Homeಮುಖಪುಟನೆಹರು ಒಬ್ಬ ನೈಜ ಭಾರತೀಯ ಜಾತ್ಯತೀತ ವ್ಯಕ್ತಿ: ಇಂದಿನ ಕೋಮುವಾದಕ್ಕೆ ಅವರನ್ನು ದೂರಬೇಡಿ

ನೆಹರು ಒಬ್ಬ ನೈಜ ಭಾರತೀಯ ಜಾತ್ಯತೀತ ವ್ಯಕ್ತಿ: ಇಂದಿನ ಕೋಮುವಾದಕ್ಕೆ ಅವರನ್ನು ದೂರಬೇಡಿ

ಆಧ್ಯಾತ್ಮಿಕ ಪ್ರಜ್ಞೆ ಮತ್ತು ಅದರೊಂದಿಗೆ ಬೆಸೆದಿರುವ ಮಣ್ಣಿನ ಗುಣವೇ ನೆಹರು ಅವರನ್ನು ಸಾಮಾನ್ಯ ಜನರೆಡೆಗೆ ಆಕರ್ಷಿಸಿತ್ತು.

- Advertisement -
- Advertisement -

| ಅಪೂರ್ವಾನಂದ | ದೆಹಲಿ ವಿ.ವಿ ಪ್ರಾಧ್ಯಾಪಕರು

ಕನ್ನಡಕ್ಕೆ: ರಾಜಶೇಖರ್ ಅಕ್ಕಿ

ಭಾರತೀಯರು ತಮ್ಮ ಧಾರ್ಮಿಕತೆಯ ಬಗ್ಗೆ ಕೀಳರಿಮೆ ಹೊಂದುವಂತೆ ಮಾಡಿದ್ದು ನೆಹರು ಎಂದು ಕೆಲವರು ದೂರುತ್ತಾರೆ. ಆದರೆ ಇದು ಸತ್ಯಕ್ಕೆ ತುಂಬಾ ದೂರ. ನೆಹರುರವರ ಮೇಲೆ ಮಾಡಲಾಗುವ ಆಪಾದನೆಗಳ ಬಗ್ಗೆ ಚರ್ಚಿಸುವ.

ಭಾರತೀಯರ ಪವಿತ್ರತೆಯ ಭಾವನೆಯನ್ನು ಕಸಿದುಕೊಂಡಿರುವುದು ನೆಹರು ಮಾಡಿದ ಅಪರಾಧ ಎನ್ನಲಾಗುತ್ತದೆ. ಧಾರ್ಮಿಕತೆಯ ಬಗ್ಗೆ ಕೀಳರಿಮೆ ಮತ್ತು ಒಂದು ತರಹದ ತಪ್ಪಿತಸ್ಥ ಭಾವನೆಯನ್ನು ಸೃಷ್ಟಿಸಿ, ವೈಯಕ್ತಿಕ ಮತ್ತು ಸಾಮೂಹಿಕ ಜೀವನದಲ್ಲಿ ಒಂದು ರೀತಿಯ ಶೂನ್ಯವನ್ನು ಸೃಷ್ಟಿಸುವಂತೆ ಮಾಡಿದರು ಎಂದು ನೆಹರು ಅವರ ಟೀಕಾಕಾರರು ಹೇಳುತ್ತಾರೆ. ಮಹಾತ್ಮಾ ಗಾಂಧಿಯವರ ಅಂತ್ಯದೊಂದಿಗೆ ದೇಶಕ್ಕೆ ಅಪ್ಪಳಿಸಿದ ವಿಪತ್ತು ಎಂದರೆ ಪವಿತ್ರತೆ ಕಾಣೆಯಾಗಿರುವುದು ಎಂತಲೂ ಹೇಳಲಾಗಿದೆ. ಭಾರತದ ಮೊದಲ ಪ್ರಧಾನಿಯಾಗಿ ದೇಶದ ವಿಧಿಯನ್ನು ಬರೆದ ನೆಹರು ಧಾರ್ಮಿಕ ವ್ಯಕ್ತಿಯಾಗಿರಲಿಲ್ಲ ಹಾಗೂ ಜಾತ್ಯತೀತತೆಯನ್ನು ದೀರ್ಘಕಾಲದವರೆಗೆ ಉಳಿಸಿಕೊಂಡು ಬಂದು, ನಮ್ಮನ್ನೆಲ್ಲ ಎಚ್ಚರವಾಗಿಟ್ಟಿದ್ದು ನೆಹರು ಆಳ್ವಿಕೆ ಎನ್ನಬಹುದು. ಕೋಮುವಾದ ಎನ್ನುವುದು ನೆಹರು ಅವರ ಈ ಜಾತ್ಯತೀತತೆಯ ಅಸ್ವಾಭಾವಿಕ ಹೇರಿಕೆಯಿಂದ ಹುಟ್ಟಿದ್ದು ಎನ್ನಲಾಗುತ್ತದೆ.

ಅದೇ ಸಮಯದಲ್ಲಿ ಅದೇ ಟೀಕಾಕಾರರು, ನೆಹರು ಅವರು ಭಾರತೀಯತೆಯನ್ನು ಹೊಂದಿದ್ದಿಲ್ಲ, ಅವರು ಪಾಶ್ಚಾತ್ಯ ನೋಟವನ್ನು ಮತ್ತು ನಿಲುವನ್ನು ಹೊಂದಿದ್ದರು ಎಂದೂ ಆಪಾದಿಸುತ್ತಾರೆ. ಅಲ್ಲಿ ನೆಹರು ಅವರನ್ನು ಗಾಂಧಿಯೊಂದಿಗೆ ಹೋಲಿಸುತ್ತಾರೆ; ಗಾಂಧಿಜೀಯವರು ನೈಜ ಭಾರತೀಯರಾಗಿದ್ದರು ಎಂದು ಹೇಳುತ್ತಾರೆ. ಭಾರತೀಯ ಎಂದ ಕೂಡಲೇ ಪವಿತ್ರತೆಯನ್ನು ಬಿಂಬಿಸುತ್ತಾರೆ ಅಥವಾ ಪಾಶ್ಚಾತ್ಯ ಎನ್ನುವುದು ಪವಿತ್ರತೆಯನ್ನು ಹೊಂದೇ ಇಲ್ಲ ಎನ್ನವುಂತೆ ಮಾತನಾಡುತ್ತಾರೆ. ನಾವು ನೆನಪಿಡಬೇಕಾದದ್ದೇನೆಂದರೆ, ಗಾಂಧಿಜಿಯ ಫಿಲಾಸಫಿಯು ಅನೇಕ ಪಾಶ್ಚಾತ್ಯ ಮೂಲಗಳನ್ನು ಹೊಂದಿತ್ತು ಹಾಗೂ ಅವರು ಪ್ರತಿಪಾದಿಸಿದ ಸೇವೆಯ ಪರಿಕಲ್ಪನೆಯು ಗಾಂಧೀಜಿಯ ಕ್ರಿಶ್ಚಿಯಾನಿಟಿಯೊಂದಿಗೆ ಆದ ಸಂಬಂಧಗಳಿಂದ ಪ್ರೇರಿತವಾಗಿತ್ತು ಎನ್ನುವುದು. ಇತರೆ ಧರ್ಮಗಳ ಅನುಭವಗಳಿಗೆ ಅವರು ಇಟ್ಟಿದ್ದ ತೆರೆದ ಮನವೇ ಗಾಂಧೀಜಿಯ ಸೃಜಶೀಲತೆಗೆ ಕಾರಣವಾಗಿತ್ತು. ಈ ನಿಟ್ಟಿನಲ್ಲಿ ಅವರು ರಾಮಕೃಷ್ಣ ಪರಮಹಂಸರನ್ನು ಹೋಲುತ್ತಾರೆ, ಅವರ ಆತ್ಮವಿಶ್ವಾಸ ಎಷ್ಟಿತ್ತೆಂದರೆ, ತಮ್ಮ ಧರ್ಮದ ಬಗ್ಗೆ ಚಿಂತಿಸದೇ ಬೇರೆ ಧರ್ಮಗಳೆಡೆಗೆ ಹೋದರು.

ಪರಮಹಂಸರ ಬಗ್ಗೆ ಬರೆಯುತ್ತ ನೆಹರು ಹೇಳಿದ್ದು, “ಶಿಕ್ಷಣ ಪಡೆಯದ ಈ ವ್ಯಕ್ತಿಯ ಬಗ್ಗೆ ವ್ಯಂಗ್ಯ ಮಾಡುವವರೇ ಈ ದೇವರ ಮನುಷ್ಯನ ಎದುರಿಗೆ ತಲೆಬಾಗಿಸಿದರು ಹಾಗೂ ವ್ಯಂಗ್ಯ ಮಾಡುವುದನ್ನು ಬಿಟ್ಟು ಪ್ರಾರ್ಥನೆ ಮಾಡುವುದರಲ್ಲಿ ನಿರತರಾದರು. ಒಂದೇ ಸಲ ಪರಮಹಂಸರ ಸಂಪರ್ಕಕ್ಕೆ ಬಂದ ಅನೇಕರು ತಮ್ಮ ವೃತ್ತಿಯನ್ನು ತ್ಯಜಿಸಿದರು, ಅವರಲ್ಲಿ ಸ್ವಾಮಿ ವಿವೇಕಾನಂದ ಶ್ರೇಷ್ಠ.”

ನೆಹರು ತಮ್ಮನ್ನು ತಾವು ‘ಭೂಮಿಯ ಮನುಷ್ಯ’ (ಮ್ಯಾನ್ ಆಫ್ ಅರ್ಥ್) ಎಂದು ಕರೆದುಕೊಂಡರು ಆದರೆ ‘ಯಾವುದೇ ಭೂಮಿಯ ಮನುಷ್ಯನೂ ದೇವರ ಮನುಷ್ಯನಿಂದ ಪ್ರಭಾವಿತನಾಗಬಹುದು’ ಎಂದೂ ಹೇಳಿದರು. ‘ದೇವರ ಮನುಷ್ಯನ’ ಮನಸ್ಸನ್ನು ಸಾಮಾನ್ಯ ಜನರು ಅರ್ಥ ಮಾಡಿಕೊಳ್ಳಲಾರರು, ಅದನ್ನು ಒಳಗಾಣ್ಕೆಯಿಂದ ಮಾತ್ರ ಅರ್ಥೈಸಿಕೊಳ್ಳಬಹುದು. ಗಾಂಧೀಜಿಯವರೊಂದಿಗೆ ಇದ್ದ ನೆಹರು ಅವರ ಸಂಬಂಧವು ತರ್ಕಹೀನತೆಯ ಅಂಶಗಳನ್ನು ಒಳಗೊಂಡಿತ್ತು ಏಕೆಂದರೆ, ಅನೇಕ ಮಹತ್ವಪೂರ್ಣ ವಿಷಯಗಳಲ್ಲಿ ಅವರು ಮೂಲಭೂತ ವ್ಯತ್ಯಾಸಗಳನ್ನು ಹೊಂದಿದ್ದರು.

ಇದನ್ನು ಓದಿ: ಗಾಂಧಿ, ನೆಹರೂ, ಪಟೇಲ್ ಬಾಂಧವ್ಯದ ಬಗ್ಗೆ ಮೋದಿಗೇನು ಗೊತ್ತು….

ನೆಹರು ಮತ್ತು ಗಾಂಧಿ ಇಬ್ಬರನ್ನು ಬೆಸೆದ ಒಂದು ಕೊಂಡಿಯೆಂದರೆ, ಅವರಿಬ್ಬರಿಗೂ ಭಾರತದ ಸಾಮಾನ್ಯ ಜನತೆಯ ಬುದ್ಧಿಮತ್ತೆಯ ಬಗ್ಗೆ ಇದ್ದ ನಂಬಿಕೆ. ಗಾಂಧಿಯವರು ಕಾಂಗ್ರೆಸ್ ತನ್ನ ಬಾಗಿಲುಗಳನ್ನು ಅಶಿಕ್ಷಿತ ಜನರಿಗೆ ತೆಗೆಯುವಂತೆ ಮಾಡಿದರು ಹಾಗೂ ನೆಹರು ಅವರು ತಮ್ಮ ರಾಜಕೀಯ ಕಲಿಕೆಯನ್ನು ಉತ್ತರಪ್ರದೇಶದ ಹಳ್ಳಿಗಳಲ್ಲಿ ಪಡೆದರು. ‘ಭಾರತದ ಜನತೆ ಒಂದು ನಿರ್ದಿಷ್ಟ ಗುಣಮಟ್ಟ ಮತ್ತು ವ್ಯಕ್ತಿತ್ವವನ್ನು ಹೊಂದಿದ್ದಾರೆ, ಒಂದು ಮೂಲ ಸಾಂಸ್ಕೃತಿಕ ಪರಂಪರೆ ಹೊಂದಿದ್ದು, ಅದೇ ಅವರೆಲ್ಲರೂ ಕಾರ್ಯನಿರ್ವಹಿಸುವಂತೆ ಮಾಡುತ್ತದೆ’ ಎಂದು ನೆಹರು ಅವರು ಪತ್ರಕರ್ತ ಆರ್.ಕೆ. ಕರಂಜಿಯಾ ಅವರಿಗೆ ಒಂದು ಸಂದರ್ಶನದಲ್ಲಿ ಹೇಳಿದ್ದರು.

ಗ್ರಾಮ್ಯ ಪ್ರಜ್ಞೆ (ರಸ್ಟಿಕ್ ವಿಸ್‍ಡಮ್)

ಸಾಮಾನ್ಯ ಜನರ ಪ್ರಜ್ಞೆ, ತಿಳುವಳಿಕೆಯ ಬಗ್ಗೆ ನೆಹರು ಅವರಿಗಿದ್ದ ಮೆಚ್ಚುಗೆ ನಿಜವಾದ ಮೆಚ್ಚುಗೆಯಾಗಿತ್ತು. ‘ಸಾಮಾನ್ಯ ಜನರ ಜೀವನ ಹಳೆಯ ಸಂಸ್ಕೃತಿ ಮತ್ತು ಪರಂಪರೆಯಿಂದ ತುಂಬಿದ್ದನ್ನು ನೋಡುವುದು ನಿಜವಾಗಿಯೂ ಅದ್ಭುತ. ಪ್ರತಿಯೊಂದು ಸಂಭಾಷಣೆಯಲ್ಲಿ ಅವರು ಯಾವುದೋ ಹಳೆಯ ಕಥೆಯನ್ನು ಅಥವಾ ತುಳಸೀದಾಸರ ಪಂಕ್ತಿಗಳನ್ನು ಬಳಸುತ್ತಲೇ ಇರುತ್ತಾರೆ. ಈ ಪುರಾತನ ಸಂಸ್ಕೃತಿಯಲ್ಲಿ ಏನೋ ಇದೆ, ಅದೇ ನಮ್ಮ ಜೀವನಕ್ಕೆ ಸಮತೋಲನ ಮತ್ತು ವೈಶಿಷ್ಟ ನೀಡುತ್ತದೆ’ ಇದು ನೆಹರು ಅವರ ಬರಹ.

ಇದೇ ಆಧ್ಯಾತ್ಮಿಕ ಪ್ರಜ್ಞೆ ಮತ್ತು ಅದರೊಂದಿಗೆ ಬೆಸೆದಿರುವ ಮಣ್ಣಿನ ಗುಣವೇ ನೆಹರು ಅವರನ್ನು ಸಾಮಾನ್ಯ ಜನರೆಡೆಗೆ ಆಕರ್ಷಿಸಿತ್ತು. ಸಾಮಾನ್ಯ ಜನರೊಂದಿಗೆ ಬೆರೆಯುವುದರಿಂದಲೇ ಪವಿತ್ರತೆಯ ಬಗ್ಗೆ ತಮ್ಮ ಪರಿಕಲ್ಪನೆಯನ್ನು ನೆಹರು ಸೃಷ್ಟಿಸಿದ್ದರು. ಅದರೊಂದಿಗೆ ನಿಸ್ಸಂಶಯವಾಗಿ ಅತ್ಯಂತ ಶ್ರೇಷ್ಠ ಸಾಮಾನ್ಯ ವ್ಯಕ್ತಿಯಾದ ಗಾಂಧಿಯವರೊಂದಿಗಿನ ವ್ಯವಹಾರವೂ ಪವಿತ್ರತೆಯ ಪರಿಕಲ್ಪನೆ ಪ್ರಭಾವಿಸಿತು. ಗಾಂಧಿ ಬಗ್ಗೆ ಅವರು ಬರೆದದ್ದು, “ಗಾಂಧಿ ಅರಿವಿನ ತಿರುಳು ಹಾಗೂ ಲಕ್ಷಾಂತರ ಜನರ ಸುಪ್ತ ಸಂಕಲ್ಪವಾಗಿದ್ದಾರೆ, ಅತೀವ ಪ್ರಜ್ಞೆಯುಳ್ಳ, ಒಳ್ಳೆಯ ಭಾವನೆಯ, ಉತ್ತಮ ಅಭಿರುಚಿಯ, ವಿಶಾಲ ನೋಟದ, ಅತ್ಯಂತ ಮಾನವೀಯವುಳ್ಳ ವ್ಯಕ್ತಿಯಾಗಿದ್ದು, ಅದರೊಂದಿಗೆ ತನ್ನ ಬಯಕೆ ಮತ್ತು ಭಾವನೆಗಳನ್ನು ನಿಗ್ರಹಿಸಿ, ಅವುಗಳನ್ನು ಪಾರಮಾರ್ಥಿಕ ದಾರಿಗಳೆಡೆಗೆ ಹರಿಸಿದ ವ್ಯಕ್ತಿ ಗಾಂಧಿ”

‘ಗಾಂಧಿಜಿಯ ಪ್ರಜಾಪ್ರಭುತ್ವದ ಕಲ್ಪನೆ ಖಂಡಿತವಾಗಿಯೂ ಆಧ್ಯಾತಿಕವಾದದ್ದು. ಸಾಮಾನ್ಯ ಅರ್ಥದಲ್ಲಿ ಅವರ ಕಲ್ಪನೆಗೂ ಪ್ರಜಾಪ್ರಭುತ್ವಕ್ಕೆ ಸಂಖ್ಯೆ ಅಥವಾ ಮೆಜಾರಿಟಿ ಅಥವಾ ಪ್ರಾತಿನಿಧ್ಯಕ್ಕೂ ಸಂಬಂಧವಿಲ್ಲ. ಅದು ಸೇವೆ ಮತ್ತು ತ್ಯಾಗದ ನೆಲೆಯನ್ನು ಹೊಂದಿದೆ ಹಾಗೂ ನೈತಿಕ ಒತ್ತಡವನ್ನು ಬಳಸುತ್ತದೆ”.

ಗಾಂಧಿ ಬ್ರಿಟಿಷರಿಗೆ ಮತ್ತು ತನ್ನಂಥವರಿಗೂ ಬಿಡಸಲಾಗದ ಕಗ್ಗಂಟಾಗಿದ್ದರು ಎಂತಲೂ ನೆಹರು ಬರೆಯುತ್ತಾರೆ. ಅದನ್ನು ಮುಂದುವರೆಸಿ. “ಆದರೆ ಭಾರತ ಗಾಂಧಿಯನ್ನು ಅರ್ಥೈಸಿಕೊಳ್ಳುತ್ತದೆ, ಅಥವಾ ಅವರ ಪ್ರಶಂಸೆಯನ್ನಂತೂ ಮಾಡುತ್ತದೆ, ಪ್ರವಾದಿಯಂತಹ-ಧಾರ್ಮಿಕ ವ್ಯಕ್ತಿ, ಪಾಪ ಮತ್ತು ಮೋಕ್ಷ ಮತ್ತು ಅಹಿಂಸೆಯ ಬಗ್ಗೆ ಮಾತನಾಡುವ ಈ ವ್ಯಕ್ತಿಯನ್ನು ಭಾರತ ಅರ್ಥೈಸಿಕೊಳ್ಳುತ್ತದೆ. ತಮ್ಮ ತ್ಯಾಗದ ತೀವ್ರತೆ ಮತ್ತು ಸ್ವಯಂಪ್ರೇರಿತ ಪಶ್ಚಾತ್ತಾಪದಿಂದ ಪುಣ್ಯದ ಬೆಟ್ಟವನ್ನೇ ನಿರ್ಮಿಸಿದ, ಅದರಿಂದ ಕೆಲವು ದೇವರನ್ನೇ ಹೆದರಿಸಿದ ಮತ್ತು ಸ್ಥಾಪಿತ ಕ್ರಮಗಳನ್ನು ಅಲುಗಾಡಿಸಿದ  ಶ್ರೇಷ್ಠ ಸಂತರ ಕಥೆಗಳು ಭಾರತೀಯ ಪುರಾಣಗಳಲ್ಲಿ ಅನೇಕಬಾರಿ ಕಾಣಿಸಿಕೊಳ್ಳುತ್ತವೆ. ಯಾವುದೋ ಒಂದು ಎಂದೂ ಬರಿದಾಗದ ಬತ್ತಳಿಕೆಯಿಂದ ಹೊರಬರುವ, ಗಾಂಧೀಜಿಯ ಆಂತರಿಕ ಶಕ್ತಿ ಮತ್ತು ಅದ್ಭುತ ಚೈತನ್ಯವನ್ನು ನೋಡಿದಾಗ ನನ್ನ ಕಣ್ಣೆದುರಿಗೆ ಈ ಪುರಾಣದ ಕಥೆಗಳೇ ಬರುತ್ತವೆ.”

ಅಸಾಧಾರಣ ಮೈತ್ರಿ

ಗಾಂಧಿ ಮತ್ತು ನೆಹರು ಅವರ ನಡುವೆ ಇದ್ದ ಮೈತ್ರಿಯನ್ನು ಅರ್ಥೈಸಿಕೊಳ್ಳುವಲ್ಲಿ ಅನೇಕರಿಗೆ ಕಷ್ಟವಾಗಿದೆ. ಅವರಿಬ್ಬರ ನಡುವೆ ಇದ್ದ ಸಂಬಂಧಕ್ಕೆ ಮೈತ್ರಿ ಎನ್ನುವ ಪದ ಸಾಕಾಗುವುದಿಲ್ಲವೇನೋ. ಅವರ ಸಂಬಂಧ ರಾಜಕೀಯದ್ದಾಗಿತ್ತು ಆದರೆ ಅದಕ್ಕಿಂತ ಮಿಗಿಲಾಗಿ ಆಧ್ಯಾತ್ಮಿಕವಾಗಿತ್ತು.

ಗಾಂಧಿಯವರ ನಾಯಕತ್ವವನ್ನು ಒಪ್ಪಿಕೊಂಡು, ತಮ್ಮ ನಡುವೆ ಇದ್ದ ವ್ಯತ್ಯಾಸಗಳ ಹೊರತಾಗಿಯೂ ಅವರನ್ನು ಅನುಸರಿಸಿದ್ದು, ತನ್ನ ವೈಜ್ಞಾನಿಕ ವೈಚಾರಿಕತೆಯು ಎಂದೂ ಅರ್ಥಮಾಡಿಕೊಳ್ಳದ ಒಳಅರಿವು(ಇನ್‍ಸ್ಟಿಂಕ್ಟ್)ಗಳು ಹೇಳಿದ್ದನನ್ನು ಪಾಲಿಸಿದರು ನೆಹರು. ತಮ್ಮ ತರ್ಕಬದ್ಧತೆಯ ಮಿತಿಗಳನ್ನು ಅರಿತು ವೈಜ್ಞಾನಿಕ ಸತ್ಯದ ಮಿತಿಗಳ ಬಗ್ಗೆಯೂ ತಿಳಿದುಕೊಂಡಿದ್ದರು. ನೆಹರು ಅವರಿಗೆ ತನ್ನ ಮಿತಿಗಳನ್ನು ಮೀರುವುದು, ತನ್ನನ್ನೇ ಮೀರುವುದು ಅತ್ಯಂತ ಮುಖ್ಯವಾಗಿತ್ತು. ಅದೇ ಕಾರಣಕ್ಕಾಗಿಯೇ ಗಾಂಧಿಯ ನಂತರ ನೆಹರು ಅವರ ಮೇಲೆ ಅತ್ಯಂತ ದೊಡ್ಡ ಪ್ರಭಾವ ಬೀರಿದ್ದು ಬುದ್ಧ.

ಬುದ್ಧನ ಬಗ್ಗೆ ನೆಹರು ಮೊದಲಿಗೆ ಅಸ್ಪಷ್ಟ ನಿಲುವನ್ನು ಹೊಂದಿದ್ದರು. ಬುದ್ಧ ನಿರಾಶಾವಾದಿಯೇ? ಅವರು ನಿಷ್ಕ್ರಿಯತೆಯನ್ನು ಪ್ರತಿಪಾದಿಸುತ್ತಾರೆಯೇ? ಬುದ್ಧನ ದಾರಿಯು ಜೀವನದ ಸಂಘರ್ಷಗಳಿಂದ ಪಲಾಯನದ ದಾರಿಯೇ? ಆದರೆ ಅವರನ್ನು ಆಳವಾಗಿ ಅಭ್ಯಸಿಸಿದಾಗ ಅವರಿಗೆ ತಿಳಿದದ್ದು ಬುದ್ಧ ‘ಇಡೀ ಭಾರತೀಯ ಚಿಂತನೆಯ ಆತ್ಮವನ್ನು ಬಿಂಬಿಸುತ್ತಾರೆ’ ಎನ್ನುವುದು.

“ಕಮಲಪುಷ್ಪದಲ್ಲಿ ಕುಳಿತ, ಶಾಂತ ಮತ್ತು ನಿರ್ವಿಕಾರ, ಭಾವನೆ ಮತ್ತು ಆಸೆಗಳನ್ನು ಮೀರಿದ, ಈ ಜಗತ್ತಿನ ಕಲಹ ಮತ್ತು  ಕೋಲಾಹಲದ ಎಲ್ಲೆ ಮೀರಿದ, ಕೈಗೆಟುಕದಷ್ಟು ದೂರದಲ್ಲಿರುವ, ನಾವು ಸಾಧಿಸಲಾಗಿದ ಬುದ್ಧ. ಆದರೆ ನಾವು ಆ ನಿಶ್ಚಲ ಮೂರ್ತಿಯ ಹಿಂದೆ ನೋಡಿದರೆ, ಅಲ್ಲಿ ಭಾವೋದ್ರೇಕವಿದೆ ಹಾಗೂ ಒಂದು ಭಾವನೆಯಿದೆ, ನಾವು ಕಂಡ ಭಾವೋದ್ರೇಕ ಮತ್ತು ಭಾವನೆಗಳಿಗಿಂದ ಶಕ್ತಿಶಾಲಿಯಾದ ಮತ್ತು ವಿಚಿತ್ರವಾದ ಭಾವನೆಗಳು ಕಾಣುತ್ತವೆ.”

ತಮ್ಮನ್ನು ಮತ್ತು ತಮ್ಮ ಆಯಸ್ಸನ್ನು ಮೀರುವ ಶಕ್ತಿ ಹೊಂದಿದ್ದ ಬುದ್ಧ, ಗಾಂಧಿ ಮತ್ತು ಪರಮಹಂಸರಿಂದ ಆಕರ್ಷಿತರಾಗಿದ್ದರು ನೆಹರು. “ಮನುಷ್ಯನನ್ನು ಮುಂದುವರೆಸುವ ಹಂಬಲ, ಎಲ್ಲೆಗಳನ್ನು ಮೀರುವ ಹಂಬಲ, ಅದರೊಂದಿಗೆ ಭೌತಿಕ ಯೋಗಕ್ಷೇಮದ ಸ್ವಾಭಾವಿಕ ಹಂಬಲವಿರುತ್ತದೆಯೇ ಹೊರತು ಹಿಂಸೆ ಮತ್ತು ವರ್ಗ ಸಂಘರ್ಷವನ್ನು ಮುಂದುವರೆಸುವ ನಡೆಯಿರುವುದಿಲ್ಲ.” ಇದೇ ನೆಹರು ಅವರು ಕಂಡ ಒಬ್ಬ ಸಮಗ್ರ ಮನುಷ್ಯನ ಕನಸು ಎಂದು ಆ್ಯಂಥನಿ ಪರೆಲ್ ಅವರು ಹೇಳುತ್ತಾರೆ.

ಆ್ಯಂಥನಿ ಪರೆಲ್ ಅವರು ನೆಹರು ಅವರನ್ನು ಬಣ್ಣಿಸುವಾಗ ‘ಧರ್ಮ ಮತ್ತು ಮೋಕ್ಷ’ ಎನ್ನುವ ಪದಗಳನ್ನು ಬಳಸುತ್ತಾರೆ, ಅದಕ್ಕೆ ನೆಹರುವಾದಿಗಳು ಆಕ್ಷೇಪ ವ್ಯಕ್ತಪಡಿಸಬಹುದು, ಆದರೆ ನೆಹರು ಅವರ ವಿಷನ್ ಭೌತಿಕ ಸಾಧನೆಗಳನ್ನು ಮೀರಿದ್ದಾಗಿತ್ತು ಎನ್ನುವುದನ್ನು ಅವರೂ ಒಪ್ಪುತ್ತಾರೆ. ದೇಶದ ಜನರ ಬಗ್ಗೆ ನೆಹರುಗೆ ಅಪಾರ ಗೌರವ ಇತ್ತು; ತಮ್ಮ ಲೌಕಿಕ ವ್ಯಕ್ತಿತ್ವವನ್ನು ಮೀರುವ ಸಾಮಥ್ರ್ಯ ಹೊಂದಿದ್ದಾರೆ ಎಂದು ನೆಹರು ಬಲವಾಗಿ ನಂಬಿದ್ದರು. ದೇಶದ ಜನತೆ ನೆಹರು ಅವರ ನಂಬಿಕೆ ತಪ್ಪಲ್ಲ ಎಂದು ತೋರಿಸುತ್ತಾರೆ ಎಂದು ಆಶಿಸಬಹುದಷ್ಟೆ.


ಇದನ್ನೂ ಓದಿ: ಮಗಳಿಗೆ ತಂದೆಯ ಓಲೆಗಳು : ಇಂದಿರಾಗೆ ಜವಹರಲಾಲ್ ನೆಹರು ಪತ್ರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ನೆಹರು ಗುಣಗಾನಕ್ಕೆ ನಿಮಗೆ ಸಾಷ್ಟಾಂಗ 100 ಕೋಟಿ ವಂದನೆಗಳು ನೀವೆಲ್ಲ ಹೆಮ್ಮೆಯ ಭಾರತೀಯರು

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...