Homeಮುಖಪುಟಜವಾದ್ ಚಂಡಮಾರುತ: ಪಶ್ಚಿಮ ಬಂಗಾಳದ ಹಲವು ಭಾಗಗಳಲ್ಲಿ ಭಾರಿ ಮಳೆ, NDRF ತಂಡಗಳ ನಿಯೋಜನೆ

ಜವಾದ್ ಚಂಡಮಾರುತ: ಪಶ್ಚಿಮ ಬಂಗಾಳದ ಹಲವು ಭಾಗಗಳಲ್ಲಿ ಭಾರಿ ಮಳೆ, NDRF ತಂಡಗಳ ನಿಯೋಜನೆ

- Advertisement -
- Advertisement -

ಬಂಗಾಳಕೊಲ್ಲಿಯಲ್ಲಿ ಎದ್ದಿರುವ ಜವಾದ್ ಚಂಡಮಾರುತ ಪೂರ್ವ ಕರಾವಳಿಗೆ ಅಪ್ಪಳಿಸಿದ್ದು, ಪಶ್ಚಿಮ ಬಂಗಾಳದ ದಕ್ಷಿಣ ಭಾಗಗಳು ಮತ್ತು ಕೋಲ್ಕತ್ತಾದಲ್ಲಿ ಭಾರಿ ಮಳೆಗೆ ಕಾರಣವಾಗಿದೆ. ಪಶ್ವಿಮ ಬಂಗಾಳ ಸರ್ಕಾರ ಹೂಗ್ಲಿ ನದಿಯಲ್ಲಿ ದೋಣಿ ಸೇವೆಗಳನ್ನು ನಿಲ್ಲಿಸಿದೆ. ಜೊತೆಗೆ ಸಮುದ್ರತೀರದ ರೆಸಾರ್ಟ್‌ಗಳಿಗೆ ಭೇಟಿ ನೀಡದಂತೆ ಪ್ರವಾಸಿಗರಿಗೆ ಮನವಿ ಮಾಡಿದೆ.

” ಚಂಡಮಾರುತ ಉತ್ತರ-ಈಶಾನ್ಯಕ್ಕೆ ಒಡಿಶಾ ಕರಾವಳಿಯುದ್ದಕ್ಕೂ ಪಶ್ಚಿಮ ಬಂಗಾಳದ ಕಡೆಗೆ ಚಲಿಸುವ ಸಾಧ್ಯತೆಯಿದೆ. ಕೋಲ್ಕತ್ತಾ, ಹೌರಾ, ಉತ್ತರ ಮತ್ತು ದಕ್ಷಿಣ 24 ಪರಗಣಗಳು, ಪುರ್ಬಾ ಮತ್ತು ಪಶ್ಚಿಮ ಮೇದಿನಿಪುರ್‌ನಲ್ಲಿ ಮಳೆಯಾಗಿದೆ” ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ದಕ್ಷಿಣ 24 ಪರಗಣಗಳು ಮತ್ತು ಪುರ್ಬಾ ಮೇದಿನಿಪುರ ಜಿಲ್ಲೆಗಳ ಕರಾವಳಿ ಪ್ರದೇಶಗಳು ಮತ್ತು ಪುರ್ಬಾ ಬರ್ಧಮಾನ್‌ನ ಕೆಲವು ಭಾಗಗಳು ಸೇರಿದಂತೆ ದಕ್ಷಿಣ ಬಂಗಾಳದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.

ವಾರಾಂತ್ಯದಲ್ಲಿ ಸಮುದ್ರ ತೀರದ ರೆಸಾರ್ಟ್‌ಗಳಾದ ದಿಘಾ, ಮಂದರ್‌ಮಣಿ, ಬಕ್ಖಾಲಿ, ಫ್ರೇಜರ್‌ಗಂಜ್ ಮತ್ತು ಇತರ ಕರಾವಳಿ ಪ್ರದೇಶಗಳಿಗೆ ಭೇಟಿ ನೀಡದಂತೆ ರಾಜ್ಯ ಸರ್ಕಾರ ಪ್ರವಾಸಿಗರಲ್ಲಿ ಮನವಿ ಮಾಡಿದೆ. ಬಹುತೇಕ ಎಲ್ಲಾ ಮೀನುಗಾರರು ಕಾಕದ್ವೀಪ್, ದಿಘಾ ಮತ್ತು ಇತರ ಕರಾವಳಿ ಪ್ರದೇಶಗಳಿಗೆ ವಾಪಸ್ ಮರಳಿದ್ದಾರೆ.

ಇದನ್ನೂ ಓದಿ: ಜವಾದ್ ಚಂಡಮಾರುತ: ಒಡಿಶಾ, ಆಂಧ್ರದ ಕರಾವಳಿಯಲ್ಲಿ ಸ್ಥಳಾಂತರ ಪ್ರಕ್ರಿಯೆ ಆರಂಭ

ಪಶ್ಚಿಮ ಬಂಗಾಳ ಸರ್ಕಾರವು ದಕ್ಷಿಣ 24 ಪರಗಣಗಳು ಮತ್ತು ಪುರ್ಬಾ ಮೇದಿನಿಪುರದ ಕರಾವಳಿ ಪ್ರದೇಶಗಳಿಂದ ಸುಮಾರು 17,900 ಜನರನ್ನು ಬೇರೆಡೆಗೆ ಸ್ಥಳಾಂತರಿಸಿದ್ದು, ಎರಡು ಜಿಲ್ಲೆಗಳಲ್ಲಿ 48 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ. ತುರ್ತು ಪರಿಸ್ಥಿತಿಯನ್ನು ಎದುರಿಸಲು ಆಡಳಿತವು 115 ವಿವಿಧೋದ್ದೇಶ ಸೈಕ್ಲೋನ್ ಶೆಲ್ಟರ್‌ಗಳನ್ನು ಮತ್ತು 135 ಹೆಚ್ಚುವರಿ ತಾತ್ಕಾಲಿಕ ಪರಿಹಾರ ಆಶ್ರಯಗಳನ್ನು ತೆರೆದಿದೆ” ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.

ಇನ್ನೆರಡು ದಿನಗಳಲ್ಲಿ ಭಾರೀ ಮಳೆಯಾಗಲಿದ್ದು, ಯಾವುದೇ ಸಮಸ್ಯೆ ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಎಲ್ಲಾ ಸಿಬ್ಬಂದಿಯ ವಾರದ ರಜೆ ಹಾಗೂ ಇತರೆ ರಜೆಗಳನ್ನು ರದ್ದುಗೊಳಿಸಲಾಗಿದೆ ಎಂದಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಹತ್ತೊಂಬತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳನ್ನು ನಿಯೋಜಿಸಲಾಗಿದೆ. ರಾಜ್ಯ ವಿದ್ಯುತ್ ಮತ್ತು ಲೋಕೋಪಯೋಗಿ ಇಲಾಖೆಗಳು ಮತ್ತು ರಾಜ್ಯ ವಿದ್ಯುತ್ ವಿತರಣಾ ಕಂಪನಿಯ (WBSEDCL) ತಂಡಗಳನ್ನು ನಿರ್ಣಾಯಕ ಹಂತಗಳಲ್ಲಿ ನಿಯೋಜಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪರಿಸ್ಥಿತಿಯನ್ನು ನಿರಂತರವಾಗಿ ಗಮನಿಸುತ್ತಿದ್ದು, ಮಾಹಿತಿ ಪಡೆಯುತ್ತಿದ್ದಾರೆ. ಮುನ್ಸಿಪಲ್ ಸಂಸ್ಥೆಗಳ ಅಧಿಕಾರಿಗಳು ಎಲ್ಲ ಎಚ್ಚರಿಕೆ ತೆಗೆದುಕೊಳ್ಳುತ್ತಿದ್ದಾರೆ ಎಂದು ರಾಜ್ಯ ಸಚಿವ ಫಿರ್ಹಾದ್ ಹಕೀಮ್ ಹೇಳಿದ್ದಾರೆ.


ಇದನ್ನೂ ಓದಿ: ಗುಲಾಬ್ ಚಂಡಮಾರುತ: ಆಂಧ್ರ, ಒಡಿಶಾದಲ್ಲಿ ಭಾರಿ ಕಟ್ಟೆಚ್ಚರ, ರಾಜ್ಯದಲ್ಲಿ 2 ದಿನ ಮಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...