Homeಅಂತರಾಷ್ಟ್ರೀಯ10 ವರ್ಷಗಳಿಂದ ಏಕಾಂತವಾಸದಲ್ಲೇ ಇರುವ ಜಪಾನಿನ ವ್ಯಕ್ತಿ: ಕಾರಣ?

10 ವರ್ಷಗಳಿಂದ ಏಕಾಂತವಾಸದಲ್ಲೇ ಇರುವ ಜಪಾನಿನ ವ್ಯಕ್ತಿ: ಕಾರಣ?

- Advertisement -
- Advertisement -

ಕರೊನಾ ಸಾಂಕ್ರಾಮಿಕ ಜಗತ್ತಿಗೆ ಕಾಲಿಟ್ಟ ಕಳೆದ ಒಂದುವರೆ ವರ್ಷದಲ್ಲಿ ಲಾಕ್‌ಡೌನ್, ಕ್ವಾರಂಟೈನ್, ಏಕಾಂತವಾಸಗಳು ಅತ್ಯಂತ ಸಾಮಾನ್ಯವಾಗಿ ಬಿಟ್ಟಿವೆ. ಜನ ಸಂಪರ್ಕಕ್ಕೆ ಬಾರದೇ ಮನೆಯಲ್ಲಿಯೇ ಉಳಿಯುವುದೂ ಸರ್ವೇ ಸಾಮಾನ್ಯವಾಗಿಬಿಟ್ಟಿದೆ. ಜಪಾನಿನ ವ್ಯಕ್ತಿಯೊಬ್ಬ ಕರೊನಾ ಜಗತ್ತಿಗೆ ಕಾಲಿಡುವ ಹಲವು ವರ್ಷ ಮೊದಲೇ ಏಕಾಂತವಾಸದಲ್ಲಿ ಇದ್ದಾರೆ. ಅದು ಕೂಡ ಬರೋಬ್ಬರಿ 10 ವರ್ಷಗಳ ಕಾಲ. ಜೈಲುವಾಸ ಅಥವಾ ಯಾವುದೋ ಖಾಯಿಲೆಯ ಕಾರಣಕ್ಕಾಗಿ ಸೆಲ್ಪ್ ಐಸೋಲೇಶನ್ ಅಲ್ಲ. ವಿಶ್ವ ಪ್ರಸಿದ್ಧ ಬರಹಗಾರ ಗೇಬ್ರಿಯಲ್ ಗಾರ್ಸಿಯಾ ಮಾರ್ಕ್ವೆಜ್ ನೂರು ವರ್ಷಗಳ ಏಕಾಂತ ಎಂಬ ಕೃತಿ ಬರೆದಿದ್ದರು. ಆದರೆ ಇದು ಕತೆಯಲ್ಲ. ನಿಜಜೀವನದಲ್ಲಿ 10 ವರ್ಷಗಳಿಂದ ಏಕಾಂತದಲ್ಲಿರುವ ವ್ಯಕ್ತಿಯ ಜೀವನ. ನಂಬಲಿಕ್ಕೆ ಆಶ್ಚರ್ಯವಾದರೂ ಸತ್ಯ.

ಜಪಾನಿನಲ್ಲಿ ಜಾಗತಿಕ ಕರೊನಾ ಬಿಕ್ಕಟ್ಟು ಕಾಣಿಸಿಕೊಳ್ಳುವ ಮೊದಲೇ ಏಕಾಂತವಾಸದ ಸಂಸ್ಕೃತಿ ಇದೆ. ಸುಮಾರು 10 ಲಕ್ಷ ಜನ ಈ ರೀತಿ ಏಕಾಂತವಾಸದಲ್ಲಿ ಇದ್ದಾರೆ ಎಂದು ಜಪಾನಿನ ಆರೋಗ್ಯ ಇಲಾಖೆ ಹೇಳಿದೆ. ಹೀಗೆ ಏಕಾಂತವಾಸದಲ್ಲಿ ಇರುವ ಪದ್ಧತಿಗಳನ್ನು ಹಿಕಿಕೊಮೋರಿ ಎಂದು ಕರೆಯಲಾಗುತ್ತದೆ. ಕೆಲವರು ವರ್ಷ ತಿಂಗಳು ಐಸೋಲೇಶನ್‌ನಲ್ಲಿ ಇರುತ್ತಾರೆ. ನಿಟೋ ಸೌಜಿ ಎನ್ನುವ ಕಲಾವಿದ ಬರೋಬ್ಬರಿ 10 ವರ್ಷದಿಂದ ಏಕಾಂತವಾಸವನ್ನು ಅನುಭವಿಸುತ್ತಿದ್ದಾರೆ. ವೃತ್ತಿಯಿಂದ ಗೇಮ್ ಡೆವಲಪರ್ ಆಗಿರುವ ನಿಟೋ ಸೌಜಿ ಮೂಲತಃ ಸಂಗೀತ ಕಲಾವಿದ. ಎರಡು ತಿಂಗಳಿಗೊಮ್ಮೆ ಕ್ಷೌರಕ್ಕಾಗಿ ಮಾತ್ರ ನಿಟೋ ಮನೆ ಬಿಟ್ಟು ಹೊರಬಂದು ಜಗತ್ತನ್ನು ನೋಡುತ್ತಾರೆ.

ನಿಟೋ ಸೌಜಿ ಟೋಕಿಯೋ ವಿಶ್ವ ವಿದ್ಯಾಲಯದ ಪದವೀಧರನಾಗಿ ಹೊರ ಬಂದಾಗ ನಿರುದ್ಯೋಗ ಸಮಸ್ಯೆ ಎದುರಾಯಿತು. ಚಿತ್ರಕಲೆಯನ್ನು ಅಭ್ಯಾಸಿಸುವ ಸಲುವಾಗಿ ನಿಟೋ 3 ವರ್ಷಗಳ ಕಾಲ ಮನೆಯಿಂದ ಆಚೆಗೇ ಬರಲಿಲ್ಲ. ನಂತರ ಅದು ಅವರ ಜೀವನ ಶೈಲಿಯಾಯಿತು. ಆರ್ಥಿಕವಾಗಿ ಸ್ವಾವಲಂಬಿಯಾಗಬೇಕೆಂಬ ಪ್ರಯತ್ನದಲ್ಲಿ ಆತ ತಮ್ಮ ಮನೆಯಲ್ಲಿ ಸತತವಾಗಿ ಕಲೆಯ ಅಭ್ಯಾಸ ನಡೆಸಿದ್ದಾರೆ. ಇವರಿಗೆ ಬೇಕಾದ ಅಗತ್ಯ ವಸ್ತುಗಳನ್ನು ಮನೆಗೆ ತಲುಪುವ ವ್ಯವಸ್ಥೆಯನ್ನು ಮಾಡಿಕೊಂಡಿದ್ದಾರೆ. ಸದ್ಯ ತಮ್ಮ ಚಿಕ್ಕಮ್ಮನ ಅಪಾರ್ಟಮೆಂಟ್‌ನಲ್ಲಿ ವಾಸವಿದ್ದು ತಮ್ಮ ಏಕಾಂತವಾಸದ ಅನುಭವವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ನಿಟೋ ಬೆಳಿಗ್ಗೆ 11 ಗಂಟೆಗೆ ತಮ್ಮ ದಿನವನ್ನು ಆರಂಭಿಸಿದರೆ ತಿಂಡಿ ತಿಂದು ಇಮೇಲ್‌ಗಳನ್ನು ಚೆಕ್ ಮಾಡಿ, ಸುದ್ದಿಗಳನ್ನು ನೋಡಿ, ಕೆಲಸಕ್ಕೆ  ಸಂಬಂಧಿಸಿದ  ಸಂದೇಶಗಳಿಗೆ ಪ್ರತಿಕ್ರಿಯಿಸಿ ಮತ್ತೆ ತಮ್ಮ ಕೆಲಸವನ್ನು ಆರಂಭಿಸಿದರೆ ಬಿಡುವಾಗುವುದು ಸಂಜೆ. ಒಂದಷ್ಟು ಕಾಲ ದೈಹಿಕ ವ್ಯಾಯಾಮ, ರಾತ್ರಿಯ ಊಟ ಮತ್ತೆ ಗೇಮ್ ಡೆವಲಪ್‌ಮೆಂಟ್ ಕೆಲಸ. ನಡುವೆ ಹೊರ ಜಗತ್ತಿನೊಂದಿಗೆ ನೇರ ಸಂಪರ್ಕವಿಲ್ಲ. ಹೊರಗಡೆ ಸುತ್ತಾಟವಿಲ್ಲ. ಮತ್ತೆ ರಾತ್ರಿ ತಮ್ಮ ಕಲೆಯ ಅಭ್ಯಾಸಕ್ಕೆ ತೊಡಗಿದರೆ ಬೆಳಗಿನ ಜಾವ 4 ಗಂಟೆಗೆ ನಿದ್ರೆಗೆ ಜಾರುತ್ತಾರೆ.

ಎರಡು ಸಾವಿರದ ಹದಿನೈದರಿಂದ ನಿಟೋ ಸೌಜಿ ಇಂಗ್ಲೀಷ್ ಭಾಷೆಯ ಕಲಿಕೆಯಲ್ಲಿ ತೊಡಗಿದ್ದಾರೆ. ಕಂಪ್ಯೂಟರ್ ಮತ್ತು ಮೊಬೈಲ್ ಗೇಮ್‌ಗಳನ್ನು ಅಭಿವೃದ್ಧಿಪಡಿಸುವುದರಲ್ಲಿ ತೊಡಗಿಸಿಕೊಂಡಿದ್ದಾರೆ. ಸ್ವಂತ ಜೀವನದ ಪ್ರೇರಣೆಯಿಂದ ಅವರು ಪುಲ್ ಸ್ಟೇ ಎಂಬ ಡಿಜಿಟಲ್ ಗೇಮ್ ಅನ್ನು ಅಭಿವೃದ್ಧಿಪಡಿಸಿದ್ದಾರೆ. ಈ ಗೇಮ್ 2020 ಅಕ್ಟೋಬರ್‌ನಲ್ಲಿ ಅಂತರ್ಜಾಲದಲ್ಲಿ ಲಭ್ಯವಿದೆ. ಗೇಮ್ ಮೂಲಕ ನಿಟೋ ತಮ್ಮ ಜೀವನದ ಅನುಭವಗಳನ್ನು ಹಿಡಿದಿಟ್ಟಿದ್ದಾರೆ.

ನಿಟೋ ಸೌಜಿ ಯೂಟ್ಯೂಬ್ ಚಾನೆಲ್ ಒಂದನ್ನು ನಡೆಸುತ್ತಿದ್ದು ಸುಮಾರು 2 ಲಕ್ಷ ಜನರು ಅವರ ಅನುಭವಗಳನ್ನು ಯೂಟ್ಯೂಬ್‌ನಲ್ಲಿ ವೀಕ್ಷಿಸುತ್ತಾರೆ. ಅವರಿಂದ ಕಲೆ, ತಂತ್ರಜ್ಞಾನದ ಮಾಹಿತಿಯನ್ನು ಪಡೆಯುತ್ತಾರೆ.

ನಿಟೋ ಸೌಜಿ ಈಗ ಸಂಪೂರ್ಣ ಜೀವನವನ್ನು ತಮ್ಮ ಪ್ರಾಜೆಕ್ಟ್ಗಾಗಿ ಮೀಸಲಿಟ್ಟಿದ್ದಾರೆ. ದೀರ್ಘಾವಧಿಯಲ್ಲೊ ಕೆಲಸಮಾಡುವುದು ಇದರಿಂದ ಕಷ್ಟವಾಗಿದೆ ಎನ್ನುತ್ತಾರೆ.


ಇದನ್ನೂ ಓದಿ : ಬಂಗಾಳ ರಾಜ್ಯಪಾಲರನ್ನು ಕಿತ್ತು ಹಾಕಲು ಒಕ್ಕೂಟ ಸರ್ಕಾರಕ್ಕೆ ಪತ್ರ ಬರೆದ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...