Homeಮುಖಪುಟಮಹಾರಾಷ್ಟ್ರ: ಸರ್ವಪಕ್ಷ ಸಭೆಯ ನಿರ್ಣಯ ತಿರಸ್ಕರಿಸಿದ ಮನೋಜ್ ಪಾಟೀಲ್; ಉಪವಾಸ ಸತ್ಯಾಗ್ರಹ ನಿಲ್ಲಿಸಲು ನಿರಾಕರಣೆ

ಮಹಾರಾಷ್ಟ್ರ: ಸರ್ವಪಕ್ಷ ಸಭೆಯ ನಿರ್ಣಯ ತಿರಸ್ಕರಿಸಿದ ಮನೋಜ್ ಪಾಟೀಲ್; ಉಪವಾಸ ಸತ್ಯಾಗ್ರಹ ನಿಲ್ಲಿಸಲು ನಿರಾಕರಣೆ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟದ ಕಿಚ್ಚು ಹೆಚ್ಚಳವಾಗಿದ್ದು,  ಮರಾಠ ಮೀಸಲಾತಿ ವಿಚಾರವಾಗಿ ಚರ್ಚಿಸಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಇಂದು ಕರೆದಿದ್ದ ಸರ್ವಪಕ್ಷ ಸಭೆ ಮುಕ್ತಾಯಗೊಂಡಿದೆ. ಸಭೆಯಲ್ಲಿ ಮರಾಠ ಸಮುದಾಯಕ್ಕೆ ಕೋಟಾ ನೀಡಲು ಎಲ್ಲಾ ಪಕ್ಷಗಳು ಒಪ್ಪಿಗೆ ಸೂಚಿಸಿವೆ. ಆದರೆ ಮರಾಠ ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ಮನೋಜ್ ಜಾರಂಗೆ ಪಾಟೀಲ್ ಅವರು ಮರಾಠಾ ಸಮುದಾಯಕ್ಕೆ ಸಂಪೂರ್ಣವಾಗಿ ಮೀಸಲಾತಿ ನೀಡುವವರೆಗೆ ಉಪವಾಸ ಮುಂದುವರಿಸುವುದಾಗಿ ಹೇಳಿದ್ದಾರೆ.

ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ರಾಜ್ಯದ ವಿವಿಧ ರಾಜಕೀಯ ಪಕ್ಷಗಳ ನಾಯಕರ ಜೊತೆ ನಡೆದ ಸರ್ವಪಕ್ಷ ಸಭೆಯಲ್ಲಿ ಹಲವು ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಸಮುದಾಯದ ಬೇಡಿಕೆಯಂತೆ ಕೋಟಾ ನೀಡಲು ಎಲ್ಲಾ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು. ಯಾವುದೇ ಸಮುದಾಯಕ್ಕೆ ಸಮಸ್ಯೆಯಾಗದಂತೆ ಮರಾಠರಿಗೆ ಮೀಸಲಾತಿ ನೀಡಲಾಗುವುದು. ಆದ್ದರಿಂದ ಈ ಕಾರ್ಯವಿಧಾನವು ಸಮಯವನ್ನು ತೆಗೆದುಕೊಳ್ಳುತ್ತದೆ. ಆದ್ದರಿಂದ ಬೇಡಿಕೆಗಳನ್ನು ಈಡೇರಿಸಲು ಸರ್ಕಾರಕ್ಕೆ ಅಗತ್ಯವಿರುವ ಸಮಯವನ್ನು ನೀಡುವಂತೆ ಕೇಳಿದ್ದಾರೆ. ಇದಲ್ಲದೆ ಉಪವಾಸ ಸತ್ಯಾಗ್ರಹವನ್ನು ನಡೆಸುತ್ತಿರುವ ಮನೋಜ್ ಜಾರಂಗೆ ಪಾಟೀಲ್ ಅವರಿಗೆ ಉಪವಾಸ ಅಂತ್ಯಗೊಳಿಸಿ ಸರ್ಕಾರಕ್ಕೆ ಸಹಕರಿಸಬೇಕು ಎಂದು ಸಭೆಯಲ್ಲಿ ಆಗ್ರಹಿಸಲಾಗಿದೆ.

ಆದರೆ ಸರ್ವಪಕ್ಷಗಳ ಸಭೆಯ ನಿರ್ಧಾರವನ್ನು ಜಾರಂಗೆ ಪಾಟೀಲ್ ತಿರಸ್ಕರಿಸಿದ್ದು, ಮರಾಠ ಸಮುದಾಯಕ್ಕೆ ಸಂಪೂರ್ಣ ಮೀಸಲಾತಿ ನೀಡುವವರೆಗೆ ಉಪವಾಸ ಮುಂದುವರಿಸುವುದಾಗಿ ಹೇಳಿದ್ದಾರೆ.

ಸರ್ಕಾರಕ್ಕೆ ಎಷ್ಟು ಸಮಯ ಬೇಕು ಮತ್ತು ಯಾವುದಕ್ಕೆ ಬೇಕು? ಮರಾಠ ಸಮುದಾಯಕ್ಕೆ ಸಂಪೂರ್ಣ ಮೀಸಲಾತಿ ನೀಡಲಾಗುತ್ತದೆಯೇ? ಇದನ್ನು ಸ್ಪಷ್ಟಪಡಿಸಿ, ಸರ್ವಪಕ್ಷ ಸಭೆಯಲ್ಲಿ ಏನು ಚರ್ಚಿಸಲಾಗಿದೆ ಎಂದು ತಿಳಿಯುವ ಆಸಕ್ತಿ ನನಗೆ ಇಲ್ಲ ಎಂದು ಮನೋಜ್ ಜಾರಂಗೆ ಪಾಟೀಲ್‌ ಹೇಳಿದ್ದಾರೆ.

ಬಡವರ ಮಕ್ಕಳ ಮೇಲೆ ಸರಕಾರ ಕೇಸ್‌ ದಾಖಲಿಸುತ್ತಿದೆ. ಅವರು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ನಮಗೆ ಮೀಸಲಾತಿ ನೀಡಿ, ನಾವು ಹಠವನ್ನು ನಿಲ್ಲಿಸುತ್ತೇವೆ. ಮರಾಠರಿಗೆ ಮೀಸಲಾತಿ ಕೊಡಿ. ನಿಮಗೆ ಏಕೆ ಸಮಯ ಬೇಕು? ಎಂದು ಮನೋಜ್ ಜಾರಂಗೆ ಪಾಟೀಲ್ ಪ್ರಶ್ನಿಸಿದ್ದಾರೆ.

ನೀವು ಎಲ್ಲಾ ಮರಾಠಿಗರಿಗೆ ಕುಂಬಿ ಜಾತಿ ಪ್ರಮಾಣ ಪತ್ರ ನೀಡುತ್ತೀರಾ? ನಿಮ್ಮ ಮನಸ್ಸಿನಲ್ಲಿ ಏನಿದೆ? ನಮಗೆ ತಿಳಿಸಿ, ಮರಾಠಾ ಸಮುದಾಯವು ಜನರನ್ನು ಮೋಸ ಮಾಡುವುದಿಲ್ಲ ಮತ್ತು ದ್ರೋಹ ಮಾಡುವುದಿಲ್ಲ. ಸುಳ್ಳು ಮತ್ತು ಅಸತ್ಯವನ್ನು ಹೇಳಲು ನಮ್ಮನ್ನು ಒತ್ತಾಯಿಸಬೇಡಿ ಎಂದು ಮನೋಜ್ ಜಾರಂಗೆ ಪಾಟೀಲ್ ಹೇಳಿದ್ದಾರೆ.

ಸರ್ಕಾರದ ನಿರ್ಣಯವನ್ನು ನಾವು ಒಪ್ಪುವುದಿಲ್ಲ. ಸರ್ಕಾರ ಶೀಘ್ರದಲ್ಲೇ ಸಂಪೂರ್ಣ ಮೀಸಲಾತಿ ನೀಡುತ್ತಾ? ಸಂಪೂರ್ಣ ಮೀಸಲಾತಿ ಸಿಗುವವರೆಗೆ ನಮ್ಮ ಪ್ರತಿಭಟನೆಯನ್ನು ನಿಲ್ಲಿಸುವುದಿಲ್ಲ ಎಂದು ಮನೋಜ್ ಜಾರಂಗೆ ಪಾಟೀಲ್ ಸ್ಪಷ್ಟಪಡಿಸಿದರು. ನಾನು ಉಪವಾಸ ಸತ್ಯಾಗ್ರಹ ಮಾಡುವ ಮುನ್ನ ಚರ್ಚೆಯ ಅಗತ್ಯವಿದೆ ಎಂದು ಏಕೆ ಹೇಳಲಿಲ್ಲ? ನಾನು 8 ದಿನ ಉಪವಾಸ ಮಾಡಿದ ನಂತರ ನೀವು ಎಚ್ಚರಗೊಂಡಿದ್ದೀರಿ. ಆದರೆ ನಾನು ನನ್ನ ಸಮುದಾಯಕ್ಕಾಗಿ ಹೋರಾಡಲು ಸಿದ್ಧ. ಅವರು ಉದ್ದೇಶಪೂರ್ವಕವಾಗಿ ಮರಾಠ ಸಮುದಾಯವನ್ನು ಕೆಣಕುತ್ತಿದ್ದಾರೆ. ಅವರಿಗೆ ಸಮಯ ಏಕೆ ಬೇಕು ಎಂದು ಅವರು ಇಲ್ಲಿಗೆ ಬಂದು ಮಹಾರಾಷ್ಟ್ರದ ಜನರಿಗೆ ಹೇಳಬೇಕು. ಅದರ ನಂತರ ನಾವು ಯೋಚಿಸುತ್ತೇವೆ ಎಂದು ಮನೋಜ್ ಜಾರಂಗೆ ಪಾಟೀಲ್ ಹೇಳಿದ್ದಾರೆ.

ಮನೋಜ್ ಜಾರಂಗೆ ಪಾಟೀಲ್ ಉಪವಾಸ ಸತ್ಯಾಗ್ರಹ ಇಂದಿಗೆ ಎಂಟನೇ ದಿನಕ್ಕೆ ಕಾಲಿಟ್ಟಿದೆ. ಇಂದು ಸಂಜೆಯಿಂದ ನೀರು ಕುಡಿಯುವುದನ್ನು ನಿಲ್ಲಿಸುವುದಾಗಿ ಅವರು ಘೋಷಿಸಿದ್ದಾರೆ. ಮನೋಜ್ ಜಾರಂಗೆ ಪಾಟೀಲ್ ಅವರು ಇಡೀ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡಬೇಕೆಂಬ ತಮ್ಮ ಬೇಡಿಕೆಯಲ್ಲಿ ದೃಢವಾಗಿ ನಿಂತಿದ್ದಾರೆ.

ಇದನ್ನು ಓದಿ: ಪ್ಯಾಲೆಸ್ತೀನ್‌ ನಾಗರಿಕರ ನರಮೇಧ ತಡೆಯುವಲ್ಲಿ ವಿಶ್ವಸಂಸ್ಥೆ ವಿಫಲವಾಗಿದೆ ಎಂದು ಹಿರಿಯ ಅಧಿಕಾರಿ ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...