Homeಅಂತರಾಷ್ಟ್ರೀಯ10 ವರ್ಷಗಳಿಂದ ಏಕಾಂತವಾಸದಲ್ಲೇ ಇರುವ ಜಪಾನಿನ ವ್ಯಕ್ತಿ: ಕಾರಣ?

10 ವರ್ಷಗಳಿಂದ ಏಕಾಂತವಾಸದಲ್ಲೇ ಇರುವ ಜಪಾನಿನ ವ್ಯಕ್ತಿ: ಕಾರಣ?

- Advertisement -
- Advertisement -

ಕರೊನಾ ಸಾಂಕ್ರಾಮಿಕ ಜಗತ್ತಿಗೆ ಕಾಲಿಟ್ಟ ಕಳೆದ ಒಂದುವರೆ ವರ್ಷದಲ್ಲಿ ಲಾಕ್‌ಡೌನ್, ಕ್ವಾರಂಟೈನ್, ಏಕಾಂತವಾಸಗಳು ಅತ್ಯಂತ ಸಾಮಾನ್ಯವಾಗಿ ಬಿಟ್ಟಿವೆ. ಜನ ಸಂಪರ್ಕಕ್ಕೆ ಬಾರದೇ ಮನೆಯಲ್ಲಿಯೇ ಉಳಿಯುವುದೂ ಸರ್ವೇ ಸಾಮಾನ್ಯವಾಗಿಬಿಟ್ಟಿದೆ. ಜಪಾನಿನ ವ್ಯಕ್ತಿಯೊಬ್ಬ ಕರೊನಾ ಜಗತ್ತಿಗೆ ಕಾಲಿಡುವ ಹಲವು ವರ್ಷ ಮೊದಲೇ ಏಕಾಂತವಾಸದಲ್ಲಿ ಇದ್ದಾರೆ. ಅದು ಕೂಡ ಬರೋಬ್ಬರಿ 10 ವರ್ಷಗಳ ಕಾಲ. ಜೈಲುವಾಸ ಅಥವಾ ಯಾವುದೋ ಖಾಯಿಲೆಯ ಕಾರಣಕ್ಕಾಗಿ ಸೆಲ್ಪ್ ಐಸೋಲೇಶನ್ ಅಲ್ಲ. ವಿಶ್ವ ಪ್ರಸಿದ್ಧ ಬರಹಗಾರ ಗೇಬ್ರಿಯಲ್ ಗಾರ್ಸಿಯಾ ಮಾರ್ಕ್ವೆಜ್ ನೂರು ವರ್ಷಗಳ ಏಕಾಂತ ಎಂಬ ಕೃತಿ ಬರೆದಿದ್ದರು. ಆದರೆ ಇದು ಕತೆಯಲ್ಲ. ನಿಜಜೀವನದಲ್ಲಿ 10 ವರ್ಷಗಳಿಂದ ಏಕಾಂತದಲ್ಲಿರುವ ವ್ಯಕ್ತಿಯ ಜೀವನ. ನಂಬಲಿಕ್ಕೆ ಆಶ್ಚರ್ಯವಾದರೂ ಸತ್ಯ.

ಜಪಾನಿನಲ್ಲಿ ಜಾಗತಿಕ ಕರೊನಾ ಬಿಕ್ಕಟ್ಟು ಕಾಣಿಸಿಕೊಳ್ಳುವ ಮೊದಲೇ ಏಕಾಂತವಾಸದ ಸಂಸ್ಕೃತಿ ಇದೆ. ಸುಮಾರು 10 ಲಕ್ಷ ಜನ ಈ ರೀತಿ ಏಕಾಂತವಾಸದಲ್ಲಿ ಇದ್ದಾರೆ ಎಂದು ಜಪಾನಿನ ಆರೋಗ್ಯ ಇಲಾಖೆ ಹೇಳಿದೆ. ಹೀಗೆ ಏಕಾಂತವಾಸದಲ್ಲಿ ಇರುವ ಪದ್ಧತಿಗಳನ್ನು ಹಿಕಿಕೊಮೋರಿ ಎಂದು ಕರೆಯಲಾಗುತ್ತದೆ. ಕೆಲವರು ವರ್ಷ ತಿಂಗಳು ಐಸೋಲೇಶನ್‌ನಲ್ಲಿ ಇರುತ್ತಾರೆ. ನಿಟೋ ಸೌಜಿ ಎನ್ನುವ ಕಲಾವಿದ ಬರೋಬ್ಬರಿ 10 ವರ್ಷದಿಂದ ಏಕಾಂತವಾಸವನ್ನು ಅನುಭವಿಸುತ್ತಿದ್ದಾರೆ. ವೃತ್ತಿಯಿಂದ ಗೇಮ್ ಡೆವಲಪರ್ ಆಗಿರುವ ನಿಟೋ ಸೌಜಿ ಮೂಲತಃ ಸಂಗೀತ ಕಲಾವಿದ. ಎರಡು ತಿಂಗಳಿಗೊಮ್ಮೆ ಕ್ಷೌರಕ್ಕಾಗಿ ಮಾತ್ರ ನಿಟೋ ಮನೆ ಬಿಟ್ಟು ಹೊರಬಂದು ಜಗತ್ತನ್ನು ನೋಡುತ್ತಾರೆ.

ನಿಟೋ ಸೌಜಿ ಟೋಕಿಯೋ ವಿಶ್ವ ವಿದ್ಯಾಲಯದ ಪದವೀಧರನಾಗಿ ಹೊರ ಬಂದಾಗ ನಿರುದ್ಯೋಗ ಸಮಸ್ಯೆ ಎದುರಾಯಿತು. ಚಿತ್ರಕಲೆಯನ್ನು ಅಭ್ಯಾಸಿಸುವ ಸಲುವಾಗಿ ನಿಟೋ 3 ವರ್ಷಗಳ ಕಾಲ ಮನೆಯಿಂದ ಆಚೆಗೇ ಬರಲಿಲ್ಲ. ನಂತರ ಅದು ಅವರ ಜೀವನ ಶೈಲಿಯಾಯಿತು. ಆರ್ಥಿಕವಾಗಿ ಸ್ವಾವಲಂಬಿಯಾಗಬೇಕೆಂಬ ಪ್ರಯತ್ನದಲ್ಲಿ ಆತ ತಮ್ಮ ಮನೆಯಲ್ಲಿ ಸತತವಾಗಿ ಕಲೆಯ ಅಭ್ಯಾಸ ನಡೆಸಿದ್ದಾರೆ. ಇವರಿಗೆ ಬೇಕಾದ ಅಗತ್ಯ ವಸ್ತುಗಳನ್ನು ಮನೆಗೆ ತಲುಪುವ ವ್ಯವಸ್ಥೆಯನ್ನು ಮಾಡಿಕೊಂಡಿದ್ದಾರೆ. ಸದ್ಯ ತಮ್ಮ ಚಿಕ್ಕಮ್ಮನ ಅಪಾರ್ಟಮೆಂಟ್‌ನಲ್ಲಿ ವಾಸವಿದ್ದು ತಮ್ಮ ಏಕಾಂತವಾಸದ ಅನುಭವವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ನಿಟೋ ಬೆಳಿಗ್ಗೆ 11 ಗಂಟೆಗೆ ತಮ್ಮ ದಿನವನ್ನು ಆರಂಭಿಸಿದರೆ ತಿಂಡಿ ತಿಂದು ಇಮೇಲ್‌ಗಳನ್ನು ಚೆಕ್ ಮಾಡಿ, ಸುದ್ದಿಗಳನ್ನು ನೋಡಿ, ಕೆಲಸಕ್ಕೆ  ಸಂಬಂಧಿಸಿದ  ಸಂದೇಶಗಳಿಗೆ ಪ್ರತಿಕ್ರಿಯಿಸಿ ಮತ್ತೆ ತಮ್ಮ ಕೆಲಸವನ್ನು ಆರಂಭಿಸಿದರೆ ಬಿಡುವಾಗುವುದು ಸಂಜೆ. ಒಂದಷ್ಟು ಕಾಲ ದೈಹಿಕ ವ್ಯಾಯಾಮ, ರಾತ್ರಿಯ ಊಟ ಮತ್ತೆ ಗೇಮ್ ಡೆವಲಪ್‌ಮೆಂಟ್ ಕೆಲಸ. ನಡುವೆ ಹೊರ ಜಗತ್ತಿನೊಂದಿಗೆ ನೇರ ಸಂಪರ್ಕವಿಲ್ಲ. ಹೊರಗಡೆ ಸುತ್ತಾಟವಿಲ್ಲ. ಮತ್ತೆ ರಾತ್ರಿ ತಮ್ಮ ಕಲೆಯ ಅಭ್ಯಾಸಕ್ಕೆ ತೊಡಗಿದರೆ ಬೆಳಗಿನ ಜಾವ 4 ಗಂಟೆಗೆ ನಿದ್ರೆಗೆ ಜಾರುತ್ತಾರೆ.

ಎರಡು ಸಾವಿರದ ಹದಿನೈದರಿಂದ ನಿಟೋ ಸೌಜಿ ಇಂಗ್ಲೀಷ್ ಭಾಷೆಯ ಕಲಿಕೆಯಲ್ಲಿ ತೊಡಗಿದ್ದಾರೆ. ಕಂಪ್ಯೂಟರ್ ಮತ್ತು ಮೊಬೈಲ್ ಗೇಮ್‌ಗಳನ್ನು ಅಭಿವೃದ್ಧಿಪಡಿಸುವುದರಲ್ಲಿ ತೊಡಗಿಸಿಕೊಂಡಿದ್ದಾರೆ. ಸ್ವಂತ ಜೀವನದ ಪ್ರೇರಣೆಯಿಂದ ಅವರು ಪುಲ್ ಸ್ಟೇ ಎಂಬ ಡಿಜಿಟಲ್ ಗೇಮ್ ಅನ್ನು ಅಭಿವೃದ್ಧಿಪಡಿಸಿದ್ದಾರೆ. ಈ ಗೇಮ್ 2020 ಅಕ್ಟೋಬರ್‌ನಲ್ಲಿ ಅಂತರ್ಜಾಲದಲ್ಲಿ ಲಭ್ಯವಿದೆ. ಗೇಮ್ ಮೂಲಕ ನಿಟೋ ತಮ್ಮ ಜೀವನದ ಅನುಭವಗಳನ್ನು ಹಿಡಿದಿಟ್ಟಿದ್ದಾರೆ.

ನಿಟೋ ಸೌಜಿ ಯೂಟ್ಯೂಬ್ ಚಾನೆಲ್ ಒಂದನ್ನು ನಡೆಸುತ್ತಿದ್ದು ಸುಮಾರು 2 ಲಕ್ಷ ಜನರು ಅವರ ಅನುಭವಗಳನ್ನು ಯೂಟ್ಯೂಬ್‌ನಲ್ಲಿ ವೀಕ್ಷಿಸುತ್ತಾರೆ. ಅವರಿಂದ ಕಲೆ, ತಂತ್ರಜ್ಞಾನದ ಮಾಹಿತಿಯನ್ನು ಪಡೆಯುತ್ತಾರೆ.

ನಿಟೋ ಸೌಜಿ ಈಗ ಸಂಪೂರ್ಣ ಜೀವನವನ್ನು ತಮ್ಮ ಪ್ರಾಜೆಕ್ಟ್ಗಾಗಿ ಮೀಸಲಿಟ್ಟಿದ್ದಾರೆ. ದೀರ್ಘಾವಧಿಯಲ್ಲೊ ಕೆಲಸಮಾಡುವುದು ಇದರಿಂದ ಕಷ್ಟವಾಗಿದೆ ಎನ್ನುತ್ತಾರೆ.


ಇದನ್ನೂ ಓದಿ : ಬಂಗಾಳ ರಾಜ್ಯಪಾಲರನ್ನು ಕಿತ್ತು ಹಾಕಲು ಒಕ್ಕೂಟ ಸರ್ಕಾರಕ್ಕೆ ಪತ್ರ ಬರೆದ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...