Homeಸಿನಿಮಾಕ್ರೀಡೆಜಾವೆಲಿನ್ ಥ್ರೋ ಕ್ರೀಡೆಯನ್ನು ಯುದ್ಧಭೂಮಿಯಂತೆ ಬಿಂಬಿಸಿದ ನೆಟ್ಟಿಗರು: ಭಾರತ-ಪಾಕ್ ಬೆಳೆಯುತ್ತಿರುವುದು ಸಂತೋ‍ಷ ತಂದಿದೆ ಎಂದ ಚೋಪ್ರಾ

ಜಾವೆಲಿನ್ ಥ್ರೋ ಕ್ರೀಡೆಯನ್ನು ಯುದ್ಧಭೂಮಿಯಂತೆ ಬಿಂಬಿಸಿದ ನೆಟ್ಟಿಗರು: ಭಾರತ-ಪಾಕ್ ಬೆಳೆಯುತ್ತಿರುವುದು ಸಂತೋ‍ಷ ತಂದಿದೆ ಎಂದ ಚೋಪ್ರಾ

- Advertisement -
- Advertisement -

ಭಾನುವಾರ ರಾತ್ರಿ ಬುಡಾಪೆಸ್ಟ್‌ನಲ್ಲಿ ನಡೆದ 2023ರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ನೀರಜ್ ಚೋಪ್ರಾ ಮತ್ತು ಪಾಕಿಸ್ತಾನದ ಅರ್ಷದ್ ನದೀಮ್ ಕ್ರಮವಾಗಿ ಚಿನ್ನ ಮತ್ತು ಬೆಳ್ಳಿ ಪದಕಗಳನ್ನು ಪಡೆದಿದ್ದಾರೆ. ನೀರಜ್ 88.17 ಮೀಟರ್‌ಗಳ ಬೃಹತ್ ಎಸೆತದೊಂದಿಗೆ ಚಾಂಪಿಯನ್ ಆದರು ಮತ್ತು ಅರ್ಷದ್ ತಮ್ಮ ಋತುವಿನ ಅತ್ಯುತ್ತಮ ದೂರವಾದ 87.82 ಮೀಟರ್‌ಗಳನ್ನು ಸಾಧಿಸುವ ಮೂಲಕ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಇದನ್ನು ಭಾರತ ಹಾಗೂ ಪಾಕಿಸ್ತಾನದ ನಡುವಿನ ಯುದ್ಧದಂತೆ ಪರಿಭಾವಿಸಿ ಚರ್ಚೆ ನಡೆಸಲಾಗುತ್ತಿದೆ. ಈ ಹಿಂದೆ ಕ್ರಿಕೆಟ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಸ್ಪರ್ಧೆಗಿಳಿದರೆ, ಅದನ್ನು ಸಾಕಷ್ಟು ಜನರು ಯುದ್ಧದಂತೆ ಭಾವಿಸುತ್ತಿದ್ದರು, ಮತ್ತೆ ಆ ಪಂದ್ಯವು ಅತಿಹೆಚ್ಚು ಸಂಖ್ಯೆಯ ಜನರನ್ನು ಸೆಳೆಯುತ್ತದೆ. ಕ್ರಿಕೆಟ್‌ನಲ್ಲಿ ಭಾರತ-ಪಾಕಿಸ್ತಾನದ ಪೈಪೋಟಿ, ಪ್ರೇಕ್ಷಕರನ್ನು ಅವರ ಆಸನಗಳ ತುದಿಯಲ್ಲಿ ಇರಿಸುತ್ತದೆ ಮತ್ತು ಇದನ್ನು ಸಾಮಾನ್ಯವಾಗಿ “ವಿಶ್ವ ಕ್ರೀಡೆಗಳಲ್ಲಿ ಅತಿದೊಡ್ಡ ಸ್ಪರ್ಧೆ” ಎಂದು ಪ್ರಶಂಸಿಸಲಾಗುತ್ತದೆ. ಅದರಂತೆ ಹಾಕಿ ಮತ್ತು ಕಬಡ್ಡಿಯಲ್ಲೂ ಕಂಡುಬರುತ್ತದೆ. ಇದೀಗ ನೀರಜ್ ಮತ್ತು ಅರ್ಷದ್ ಅವರ ಜಾವೆಲಿನ್ ಥ್ರೋ ನೋಡಿದ ಬಳಿಕ ಈ ಕ್ರೀಡೆಯೂ ಭಾರತ ಮತ್ತು ಪಾಕಿಸ್ತಾನ ನಡುವಿನ ಹೊಸ ಯುದ್ಧಭೂಮಿ ಎಂಬಂತೆ ಬಿಂಬಿಸಲಾಗುತ್ತಿದೆ.

ಭಾರತ-ಪಾಕಿಸ್ತಾನ ಬೆಳೆಯುತ್ತಿರುವುದು ನಮಗೆ ಸಂತೋ‍ಷ ತಂದಿದೆ: ನೀರಜ್ ಚೋಪ್ರಾ

ನೀರಜ್ ಚೋಪ್ರಾ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ”ಕಾರ್ಯಕ್ರಮದ ನಂತರ ನಾನು ಅರ್ಷದ್ ನದೀಮ್ ಅವರೊಂದಿಗೆ ಮಾತನಾಡಿದೆ ಮತ್ತು ನಾವು ಪರಸ್ಪರ ಸಂತೋಷವಾಗಿದ್ದೇವೆ. ಎರಡೂ ದೇಶಗಳು ಬೆಳೆಯುತ್ತಿರುವುದನ್ನು ನೋಡಿ ನಮಗೆ ಸಂತೋಷವಾಯಿತು. ಯುರೋಪಿಯನ್ ಕ್ರೀಡಾಪಟುಗಳ ಮುಂದೆ ನಾವು ಯಶಸ್ವಿಯಾಗಿದ್ದೇವೆ. ಭಾರತ ಮತ್ತು ಪಾಕಿಸ್ತಾನದ ಪೈಪೋಟಿ ಯಾವಾಗಲೂ ಇರುತ್ತದೆ” ಎಂದು ಹೇಳಿದ್ದಾರೆ.

ಈ ಹಿಂದೆ ಅರ್ಷದ್ ನದೀಮ್ ಅವರಿಗೆ ಸಾಮಾಜಿಕ ಮಾಧ್ಯಮಗಳಿಗೆ ಹೀಯಾಳಿಸಿದಾಗ ಪ್ರತಿಕ್ರಿಯಿಸಿದ್ದ ನೀರಜ್ ಚೋಪ್ರಾ ಅವರು, ನಾವೆಲ್ಲ ಜಾವೆಲಿನ್ ಥ್ರೋ ಪಟುಗಳು ಪ್ರೀತಿಯಿಂದ ಇರುತ್ತೇವೆ. ನಿಮ್ಮ ಮಾತುಗಳು ನಮಗೆ ಹಿಂಸೆಯಾಗದಿರಲಿ ಎಂದು ಹೇಳಿದ್ದರು.

ಈ ವಿಚಾರವಾಗಿ ನೀರಜ್ ಚೋಪ್ರಾ  ಅವರು ಟ್ವಿಟರ್‌ನಲ್ಲಿ ವಿಡಿಯೋ ಶೇರ್‌ ಮಾಡಿದ್ದರು. ಆ ವಿಡಿಯೋದಲ್ಲಿ ”ಎಲ್ಲರಿಗೂ ನಮಸ್ಕಾರ ಮೊದಲಿಗೆ ನನ್ನನ್ನು ಬೆಂಬಲಿಸಿದ, ಪ್ರೀತಿ ನೀಡಿದ ಪ್ರತಿಯೊಬ್ಬರಿಗೂ ಧನ್ಯವಾದಗಳು. ನೀವೆಲ್ಲರೂ ಪ್ರೋತ್ಸಾಹಿಸಿದ ರೀತಿಗೆ ಖುಷಿಯಾಗುತ್ತಿದೆ. ಅದೇ ರೀತಿ ಈಗ ಒಂದು ವಿವಾದ ಅದೇ ರೀತಿ ನಾನು ಟೋಕಿಯೋ ಒಲಿಂಪಿಕ್ಸ್‌ ಜಾವಲಿನ್ ಥ್ರೋ ಫೈನಲ್‌ನಲ್ಲಿ ಪಾಕಿಸ್ತಾನದ ಆರ್ಶದ್ ನದೀಮ್ ಅವರ ಬಳಿಯಿದ್ದ ಜಾವೆಲಿನ್‌ ಪಡೆದು ಎಸೆದೆ. ಇದನ್ನು ದೊಡ್ಡ ವಿವಾದ ಮಾಡುತ್ತಿದ್ದಾರೆ. ಇದೊಂದು ಅತ್ಯಂತ ಸರಳ ಹಾಗೂ ಸಹಜ ಪ್ರಕ್ರಿಯೆ. ಜಾವಲಿನ್‌ ಪಟು ತಮ್ಮದೇ ಆದ ಜಾವಲಿನ್‌ ಹೊಂದಿರುತ್ತಾರೆ. ಅದನ್ನು ಬೇರೆಯವರು ಸಹ ಬಳಸುತ್ತಾರೆ. ಅದೇ ರೀತಿ ನನ್ನ ಜಾವೆಲಿನ್ ಹಿಡಿದುಕೊಂಡು ಆರ್ಶದ್ ನದೀಂ ಅಭ್ಯಾಸ ನಡೆಸುತ್ತಿದ್ದರು. ಅದರಲ್ಲಿ ಯಾವುದೇ ತಪ್ಪು ಇಲ್ಲ. ಈಗ ನನ್ನ ಸ್ಪರ್ಧೆಯಿದೆ ಎಂದು ಅವರ ಬಳಿಯಿದ್ದ ನನ್ನ ಜಾವೆಲಿನ್ ಪಡೆದುಕೊಂಡು ನನ್ನ ಸ್ಪರ್ಧೆ ಪೂರ್ತಿಗೊಳಿಸಿದೆ. ಇದು ಅಂತಹ ದೊಡ್ಡ ವಿಷಯ ಕೂಡ ಅಲ್ಲ. ನನಗೆ ದುಖಃವಿದೆ. ನನ್ನ ಮನವಿ ಏನೆಂದರೆ, ಈ ರೀತಿ ಮಾಡಬೇಡಿ. ಕ್ರೀಡೆ ಎಲ್ಲರನ್ನೂ ಒಟ್ಟಾಗಿ ಸಾಗುವುದನ್ನು ಕಲಿಸುತ್ತದೆ. ನಾವೆಲ್ಲ ಜಾವೆಲಿನ್ ಥ್ರೋ ಪಟುಗಳು ಪ್ರೀತಿಯಿಂದ ಇರುತ್ತೇವೆ. ನಿಮ್ಮ ಮಾತುಗಳು ನಮಗೆ ಹಿಂಸೆಯಾಗದಿರಲಿ” ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...