Homeಮುಖಪುಟ'ಇವಿಎಂ' ತಿರುಚಲು ಶಿವಸೇನಾ ನಾಯಕನಿಗೆ 2.5 ಕೋಟಿ ರೂ.ಬೇಡಿಕೆ ಇಟ್ಟ ಯೋಧ!

‘ಇವಿಎಂ’ ತಿರುಚಲು ಶಿವಸೇನಾ ನಾಯಕನಿಗೆ 2.5 ಕೋಟಿ ರೂ.ಬೇಡಿಕೆ ಇಟ್ಟ ಯೋಧ!

- Advertisement -
- Advertisement -

ವಿದ್ಯುನ್ಮಾನ ಮತಯಂತ್ರಗಳನ್ನು(ಇವಿಎಂ) ತಿರುಚಲು ಶಿವಸೇನಾ ಉದ್ಧವ್‌ ಬಣದ ನಾಯಕ ಅಂಬಾದಾಸ್ ದನ್ವೆ ಅವರಿಂದ 2.5 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟಿದ್ದಕ್ಕಾಗಿ ಮಹಾರಾಷ್ಟ್ರ ಪೊಲೀಸರು ಛತ್ರಪತಿ ಸಂಭಾಜಿನಗರದಲ್ಲಿ ಸೇನಾ ಯೋಧನೋರ್ವನನ್ನು ಬಂಧಿಸಿದ್ದಾರೆ.

ಮಾರುತಿ ಧಕ್ನೆ(42) ವಿರುದ್ಧ ದೂರು ದಾಖಲಾಗಿದ್ದು, ಅವರು ಚಿಪ್ ಬಳಸಿ ಇವಿಎಂಗಳನ್ನು ತಿರಚಬಹುದು ಎಂದು ಹೇಳಿ ಹಣವನ್ನು ಕೋರಿದ್ದಾರೆ ಎಂದು ಆರೋಪಿಸಲಾಗಿದೆ. ನಿರ್ದಿಷ್ಟ ಅಭ್ಯರ್ಥಿಯ ಪರವಾಗಿ ಈ ರೀತಿಯಾಗಿ ಮಾಡುತ್ತೇವೆ ಎಂದು ಮಾರುತಿ ಧಕ್ನೆ ಹೇಳಿರುವ ಬಗ್ಗೆ ಪಿಟಿಐ ವರದಿ ಮಾಡಿದೆ. ಮಹಾರಾಷ್ಟ್ರದ ಪಥರ್ಡಿಯ ನಿವಾಸಿ ಧಕ್ನೆ ಪ್ರಸ್ತುತ ಜಮ್ಮು ಮತ್ತು ಕಾಶ್ಮೀರದ ಉಧಮ್‌ಪುರದಲ್ಲಿ ನೆಲೆಸಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಪೊಲೀಸರು, ನಮ್ಮ ಆರಂಭಿಕ ತನಿಖೆಯ ವೇಳೆ ಅವರು ದೊಡ್ಡ ಮಟ್ಟದಲ್ಲಿ ಸಾಲವನ್ನು ಹೊಂದಿದ್ದಾರೆಂದು ಹೇಳಿದ್ದಾರೆ, ಆದ್ದರಿಂದ ಹಣವನ್ನು ಗಳಿಸಲು ಈ ಯೋಜನೆಯನ್ನು ಹಾಕಿಕೊಂಡಿದ್ದರು. ಮಾರುತಿ ಧಕ್ನೆ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 420 ಮತ್ತು 511ರಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಛತ್ರಪತಿ ಸಂಭಾಜಿನಗರ ಪೊಲೀಸ್ ಆಯುಕ್ತ ಮನೋಜ್ ಲೋಹಿಯಾ ಈ ಕುರಿತು ಪ್ರತಿಕ್ರಿಯೆಯನ್ನು ನೀಡಿದ್ದು, ಇವಿಎಂಗಳನ್ನು ತಿರುಚಲು ಶಿವಸೇನಾ(ಯುಬಿಟಿ) ನಾಯಕ ಅಂಬಾದಾಸ್ ದನ್ವೆ ಅವರಿಂದ 2.5 ಕೋಟಿ ರೂ.ಗೆ ಬೇಡಿಕೆಯಿಟ್ಟಿದ್ದಕ್ಕಾಗಿ ಜಮ್ಮುವಿನಲ್ಲಿ ನಿಯೋಜಿಸಲಾದ ಸೇನಾ ಯೋಧನನ್ನು ಛತ್ರಪತಿ ಸಂಭಾಜಿನಗರದಲ್ಲಿ ಬಂಧಿಸಲಾಗಿದೆ. ಯೋಧ ಸಾಲವನ್ನು ಹೊಂದಿದ್ದರು. ಇವಿಎಂಗಳ ಬಗ್ಗೆ ಅವರಿಗೆ ಯಾವುದೇ ಜ್ಞಾನ ಇರಲಿಲ್ಲ, ಅವರು ಕೇವಲ ಮೋಸ ಮಾಡುವ ಉದ್ದೇಶದಿಂದ ಈ ರೀತಿ ಬೇಡಿಕೆಯನ್ನು ಇಟ್ಟಿದ್ದಾರೆ ಎಂದು ಹೇಳಿದ್ದಾರೆ.

ಅಂಬಾದಾಸ್ ದಾನ್ವೆ ಅವರನ್ನು ಪುಣೆಯಲ್ಲಿ ಒಮ್ಮೆ ಭೇಟಿಯಾಗಿದ್ದ ಮಾರುತಿ ಧಕ್ನೆ, ಇಂದು ಅವರನ್ನು ಭೇಟಿಯಾಗಿ ಪಕ್ಷದ ಮುಖಂಡರಿಂದ ಹಣ ಪಡೆಯಲು ಬಂದಿದ್ದಾರೆ. ಅವರಿಗೆ 1 ಲಕ್ಷ ರೂಪಾಯಿ ನೀಡುವುದಾಗಿ ಭರವಸೆ ನೀಡಿ ಅವರನ್ನು ಮತ್ತೆ ಕರೆಸಲಾಗಿದೆ. ಈ ಬಗ್ಗೆ ಅಂಬಾದಾಸ್ ದನ್ವೆ ಸಹೋದರ ನೀಡಿದ ದೂರಿನ ಆಧಾರದಲ್ಲಿ ಅವರನ್ನು ಆರ್ಥಿಕ ಅಪರಾಧ ವಿಭಾಗದ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಲೋಕಸಭೆ ಚುನಾವಣೆಯ ಹಿನ್ನೆಲೆ ಈ ಹಿಂದೆ ಔರಂಗಾಬಾದ್ ಎಂದು ಕರೆಯಲಾಗುತ್ತಿದ್ದ ಛತ್ರಪತಿ ಸಂಭಾಜಿನಗರ ಕ್ಷೇತ್ರದಲ್ಲಿ 4ನೇ ಹಂತದಲ್ಲಿ ಮತದಾನ ಮೇ 13ರಂದು ನಡೆಯಲಿದೆ. ಇವಿಎಂ ಪಾರದರ್ಶಕತೆಯ ಬಗ್ಗೆ ಪ್ರಶ್ನೆ ಭುಗಿಲೆದ್ದಿರುವ ಮಧ್ಯೆ ಈ ಬೆಳವಣಿಗೆ ನಿಜಕ್ಕೂ ಪ್ರಕರಣದ ನಿಷ್ಪಕ್ಷಪಾತ ತನಿಖೆಯ ಅವಶ್ಯಕತೆಯನ್ನು ಒತ್ತಿ ಹೇಳುತ್ತಿದೆ.

ಇದನ್ನು ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕ್ರಿಕೆಟ್ ತಂಡದಲ್ಲಿ ಅಲ್ಪಸಂಖ್ಯಾತರಿಗೆ ಆದ್ಯತೆ ನೀಡುತ್ತದೆ: ಮತ್ತೆ ದ್ವೇಷ ಬಿತ್ತಿದ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...