Homeಅಂತರಾಷ್ಟ್ರೀಯ10 ವರ್ಷಗಳಿಂದ ಏಕಾಂತವಾಸದಲ್ಲೇ ಇರುವ ಜಪಾನಿನ ವ್ಯಕ್ತಿ: ಕಾರಣ?

10 ವರ್ಷಗಳಿಂದ ಏಕಾಂತವಾಸದಲ್ಲೇ ಇರುವ ಜಪಾನಿನ ವ್ಯಕ್ತಿ: ಕಾರಣ?

- Advertisement -
- Advertisement -

ಕರೊನಾ ಸಾಂಕ್ರಾಮಿಕ ಜಗತ್ತಿಗೆ ಕಾಲಿಟ್ಟ ಕಳೆದ ಒಂದುವರೆ ವರ್ಷದಲ್ಲಿ ಲಾಕ್‌ಡೌನ್, ಕ್ವಾರಂಟೈನ್, ಏಕಾಂತವಾಸಗಳು ಅತ್ಯಂತ ಸಾಮಾನ್ಯವಾಗಿ ಬಿಟ್ಟಿವೆ. ಜನ ಸಂಪರ್ಕಕ್ಕೆ ಬಾರದೇ ಮನೆಯಲ್ಲಿಯೇ ಉಳಿಯುವುದೂ ಸರ್ವೇ ಸಾಮಾನ್ಯವಾಗಿಬಿಟ್ಟಿದೆ. ಜಪಾನಿನ ವ್ಯಕ್ತಿಯೊಬ್ಬ ಕರೊನಾ ಜಗತ್ತಿಗೆ ಕಾಲಿಡುವ ಹಲವು ವರ್ಷ ಮೊದಲೇ ಏಕಾಂತವಾಸದಲ್ಲಿ ಇದ್ದಾರೆ. ಅದು ಕೂಡ ಬರೋಬ್ಬರಿ 10 ವರ್ಷಗಳ ಕಾಲ. ಜೈಲುವಾಸ ಅಥವಾ ಯಾವುದೋ ಖಾಯಿಲೆಯ ಕಾರಣಕ್ಕಾಗಿ ಸೆಲ್ಪ್ ಐಸೋಲೇಶನ್ ಅಲ್ಲ. ವಿಶ್ವ ಪ್ರಸಿದ್ಧ ಬರಹಗಾರ ಗೇಬ್ರಿಯಲ್ ಗಾರ್ಸಿಯಾ ಮಾರ್ಕ್ವೆಜ್ ನೂರು ವರ್ಷಗಳ ಏಕಾಂತ ಎಂಬ ಕೃತಿ ಬರೆದಿದ್ದರು. ಆದರೆ ಇದು ಕತೆಯಲ್ಲ. ನಿಜಜೀವನದಲ್ಲಿ 10 ವರ್ಷಗಳಿಂದ ಏಕಾಂತದಲ್ಲಿರುವ ವ್ಯಕ್ತಿಯ ಜೀವನ. ನಂಬಲಿಕ್ಕೆ ಆಶ್ಚರ್ಯವಾದರೂ ಸತ್ಯ.

ಜಪಾನಿನಲ್ಲಿ ಜಾಗತಿಕ ಕರೊನಾ ಬಿಕ್ಕಟ್ಟು ಕಾಣಿಸಿಕೊಳ್ಳುವ ಮೊದಲೇ ಏಕಾಂತವಾಸದ ಸಂಸ್ಕೃತಿ ಇದೆ. ಸುಮಾರು 10 ಲಕ್ಷ ಜನ ಈ ರೀತಿ ಏಕಾಂತವಾಸದಲ್ಲಿ ಇದ್ದಾರೆ ಎಂದು ಜಪಾನಿನ ಆರೋಗ್ಯ ಇಲಾಖೆ ಹೇಳಿದೆ. ಹೀಗೆ ಏಕಾಂತವಾಸದಲ್ಲಿ ಇರುವ ಪದ್ಧತಿಗಳನ್ನು ಹಿಕಿಕೊಮೋರಿ ಎಂದು ಕರೆಯಲಾಗುತ್ತದೆ. ಕೆಲವರು ವರ್ಷ ತಿಂಗಳು ಐಸೋಲೇಶನ್‌ನಲ್ಲಿ ಇರುತ್ತಾರೆ. ನಿಟೋ ಸೌಜಿ ಎನ್ನುವ ಕಲಾವಿದ ಬರೋಬ್ಬರಿ 10 ವರ್ಷದಿಂದ ಏಕಾಂತವಾಸವನ್ನು ಅನುಭವಿಸುತ್ತಿದ್ದಾರೆ. ವೃತ್ತಿಯಿಂದ ಗೇಮ್ ಡೆವಲಪರ್ ಆಗಿರುವ ನಿಟೋ ಸೌಜಿ ಮೂಲತಃ ಸಂಗೀತ ಕಲಾವಿದ. ಎರಡು ತಿಂಗಳಿಗೊಮ್ಮೆ ಕ್ಷೌರಕ್ಕಾಗಿ ಮಾತ್ರ ನಿಟೋ ಮನೆ ಬಿಟ್ಟು ಹೊರಬಂದು ಜಗತ್ತನ್ನು ನೋಡುತ್ತಾರೆ.

ನಿಟೋ ಸೌಜಿ ಟೋಕಿಯೋ ವಿಶ್ವ ವಿದ್ಯಾಲಯದ ಪದವೀಧರನಾಗಿ ಹೊರ ಬಂದಾಗ ನಿರುದ್ಯೋಗ ಸಮಸ್ಯೆ ಎದುರಾಯಿತು. ಚಿತ್ರಕಲೆಯನ್ನು ಅಭ್ಯಾಸಿಸುವ ಸಲುವಾಗಿ ನಿಟೋ 3 ವರ್ಷಗಳ ಕಾಲ ಮನೆಯಿಂದ ಆಚೆಗೇ ಬರಲಿಲ್ಲ. ನಂತರ ಅದು ಅವರ ಜೀವನ ಶೈಲಿಯಾಯಿತು. ಆರ್ಥಿಕವಾಗಿ ಸ್ವಾವಲಂಬಿಯಾಗಬೇಕೆಂಬ ಪ್ರಯತ್ನದಲ್ಲಿ ಆತ ತಮ್ಮ ಮನೆಯಲ್ಲಿ ಸತತವಾಗಿ ಕಲೆಯ ಅಭ್ಯಾಸ ನಡೆಸಿದ್ದಾರೆ. ಇವರಿಗೆ ಬೇಕಾದ ಅಗತ್ಯ ವಸ್ತುಗಳನ್ನು ಮನೆಗೆ ತಲುಪುವ ವ್ಯವಸ್ಥೆಯನ್ನು ಮಾಡಿಕೊಂಡಿದ್ದಾರೆ. ಸದ್ಯ ತಮ್ಮ ಚಿಕ್ಕಮ್ಮನ ಅಪಾರ್ಟಮೆಂಟ್‌ನಲ್ಲಿ ವಾಸವಿದ್ದು ತಮ್ಮ ಏಕಾಂತವಾಸದ ಅನುಭವವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ನಿಟೋ ಬೆಳಿಗ್ಗೆ 11 ಗಂಟೆಗೆ ತಮ್ಮ ದಿನವನ್ನು ಆರಂಭಿಸಿದರೆ ತಿಂಡಿ ತಿಂದು ಇಮೇಲ್‌ಗಳನ್ನು ಚೆಕ್ ಮಾಡಿ, ಸುದ್ದಿಗಳನ್ನು ನೋಡಿ, ಕೆಲಸಕ್ಕೆ  ಸಂಬಂಧಿಸಿದ  ಸಂದೇಶಗಳಿಗೆ ಪ್ರತಿಕ್ರಿಯಿಸಿ ಮತ್ತೆ ತಮ್ಮ ಕೆಲಸವನ್ನು ಆರಂಭಿಸಿದರೆ ಬಿಡುವಾಗುವುದು ಸಂಜೆ. ಒಂದಷ್ಟು ಕಾಲ ದೈಹಿಕ ವ್ಯಾಯಾಮ, ರಾತ್ರಿಯ ಊಟ ಮತ್ತೆ ಗೇಮ್ ಡೆವಲಪ್‌ಮೆಂಟ್ ಕೆಲಸ. ನಡುವೆ ಹೊರ ಜಗತ್ತಿನೊಂದಿಗೆ ನೇರ ಸಂಪರ್ಕವಿಲ್ಲ. ಹೊರಗಡೆ ಸುತ್ತಾಟವಿಲ್ಲ. ಮತ್ತೆ ರಾತ್ರಿ ತಮ್ಮ ಕಲೆಯ ಅಭ್ಯಾಸಕ್ಕೆ ತೊಡಗಿದರೆ ಬೆಳಗಿನ ಜಾವ 4 ಗಂಟೆಗೆ ನಿದ್ರೆಗೆ ಜಾರುತ್ತಾರೆ.

ಎರಡು ಸಾವಿರದ ಹದಿನೈದರಿಂದ ನಿಟೋ ಸೌಜಿ ಇಂಗ್ಲೀಷ್ ಭಾಷೆಯ ಕಲಿಕೆಯಲ್ಲಿ ತೊಡಗಿದ್ದಾರೆ. ಕಂಪ್ಯೂಟರ್ ಮತ್ತು ಮೊಬೈಲ್ ಗೇಮ್‌ಗಳನ್ನು ಅಭಿವೃದ್ಧಿಪಡಿಸುವುದರಲ್ಲಿ ತೊಡಗಿಸಿಕೊಂಡಿದ್ದಾರೆ. ಸ್ವಂತ ಜೀವನದ ಪ್ರೇರಣೆಯಿಂದ ಅವರು ಪುಲ್ ಸ್ಟೇ ಎಂಬ ಡಿಜಿಟಲ್ ಗೇಮ್ ಅನ್ನು ಅಭಿವೃದ್ಧಿಪಡಿಸಿದ್ದಾರೆ. ಈ ಗೇಮ್ 2020 ಅಕ್ಟೋಬರ್‌ನಲ್ಲಿ ಅಂತರ್ಜಾಲದಲ್ಲಿ ಲಭ್ಯವಿದೆ. ಗೇಮ್ ಮೂಲಕ ನಿಟೋ ತಮ್ಮ ಜೀವನದ ಅನುಭವಗಳನ್ನು ಹಿಡಿದಿಟ್ಟಿದ್ದಾರೆ.

ನಿಟೋ ಸೌಜಿ ಯೂಟ್ಯೂಬ್ ಚಾನೆಲ್ ಒಂದನ್ನು ನಡೆಸುತ್ತಿದ್ದು ಸುಮಾರು 2 ಲಕ್ಷ ಜನರು ಅವರ ಅನುಭವಗಳನ್ನು ಯೂಟ್ಯೂಬ್‌ನಲ್ಲಿ ವೀಕ್ಷಿಸುತ್ತಾರೆ. ಅವರಿಂದ ಕಲೆ, ತಂತ್ರಜ್ಞಾನದ ಮಾಹಿತಿಯನ್ನು ಪಡೆಯುತ್ತಾರೆ.

ನಿಟೋ ಸೌಜಿ ಈಗ ಸಂಪೂರ್ಣ ಜೀವನವನ್ನು ತಮ್ಮ ಪ್ರಾಜೆಕ್ಟ್ಗಾಗಿ ಮೀಸಲಿಟ್ಟಿದ್ದಾರೆ. ದೀರ್ಘಾವಧಿಯಲ್ಲೊ ಕೆಲಸಮಾಡುವುದು ಇದರಿಂದ ಕಷ್ಟವಾಗಿದೆ ಎನ್ನುತ್ತಾರೆ.


ಇದನ್ನೂ ಓದಿ : ಬಂಗಾಳ ರಾಜ್ಯಪಾಲರನ್ನು ಕಿತ್ತು ಹಾಕಲು ಒಕ್ಕೂಟ ಸರ್ಕಾರಕ್ಕೆ ಪತ್ರ ಬರೆದ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...