Homeಅಂತರಾಷ್ಟ್ರೀಯಜಪಾನ್‌ನ ಮೊದಲ ಮಹಿಳಾ ಪ್ರಧಾನಿಯಾಗಿ ಕಟ್ಟಾ ಸಂಪ್ರದಾಯವಾದಿ ಸನೆ ತಾಕೈಚಿ ಆಯ್ಕೆ

ಜಪಾನ್‌ನ ಮೊದಲ ಮಹಿಳಾ ಪ್ರಧಾನಿಯಾಗಿ ಕಟ್ಟಾ ಸಂಪ್ರದಾಯವಾದಿ ಸನೆ ತಾಕೈಚಿ ಆಯ್ಕೆ

- Advertisement -
- Advertisement -

ಕಟ್ಟಾ ಸಂಪ್ರದಾಯವಾದಿ ಸನೆ ತಾಕೈಚಿ ಅವರನ್ನು ದೇಶದ ಮೊದಲ ಮಹಿಳಾ ಪ್ರಧಾನಿಯಾಗಿ ಜಪಾನ್ ಆಯ್ಕೆ ಮಾಡಿದೆ.

ಹತ್ಯೆಗೀಡಾದ ಮಾಜಿ ಪ್ರಧಾನಿ ಶಿಂಜೊ ಅಬೆ ಅವರ ಶಿಷ್ಯೆಯಾಗಿರುವ ತಾಕೈಚಿ ಅವರು, ಮಂಗಳವಾರ (ಅ.21) ನಡೆದ ಚುನಾವಣೆಯಲ್ಲಿ 465 ಸ್ಥಾನಗಳ ಸಂಸತ್ತಿನ ಕೆಳಮನೆಯಲ್ಲಿ 237 ಮತಗಳನ್ನು ಪಡೆದು ಪ್ರಧಾನಿ ಹುದ್ದೆಯನ್ನು ಖಚಿತಪಡಿಸಿಕೊಂಡಿದ್ದಾರೆ.

ಸೋಮವಾರ (ಅ20) ತಾಕೈಚಿ ಅವರ ಲಿಬರಲ್ ಡೆಮಾಕ್ರಟಿಕ್ ಪಕ್ಷ (ಎಲ್‌ಡಿಪಿ) ಮತ್ತು ಇಶಿನ್ ಎಂದೂ ಕರೆಯಲ್ಪಡುವ ಬಲಪಂಥೀಯ ಜಪಾನ್ ಇನ್ನೋವೇಶನ್ ಪಾರ್ಟಿ (ಜೆಐಪಿ) ನಡುವಿನ ಕೊನೆಯ ಕ್ಷಣದ ಒಪ್ಪಂದ ಫಲ ಕೊಟ್ಟ ಕಾರಣ ತಾಕೈಚಿ ಗೆಲುವು ಸಾಧಿಸಿದ್ದಾರೆ. ಆದರೂ, ಅವರ ಸರ್ಕಾರದಲ್ಲಿ ಬಹುಮತಕ್ಕೆ ಇನ್ನೂ ಎರಡು ಸ್ಥಾನಗಳ ಕೊರತೆಯಿದ್ದು, ರಾಜಕೀಯ ಅಸ್ಥಿರತೆಯ ಅಪಾಯವಿದೆ ಎಂದು ವರದಿಗಳು ಹೇಳಿವೆ.

ಯುದ್ಧಾನಂತರದ ಇತಿಹಾಸದ ಬಹುಪಾಲು ಜಪಾನ್ ಅನ್ನು ಆಳಿದ ಎಲ್‌ಡಿಪಿ ಜುಲೈನಲ್ಲಿ ನಡೆದ ಚುನಾವಣೆಯಲ್ಲಿ ದೊಡ್ಡ ಮಟ್ಟದ ಸೋಲನುಭವಿಸಿತ್ತು. ನಂತರದ ಮೂರು ತಿಂಗಳ ರಾಜಕೀಯ ನಿರ್ವಾತ ಮತ್ತು ಜಗಳವನ್ನು ಕೊನೆಗೊಳಿಸಿದ ಶಿಗೇರು ಇಶಿಬಾ ಅವರ ಸ್ಥಾನಕ್ಕೆ ತಾಕೈಚಿ ಆಯ್ಕೆಯಾಗಿದ್ದಾರೆ.

ಪುರುಷ ಪ್ರಾಬಲ್ಯ ದೇಶದ ರಾಜಕೀಯದಲ್ಲಿ ತಾಕೈಚಿ ಅವರ ಗೆಲುವು ಒಂದು ಮಹತ್ವದ ಬೆಳವಣಿಗೆ ಎಂದು ಪರಿಗಣಿಸಲಾಗಿದೆ. ಆದರೆ, ಆಕೆಯ ನಾಯಕತ್ವದಿಂದ ವಲಸೆ ನೀತಿಗಳು ಮತ್ತು ಸಾಮಾಜಿಕ ವಿಷಯಗಳಲ್ಲಿ ಸಂಪ್ರದಾಯವಾದಿ ಅಥವಾ ಕಟ್ಟುನಿಟ್ಟಾದ ನಿಲುವುಗಳು (ಬಲಪಂಥೀಯ ಧೋರಣೆ) ಬಲವಾಗುವ ಸಾಧ್ಯತೆಯಿದೆ. ಮಹಿಳೆಯರ ಸಮಾನತೆ ಅಥವಾ ವಿವಿಧತೆಯನ್ನು (ಉದಾಹರಣೆಗೆ, ಜನಾಂಗೀಯ ಅಥವಾ ಸಾಮಾಜಿಕ ವೈವಿಧ್ಯತೆ) ಉತ್ತೇಜಿಸುವ ನಿರೀಕ್ಷೆಯಿಲ್ಲ.

ರಾಜಕೀಯ ನಾಯಕಿಯಾಗಿ, ಮಹಿಳೆಯರ ಸಾಮಾಜಿಕ, ಆರ್ಥಿಕ ಅಥವಾ ರಾಜಕೀಯ ಅಭಿವೃದ್ಧಿಗೆ ಸಂಬಂಧಿಸಿದ ನೀತಿಗಳು ಅಥವಾ ಕಾನೂನುಗಳನ್ನು ಜಾರಿಗೆ ತರುವುದನ್ನು ಸ್ವತಃ ತಾಕೈಚಿ ತಡೆಯುತ್ತಿದ್ದಾರೆ ಎಂಬ ಆರೋಪವಿದೆ.

ಅಲ್ಲದೆ, ಜಪಾನ್‌ನ ರಾಜಮನೆತನದಲ್ಲಿ ಕೇವಲ ಪುರುಷರಿಗೆ ಮಾತ್ರ ಸಿಂಹಾಸನದ ಉತ್ತರಾಧಿಕಾರಿತ್ವವನ್ನು ನೀಡುವ ಸಂಪ್ರದಾಯವನ್ನು ತಾಕೈಚಿ ಬೆಂಬಲಿಸುತ್ತಾರೆ. ಇದು ಲಿಂಗ ಸಮಾನತೆಗೆ ವಿರುದ್ಧವಾದ ನಿಲುವಾಗಿದೆ.

ಕಾಗದಕ್ಕೆ ಸೀಮಿತವಾದ ಕದನ ವಿರಾಮ : ಗಾಝಾ ಮೇಲೆ ಅಕ್ರಮಣ ಮುಂದುವರಿಸಿದ ಇಸ್ರೇಲ್; ನೂರಾರು ಪ್ಯಾಲೆಸ್ತೀನಿಯರ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...