Homeಮುಖಪುಟ'ಇವಿಎಂ' ತಿರುಚಲು ಶಿವಸೇನಾ ನಾಯಕನಿಗೆ 2.5 ಕೋಟಿ ರೂ.ಬೇಡಿಕೆ ಇಟ್ಟ ಯೋಧ!

‘ಇವಿಎಂ’ ತಿರುಚಲು ಶಿವಸೇನಾ ನಾಯಕನಿಗೆ 2.5 ಕೋಟಿ ರೂ.ಬೇಡಿಕೆ ಇಟ್ಟ ಯೋಧ!

- Advertisement -
- Advertisement -

ವಿದ್ಯುನ್ಮಾನ ಮತಯಂತ್ರಗಳನ್ನು(ಇವಿಎಂ) ತಿರುಚಲು ಶಿವಸೇನಾ ಉದ್ಧವ್‌ ಬಣದ ನಾಯಕ ಅಂಬಾದಾಸ್ ದನ್ವೆ ಅವರಿಂದ 2.5 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟಿದ್ದಕ್ಕಾಗಿ ಮಹಾರಾಷ್ಟ್ರ ಪೊಲೀಸರು ಛತ್ರಪತಿ ಸಂಭಾಜಿನಗರದಲ್ಲಿ ಸೇನಾ ಯೋಧನೋರ್ವನನ್ನು ಬಂಧಿಸಿದ್ದಾರೆ.

ಮಾರುತಿ ಧಕ್ನೆ(42) ವಿರುದ್ಧ ದೂರು ದಾಖಲಾಗಿದ್ದು, ಅವರು ಚಿಪ್ ಬಳಸಿ ಇವಿಎಂಗಳನ್ನು ತಿರಚಬಹುದು ಎಂದು ಹೇಳಿ ಹಣವನ್ನು ಕೋರಿದ್ದಾರೆ ಎಂದು ಆರೋಪಿಸಲಾಗಿದೆ. ನಿರ್ದಿಷ್ಟ ಅಭ್ಯರ್ಥಿಯ ಪರವಾಗಿ ಈ ರೀತಿಯಾಗಿ ಮಾಡುತ್ತೇವೆ ಎಂದು ಮಾರುತಿ ಧಕ್ನೆ ಹೇಳಿರುವ ಬಗ್ಗೆ ಪಿಟಿಐ ವರದಿ ಮಾಡಿದೆ. ಮಹಾರಾಷ್ಟ್ರದ ಪಥರ್ಡಿಯ ನಿವಾಸಿ ಧಕ್ನೆ ಪ್ರಸ್ತುತ ಜಮ್ಮು ಮತ್ತು ಕಾಶ್ಮೀರದ ಉಧಮ್‌ಪುರದಲ್ಲಿ ನೆಲೆಸಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಪೊಲೀಸರು, ನಮ್ಮ ಆರಂಭಿಕ ತನಿಖೆಯ ವೇಳೆ ಅವರು ದೊಡ್ಡ ಮಟ್ಟದಲ್ಲಿ ಸಾಲವನ್ನು ಹೊಂದಿದ್ದಾರೆಂದು ಹೇಳಿದ್ದಾರೆ, ಆದ್ದರಿಂದ ಹಣವನ್ನು ಗಳಿಸಲು ಈ ಯೋಜನೆಯನ್ನು ಹಾಕಿಕೊಂಡಿದ್ದರು. ಮಾರುತಿ ಧಕ್ನೆ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 420 ಮತ್ತು 511ರಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಛತ್ರಪತಿ ಸಂಭಾಜಿನಗರ ಪೊಲೀಸ್ ಆಯುಕ್ತ ಮನೋಜ್ ಲೋಹಿಯಾ ಈ ಕುರಿತು ಪ್ರತಿಕ್ರಿಯೆಯನ್ನು ನೀಡಿದ್ದು, ಇವಿಎಂಗಳನ್ನು ತಿರುಚಲು ಶಿವಸೇನಾ(ಯುಬಿಟಿ) ನಾಯಕ ಅಂಬಾದಾಸ್ ದನ್ವೆ ಅವರಿಂದ 2.5 ಕೋಟಿ ರೂ.ಗೆ ಬೇಡಿಕೆಯಿಟ್ಟಿದ್ದಕ್ಕಾಗಿ ಜಮ್ಮುವಿನಲ್ಲಿ ನಿಯೋಜಿಸಲಾದ ಸೇನಾ ಯೋಧನನ್ನು ಛತ್ರಪತಿ ಸಂಭಾಜಿನಗರದಲ್ಲಿ ಬಂಧಿಸಲಾಗಿದೆ. ಯೋಧ ಸಾಲವನ್ನು ಹೊಂದಿದ್ದರು. ಇವಿಎಂಗಳ ಬಗ್ಗೆ ಅವರಿಗೆ ಯಾವುದೇ ಜ್ಞಾನ ಇರಲಿಲ್ಲ, ಅವರು ಕೇವಲ ಮೋಸ ಮಾಡುವ ಉದ್ದೇಶದಿಂದ ಈ ರೀತಿ ಬೇಡಿಕೆಯನ್ನು ಇಟ್ಟಿದ್ದಾರೆ ಎಂದು ಹೇಳಿದ್ದಾರೆ.

ಅಂಬಾದಾಸ್ ದಾನ್ವೆ ಅವರನ್ನು ಪುಣೆಯಲ್ಲಿ ಒಮ್ಮೆ ಭೇಟಿಯಾಗಿದ್ದ ಮಾರುತಿ ಧಕ್ನೆ, ಇಂದು ಅವರನ್ನು ಭೇಟಿಯಾಗಿ ಪಕ್ಷದ ಮುಖಂಡರಿಂದ ಹಣ ಪಡೆಯಲು ಬಂದಿದ್ದಾರೆ. ಅವರಿಗೆ 1 ಲಕ್ಷ ರೂಪಾಯಿ ನೀಡುವುದಾಗಿ ಭರವಸೆ ನೀಡಿ ಅವರನ್ನು ಮತ್ತೆ ಕರೆಸಲಾಗಿದೆ. ಈ ಬಗ್ಗೆ ಅಂಬಾದಾಸ್ ದನ್ವೆ ಸಹೋದರ ನೀಡಿದ ದೂರಿನ ಆಧಾರದಲ್ಲಿ ಅವರನ್ನು ಆರ್ಥಿಕ ಅಪರಾಧ ವಿಭಾಗದ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಲೋಕಸಭೆ ಚುನಾವಣೆಯ ಹಿನ್ನೆಲೆ ಈ ಹಿಂದೆ ಔರಂಗಾಬಾದ್ ಎಂದು ಕರೆಯಲಾಗುತ್ತಿದ್ದ ಛತ್ರಪತಿ ಸಂಭಾಜಿನಗರ ಕ್ಷೇತ್ರದಲ್ಲಿ 4ನೇ ಹಂತದಲ್ಲಿ ಮತದಾನ ಮೇ 13ರಂದು ನಡೆಯಲಿದೆ. ಇವಿಎಂ ಪಾರದರ್ಶಕತೆಯ ಬಗ್ಗೆ ಪ್ರಶ್ನೆ ಭುಗಿಲೆದ್ದಿರುವ ಮಧ್ಯೆ ಈ ಬೆಳವಣಿಗೆ ನಿಜಕ್ಕೂ ಪ್ರಕರಣದ ನಿಷ್ಪಕ್ಷಪಾತ ತನಿಖೆಯ ಅವಶ್ಯಕತೆಯನ್ನು ಒತ್ತಿ ಹೇಳುತ್ತಿದೆ.

ಇದನ್ನು ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕ್ರಿಕೆಟ್ ತಂಡದಲ್ಲಿ ಅಲ್ಪಸಂಖ್ಯಾತರಿಗೆ ಆದ್ಯತೆ ನೀಡುತ್ತದೆ: ಮತ್ತೆ ದ್ವೇಷ ಬಿತ್ತಿದ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...