Homeಅಂತರಾಷ್ಟ್ರೀಯ10 ವರ್ಷಗಳಿಂದ ಏಕಾಂತವಾಸದಲ್ಲೇ ಇರುವ ಜಪಾನಿನ ವ್ಯಕ್ತಿ: ಕಾರಣ?

10 ವರ್ಷಗಳಿಂದ ಏಕಾಂತವಾಸದಲ್ಲೇ ಇರುವ ಜಪಾನಿನ ವ್ಯಕ್ತಿ: ಕಾರಣ?

- Advertisement -
- Advertisement -

ಕರೊನಾ ಸಾಂಕ್ರಾಮಿಕ ಜಗತ್ತಿಗೆ ಕಾಲಿಟ್ಟ ಕಳೆದ ಒಂದುವರೆ ವರ್ಷದಲ್ಲಿ ಲಾಕ್‌ಡೌನ್, ಕ್ವಾರಂಟೈನ್, ಏಕಾಂತವಾಸಗಳು ಅತ್ಯಂತ ಸಾಮಾನ್ಯವಾಗಿ ಬಿಟ್ಟಿವೆ. ಜನ ಸಂಪರ್ಕಕ್ಕೆ ಬಾರದೇ ಮನೆಯಲ್ಲಿಯೇ ಉಳಿಯುವುದೂ ಸರ್ವೇ ಸಾಮಾನ್ಯವಾಗಿಬಿಟ್ಟಿದೆ. ಜಪಾನಿನ ವ್ಯಕ್ತಿಯೊಬ್ಬ ಕರೊನಾ ಜಗತ್ತಿಗೆ ಕಾಲಿಡುವ ಹಲವು ವರ್ಷ ಮೊದಲೇ ಏಕಾಂತವಾಸದಲ್ಲಿ ಇದ್ದಾರೆ. ಅದು ಕೂಡ ಬರೋಬ್ಬರಿ 10 ವರ್ಷಗಳ ಕಾಲ. ಜೈಲುವಾಸ ಅಥವಾ ಯಾವುದೋ ಖಾಯಿಲೆಯ ಕಾರಣಕ್ಕಾಗಿ ಸೆಲ್ಪ್ ಐಸೋಲೇಶನ್ ಅಲ್ಲ. ವಿಶ್ವ ಪ್ರಸಿದ್ಧ ಬರಹಗಾರ ಗೇಬ್ರಿಯಲ್ ಗಾರ್ಸಿಯಾ ಮಾರ್ಕ್ವೆಜ್ ನೂರು ವರ್ಷಗಳ ಏಕಾಂತ ಎಂಬ ಕೃತಿ ಬರೆದಿದ್ದರು. ಆದರೆ ಇದು ಕತೆಯಲ್ಲ. ನಿಜಜೀವನದಲ್ಲಿ 10 ವರ್ಷಗಳಿಂದ ಏಕಾಂತದಲ್ಲಿರುವ ವ್ಯಕ್ತಿಯ ಜೀವನ. ನಂಬಲಿಕ್ಕೆ ಆಶ್ಚರ್ಯವಾದರೂ ಸತ್ಯ.

ಜಪಾನಿನಲ್ಲಿ ಜಾಗತಿಕ ಕರೊನಾ ಬಿಕ್ಕಟ್ಟು ಕಾಣಿಸಿಕೊಳ್ಳುವ ಮೊದಲೇ ಏಕಾಂತವಾಸದ ಸಂಸ್ಕೃತಿ ಇದೆ. ಸುಮಾರು 10 ಲಕ್ಷ ಜನ ಈ ರೀತಿ ಏಕಾಂತವಾಸದಲ್ಲಿ ಇದ್ದಾರೆ ಎಂದು ಜಪಾನಿನ ಆರೋಗ್ಯ ಇಲಾಖೆ ಹೇಳಿದೆ. ಹೀಗೆ ಏಕಾಂತವಾಸದಲ್ಲಿ ಇರುವ ಪದ್ಧತಿಗಳನ್ನು ಹಿಕಿಕೊಮೋರಿ ಎಂದು ಕರೆಯಲಾಗುತ್ತದೆ. ಕೆಲವರು ವರ್ಷ ತಿಂಗಳು ಐಸೋಲೇಶನ್‌ನಲ್ಲಿ ಇರುತ್ತಾರೆ. ನಿಟೋ ಸೌಜಿ ಎನ್ನುವ ಕಲಾವಿದ ಬರೋಬ್ಬರಿ 10 ವರ್ಷದಿಂದ ಏಕಾಂತವಾಸವನ್ನು ಅನುಭವಿಸುತ್ತಿದ್ದಾರೆ. ವೃತ್ತಿಯಿಂದ ಗೇಮ್ ಡೆವಲಪರ್ ಆಗಿರುವ ನಿಟೋ ಸೌಜಿ ಮೂಲತಃ ಸಂಗೀತ ಕಲಾವಿದ. ಎರಡು ತಿಂಗಳಿಗೊಮ್ಮೆ ಕ್ಷೌರಕ್ಕಾಗಿ ಮಾತ್ರ ನಿಟೋ ಮನೆ ಬಿಟ್ಟು ಹೊರಬಂದು ಜಗತ್ತನ್ನು ನೋಡುತ್ತಾರೆ.

ನಿಟೋ ಸೌಜಿ ಟೋಕಿಯೋ ವಿಶ್ವ ವಿದ್ಯಾಲಯದ ಪದವೀಧರನಾಗಿ ಹೊರ ಬಂದಾಗ ನಿರುದ್ಯೋಗ ಸಮಸ್ಯೆ ಎದುರಾಯಿತು. ಚಿತ್ರಕಲೆಯನ್ನು ಅಭ್ಯಾಸಿಸುವ ಸಲುವಾಗಿ ನಿಟೋ 3 ವರ್ಷಗಳ ಕಾಲ ಮನೆಯಿಂದ ಆಚೆಗೇ ಬರಲಿಲ್ಲ. ನಂತರ ಅದು ಅವರ ಜೀವನ ಶೈಲಿಯಾಯಿತು. ಆರ್ಥಿಕವಾಗಿ ಸ್ವಾವಲಂಬಿಯಾಗಬೇಕೆಂಬ ಪ್ರಯತ್ನದಲ್ಲಿ ಆತ ತಮ್ಮ ಮನೆಯಲ್ಲಿ ಸತತವಾಗಿ ಕಲೆಯ ಅಭ್ಯಾಸ ನಡೆಸಿದ್ದಾರೆ. ಇವರಿಗೆ ಬೇಕಾದ ಅಗತ್ಯ ವಸ್ತುಗಳನ್ನು ಮನೆಗೆ ತಲುಪುವ ವ್ಯವಸ್ಥೆಯನ್ನು ಮಾಡಿಕೊಂಡಿದ್ದಾರೆ. ಸದ್ಯ ತಮ್ಮ ಚಿಕ್ಕಮ್ಮನ ಅಪಾರ್ಟಮೆಂಟ್‌ನಲ್ಲಿ ವಾಸವಿದ್ದು ತಮ್ಮ ಏಕಾಂತವಾಸದ ಅನುಭವವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ನಿಟೋ ಬೆಳಿಗ್ಗೆ 11 ಗಂಟೆಗೆ ತಮ್ಮ ದಿನವನ್ನು ಆರಂಭಿಸಿದರೆ ತಿಂಡಿ ತಿಂದು ಇಮೇಲ್‌ಗಳನ್ನು ಚೆಕ್ ಮಾಡಿ, ಸುದ್ದಿಗಳನ್ನು ನೋಡಿ, ಕೆಲಸಕ್ಕೆ  ಸಂಬಂಧಿಸಿದ  ಸಂದೇಶಗಳಿಗೆ ಪ್ರತಿಕ್ರಿಯಿಸಿ ಮತ್ತೆ ತಮ್ಮ ಕೆಲಸವನ್ನು ಆರಂಭಿಸಿದರೆ ಬಿಡುವಾಗುವುದು ಸಂಜೆ. ಒಂದಷ್ಟು ಕಾಲ ದೈಹಿಕ ವ್ಯಾಯಾಮ, ರಾತ್ರಿಯ ಊಟ ಮತ್ತೆ ಗೇಮ್ ಡೆವಲಪ್‌ಮೆಂಟ್ ಕೆಲಸ. ನಡುವೆ ಹೊರ ಜಗತ್ತಿನೊಂದಿಗೆ ನೇರ ಸಂಪರ್ಕವಿಲ್ಲ. ಹೊರಗಡೆ ಸುತ್ತಾಟವಿಲ್ಲ. ಮತ್ತೆ ರಾತ್ರಿ ತಮ್ಮ ಕಲೆಯ ಅಭ್ಯಾಸಕ್ಕೆ ತೊಡಗಿದರೆ ಬೆಳಗಿನ ಜಾವ 4 ಗಂಟೆಗೆ ನಿದ್ರೆಗೆ ಜಾರುತ್ತಾರೆ.

ಎರಡು ಸಾವಿರದ ಹದಿನೈದರಿಂದ ನಿಟೋ ಸೌಜಿ ಇಂಗ್ಲೀಷ್ ಭಾಷೆಯ ಕಲಿಕೆಯಲ್ಲಿ ತೊಡಗಿದ್ದಾರೆ. ಕಂಪ್ಯೂಟರ್ ಮತ್ತು ಮೊಬೈಲ್ ಗೇಮ್‌ಗಳನ್ನು ಅಭಿವೃದ್ಧಿಪಡಿಸುವುದರಲ್ಲಿ ತೊಡಗಿಸಿಕೊಂಡಿದ್ದಾರೆ. ಸ್ವಂತ ಜೀವನದ ಪ್ರೇರಣೆಯಿಂದ ಅವರು ಪುಲ್ ಸ್ಟೇ ಎಂಬ ಡಿಜಿಟಲ್ ಗೇಮ್ ಅನ್ನು ಅಭಿವೃದ್ಧಿಪಡಿಸಿದ್ದಾರೆ. ಈ ಗೇಮ್ 2020 ಅಕ್ಟೋಬರ್‌ನಲ್ಲಿ ಅಂತರ್ಜಾಲದಲ್ಲಿ ಲಭ್ಯವಿದೆ. ಗೇಮ್ ಮೂಲಕ ನಿಟೋ ತಮ್ಮ ಜೀವನದ ಅನುಭವಗಳನ್ನು ಹಿಡಿದಿಟ್ಟಿದ್ದಾರೆ.

ನಿಟೋ ಸೌಜಿ ಯೂಟ್ಯೂಬ್ ಚಾನೆಲ್ ಒಂದನ್ನು ನಡೆಸುತ್ತಿದ್ದು ಸುಮಾರು 2 ಲಕ್ಷ ಜನರು ಅವರ ಅನುಭವಗಳನ್ನು ಯೂಟ್ಯೂಬ್‌ನಲ್ಲಿ ವೀಕ್ಷಿಸುತ್ತಾರೆ. ಅವರಿಂದ ಕಲೆ, ತಂತ್ರಜ್ಞಾನದ ಮಾಹಿತಿಯನ್ನು ಪಡೆಯುತ್ತಾರೆ.

ನಿಟೋ ಸೌಜಿ ಈಗ ಸಂಪೂರ್ಣ ಜೀವನವನ್ನು ತಮ್ಮ ಪ್ರಾಜೆಕ್ಟ್ಗಾಗಿ ಮೀಸಲಿಟ್ಟಿದ್ದಾರೆ. ದೀರ್ಘಾವಧಿಯಲ್ಲೊ ಕೆಲಸಮಾಡುವುದು ಇದರಿಂದ ಕಷ್ಟವಾಗಿದೆ ಎನ್ನುತ್ತಾರೆ.


ಇದನ್ನೂ ಓದಿ : ಬಂಗಾಳ ರಾಜ್ಯಪಾಲರನ್ನು ಕಿತ್ತು ಹಾಕಲು ಒಕ್ಕೂಟ ಸರ್ಕಾರಕ್ಕೆ ಪತ್ರ ಬರೆದ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...