Homeಅಂತರಾಷ್ಟ್ರೀಯಜಪಾನ್‌ನ ಮೊದಲ ಮಹಿಳಾ ಪ್ರಧಾನಿಯಾಗಿ ಕಟ್ಟಾ ಸಂಪ್ರದಾಯವಾದಿ ಸನೆ ತಾಕೈಚಿ ಆಯ್ಕೆ

ಜಪಾನ್‌ನ ಮೊದಲ ಮಹಿಳಾ ಪ್ರಧಾನಿಯಾಗಿ ಕಟ್ಟಾ ಸಂಪ್ರದಾಯವಾದಿ ಸನೆ ತಾಕೈಚಿ ಆಯ್ಕೆ

- Advertisement -
- Advertisement -

ಕಟ್ಟಾ ಸಂಪ್ರದಾಯವಾದಿ ಸನೆ ತಾಕೈಚಿ ಅವರನ್ನು ದೇಶದ ಮೊದಲ ಮಹಿಳಾ ಪ್ರಧಾನಿಯಾಗಿ ಜಪಾನ್ ಆಯ್ಕೆ ಮಾಡಿದೆ.

ಹತ್ಯೆಗೀಡಾದ ಮಾಜಿ ಪ್ರಧಾನಿ ಶಿಂಜೊ ಅಬೆ ಅವರ ಶಿಷ್ಯೆಯಾಗಿರುವ ತಾಕೈಚಿ ಅವರು, ಮಂಗಳವಾರ (ಅ.21) ನಡೆದ ಚುನಾವಣೆಯಲ್ಲಿ 465 ಸ್ಥಾನಗಳ ಸಂಸತ್ತಿನ ಕೆಳಮನೆಯಲ್ಲಿ 237 ಮತಗಳನ್ನು ಪಡೆದು ಪ್ರಧಾನಿ ಹುದ್ದೆಯನ್ನು ಖಚಿತಪಡಿಸಿಕೊಂಡಿದ್ದಾರೆ.

ಸೋಮವಾರ (ಅ20) ತಾಕೈಚಿ ಅವರ ಲಿಬರಲ್ ಡೆಮಾಕ್ರಟಿಕ್ ಪಕ್ಷ (ಎಲ್‌ಡಿಪಿ) ಮತ್ತು ಇಶಿನ್ ಎಂದೂ ಕರೆಯಲ್ಪಡುವ ಬಲಪಂಥೀಯ ಜಪಾನ್ ಇನ್ನೋವೇಶನ್ ಪಾರ್ಟಿ (ಜೆಐಪಿ) ನಡುವಿನ ಕೊನೆಯ ಕ್ಷಣದ ಒಪ್ಪಂದ ಫಲ ಕೊಟ್ಟ ಕಾರಣ ತಾಕೈಚಿ ಗೆಲುವು ಸಾಧಿಸಿದ್ದಾರೆ. ಆದರೂ, ಅವರ ಸರ್ಕಾರದಲ್ಲಿ ಬಹುಮತಕ್ಕೆ ಇನ್ನೂ ಎರಡು ಸ್ಥಾನಗಳ ಕೊರತೆಯಿದ್ದು, ರಾಜಕೀಯ ಅಸ್ಥಿರತೆಯ ಅಪಾಯವಿದೆ ಎಂದು ವರದಿಗಳು ಹೇಳಿವೆ.

ಯುದ್ಧಾನಂತರದ ಇತಿಹಾಸದ ಬಹುಪಾಲು ಜಪಾನ್ ಅನ್ನು ಆಳಿದ ಎಲ್‌ಡಿಪಿ ಜುಲೈನಲ್ಲಿ ನಡೆದ ಚುನಾವಣೆಯಲ್ಲಿ ದೊಡ್ಡ ಮಟ್ಟದ ಸೋಲನುಭವಿಸಿತ್ತು. ನಂತರದ ಮೂರು ತಿಂಗಳ ರಾಜಕೀಯ ನಿರ್ವಾತ ಮತ್ತು ಜಗಳವನ್ನು ಕೊನೆಗೊಳಿಸಿದ ಶಿಗೇರು ಇಶಿಬಾ ಅವರ ಸ್ಥಾನಕ್ಕೆ ತಾಕೈಚಿ ಆಯ್ಕೆಯಾಗಿದ್ದಾರೆ.

ಪುರುಷ ಪ್ರಾಬಲ್ಯ ದೇಶದ ರಾಜಕೀಯದಲ್ಲಿ ತಾಕೈಚಿ ಅವರ ಗೆಲುವು ಒಂದು ಮಹತ್ವದ ಬೆಳವಣಿಗೆ ಎಂದು ಪರಿಗಣಿಸಲಾಗಿದೆ. ಆದರೆ, ಆಕೆಯ ನಾಯಕತ್ವದಿಂದ ವಲಸೆ ನೀತಿಗಳು ಮತ್ತು ಸಾಮಾಜಿಕ ವಿಷಯಗಳಲ್ಲಿ ಸಂಪ್ರದಾಯವಾದಿ ಅಥವಾ ಕಟ್ಟುನಿಟ್ಟಾದ ನಿಲುವುಗಳು (ಬಲಪಂಥೀಯ ಧೋರಣೆ) ಬಲವಾಗುವ ಸಾಧ್ಯತೆಯಿದೆ. ಮಹಿಳೆಯರ ಸಮಾನತೆ ಅಥವಾ ವಿವಿಧತೆಯನ್ನು (ಉದಾಹರಣೆಗೆ, ಜನಾಂಗೀಯ ಅಥವಾ ಸಾಮಾಜಿಕ ವೈವಿಧ್ಯತೆ) ಉತ್ತೇಜಿಸುವ ನಿರೀಕ್ಷೆಯಿಲ್ಲ.

ರಾಜಕೀಯ ನಾಯಕಿಯಾಗಿ, ಮಹಿಳೆಯರ ಸಾಮಾಜಿಕ, ಆರ್ಥಿಕ ಅಥವಾ ರಾಜಕೀಯ ಅಭಿವೃದ್ಧಿಗೆ ಸಂಬಂಧಿಸಿದ ನೀತಿಗಳು ಅಥವಾ ಕಾನೂನುಗಳನ್ನು ಜಾರಿಗೆ ತರುವುದನ್ನು ಸ್ವತಃ ತಾಕೈಚಿ ತಡೆಯುತ್ತಿದ್ದಾರೆ ಎಂಬ ಆರೋಪವಿದೆ.

ಅಲ್ಲದೆ, ಜಪಾನ್‌ನ ರಾಜಮನೆತನದಲ್ಲಿ ಕೇವಲ ಪುರುಷರಿಗೆ ಮಾತ್ರ ಸಿಂಹಾಸನದ ಉತ್ತರಾಧಿಕಾರಿತ್ವವನ್ನು ನೀಡುವ ಸಂಪ್ರದಾಯವನ್ನು ತಾಕೈಚಿ ಬೆಂಬಲಿಸುತ್ತಾರೆ. ಇದು ಲಿಂಗ ಸಮಾನತೆಗೆ ವಿರುದ್ಧವಾದ ನಿಲುವಾಗಿದೆ.

ಕಾಗದಕ್ಕೆ ಸೀಮಿತವಾದ ಕದನ ವಿರಾಮ : ಗಾಝಾ ಮೇಲೆ ಅಕ್ರಮಣ ಮುಂದುವರಿಸಿದ ಇಸ್ರೇಲ್; ನೂರಾರು ಪ್ಯಾಲೆಸ್ತೀನಿಯರ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...