. ಈ ಗೇಮ್ 2020 ಅಕ್ಟೋಬರ್‌ನಲ್ಲಿ ಅಂತರ್ಜಾಲದಲ್ಲಿ ಲಭ್ಯವಿದೆ. ಗೇಮ್ ಮೂಲಕ ನಿಟೋ ತಮ್ಮ ಜೀವನದ ಅನುಭವಗಳನ್ನು ಹಿಡಿದಿಟ್ಟಿದ್ದಾರೆ.

ನಿಟೋ ಸೌಜಿ ಯೂಟ್ಯೂಬ್ ಚಾನೆಲ್ ಒಂದನ್ನು ನಡೆಸುತ್ತಿದ್ದು ಸುಮಾರು 2 ಲಕ್ಷ ಜನರು ಅವರ ಅನುಭವಗಳನ್ನು ಯೂಟ್ಯೂಬ್‌ನಲ್ಲಿ ವೀಕ್ಷಿಸುತ್ತಾರೆ. ಅವರಿಂದ ಕಲೆ, ತಂತ್ರಜ್ಞಾನದ ಮಾಹಿತಿಯನ್ನು ಪಡೆಯುತ್ತಾರೆ.

ನಿಟೋ ಸೌಜಿ ಈಗ ಸಂಪೂರ್ಣ ಜೀವನವನ್ನು ತಮ್ಮ ಪ್ರಾಜೆಕ್ಟ್ಗಾಗಿ ಮೀಸಲಿಟ್ಟಿದ್ದಾರೆ. ದೀರ್ಘಾವಧಿಯಲ್ಲೊ ಕೆಲಸಮಾಡುವುದು ಇದರಿಂದ ಕಷ್ಟವಾಗಿದೆ ಎನ್ನುತ್ತಾರೆ.


ಇದನ್ನೂ ಓದಿ : ಬಂಗಾಳ ರಾಜ್ಯಪಾಲರನ್ನು ಕಿತ್ತು ಹಾಕಲು ಒಕ್ಕೂಟ ಸರ್ಕಾರಕ್ಕೆ ಪತ್ರ ಬರೆದ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...