Homeಮುಖಪುಟಜವಾದ್ ಚಂಡಮಾರುತ: ಒಡಿಶಾ, ಆಂಧ್ರದ ಕರಾವಳಿಯಲ್ಲಿ ಸ್ಥಳಾಂತರ ಪ್ರಕ್ರಿಯೆ ಆರಂಭ

ಜವಾದ್ ಚಂಡಮಾರುತ: ಒಡಿಶಾ, ಆಂಧ್ರದ ಕರಾವಳಿಯಲ್ಲಿ ಸ್ಥಳಾಂತರ ಪ್ರಕ್ರಿಯೆ ಆರಂಭ

- Advertisement -
- Advertisement -

ಭಾರತೀಯ ಹವಾಮಾನ ಇಲಾಖೆ ಜವಾದ್ ಚಂಡಮಾರುತದ ಎಚ್ಚರಿಕೆ ನೀಡಿದೆ. ಭಾರೀ ಮಳೆಯಾಗುವ ಸಾಧ್ಯತೆಯಿರುವುದರಿಂದ ಒಡಿಶಾ ಮತ್ತು ಆಂಧ್ರಪ್ರದೇಶ ಕರಾವಳಿ ಜಿಲ್ಲೆಗಳಲ್ಲಿ ಸ್ಥಳಾಂತರಿ ಪ್ರಕ್ರಿಯೆ ಆರಂಭಿಸಲಾಗಿದೆ. ಜವಾದ್ ಚಂಡಮಾರುತ ಎಂಬ ಹೆಸರನ್ನು ಸೌದಿ ಅರೇಬಿಯಾ ನೀಡಿದೆ.

ಶನಿವಾರ ಬೆಳಿಗ್ಗೆ ಒಡಿಶಾ ಮತ್ತು ಆಂಧ್ರಪ್ರದೇಶದ ಉತ್ತರ ಕರಾವಳಿಗೆ ಕಾಲಿಟ್ಟಿರುವ ಜವಾದ್ ಚಂಡಮಾರುತ, ಮಧ್ಯಾಹ್ನದ ಹೊತ್ತಿಗೆ ಪುರಿಯ ತೀರವನ್ನು ಮುಟ್ಟುತ್ತದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರಾವಳಿ ತೀರಗಳಲ್ಲಿ ಅಂಗಡಿ, ಮುಂಗಟ್ಟುಗಳನ್ನು ಸ್ಥಳಾಂತರಿಸುವ ಪ್ರಕ್ರಿಯೆ ನಡೆಯುತ್ತಿದೆ.

ಮುನ್ನೆಚ್ಚರಿಕೆಯಾಗಿ ಚಂಡಮಾರುತಕ್ಕೆ ಒಳಗಾಗಲಿವೆ ಎಂದಿರುವ ಪ್ರದೇಶಗಳಲ್ಲಿ ಅರವತ್ನಾಲ್ಕು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡಗಳನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ: ತಮಿಳುನಾಡು ಸಂಸದನ ಮಾನಹಾನಿ: BJP ನಾಯಕನ ವಿರುದ್ಧ 1 ಕೋಟಿ ಮಾನನಷ್ಟ ಮೊಕದ್ದಮೆ

ಆಂಧ್ರಪ್ರದೇಶದ ಶ್ರೀಕಾಕುಳಂ, ವಿಜಯನಗರ ಮತ್ತು ವಿಶಾಖಪಟ್ಟಣಂ ಜಿಲ್ಲೆಗಳಿಗೆ ಶನಿವಾರ ರೆಡ್ ಅಲರ್ಟ್ ಘೋಷಿಸಲಾಗಿದೆ. ಒಡಿಶಾದ ಜಿಲ್ಲೆಗಳಾದ ಗಜಪತಿ, ಗಂಜಾಂ, ಪುರಿ ಮತ್ತು ಜಗತ್‌ಸಿಂಗ್‌ಪುರದಲ್ಲೂ ರೆಡ್ ಅಲರ್ಟ್ ನೀಡಲಾಗಿದೆ.

ಹವಾಮಾನ ಮುನ್ಸೂಚನೆಯಿಂದಾಗಿ ಆಂಧ್ರಪ್ರದೇಶ ಮತ್ತು ಒಡಿಶಾದ ಕರಾವಳಿ ಪ್ರದೇಶಗಳ ಮೂಲಕ ಚಲಿಸುವ 107 ಕ್ಕೂ ಹೆಚ್ಚು ರೈಲುಗಳನ್ನು ರದ್ದುಗೊಳಿಸಲಾಗಿದೆ. ಒಡಿಶಾದ 19 ಜಿಲ್ಲೆಗಳಲ್ಲಿ ಶಾಲೆಗಳನ್ನು ಮುಚ್ಚಲಾಗಿದೆ. ಪುರಿ ಜಿಲ್ಲೆಯಲ್ಲಿ ನಡೆಯುತ್ತಿರುವ ಶಾಸ್ತ್ರೀಯ ನೃತ್ಯ ಉತ್ಸವ, ಕೋನಾರ್ಕ್ ಉತ್ಸವ ಮತ್ತು ಮರಳು ಕಲಾ ಕಾರ್ಯಕ್ರಮ, ಅಂತರರಾಷ್ಟ್ರೀಯ ಮರಳು ಕಲಾ ಉತ್ಸವವನ್ನು ರದ್ದುಗೊಳಿಸಲಾಗಿದೆ.

ಆಂಧ್ರಪ್ರದೇಶದ ಮೂರು ಜಿಲ್ಲೆಗಳಿಂದ 54,000 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ. ರಕ್ಷಣಾ ತಂಡವು ಶ್ರೀಕಾಕುಳಂ ಜಿಲ್ಲೆಯಿಂದ 15,755 ಜನರನ್ನು, ವಿಜಯನಗರದಿಂದ 1,700 ಮತ್ತು ವಿಶಾಖಪಟ್ಟಣದಿಂದ 36,553 ಜನರನ್ನು ಸ್ಥಳಾಂತರಿಸಿದೆ.

ಜನರ ನೆರವಿಗೆ ವಿಪತ್ತು ನಿರ್ವಹಣಾ ಘಟಕಗಳನ್ನು ತೆರೆಯಲಾಗಿದೆ. ಪ್ರಯಾಣಿಕರಿಗೆ ಮಾರ್ಗದರ್ಶನ ನೀಡಲು ಮತ್ತು ಸಹಾಯ ಮಾಡಲು ಪ್ರಮುಖ ರೈಲು ನಿಲ್ದಾಣಗಳಲ್ಲಿ ಸಹಾಯ ಕೇಂದ್ರಗಳನ್ನು ಸಹ ತೆರೆಯಲಾಗಿದೆ.


ಇದನ್ನೂ ಓದಿ: ದೆಹಲಿ ಮಾಲಿನ್ಯಕ್ಕೆ ಪಾಕ್ ಕಾರಣ ಎಂದ ಯುಪಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಛೀಮಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...