Homeಸಿನಿಮಾಕ್ರೀಡೆಜಾವೆಲಿನ್ ಥ್ರೋ ಕ್ರೀಡೆಯನ್ನು ಯುದ್ಧಭೂಮಿಯಂತೆ ಬಿಂಬಿಸಿದ ನೆಟ್ಟಿಗರು: ಭಾರತ-ಪಾಕ್ ಬೆಳೆಯುತ್ತಿರುವುದು ಸಂತೋ‍ಷ ತಂದಿದೆ ಎಂದ ಚೋಪ್ರಾ

ಜಾವೆಲಿನ್ ಥ್ರೋ ಕ್ರೀಡೆಯನ್ನು ಯುದ್ಧಭೂಮಿಯಂತೆ ಬಿಂಬಿಸಿದ ನೆಟ್ಟಿಗರು: ಭಾರತ-ಪಾಕ್ ಬೆಳೆಯುತ್ತಿರುವುದು ಸಂತೋ‍ಷ ತಂದಿದೆ ಎಂದ ಚೋಪ್ರಾ

- Advertisement -
- Advertisement -

ಭಾನುವಾರ ರಾತ್ರಿ ಬುಡಾಪೆಸ್ಟ್‌ನಲ್ಲಿ ನಡೆದ 2023ರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ನೀರಜ್ ಚೋಪ್ರಾ ಮತ್ತು ಪಾಕಿಸ್ತಾನದ ಅರ್ಷದ್ ನದೀಮ್ ಕ್ರಮವಾಗಿ ಚಿನ್ನ ಮತ್ತು ಬೆಳ್ಳಿ ಪದಕಗಳನ್ನು ಪಡೆದಿದ್ದಾರೆ. ನೀರಜ್ 88.17 ಮೀಟರ್‌ಗಳ ಬೃಹತ್ ಎಸೆತದೊಂದಿಗೆ ಚಾಂಪಿಯನ್ ಆದರು ಮತ್ತು ಅರ್ಷದ್ ತಮ್ಮ ಋತುವಿನ ಅತ್ಯುತ್ತಮ ದೂರವಾದ 87.82 ಮೀಟರ್‌ಗಳನ್ನು ಸಾಧಿಸುವ ಮೂಲಕ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಇದನ್ನು ಭಾರತ ಹಾಗೂ ಪಾಕಿಸ್ತಾನದ ನಡುವಿನ ಯುದ್ಧದಂತೆ ಪರಿಭಾವಿಸಿ ಚರ್ಚೆ ನಡೆಸಲಾಗುತ್ತಿದೆ. ಈ ಹಿಂದೆ ಕ್ರಿಕೆಟ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಸ್ಪರ್ಧೆಗಿಳಿದರೆ, ಅದನ್ನು ಸಾಕಷ್ಟು ಜನರು ಯುದ್ಧದಂತೆ ಭಾವಿಸುತ್ತಿದ್ದರು, ಮತ್ತೆ ಆ ಪಂದ್ಯವು ಅತಿಹೆಚ್ಚು ಸಂಖ್ಯೆಯ ಜನರನ್ನು ಸೆಳೆಯುತ್ತದೆ. ಕ್ರಿಕೆಟ್‌ನಲ್ಲಿ ಭಾರತ-ಪಾಕಿಸ್ತಾನದ ಪೈಪೋಟಿ, ಪ್ರೇಕ್ಷಕರನ್ನು ಅವರ ಆಸನಗಳ ತುದಿಯಲ್ಲಿ ಇರಿಸುತ್ತದೆ ಮತ್ತು ಇದನ್ನು ಸಾಮಾನ್ಯವಾಗಿ “ವಿಶ್ವ ಕ್ರೀಡೆಗಳಲ್ಲಿ ಅತಿದೊಡ್ಡ ಸ್ಪರ್ಧೆ” ಎಂದು ಪ್ರಶಂಸಿಸಲಾಗುತ್ತದೆ. ಅದರಂತೆ ಹಾಕಿ ಮತ್ತು ಕಬಡ್ಡಿಯಲ್ಲೂ ಕಂಡುಬರುತ್ತದೆ. ಇದೀಗ ನೀರಜ್ ಮತ್ತು ಅರ್ಷದ್ ಅವರ ಜಾವೆಲಿನ್ ಥ್ರೋ ನೋಡಿದ ಬಳಿಕ ಈ ಕ್ರೀಡೆಯೂ ಭಾರತ ಮತ್ತು ಪಾಕಿಸ್ತಾನ ನಡುವಿನ ಹೊಸ ಯುದ್ಧಭೂಮಿ ಎಂಬಂತೆ ಬಿಂಬಿಸಲಾಗುತ್ತಿದೆ.

ಭಾರತ-ಪಾಕಿಸ್ತಾನ ಬೆಳೆಯುತ್ತಿರುವುದು ನಮಗೆ ಸಂತೋ‍ಷ ತಂದಿದೆ: ನೀರಜ್ ಚೋಪ್ರಾ

ನೀರಜ್ ಚೋಪ್ರಾ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ”ಕಾರ್ಯಕ್ರಮದ ನಂತರ ನಾನು ಅರ್ಷದ್ ನದೀಮ್ ಅವರೊಂದಿಗೆ ಮಾತನಾಡಿದೆ ಮತ್ತು ನಾವು ಪರಸ್ಪರ ಸಂತೋಷವಾಗಿದ್ದೇವೆ. ಎರಡೂ ದೇಶಗಳು ಬೆಳೆಯುತ್ತಿರುವುದನ್ನು ನೋಡಿ ನಮಗೆ ಸಂತೋಷವಾಯಿತು. ಯುರೋಪಿಯನ್ ಕ್ರೀಡಾಪಟುಗಳ ಮುಂದೆ ನಾವು ಯಶಸ್ವಿಯಾಗಿದ್ದೇವೆ. ಭಾರತ ಮತ್ತು ಪಾಕಿಸ್ತಾನದ ಪೈಪೋಟಿ ಯಾವಾಗಲೂ ಇರುತ್ತದೆ” ಎಂದು ಹೇಳಿದ್ದಾರೆ.

ಈ ಹಿಂದೆ ಅರ್ಷದ್ ನದೀಮ್ ಅವರಿಗೆ ಸಾಮಾಜಿಕ ಮಾಧ್ಯಮಗಳಿಗೆ ಹೀಯಾಳಿಸಿದಾಗ ಪ್ರತಿಕ್ರಿಯಿಸಿದ್ದ ನೀರಜ್ ಚೋಪ್ರಾ ಅವರು, ನಾವೆಲ್ಲ ಜಾವೆಲಿನ್ ಥ್ರೋ ಪಟುಗಳು ಪ್ರೀತಿಯಿಂದ ಇರುತ್ತೇವೆ. ನಿಮ್ಮ ಮಾತುಗಳು ನಮಗೆ ಹಿಂಸೆಯಾಗದಿರಲಿ ಎಂದು ಹೇಳಿದ್ದರು.

ಈ ವಿಚಾರವಾಗಿ ನೀರಜ್ ಚೋಪ್ರಾ  ಅವರು ಟ್ವಿಟರ್‌ನಲ್ಲಿ ವಿಡಿಯೋ ಶೇರ್‌ ಮಾಡಿದ್ದರು. ಆ ವಿಡಿಯೋದಲ್ಲಿ ”ಎಲ್ಲರಿಗೂ ನಮಸ್ಕಾರ ಮೊದಲಿಗೆ ನನ್ನನ್ನು ಬೆಂಬಲಿಸಿದ, ಪ್ರೀತಿ ನೀಡಿದ ಪ್ರತಿಯೊಬ್ಬರಿಗೂ ಧನ್ಯವಾದಗಳು. ನೀವೆಲ್ಲರೂ ಪ್ರೋತ್ಸಾಹಿಸಿದ ರೀತಿಗೆ ಖುಷಿಯಾಗುತ್ತಿದೆ. ಅದೇ ರೀತಿ ಈಗ ಒಂದು ವಿವಾದ ಅದೇ ರೀತಿ ನಾನು ಟೋಕಿಯೋ ಒಲಿಂಪಿಕ್ಸ್‌ ಜಾವಲಿನ್ ಥ್ರೋ ಫೈನಲ್‌ನಲ್ಲಿ ಪಾಕಿಸ್ತಾನದ ಆರ್ಶದ್ ನದೀಮ್ ಅವರ ಬಳಿಯಿದ್ದ ಜಾವೆಲಿನ್‌ ಪಡೆದು ಎಸೆದೆ. ಇದನ್ನು ದೊಡ್ಡ ವಿವಾದ ಮಾಡುತ್ತಿದ್ದಾರೆ. ಇದೊಂದು ಅತ್ಯಂತ ಸರಳ ಹಾಗೂ ಸಹಜ ಪ್ರಕ್ರಿಯೆ. ಜಾವಲಿನ್‌ ಪಟು ತಮ್ಮದೇ ಆದ ಜಾವಲಿನ್‌ ಹೊಂದಿರುತ್ತಾರೆ. ಅದನ್ನು ಬೇರೆಯವರು ಸಹ ಬಳಸುತ್ತಾರೆ. ಅದೇ ರೀತಿ ನನ್ನ ಜಾವೆಲಿನ್ ಹಿಡಿದುಕೊಂಡು ಆರ್ಶದ್ ನದೀಂ ಅಭ್ಯಾಸ ನಡೆಸುತ್ತಿದ್ದರು. ಅದರಲ್ಲಿ ಯಾವುದೇ ತಪ್ಪು ಇಲ್ಲ. ಈಗ ನನ್ನ ಸ್ಪರ್ಧೆಯಿದೆ ಎಂದು ಅವರ ಬಳಿಯಿದ್ದ ನನ್ನ ಜಾವೆಲಿನ್ ಪಡೆದುಕೊಂಡು ನನ್ನ ಸ್ಪರ್ಧೆ ಪೂರ್ತಿಗೊಳಿಸಿದೆ. ಇದು ಅಂತಹ ದೊಡ್ಡ ವಿಷಯ ಕೂಡ ಅಲ್ಲ. ನನಗೆ ದುಖಃವಿದೆ. ನನ್ನ ಮನವಿ ಏನೆಂದರೆ, ಈ ರೀತಿ ಮಾಡಬೇಡಿ. ಕ್ರೀಡೆ ಎಲ್ಲರನ್ನೂ ಒಟ್ಟಾಗಿ ಸಾಗುವುದನ್ನು ಕಲಿಸುತ್ತದೆ. ನಾವೆಲ್ಲ ಜಾವೆಲಿನ್ ಥ್ರೋ ಪಟುಗಳು ಪ್ರೀತಿಯಿಂದ ಇರುತ್ತೇವೆ. ನಿಮ್ಮ ಮಾತುಗಳು ನಮಗೆ ಹಿಂಸೆಯಾಗದಿರಲಿ” ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...