Homeಅಂತರಾಷ್ಟ್ರೀಯ10 ವರ್ಷಗಳಿಂದ ಏಕಾಂತವಾಸದಲ್ಲೇ ಇರುವ ಜಪಾನಿನ ವ್ಯಕ್ತಿ: ಕಾರಣ?

10 ವರ್ಷಗಳಿಂದ ಏಕಾಂತವಾಸದಲ್ಲೇ ಇರುವ ಜಪಾನಿನ ವ್ಯಕ್ತಿ: ಕಾರಣ?

- Advertisement -
- Advertisement -

ಕರೊನಾ ಸಾಂಕ್ರಾಮಿಕ ಜಗತ್ತಿಗೆ ಕಾಲಿಟ್ಟ ಕಳೆದ ಒಂದುವರೆ ವರ್ಷದಲ್ಲಿ ಲಾಕ್‌ಡೌನ್, ಕ್ವಾರಂಟೈನ್, ಏಕಾಂತವಾಸಗಳು ಅತ್ಯಂತ ಸಾಮಾನ್ಯವಾಗಿ ಬಿಟ್ಟಿವೆ. ಜನ ಸಂಪರ್ಕಕ್ಕೆ ಬಾರದೇ ಮನೆಯಲ್ಲಿಯೇ ಉಳಿಯುವುದೂ ಸರ್ವೇ ಸಾಮಾನ್ಯವಾಗಿಬಿಟ್ಟಿದೆ. ಜಪಾನಿನ ವ್ಯಕ್ತಿಯೊಬ್ಬ ಕರೊನಾ ಜಗತ್ತಿಗೆ ಕಾಲಿಡುವ ಹಲವು ವರ್ಷ ಮೊದಲೇ ಏಕಾಂತವಾಸದಲ್ಲಿ ಇದ್ದಾರೆ. ಅದು ಕೂಡ ಬರೋಬ್ಬರಿ 10 ವರ್ಷಗಳ ಕಾಲ. ಜೈಲುವಾಸ ಅಥವಾ ಯಾವುದೋ ಖಾಯಿಲೆಯ ಕಾರಣಕ್ಕಾಗಿ ಸೆಲ್ಪ್ ಐಸೋಲೇಶನ್ ಅಲ್ಲ. ವಿಶ್ವ ಪ್ರಸಿದ್ಧ ಬರಹಗಾರ ಗೇಬ್ರಿಯಲ್ ಗಾರ್ಸಿಯಾ ಮಾರ್ಕ್ವೆಜ್ ನೂರು ವರ್ಷಗಳ ಏಕಾಂತ ಎಂಬ ಕೃತಿ ಬರೆದಿದ್ದರು. ಆದರೆ ಇದು ಕತೆಯಲ್ಲ. ನಿಜಜೀವನದಲ್ಲಿ 10 ವರ್ಷಗಳಿಂದ ಏಕಾಂತದಲ್ಲಿರುವ ವ್ಯಕ್ತಿಯ ಜೀವನ. ನಂಬಲಿಕ್ಕೆ ಆಶ್ಚರ್ಯವಾದರೂ ಸತ್ಯ.

ಜಪಾನಿನಲ್ಲಿ ಜಾಗತಿಕ ಕರೊನಾ ಬಿಕ್ಕಟ್ಟು ಕಾಣಿಸಿಕೊಳ್ಳುವ ಮೊದಲೇ ಏಕಾಂತವಾಸದ ಸಂಸ್ಕೃತಿ ಇದೆ. ಸುಮಾರು 10 ಲಕ್ಷ ಜನ ಈ ರೀತಿ ಏಕಾಂತವಾಸದಲ್ಲಿ ಇದ್ದಾರೆ ಎಂದು ಜಪಾನಿನ ಆರೋಗ್ಯ ಇಲಾಖೆ ಹೇಳಿದೆ. ಹೀಗೆ ಏಕಾಂತವಾಸದಲ್ಲಿ ಇರುವ ಪದ್ಧತಿಗಳನ್ನು ಹಿಕಿಕೊಮೋರಿ ಎಂದು ಕರೆಯಲಾಗುತ್ತದೆ. ಕೆಲವರು ವರ್ಷ ತಿಂಗಳು ಐಸೋಲೇಶನ್‌ನಲ್ಲಿ ಇರುತ್ತಾರೆ. ನಿಟೋ ಸೌಜಿ ಎನ್ನುವ ಕಲಾವಿದ ಬರೋಬ್ಬರಿ 10 ವರ್ಷದಿಂದ ಏಕಾಂತವಾಸವನ್ನು ಅನುಭವಿಸುತ್ತಿದ್ದಾರೆ. ವೃತ್ತಿಯಿಂದ ಗೇಮ್ ಡೆವಲಪರ್ ಆಗಿರುವ ನಿಟೋ ಸೌಜಿ ಮೂಲತಃ ಸಂಗೀತ ಕಲಾವಿದ. ಎರಡು ತಿಂಗಳಿಗೊಮ್ಮೆ ಕ್ಷೌರಕ್ಕಾಗಿ ಮಾತ್ರ ನಿಟೋ ಮನೆ ಬಿಟ್ಟು ಹೊರಬಂದು ಜಗತ್ತನ್ನು ನೋಡುತ್ತಾರೆ.

ನಿಟೋ ಸೌಜಿ ಟೋಕಿಯೋ ವಿಶ್ವ ವಿದ್ಯಾಲಯದ ಪದವೀಧರನಾಗಿ ಹೊರ ಬಂದಾಗ ನಿರುದ್ಯೋಗ ಸಮಸ್ಯೆ ಎದುರಾಯಿತು. ಚಿತ್ರಕಲೆಯನ್ನು ಅಭ್ಯಾಸಿಸುವ ಸಲುವಾಗಿ ನಿಟೋ 3 ವರ್ಷಗಳ ಕಾಲ ಮನೆಯಿಂದ ಆಚೆಗೇ ಬರಲಿಲ್ಲ. ನಂತರ ಅದು ಅವರ ಜೀವನ ಶೈಲಿಯಾಯಿತು. ಆರ್ಥಿಕವಾಗಿ ಸ್ವಾವಲಂಬಿಯಾಗಬೇಕೆಂಬ ಪ್ರಯತ್ನದಲ್ಲಿ ಆತ ತಮ್ಮ ಮನೆಯಲ್ಲಿ ಸತತವಾಗಿ ಕಲೆಯ ಅಭ್ಯಾಸ ನಡೆಸಿದ್ದಾರೆ. ಇವರಿಗೆ ಬೇಕಾದ ಅಗತ್ಯ ವಸ್ತುಗಳನ್ನು ಮನೆಗೆ ತಲುಪುವ ವ್ಯವಸ್ಥೆಯನ್ನು ಮಾಡಿಕೊಂಡಿದ್ದಾರೆ. ಸದ್ಯ ತಮ್ಮ ಚಿಕ್ಕಮ್ಮನ ಅಪಾರ್ಟಮೆಂಟ್‌ನಲ್ಲಿ ವಾಸವಿದ್ದು ತಮ್ಮ ಏಕಾಂತವಾಸದ ಅನುಭವವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ನಿಟೋ ಬೆಳಿಗ್ಗೆ 11 ಗಂಟೆಗೆ ತಮ್ಮ ದಿನವನ್ನು ಆರಂಭಿಸಿದರೆ ತಿಂಡಿ ತಿಂದು ಇಮೇಲ್‌ಗಳನ್ನು ಚೆಕ್ ಮಾಡಿ, ಸುದ್ದಿಗಳನ್ನು ನೋಡಿ, ಕೆಲಸಕ್ಕೆ  ಸಂಬಂಧಿಸಿದ  ಸಂದೇಶಗಳಿಗೆ ಪ್ರತಿಕ್ರಿಯಿಸಿ ಮತ್ತೆ ತಮ್ಮ ಕೆಲಸವನ್ನು ಆರಂಭಿಸಿದರೆ ಬಿಡುವಾಗುವುದು ಸಂಜೆ. ಒಂದಷ್ಟು ಕಾಲ ದೈಹಿಕ ವ್ಯಾಯಾಮ, ರಾತ್ರಿಯ ಊಟ ಮತ್ತೆ ಗೇಮ್ ಡೆವಲಪ್‌ಮೆಂಟ್ ಕೆಲಸ. ನಡುವೆ ಹೊರ ಜಗತ್ತಿನೊಂದಿಗೆ ನೇರ ಸಂಪರ್ಕವಿಲ್ಲ. ಹೊರಗಡೆ ಸುತ್ತಾಟವಿಲ್ಲ. ಮತ್ತೆ ರಾತ್ರಿ ತಮ್ಮ ಕಲೆಯ ಅಭ್ಯಾಸಕ್ಕೆ ತೊಡಗಿದರೆ ಬೆಳಗಿನ ಜಾವ 4 ಗಂಟೆಗೆ ನಿದ್ರೆಗೆ ಜಾರುತ್ತಾರೆ.

ಎರಡು ಸಾವಿರದ ಹದಿನೈದರಿಂದ ನಿಟೋ ಸೌಜಿ ಇಂಗ್ಲೀಷ್ ಭಾಷೆಯ ಕಲಿಕೆಯಲ್ಲಿ ತೊಡಗಿದ್ದಾರೆ. ಕಂಪ್ಯೂಟರ್ ಮತ್ತು ಮೊಬೈಲ್ ಗೇಮ್‌ಗಳನ್ನು ಅಭಿವೃದ್ಧಿಪಡಿಸುವುದರಲ್ಲಿ ತೊಡಗಿಸಿಕೊಂಡಿದ್ದಾರೆ. ಸ್ವಂತ ಜೀವನದ ಪ್ರೇರಣೆಯಿಂದ ಅವರು ಪುಲ್ ಸ್ಟೇ ಎಂಬ ಡಿಜಿಟಲ್ ಗೇಮ್ ಅನ್ನು ಅಭಿವೃದ್ಧಿಪಡಿಸಿದ್ದಾರೆ. ಈ ಗೇಮ್ 2020 ಅಕ್ಟೋಬರ್‌ನಲ್ಲಿ ಅಂತರ್ಜಾಲದಲ್ಲಿ ಲಭ್ಯವಿದೆ. ಗೇಮ್ ಮೂಲಕ ನಿಟೋ ತಮ್ಮ ಜೀವನದ ಅನುಭವಗಳನ್ನು ಹಿಡಿದಿಟ್ಟಿದ್ದಾರೆ.

ನಿಟೋ ಸೌಜಿ ಯೂಟ್ಯೂಬ್ ಚಾನೆಲ್ ಒಂದನ್ನು ನಡೆಸುತ್ತಿದ್ದು ಸುಮಾರು 2 ಲಕ್ಷ ಜನರು ಅವರ ಅನುಭವಗಳನ್ನು ಯೂಟ್ಯೂಬ್‌ನಲ್ಲಿ ವೀಕ್ಷಿಸುತ್ತಾರೆ. ಅವರಿಂದ ಕಲೆ, ತಂತ್ರಜ್ಞಾನದ ಮಾಹಿತಿಯನ್ನು ಪಡೆಯುತ್ತಾರೆ.

ನಿಟೋ ಸೌಜಿ ಈಗ ಸಂಪೂರ್ಣ ಜೀವನವನ್ನು ತಮ್ಮ ಪ್ರಾಜೆಕ್ಟ್ಗಾಗಿ ಮೀಸಲಿಟ್ಟಿದ್ದಾರೆ. ದೀರ್ಘಾವಧಿಯಲ್ಲೊ ಕೆಲಸಮಾಡುವುದು ಇದರಿಂದ ಕಷ್ಟವಾಗಿದೆ ಎನ್ನುತ್ತಾರೆ.


ಇದನ್ನೂ ಓದಿ : ಬಂಗಾಳ ರಾಜ್ಯಪಾಲರನ್ನು ಕಿತ್ತು ಹಾಕಲು ಒಕ್ಕೂಟ ಸರ್ಕಾರಕ್ಕೆ ಪತ್ರ ಬರೆದ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...