Homeಮುಖಪುಟ'ಇವಿಎಂ' ತಿರುಚಲು ಶಿವಸೇನಾ ನಾಯಕನಿಗೆ 2.5 ಕೋಟಿ ರೂ.ಬೇಡಿಕೆ ಇಟ್ಟ ಯೋಧ!

‘ಇವಿಎಂ’ ತಿರುಚಲು ಶಿವಸೇನಾ ನಾಯಕನಿಗೆ 2.5 ಕೋಟಿ ರೂ.ಬೇಡಿಕೆ ಇಟ್ಟ ಯೋಧ!

- Advertisement -
- Advertisement -

ವಿದ್ಯುನ್ಮಾನ ಮತಯಂತ್ರಗಳನ್ನು(ಇವಿಎಂ) ತಿರುಚಲು ಶಿವಸೇನಾ ಉದ್ಧವ್‌ ಬಣದ ನಾಯಕ ಅಂಬಾದಾಸ್ ದನ್ವೆ ಅವರಿಂದ 2.5 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟಿದ್ದಕ್ಕಾಗಿ ಮಹಾರಾಷ್ಟ್ರ ಪೊಲೀಸರು ಛತ್ರಪತಿ ಸಂಭಾಜಿನಗರದಲ್ಲಿ ಸೇನಾ ಯೋಧನೋರ್ವನನ್ನು ಬಂಧಿಸಿದ್ದಾರೆ.

ಮಾರುತಿ ಧಕ್ನೆ(42) ವಿರುದ್ಧ ದೂರು ದಾಖಲಾಗಿದ್ದು, ಅವರು ಚಿಪ್ ಬಳಸಿ ಇವಿಎಂಗಳನ್ನು ತಿರಚಬಹುದು ಎಂದು ಹೇಳಿ ಹಣವನ್ನು ಕೋರಿದ್ದಾರೆ ಎಂದು ಆರೋಪಿಸಲಾಗಿದೆ. ನಿರ್ದಿಷ್ಟ ಅಭ್ಯರ್ಥಿಯ ಪರವಾಗಿ ಈ ರೀತಿಯಾಗಿ ಮಾಡುತ್ತೇವೆ ಎಂದು ಮಾರುತಿ ಧಕ್ನೆ ಹೇಳಿರುವ ಬಗ್ಗೆ ಪಿಟಿಐ ವರದಿ ಮಾಡಿದೆ. ಮಹಾರಾಷ್ಟ್ರದ ಪಥರ್ಡಿಯ ನಿವಾಸಿ ಧಕ್ನೆ ಪ್ರಸ್ತುತ ಜಮ್ಮು ಮತ್ತು ಕಾಶ್ಮೀರದ ಉಧಮ್‌ಪುರದಲ್ಲಿ ನೆಲೆಸಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಪೊಲೀಸರು, ನಮ್ಮ ಆರಂಭಿಕ ತನಿಖೆಯ ವೇಳೆ ಅವರು ದೊಡ್ಡ ಮಟ್ಟದಲ್ಲಿ ಸಾಲವನ್ನು ಹೊಂದಿದ್ದಾರೆಂದು ಹೇಳಿದ್ದಾರೆ, ಆದ್ದರಿಂದ ಹಣವನ್ನು ಗಳಿಸಲು ಈ ಯೋಜನೆಯನ್ನು ಹಾಕಿಕೊಂಡಿದ್ದರು. ಮಾರುತಿ ಧಕ್ನೆ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 420 ಮತ್ತು 511ರಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಛತ್ರಪತಿ ಸಂಭಾಜಿನಗರ ಪೊಲೀಸ್ ಆಯುಕ್ತ ಮನೋಜ್ ಲೋಹಿಯಾ ಈ ಕುರಿತು ಪ್ರತಿಕ್ರಿಯೆಯನ್ನು ನೀಡಿದ್ದು, ಇವಿಎಂಗಳನ್ನು ತಿರುಚಲು ಶಿವಸೇನಾ(ಯುಬಿಟಿ) ನಾಯಕ ಅಂಬಾದಾಸ್ ದನ್ವೆ ಅವರಿಂದ 2.5 ಕೋಟಿ ರೂ.ಗೆ ಬೇಡಿಕೆಯಿಟ್ಟಿದ್ದಕ್ಕಾಗಿ ಜಮ್ಮುವಿನಲ್ಲಿ ನಿಯೋಜಿಸಲಾದ ಸೇನಾ ಯೋಧನನ್ನು ಛತ್ರಪತಿ ಸಂಭಾಜಿನಗರದಲ್ಲಿ ಬಂಧಿಸಲಾಗಿದೆ. ಯೋಧ ಸಾಲವನ್ನು ಹೊಂದಿದ್ದರು. ಇವಿಎಂಗಳ ಬಗ್ಗೆ ಅವರಿಗೆ ಯಾವುದೇ ಜ್ಞಾನ ಇರಲಿಲ್ಲ, ಅವರು ಕೇವಲ ಮೋಸ ಮಾಡುವ ಉದ್ದೇಶದಿಂದ ಈ ರೀತಿ ಬೇಡಿಕೆಯನ್ನು ಇಟ್ಟಿದ್ದಾರೆ ಎಂದು ಹೇಳಿದ್ದಾರೆ.

ಅಂಬಾದಾಸ್ ದಾನ್ವೆ ಅವರನ್ನು ಪುಣೆಯಲ್ಲಿ ಒಮ್ಮೆ ಭೇಟಿಯಾಗಿದ್ದ ಮಾರುತಿ ಧಕ್ನೆ, ಇಂದು ಅವರನ್ನು ಭೇಟಿಯಾಗಿ ಪಕ್ಷದ ಮುಖಂಡರಿಂದ ಹಣ ಪಡೆಯಲು ಬಂದಿದ್ದಾರೆ. ಅವರಿಗೆ 1 ಲಕ್ಷ ರೂಪಾಯಿ ನೀಡುವುದಾಗಿ ಭರವಸೆ ನೀಡಿ ಅವರನ್ನು ಮತ್ತೆ ಕರೆಸಲಾಗಿದೆ. ಈ ಬಗ್ಗೆ ಅಂಬಾದಾಸ್ ದನ್ವೆ ಸಹೋದರ ನೀಡಿದ ದೂರಿನ ಆಧಾರದಲ್ಲಿ ಅವರನ್ನು ಆರ್ಥಿಕ ಅಪರಾಧ ವಿಭಾಗದ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಲೋಕಸಭೆ ಚುನಾವಣೆಯ ಹಿನ್ನೆಲೆ ಈ ಹಿಂದೆ ಔರಂಗಾಬಾದ್ ಎಂದು ಕರೆಯಲಾಗುತ್ತಿದ್ದ ಛತ್ರಪತಿ ಸಂಭಾಜಿನಗರ ಕ್ಷೇತ್ರದಲ್ಲಿ 4ನೇ ಹಂತದಲ್ಲಿ ಮತದಾನ ಮೇ 13ರಂದು ನಡೆಯಲಿದೆ. ಇವಿಎಂ ಪಾರದರ್ಶಕತೆಯ ಬಗ್ಗೆ ಪ್ರಶ್ನೆ ಭುಗಿಲೆದ್ದಿರುವ ಮಧ್ಯೆ ಈ ಬೆಳವಣಿಗೆ ನಿಜಕ್ಕೂ ಪ್ರಕರಣದ ನಿಷ್ಪಕ್ಷಪಾತ ತನಿಖೆಯ ಅವಶ್ಯಕತೆಯನ್ನು ಒತ್ತಿ ಹೇಳುತ್ತಿದೆ.

ಇದನ್ನು ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕ್ರಿಕೆಟ್ ತಂಡದಲ್ಲಿ ಅಲ್ಪಸಂಖ್ಯಾತರಿಗೆ ಆದ್ಯತೆ ನೀಡುತ್ತದೆ: ಮತ್ತೆ ದ್ವೇಷ ಬಿತ್ತಿದ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...