Homeಅಂತರಾಷ್ಟ್ರೀಯಜಪಾನ್‌ನ ಮೊದಲ ಮಹಿಳಾ ಪ್ರಧಾನಿಯಾಗಿ ಕಟ್ಟಾ ಸಂಪ್ರದಾಯವಾದಿ ಸನೆ ತಾಕೈಚಿ ಆಯ್ಕೆ

ಜಪಾನ್‌ನ ಮೊದಲ ಮಹಿಳಾ ಪ್ರಧಾನಿಯಾಗಿ ಕಟ್ಟಾ ಸಂಪ್ರದಾಯವಾದಿ ಸನೆ ತಾಕೈಚಿ ಆಯ್ಕೆ

- Advertisement -
- Advertisement -

ಕಟ್ಟಾ ಸಂಪ್ರದಾಯವಾದಿ ಸನೆ ತಾಕೈಚಿ ಅವರನ್ನು ದೇಶದ ಮೊದಲ ಮಹಿಳಾ ಪ್ರಧಾನಿಯಾಗಿ ಜಪಾನ್ ಆಯ್ಕೆ ಮಾಡಿದೆ.

ಹತ್ಯೆಗೀಡಾದ ಮಾಜಿ ಪ್ರಧಾನಿ ಶಿಂಜೊ ಅಬೆ ಅವರ ಶಿಷ್ಯೆಯಾಗಿರುವ ತಾಕೈಚಿ ಅವರು, ಮಂಗಳವಾರ (ಅ.21) ನಡೆದ ಚುನಾವಣೆಯಲ್ಲಿ 465 ಸ್ಥಾನಗಳ ಸಂಸತ್ತಿನ ಕೆಳಮನೆಯಲ್ಲಿ 237 ಮತಗಳನ್ನು ಪಡೆದು ಪ್ರಧಾನಿ ಹುದ್ದೆಯನ್ನು ಖಚಿತಪಡಿಸಿಕೊಂಡಿದ್ದಾರೆ.

ಸೋಮವಾರ (ಅ20) ತಾಕೈಚಿ ಅವರ ಲಿಬರಲ್ ಡೆಮಾಕ್ರಟಿಕ್ ಪಕ್ಷ (ಎಲ್‌ಡಿಪಿ) ಮತ್ತು ಇಶಿನ್ ಎಂದೂ ಕರೆಯಲ್ಪಡುವ ಬಲಪಂಥೀಯ ಜಪಾನ್ ಇನ್ನೋವೇಶನ್ ಪಾರ್ಟಿ (ಜೆಐಪಿ) ನಡುವಿನ ಕೊನೆಯ ಕ್ಷಣದ ಒಪ್ಪಂದ ಫಲ ಕೊಟ್ಟ ಕಾರಣ ತಾಕೈಚಿ ಗೆಲುವು ಸಾಧಿಸಿದ್ದಾರೆ. ಆದರೂ, ಅವರ ಸರ್ಕಾರದಲ್ಲಿ ಬಹುಮತಕ್ಕೆ ಇನ್ನೂ ಎರಡು ಸ್ಥಾನಗಳ ಕೊರತೆಯಿದ್ದು, ರಾಜಕೀಯ ಅಸ್ಥಿರತೆಯ ಅಪಾಯವಿದೆ ಎಂದು ವರದಿಗಳು ಹೇಳಿವೆ.

ಯುದ್ಧಾನಂತರದ ಇತಿಹಾಸದ ಬಹುಪಾಲು ಜಪಾನ್ ಅನ್ನು ಆಳಿದ ಎಲ್‌ಡಿಪಿ ಜುಲೈನಲ್ಲಿ ನಡೆದ ಚುನಾವಣೆಯಲ್ಲಿ ದೊಡ್ಡ ಮಟ್ಟದ ಸೋಲನುಭವಿಸಿತ್ತು. ನಂತರದ ಮೂರು ತಿಂಗಳ ರಾಜಕೀಯ ನಿರ್ವಾತ ಮತ್ತು ಜಗಳವನ್ನು ಕೊನೆಗೊಳಿಸಿದ ಶಿಗೇರು ಇಶಿಬಾ ಅವರ ಸ್ಥಾನಕ್ಕೆ ತಾಕೈಚಿ ಆಯ್ಕೆಯಾಗಿದ್ದಾರೆ.

ಪುರುಷ ಪ್ರಾಬಲ್ಯ ದೇಶದ ರಾಜಕೀಯದಲ್ಲಿ ತಾಕೈಚಿ ಅವರ ಗೆಲುವು ಒಂದು ಮಹತ್ವದ ಬೆಳವಣಿಗೆ ಎಂದು ಪರಿಗಣಿಸಲಾಗಿದೆ. ಆದರೆ, ಆಕೆಯ ನಾಯಕತ್ವದಿಂದ ವಲಸೆ ನೀತಿಗಳು ಮತ್ತು ಸಾಮಾಜಿಕ ವಿಷಯಗಳಲ್ಲಿ ಸಂಪ್ರದಾಯವಾದಿ ಅಥವಾ ಕಟ್ಟುನಿಟ್ಟಾದ ನಿಲುವುಗಳು (ಬಲಪಂಥೀಯ ಧೋರಣೆ) ಬಲವಾಗುವ ಸಾಧ್ಯತೆಯಿದೆ. ಮಹಿಳೆಯರ ಸಮಾನತೆ ಅಥವಾ ವಿವಿಧತೆಯನ್ನು (ಉದಾಹರಣೆಗೆ, ಜನಾಂಗೀಯ ಅಥವಾ ಸಾಮಾಜಿಕ ವೈವಿಧ್ಯತೆ) ಉತ್ತೇಜಿಸುವ ನಿರೀಕ್ಷೆಯಿಲ್ಲ.

ರಾಜಕೀಯ ನಾಯಕಿಯಾಗಿ, ಮಹಿಳೆಯರ ಸಾಮಾಜಿಕ, ಆರ್ಥಿಕ ಅಥವಾ ರಾಜಕೀಯ ಅಭಿವೃದ್ಧಿಗೆ ಸಂಬಂಧಿಸಿದ ನೀತಿಗಳು ಅಥವಾ ಕಾನೂನುಗಳನ್ನು ಜಾರಿಗೆ ತರುವುದನ್ನು ಸ್ವತಃ ತಾಕೈಚಿ ತಡೆಯುತ್ತಿದ್ದಾರೆ ಎಂಬ ಆರೋಪವಿದೆ.

ಅಲ್ಲದೆ, ಜಪಾನ್‌ನ ರಾಜಮನೆತನದಲ್ಲಿ ಕೇವಲ ಪುರುಷರಿಗೆ ಮಾತ್ರ ಸಿಂಹಾಸನದ ಉತ್ತರಾಧಿಕಾರಿತ್ವವನ್ನು ನೀಡುವ ಸಂಪ್ರದಾಯವನ್ನು ತಾಕೈಚಿ ಬೆಂಬಲಿಸುತ್ತಾರೆ. ಇದು ಲಿಂಗ ಸಮಾನತೆಗೆ ವಿರುದ್ಧವಾದ ನಿಲುವಾಗಿದೆ.

ಕಾಗದಕ್ಕೆ ಸೀಮಿತವಾದ ಕದನ ವಿರಾಮ : ಗಾಝಾ ಮೇಲೆ ಅಕ್ರಮಣ ಮುಂದುವರಿಸಿದ ಇಸ್ರೇಲ್; ನೂರಾರು ಪ್ಯಾಲೆಸ್ತೀನಿಯರ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...