Homeಮುಖಪುಟಜಾರಕಿಹೊಳಿ ಲೈಂಗಿಕ ಪ್ರಕರಣ: ಸದನದಲ್ಲಿ ಸಿಡಿ ಹಿಡಿದು ಕಾಂಗ್ರೆಸ್ ನಾಯಕರ ಪ್ರತಿಭಟನೆ

ಜಾರಕಿಹೊಳಿ ಲೈಂಗಿಕ ಪ್ರಕರಣ: ಸದನದಲ್ಲಿ ಸಿಡಿ ಹಿಡಿದು ಕಾಂಗ್ರೆಸ್ ನಾಯಕರ ಪ್ರತಿಭಟನೆ

- Advertisement -
- Advertisement -

ರಮೇಶ್ ಜಾರಕಿಹೊಳಿ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಸ್ವತಂತ್ರ ಸಂಸ್ಥೆಯಿಂದ ನಡೆಸಬೇಕೆಂದು ಆಗ್ರಹಿಸಿ ವಿಧಾನ ಮಂಡಲದ ಅಧಿವೇಶನದಲ್ಲಿ ಸಿಡಿ ಹಿಡಿದು ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು, ಸಿಡಿಗಳನ್ನು ಕೈಯಲ್ಲಿ ಹಿಡಿದು ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ.

ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು ಧರಣಿ ಆರಂಭಿಸಿದರು. ಉದ್ಯೋಗ ಕೇಳಿದ ಯುವತಿ ಮೇಲೆ ಅತ್ಯಾಚಾವೆಸಗಿದ ರಮೇಶ್ ಜಾರಕಿಹೊಳಿ ಮೇಲೆ ಅತ್ಯಾಚಾರದ ಎಫ್‌ಐಆರ್‌ ದಾಖಲಿಸಬೇಕು. ತನಿಖೆಯನ್ನು ಸ್ವತಂತ್ರ ಸಂಸ್ಥೆಗೆ ನೀಡಬೇಕು ಎಂದು ಆಗ್ರಹಿಸಿದರು.

ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಮಂಗಳವಾರ ಬೆಳಗ್ಗೆ ನಡೆದ ಹಿರಿಯ ನಾಯಕರ ಸಭೆಯಲ್ಲಿ ಎರಡೂ ಸದನಗಳಲ್ಲಿ ಸಿಡಿ ತೋರಿಸಿ ಪ್ರತಿಭಟನೆ ನಡೆಸಲು ಕಾಂಗ್ರೆಸ್ ತೀರ್ಮಾನ ತೆಗೆದುಕೊಂಡಿತ್ತು. ಎಲ್ಲಾ ನಾಯಕರಿಗೂ ಎಂ.ಬಿ.ಪಾಟೀಲ್ ಸಿಡಿ ವಿತರಿಸಿದ್ದರು.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ನನಗೆ ರಕ್ಷಣೆ ಕೊಡಿ ಎಂದ ಯುವತಿ – ವೀಡಿಯೋ ವೈರಲ್

ಹಿರಿಯ ನಾಯಕರ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಎಸ್.ಆರ್. ಪಾಟೀಲ, ಎಚ್.ಕೆ. ಪಾಟೀಲ, ಅಜಯ್ ಸಿಂಗ್, ತುಕಾರಾಂ, ರಮೇಶ್ ಕುಮಾರ್, ಜಮೀರ್ ಅಹ್ಮದ್ ಖಾನ್, ಅಮರೇಗೌಡ ಭಯ್ಯಾಪುರ್ ಮತ್ತು ನಾರಾಯಣಸ್ವಾಮಿ ಭಾಗವಹಿಸಿದ್ದರು.

ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದಂತೆ ಕಲಾಪದಲ್ಲಿಯೂ ಪ್ರತಿಭಟನೆ ನಡೆಸಲಾಯಿತು. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಕಾಂಗ್ರೆಸ್ ನಾಯಕರ ಮನವೊಲಿಸಲು ಪ್ರಯತ್ನಿಸಿ ವಿಫಲರಾದರು. ಪ್ರಶ್ನೋತ್ತರ ವೇಳೆ ಬಳಿಕ ಪ್ರತಿಭಟನೆ ನಡೆಸುವಂತೆ ಕೇಳಿದರು ಆದರೆ ಕಾಂಗ್ರೆಸ್ ನಾಯಕರು ಇದಾವುದಕ್ಕೂ ಬಗ್ಗದೆ ಇದ್ದಾಗ ಕಲಾಪವನ್ನು 10 ನಿಮಿಷ ಮುಂದೂಡಿಕೆ ಮಾಡಿದರು.

https://twitter.com/INCKarnataka/status/1374301690250207232

ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಾಗುವವರೆಗೆ ಪ್ರತಿಭಟನೆ ನಡೆಸುವುದಾಗಿ ಕಾಂಗ್ರೆಸ್ ಹೇಳಿದೆ. ಜೊತೆಗೆ ಸಿಡಿ ಪ್ರಕರಣದ ನಂತರ ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್​ನಿಂದ ತಡೆಯಾಜ್ಞೆ ತಂದಿದ್ದ ಆರು ಮಂದಿ ಸಚಿವರು ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಬಿಗಿ ಪಟ್ಟು ಹಿಡಿದಿದೆ.

ಇದನ್ನೂ ಓದಿ: ತುಮಕೂರು: ಸಮಾಧಿ ಗುಂಡಿಯಿಂದ ದಲಿತ ಶಿಶುವಿನ ಮೃತದೇಹ ಹೊರತೆಗೆಸಿ ಅಮಾನವೀಯತೆ!

ಸಚಿವರಾದ ಡಾ. ಕೆ. ಸುಧಾಕರ್, ಎಸ್​.ಟಿ. ಸೋಮಶೇಖರ್, ನಾರಾಯಣ ಗೌಡ, ಶಿವರಾಮ್ ಹೆಬ್ಬಾರ್, ಬಿ.ಸಿ ಪಾಟೀಲ್, ಭೈರತಿ ಬಸವರಾಜ್ ಕೂಡ ರಾಜೀನಾಮೆ ನೀಡುವವರೆಗೂ ಧರಣಿ ನಡೆಸುವುದಾಗಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

 

ಬಿಜೆಪಿ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲೂ ಕಾಂಗ್ರೆಸ್ ದಾಳಿ ನಡೆಸುತ್ತಿದೆ. ರಮೇಶ್ ಜಾರಕಿಹೊಳಿಯವರನ್ನು ರೇಪಿಸ್ಟ್ ರಮೇಶ್ ಎಂದು ಕರೆದಿರುವ ಕಾಂಗ್ರೆಸ್, ಅವರ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಿ, ಸಂತ್ರಸ್ತೆಗೆ ನ್ಯಾಯ ಕೊಡಿಸಬೇಕು ಎಂದಿದೆ.

‌ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮೇಲೆ ಯುವತಿಯೊಬ್ಬರಿಗೆ ಕೆಲಸದ ಆಮಿವೊಡ್ಡಿ ಲೈಂಗಿಕವಾಗಿ ಬಳಸಿಕೊಂಡ ಆರೋಪವಿದೆ. ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ವಿಡಿಯೋ ಸಿ.ಡಿ ಜೊತೆಗೆ ಕಬ್ಬನ್ ಪಾರ್ಕ್ ಪೊಲೀಸರಿಗೆ ದೂರು ನೀಡಿದ್ದರು.


ಇದನ್ನೂ ಓದಿ: ಸಿಡಿ ಪ್ರಕರಣ: ಸಿಡಿ ನಕಲಿ, ನಾನು ನಿರಪರಾಧಿ ಎಂದು ರಮೇಶ್ ಜಾರಕಿಹೊಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...