Homeಅಂತರಾಷ್ಟ್ರೀಯಜಪಾನ್‌ನ ಮೊದಲ ಮಹಿಳಾ ಪ್ರಧಾನಿಯಾಗಿ ಕಟ್ಟಾ ಸಂಪ್ರದಾಯವಾದಿ ಸನೆ ತಾಕೈಚಿ ಆಯ್ಕೆ

ಜಪಾನ್‌ನ ಮೊದಲ ಮಹಿಳಾ ಪ್ರಧಾನಿಯಾಗಿ ಕಟ್ಟಾ ಸಂಪ್ರದಾಯವಾದಿ ಸನೆ ತಾಕೈಚಿ ಆಯ್ಕೆ

- Advertisement -
- Advertisement -

ಕಟ್ಟಾ ಸಂಪ್ರದಾಯವಾದಿ ಸನೆ ತಾಕೈಚಿ ಅವರನ್ನು ದೇಶದ ಮೊದಲ ಮಹಿಳಾ ಪ್ರಧಾನಿಯಾಗಿ ಜಪಾನ್ ಆಯ್ಕೆ ಮಾಡಿದೆ.

ಹತ್ಯೆಗೀಡಾದ ಮಾಜಿ ಪ್ರಧಾನಿ ಶಿಂಜೊ ಅಬೆ ಅವರ ಶಿಷ್ಯೆಯಾಗಿರುವ ತಾಕೈಚಿ ಅವರು, ಮಂಗಳವಾರ (ಅ.21) ನಡೆದ ಚುನಾವಣೆಯಲ್ಲಿ 465 ಸ್ಥಾನಗಳ ಸಂಸತ್ತಿನ ಕೆಳಮನೆಯಲ್ಲಿ 237 ಮತಗಳನ್ನು ಪಡೆದು ಪ್ರಧಾನಿ ಹುದ್ದೆಯನ್ನು ಖಚಿತಪಡಿಸಿಕೊಂಡಿದ್ದಾರೆ.

ಸೋಮವಾರ (ಅ20) ತಾಕೈಚಿ ಅವರ ಲಿಬರಲ್ ಡೆಮಾಕ್ರಟಿಕ್ ಪಕ್ಷ (ಎಲ್‌ಡಿಪಿ) ಮತ್ತು ಇಶಿನ್ ಎಂದೂ ಕರೆಯಲ್ಪಡುವ ಬಲಪಂಥೀಯ ಜಪಾನ್ ಇನ್ನೋವೇಶನ್ ಪಾರ್ಟಿ (ಜೆಐಪಿ) ನಡುವಿನ ಕೊನೆಯ ಕ್ಷಣದ ಒಪ್ಪಂದ ಫಲ ಕೊಟ್ಟ ಕಾರಣ ತಾಕೈಚಿ ಗೆಲುವು ಸಾಧಿಸಿದ್ದಾರೆ. ಆದರೂ, ಅವರ ಸರ್ಕಾರದಲ್ಲಿ ಬಹುಮತಕ್ಕೆ ಇನ್ನೂ ಎರಡು ಸ್ಥಾನಗಳ ಕೊರತೆಯಿದ್ದು, ರಾಜಕೀಯ ಅಸ್ಥಿರತೆಯ ಅಪಾಯವಿದೆ ಎಂದು ವರದಿಗಳು ಹೇಳಿವೆ.

ಯುದ್ಧಾನಂತರದ ಇತಿಹಾಸದ ಬಹುಪಾಲು ಜಪಾನ್ ಅನ್ನು ಆಳಿದ ಎಲ್‌ಡಿಪಿ ಜುಲೈನಲ್ಲಿ ನಡೆದ ಚುನಾವಣೆಯಲ್ಲಿ ದೊಡ್ಡ ಮಟ್ಟದ ಸೋಲನುಭವಿಸಿತ್ತು. ನಂತರದ ಮೂರು ತಿಂಗಳ ರಾಜಕೀಯ ನಿರ್ವಾತ ಮತ್ತು ಜಗಳವನ್ನು ಕೊನೆಗೊಳಿಸಿದ ಶಿಗೇರು ಇಶಿಬಾ ಅವರ ಸ್ಥಾನಕ್ಕೆ ತಾಕೈಚಿ ಆಯ್ಕೆಯಾಗಿದ್ದಾರೆ.

ಪುರುಷ ಪ್ರಾಬಲ್ಯ ದೇಶದ ರಾಜಕೀಯದಲ್ಲಿ ತಾಕೈಚಿ ಅವರ ಗೆಲುವು ಒಂದು ಮಹತ್ವದ ಬೆಳವಣಿಗೆ ಎಂದು ಪರಿಗಣಿಸಲಾಗಿದೆ. ಆದರೆ, ಆಕೆಯ ನಾಯಕತ್ವದಿಂದ ವಲಸೆ ನೀತಿಗಳು ಮತ್ತು ಸಾಮಾಜಿಕ ವಿಷಯಗಳಲ್ಲಿ ಸಂಪ್ರದಾಯವಾದಿ ಅಥವಾ ಕಟ್ಟುನಿಟ್ಟಾದ ನಿಲುವುಗಳು (ಬಲಪಂಥೀಯ ಧೋರಣೆ) ಬಲವಾಗುವ ಸಾಧ್ಯತೆಯಿದೆ. ಮಹಿಳೆಯರ ಸಮಾನತೆ ಅಥವಾ ವಿವಿಧತೆಯನ್ನು (ಉದಾಹರಣೆಗೆ, ಜನಾಂಗೀಯ ಅಥವಾ ಸಾಮಾಜಿಕ ವೈವಿಧ್ಯತೆ) ಉತ್ತೇಜಿಸುವ ನಿರೀಕ್ಷೆಯಿಲ್ಲ.

ರಾಜಕೀಯ ನಾಯಕಿಯಾಗಿ, ಮಹಿಳೆಯರ ಸಾಮಾಜಿಕ, ಆರ್ಥಿಕ ಅಥವಾ ರಾಜಕೀಯ ಅಭಿವೃದ್ಧಿಗೆ ಸಂಬಂಧಿಸಿದ ನೀತಿಗಳು ಅಥವಾ ಕಾನೂನುಗಳನ್ನು ಜಾರಿಗೆ ತರುವುದನ್ನು ಸ್ವತಃ ತಾಕೈಚಿ ತಡೆಯುತ್ತಿದ್ದಾರೆ ಎಂಬ ಆರೋಪವಿದೆ.

ಅಲ್ಲದೆ, ಜಪಾನ್‌ನ ರಾಜಮನೆತನದಲ್ಲಿ ಕೇವಲ ಪುರುಷರಿಗೆ ಮಾತ್ರ ಸಿಂಹಾಸನದ ಉತ್ತರಾಧಿಕಾರಿತ್ವವನ್ನು ನೀಡುವ ಸಂಪ್ರದಾಯವನ್ನು ತಾಕೈಚಿ ಬೆಂಬಲಿಸುತ್ತಾರೆ. ಇದು ಲಿಂಗ ಸಮಾನತೆಗೆ ವಿರುದ್ಧವಾದ ನಿಲುವಾಗಿದೆ.

ಕಾಗದಕ್ಕೆ ಸೀಮಿತವಾದ ಕದನ ವಿರಾಮ : ಗಾಝಾ ಮೇಲೆ ಅಕ್ರಮಣ ಮುಂದುವರಿಸಿದ ಇಸ್ರೇಲ್; ನೂರಾರು ಪ್ಯಾಲೆಸ್ತೀನಿಯರ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...