Homeಅಂತರಾಷ್ಟ್ರೀಯ10 ವರ್ಷಗಳಿಂದ ಏಕಾಂತವಾಸದಲ್ಲೇ ಇರುವ ಜಪಾನಿನ ವ್ಯಕ್ತಿ: ಕಾರಣ?

10 ವರ್ಷಗಳಿಂದ ಏಕಾಂತವಾಸದಲ್ಲೇ ಇರುವ ಜಪಾನಿನ ವ್ಯಕ್ತಿ: ಕಾರಣ?

- Advertisement -
- Advertisement -

ಕರೊನಾ ಸಾಂಕ್ರಾಮಿಕ ಜಗತ್ತಿಗೆ ಕಾಲಿಟ್ಟ ಕಳೆದ ಒಂದುವರೆ ವರ್ಷದಲ್ಲಿ ಲಾಕ್‌ಡೌನ್, ಕ್ವಾರಂಟೈನ್, ಏಕಾಂತವಾಸಗಳು ಅತ್ಯಂತ ಸಾಮಾನ್ಯವಾಗಿ ಬಿಟ್ಟಿವೆ. ಜನ ಸಂಪರ್ಕಕ್ಕೆ ಬಾರದೇ ಮನೆಯಲ್ಲಿಯೇ ಉಳಿಯುವುದೂ ಸರ್ವೇ ಸಾಮಾನ್ಯವಾಗಿಬಿಟ್ಟಿದೆ. ಜಪಾನಿನ ವ್ಯಕ್ತಿಯೊಬ್ಬ ಕರೊನಾ ಜಗತ್ತಿಗೆ ಕಾಲಿಡುವ ಹಲವು ವರ್ಷ ಮೊದಲೇ ಏಕಾಂತವಾಸದಲ್ಲಿ ಇದ್ದಾರೆ. ಅದು ಕೂಡ ಬರೋಬ್ಬರಿ 10 ವರ್ಷಗಳ ಕಾಲ. ಜೈಲುವಾಸ ಅಥವಾ ಯಾವುದೋ ಖಾಯಿಲೆಯ ಕಾರಣಕ್ಕಾಗಿ ಸೆಲ್ಪ್ ಐಸೋಲೇಶನ್ ಅಲ್ಲ. ವಿಶ್ವ ಪ್ರಸಿದ್ಧ ಬರಹಗಾರ ಗೇಬ್ರಿಯಲ್ ಗಾರ್ಸಿಯಾ ಮಾರ್ಕ್ವೆಜ್ ನೂರು ವರ್ಷಗಳ ಏಕಾಂತ ಎಂಬ ಕೃತಿ ಬರೆದಿದ್ದರು. ಆದರೆ ಇದು ಕತೆಯಲ್ಲ. ನಿಜಜೀವನದಲ್ಲಿ 10 ವರ್ಷಗಳಿಂದ ಏಕಾಂತದಲ್ಲಿರುವ ವ್ಯಕ್ತಿಯ ಜೀವನ. ನಂಬಲಿಕ್ಕೆ ಆಶ್ಚರ್ಯವಾದರೂ ಸತ್ಯ.

ಜಪಾನಿನಲ್ಲಿ ಜಾಗತಿಕ ಕರೊನಾ ಬಿಕ್ಕಟ್ಟು ಕಾಣಿಸಿಕೊಳ್ಳುವ ಮೊದಲೇ ಏಕಾಂತವಾಸದ ಸಂಸ್ಕೃತಿ ಇದೆ. ಸುಮಾರು 10 ಲಕ್ಷ ಜನ ಈ ರೀತಿ ಏಕಾಂತವಾಸದಲ್ಲಿ ಇದ್ದಾರೆ ಎಂದು ಜಪಾನಿನ ಆರೋಗ್ಯ ಇಲಾಖೆ ಹೇಳಿದೆ. ಹೀಗೆ ಏಕಾಂತವಾಸದಲ್ಲಿ ಇರುವ ಪದ್ಧತಿಗಳನ್ನು ಹಿಕಿಕೊಮೋರಿ ಎಂದು ಕರೆಯಲಾಗುತ್ತದೆ. ಕೆಲವರು ವರ್ಷ ತಿಂಗಳು ಐಸೋಲೇಶನ್‌ನಲ್ಲಿ ಇರುತ್ತಾರೆ. ನಿಟೋ ಸೌಜಿ ಎನ್ನುವ ಕಲಾವಿದ ಬರೋಬ್ಬರಿ 10 ವರ್ಷದಿಂದ ಏಕಾಂತವಾಸವನ್ನು ಅನುಭವಿಸುತ್ತಿದ್ದಾರೆ. ವೃತ್ತಿಯಿಂದ ಗೇಮ್ ಡೆವಲಪರ್ ಆಗಿರುವ ನಿಟೋ ಸೌಜಿ ಮೂಲತಃ ಸಂಗೀತ ಕಲಾವಿದ. ಎರಡು ತಿಂಗಳಿಗೊಮ್ಮೆ ಕ್ಷೌರಕ್ಕಾಗಿ ಮಾತ್ರ ನಿಟೋ ಮನೆ ಬಿಟ್ಟು ಹೊರಬಂದು ಜಗತ್ತನ್ನು ನೋಡುತ್ತಾರೆ.

ನಿಟೋ ಸೌಜಿ ಟೋಕಿಯೋ ವಿಶ್ವ ವಿದ್ಯಾಲಯದ ಪದವೀಧರನಾಗಿ ಹೊರ ಬಂದಾಗ ನಿರುದ್ಯೋಗ ಸಮಸ್ಯೆ ಎದುರಾಯಿತು. ಚಿತ್ರಕಲೆಯನ್ನು ಅಭ್ಯಾಸಿಸುವ ಸಲುವಾಗಿ ನಿಟೋ 3 ವರ್ಷಗಳ ಕಾಲ ಮನೆಯಿಂದ ಆಚೆಗೇ ಬರಲಿಲ್ಲ. ನಂತರ ಅದು ಅವರ ಜೀವನ ಶೈಲಿಯಾಯಿತು. ಆರ್ಥಿಕವಾಗಿ ಸ್ವಾವಲಂಬಿಯಾಗಬೇಕೆಂಬ ಪ್ರಯತ್ನದಲ್ಲಿ ಆತ ತಮ್ಮ ಮನೆಯಲ್ಲಿ ಸತತವಾಗಿ ಕಲೆಯ ಅಭ್ಯಾಸ ನಡೆಸಿದ್ದಾರೆ. ಇವರಿಗೆ ಬೇಕಾದ ಅಗತ್ಯ ವಸ್ತುಗಳನ್ನು ಮನೆಗೆ ತಲುಪುವ ವ್ಯವಸ್ಥೆಯನ್ನು ಮಾಡಿಕೊಂಡಿದ್ದಾರೆ. ಸದ್ಯ ತಮ್ಮ ಚಿಕ್ಕಮ್ಮನ ಅಪಾರ್ಟಮೆಂಟ್‌ನಲ್ಲಿ ವಾಸವಿದ್ದು ತಮ್ಮ ಏಕಾಂತವಾಸದ ಅನುಭವವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ನಿಟೋ ಬೆಳಿಗ್ಗೆ 11 ಗಂಟೆಗೆ ತಮ್ಮ ದಿನವನ್ನು ಆರಂಭಿಸಿದರೆ ತಿಂಡಿ ತಿಂದು ಇಮೇಲ್‌ಗಳನ್ನು ಚೆಕ್ ಮಾಡಿ, ಸುದ್ದಿಗಳನ್ನು ನೋಡಿ, ಕೆಲಸಕ್ಕೆ  ಸಂಬಂಧಿಸಿದ  ಸಂದೇಶಗಳಿಗೆ ಪ್ರತಿಕ್ರಿಯಿಸಿ ಮತ್ತೆ ತಮ್ಮ ಕೆಲಸವನ್ನು ಆರಂಭಿಸಿದರೆ ಬಿಡುವಾಗುವುದು ಸಂಜೆ. ಒಂದಷ್ಟು ಕಾಲ ದೈಹಿಕ ವ್ಯಾಯಾಮ, ರಾತ್ರಿಯ ಊಟ ಮತ್ತೆ ಗೇಮ್ ಡೆವಲಪ್‌ಮೆಂಟ್ ಕೆಲಸ. ನಡುವೆ ಹೊರ ಜಗತ್ತಿನೊಂದಿಗೆ ನೇರ ಸಂಪರ್ಕವಿಲ್ಲ. ಹೊರಗಡೆ ಸುತ್ತಾಟವಿಲ್ಲ. ಮತ್ತೆ ರಾತ್ರಿ ತಮ್ಮ ಕಲೆಯ ಅಭ್ಯಾಸಕ್ಕೆ ತೊಡಗಿದರೆ ಬೆಳಗಿನ ಜಾವ 4 ಗಂಟೆಗೆ ನಿದ್ರೆಗೆ ಜಾರುತ್ತಾರೆ.

ಎರಡು ಸಾವಿರದ ಹದಿನೈದರಿಂದ ನಿಟೋ ಸೌಜಿ ಇಂಗ್ಲೀಷ್ ಭಾಷೆಯ ಕಲಿಕೆಯಲ್ಲಿ ತೊಡಗಿದ್ದಾರೆ. ಕಂಪ್ಯೂಟರ್ ಮತ್ತು ಮೊಬೈಲ್ ಗೇಮ್‌ಗಳನ್ನು ಅಭಿವೃದ್ಧಿಪಡಿಸುವುದರಲ್ಲಿ ತೊಡಗಿಸಿಕೊಂಡಿದ್ದಾರೆ. ಸ್ವಂತ ಜೀವನದ ಪ್ರೇರಣೆಯಿಂದ ಅವರು ಪುಲ್ ಸ್ಟೇ ಎಂಬ ಡಿಜಿಟಲ್ ಗೇಮ್ ಅನ್ನು ಅಭಿವೃದ್ಧಿಪಡಿಸಿದ್ದಾರೆ. ಈ ಗೇಮ್ 2020 ಅಕ್ಟೋಬರ್‌ನಲ್ಲಿ ಅಂತರ್ಜಾಲದಲ್ಲಿ ಲಭ್ಯವಿದೆ. ಗೇಮ್ ಮೂಲಕ ನಿಟೋ ತಮ್ಮ ಜೀವನದ ಅನುಭವಗಳನ್ನು ಹಿಡಿದಿಟ್ಟಿದ್ದಾರೆ.

ನಿಟೋ ಸೌಜಿ ಯೂಟ್ಯೂಬ್ ಚಾನೆಲ್ ಒಂದನ್ನು ನಡೆಸುತ್ತಿದ್ದು ಸುಮಾರು 2 ಲಕ್ಷ ಜನರು ಅವರ ಅನುಭವಗಳನ್ನು ಯೂಟ್ಯೂಬ್‌ನಲ್ಲಿ ವೀಕ್ಷಿಸುತ್ತಾರೆ. ಅವರಿಂದ ಕಲೆ, ತಂತ್ರಜ್ಞಾನದ ಮಾಹಿತಿಯನ್ನು ಪಡೆಯುತ್ತಾರೆ.

ನಿಟೋ ಸೌಜಿ ಈಗ ಸಂಪೂರ್ಣ ಜೀವನವನ್ನು ತಮ್ಮ ಪ್ರಾಜೆಕ್ಟ್ಗಾಗಿ ಮೀಸಲಿಟ್ಟಿದ್ದಾರೆ. ದೀರ್ಘಾವಧಿಯಲ್ಲೊ ಕೆಲಸಮಾಡುವುದು ಇದರಿಂದ ಕಷ್ಟವಾಗಿದೆ ಎನ್ನುತ್ತಾರೆ.


ಇದನ್ನೂ ಓದಿ : ಬಂಗಾಳ ರಾಜ್ಯಪಾಲರನ್ನು ಕಿತ್ತು ಹಾಕಲು ಒಕ್ಕೂಟ ಸರ್ಕಾರಕ್ಕೆ ಪತ್ರ ಬರೆದ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...