Homeಸಿನಿಮಾಕ್ರೀಡೆಜಾವೆಲಿನ್ ಥ್ರೋ ಕ್ರೀಡೆಯನ್ನು ಯುದ್ಧಭೂಮಿಯಂತೆ ಬಿಂಬಿಸಿದ ನೆಟ್ಟಿಗರು: ಭಾರತ-ಪಾಕ್ ಬೆಳೆಯುತ್ತಿರುವುದು ಸಂತೋ‍ಷ ತಂದಿದೆ ಎಂದ ಚೋಪ್ರಾ

ಜಾವೆಲಿನ್ ಥ್ರೋ ಕ್ರೀಡೆಯನ್ನು ಯುದ್ಧಭೂಮಿಯಂತೆ ಬಿಂಬಿಸಿದ ನೆಟ್ಟಿಗರು: ಭಾರತ-ಪಾಕ್ ಬೆಳೆಯುತ್ತಿರುವುದು ಸಂತೋ‍ಷ ತಂದಿದೆ ಎಂದ ಚೋಪ್ರಾ

- Advertisement -
- Advertisement -

ಭಾನುವಾರ ರಾತ್ರಿ ಬುಡಾಪೆಸ್ಟ್‌ನಲ್ಲಿ ನಡೆದ 2023ರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ನೀರಜ್ ಚೋಪ್ರಾ ಮತ್ತು ಪಾಕಿಸ್ತಾನದ ಅರ್ಷದ್ ನದೀಮ್ ಕ್ರಮವಾಗಿ ಚಿನ್ನ ಮತ್ತು ಬೆಳ್ಳಿ ಪದಕಗಳನ್ನು ಪಡೆದಿದ್ದಾರೆ. ನೀರಜ್ 88.17 ಮೀಟರ್‌ಗಳ ಬೃಹತ್ ಎಸೆತದೊಂದಿಗೆ ಚಾಂಪಿಯನ್ ಆದರು ಮತ್ತು ಅರ್ಷದ್ ತಮ್ಮ ಋತುವಿನ ಅತ್ಯುತ್ತಮ ದೂರವಾದ 87.82 ಮೀಟರ್‌ಗಳನ್ನು ಸಾಧಿಸುವ ಮೂಲಕ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಇದನ್ನು ಭಾರತ ಹಾಗೂ ಪಾಕಿಸ್ತಾನದ ನಡುವಿನ ಯುದ್ಧದಂತೆ ಪರಿಭಾವಿಸಿ ಚರ್ಚೆ ನಡೆಸಲಾಗುತ್ತಿದೆ. ಈ ಹಿಂದೆ ಕ್ರಿಕೆಟ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಸ್ಪರ್ಧೆಗಿಳಿದರೆ, ಅದನ್ನು ಸಾಕಷ್ಟು ಜನರು ಯುದ್ಧದಂತೆ ಭಾವಿಸುತ್ತಿದ್ದರು, ಮತ್ತೆ ಆ ಪಂದ್ಯವು ಅತಿಹೆಚ್ಚು ಸಂಖ್ಯೆಯ ಜನರನ್ನು ಸೆಳೆಯುತ್ತದೆ. ಕ್ರಿಕೆಟ್‌ನಲ್ಲಿ ಭಾರತ-ಪಾಕಿಸ್ತಾನದ ಪೈಪೋಟಿ, ಪ್ರೇಕ್ಷಕರನ್ನು ಅವರ ಆಸನಗಳ ತುದಿಯಲ್ಲಿ ಇರಿಸುತ್ತದೆ ಮತ್ತು ಇದನ್ನು ಸಾಮಾನ್ಯವಾಗಿ “ವಿಶ್ವ ಕ್ರೀಡೆಗಳಲ್ಲಿ ಅತಿದೊಡ್ಡ ಸ್ಪರ್ಧೆ” ಎಂದು ಪ್ರಶಂಸಿಸಲಾಗುತ್ತದೆ. ಅದರಂತೆ ಹಾಕಿ ಮತ್ತು ಕಬಡ್ಡಿಯಲ್ಲೂ ಕಂಡುಬರುತ್ತದೆ. ಇದೀಗ ನೀರಜ್ ಮತ್ತು ಅರ್ಷದ್ ಅವರ ಜಾವೆಲಿನ್ ಥ್ರೋ ನೋಡಿದ ಬಳಿಕ ಈ ಕ್ರೀಡೆಯೂ ಭಾರತ ಮತ್ತು ಪಾಕಿಸ್ತಾನ ನಡುವಿನ ಹೊಸ ಯುದ್ಧಭೂಮಿ ಎಂಬಂತೆ ಬಿಂಬಿಸಲಾಗುತ್ತಿದೆ.

ಭಾರತ-ಪಾಕಿಸ್ತಾನ ಬೆಳೆಯುತ್ತಿರುವುದು ನಮಗೆ ಸಂತೋ‍ಷ ತಂದಿದೆ: ನೀರಜ್ ಚೋಪ್ರಾ

ನೀರಜ್ ಚೋಪ್ರಾ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ”ಕಾರ್ಯಕ್ರಮದ ನಂತರ ನಾನು ಅರ್ಷದ್ ನದೀಮ್ ಅವರೊಂದಿಗೆ ಮಾತನಾಡಿದೆ ಮತ್ತು ನಾವು ಪರಸ್ಪರ ಸಂತೋಷವಾಗಿದ್ದೇವೆ. ಎರಡೂ ದೇಶಗಳು ಬೆಳೆಯುತ್ತಿರುವುದನ್ನು ನೋಡಿ ನಮಗೆ ಸಂತೋಷವಾಯಿತು. ಯುರೋಪಿಯನ್ ಕ್ರೀಡಾಪಟುಗಳ ಮುಂದೆ ನಾವು ಯಶಸ್ವಿಯಾಗಿದ್ದೇವೆ. ಭಾರತ ಮತ್ತು ಪಾಕಿಸ್ತಾನದ ಪೈಪೋಟಿ ಯಾವಾಗಲೂ ಇರುತ್ತದೆ” ಎಂದು ಹೇಳಿದ್ದಾರೆ.

ಈ ಹಿಂದೆ ಅರ್ಷದ್ ನದೀಮ್ ಅವರಿಗೆ ಸಾಮಾಜಿಕ ಮಾಧ್ಯಮಗಳಿಗೆ ಹೀಯಾಳಿಸಿದಾಗ ಪ್ರತಿಕ್ರಿಯಿಸಿದ್ದ ನೀರಜ್ ಚೋಪ್ರಾ ಅವರು, ನಾವೆಲ್ಲ ಜಾವೆಲಿನ್ ಥ್ರೋ ಪಟುಗಳು ಪ್ರೀತಿಯಿಂದ ಇರುತ್ತೇವೆ. ನಿಮ್ಮ ಮಾತುಗಳು ನಮಗೆ ಹಿಂಸೆಯಾಗದಿರಲಿ ಎಂದು ಹೇಳಿದ್ದರು.

ಈ ವಿಚಾರವಾಗಿ ನೀರಜ್ ಚೋಪ್ರಾ  ಅವರು ಟ್ವಿಟರ್‌ನಲ್ಲಿ ವಿಡಿಯೋ ಶೇರ್‌ ಮಾಡಿದ್ದರು. ಆ ವಿಡಿಯೋದಲ್ಲಿ ”ಎಲ್ಲರಿಗೂ ನಮಸ್ಕಾರ ಮೊದಲಿಗೆ ನನ್ನನ್ನು ಬೆಂಬಲಿಸಿದ, ಪ್ರೀತಿ ನೀಡಿದ ಪ್ರತಿಯೊಬ್ಬರಿಗೂ ಧನ್ಯವಾದಗಳು. ನೀವೆಲ್ಲರೂ ಪ್ರೋತ್ಸಾಹಿಸಿದ ರೀತಿಗೆ ಖುಷಿಯಾಗುತ್ತಿದೆ. ಅದೇ ರೀತಿ ಈಗ ಒಂದು ವಿವಾದ ಅದೇ ರೀತಿ ನಾನು ಟೋಕಿಯೋ ಒಲಿಂಪಿಕ್ಸ್‌ ಜಾವಲಿನ್ ಥ್ರೋ ಫೈನಲ್‌ನಲ್ಲಿ ಪಾಕಿಸ್ತಾನದ ಆರ್ಶದ್ ನದೀಮ್ ಅವರ ಬಳಿಯಿದ್ದ ಜಾವೆಲಿನ್‌ ಪಡೆದು ಎಸೆದೆ. ಇದನ್ನು ದೊಡ್ಡ ವಿವಾದ ಮಾಡುತ್ತಿದ್ದಾರೆ. ಇದೊಂದು ಅತ್ಯಂತ ಸರಳ ಹಾಗೂ ಸಹಜ ಪ್ರಕ್ರಿಯೆ. ಜಾವಲಿನ್‌ ಪಟು ತಮ್ಮದೇ ಆದ ಜಾವಲಿನ್‌ ಹೊಂದಿರುತ್ತಾರೆ. ಅದನ್ನು ಬೇರೆಯವರು ಸಹ ಬಳಸುತ್ತಾರೆ. ಅದೇ ರೀತಿ ನನ್ನ ಜಾವೆಲಿನ್ ಹಿಡಿದುಕೊಂಡು ಆರ್ಶದ್ ನದೀಂ ಅಭ್ಯಾಸ ನಡೆಸುತ್ತಿದ್ದರು. ಅದರಲ್ಲಿ ಯಾವುದೇ ತಪ್ಪು ಇಲ್ಲ. ಈಗ ನನ್ನ ಸ್ಪರ್ಧೆಯಿದೆ ಎಂದು ಅವರ ಬಳಿಯಿದ್ದ ನನ್ನ ಜಾವೆಲಿನ್ ಪಡೆದುಕೊಂಡು ನನ್ನ ಸ್ಪರ್ಧೆ ಪೂರ್ತಿಗೊಳಿಸಿದೆ. ಇದು ಅಂತಹ ದೊಡ್ಡ ವಿಷಯ ಕೂಡ ಅಲ್ಲ. ನನಗೆ ದುಖಃವಿದೆ. ನನ್ನ ಮನವಿ ಏನೆಂದರೆ, ಈ ರೀತಿ ಮಾಡಬೇಡಿ. ಕ್ರೀಡೆ ಎಲ್ಲರನ್ನೂ ಒಟ್ಟಾಗಿ ಸಾಗುವುದನ್ನು ಕಲಿಸುತ್ತದೆ. ನಾವೆಲ್ಲ ಜಾವೆಲಿನ್ ಥ್ರೋ ಪಟುಗಳು ಪ್ರೀತಿಯಿಂದ ಇರುತ್ತೇವೆ. ನಿಮ್ಮ ಮಾತುಗಳು ನಮಗೆ ಹಿಂಸೆಯಾಗದಿರಲಿ” ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...