Homeಮುಖಪುಟಏಷ್ಯಾ ಕಪ್ ಪಂದ್ಯದ ನಂತರ ಭಾರತದ ತ್ರಿವರ್ಣ ಧ್ವಜ ಹಿಡಿಯಲು ಜಯ್‌ ಶಾ ನಕಾರ: ವಿಪಕ್ಷಗಳ...

ಏಷ್ಯಾ ಕಪ್ ಪಂದ್ಯದ ನಂತರ ಭಾರತದ ತ್ರಿವರ್ಣ ಧ್ವಜ ಹಿಡಿಯಲು ಜಯ್‌ ಶಾ ನಕಾರ: ವಿಪಕ್ಷಗಳ ತರಾಟೆ

- Advertisement -
- Advertisement -

ಭಾನುವಾರ ಸಂಜೆ ನಡೆದ ಭಾರತ ಪಾಕಿಸ್ತಾನ ಎದುರಿನ ಏಷ್ಯಾಕಪ್ ಕ್ರಿಕೆಟ್ ಪಂದ್ಯದಲ್ಲಿ ಭಾರತ 5 ವಿಕೆಟ್‌ಗಳ ಜಯಗಳಿಸಿದ ನಂತರ ಭಾರತದ ತ್ರಿವರ್ಣ ಧ್ವಜ ಹಿಡಿಯಲು ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ನಿರಾಕರಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜಯ್ ಶಾ ನಡೆದ ವಿರೋಧ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ.

ಪಂದ್ಯದಲ್ಲಿ ಭಾರತ ತಂಡ ಗೆಲ್ಲಲು ಮೂರು ಎಸೆತಗಳಲ್ಲಿ 6 ರನ್ ಬೇಕಿದ್ದಾಗ ಹಾರ್ದಿಕ್ ಪಾಂಡ್ಯ ಸಿಕ್ಸರ್ ಸಿಡಿಸಿ ಗೆಲುವು ತಂದುಕೊಟ್ಟರು. ಆ ಸಂದರ್ಭದಲ್ಲಿ ಬಿಸಿಸಿಐ ಕಾರ್ಯದರ್ಶಿ ಮತ್ತು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷರಾದ ಜಯ್ ಶಾ ಸಂಭ್ರಮಿಸುತ್ತಿದ್ದಾಗ ವ್ಯಕ್ತಿಯೊಬ್ಬರು ಭಾರತದ ಧ್ವಜವನ್ನು ನೀಡಲು ಮುಂದಾಗುತ್ತಾರೆ. ಅದನ್ನು ತೆಗೆದುಕೊಳ್ಳಲು ಜಯ್ ಶಾ ನಿರಾಕರಿಸುತ್ತಾರೆ. 5 ಸೆಕೆಂಡ್‌ಗಳ ಈ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ.

ಪಾಕಿಸ್ತಾನದ ವಿರುದ್ಧ ಭಾರತ ಜಯಗಳಿಸಿದ ನಂತರ ತ್ರಿವರ್ಣ ಧ್ವಜವನ್ನು ಹಿಡಿಯಲು ಜಯ್‌ ಶಾ ಏಕೆ ನಿರಾಕರಿಸಿದರು? ಅವರಿಗೆ ಭಗವಧ್ವಜ ಅಥವಾ ಬಿಜೆಪಿ ಧ್ವಜ ಬೇಕಿತ್ತಾ? ಎಂದು ಮಾಜಿ ಶಾಸಕ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

ಹರ್ ಘರ್ ತಿರಂಗಕ್ಕಾಗಿ ಮೋದಿ ಸರ್ಕಾರ ಅಕ್ಷರಶಃ ಜನರ ಹಣವನ್ನು ಕಿತ್ತುಕೊಂಡಿತ್ತು. ಆದರೆ ಗೃಹ ಸಚಿವ ಅಮಿತ್‌ ಶಾ ರವರ ಮಗನಿಗೆ ರಾಷ್ಟ್ರಧ್ವಜ ಕೊಟ್ಟರೂ ಅದನ್ನು ಹಿಡಿಯಲು ನಿರಾಕರಿಸುತ್ತಾನೆ. ಹಾಗಾದರೆ “ದೇಶ ವಿರೋಧಿ” ಪ್ರಮಾಣಪತ್ರ ಎಲ್ಲಿದೆ ಎಂದು ಬಿಜೆಪಿ ಹೇಳುವುದೇ? ಅಥವಾ ಷಾ ರಾಜವಂಶಕ್ಕೆ ವಿನಾಯಿತಿ ಇದೆಯೇ? ಎಂದು ಟಿಎಂಸಿ ವಕ್ತಾರ ಸಾಕೇತ್ ಗೋಖಲೆ ಪ್ರಶ್ನಿಸಿದ್ದಾರೆ.

ಭಾರತದ ಧ್ವಜವನ್ನು ಹಿಡಿಯಲು ಬಿಜೆಪಿಯೇತರ ನಾಯಕರು ಯಾರಾದರೂ ನಿರಾಕರಿಸಿದರೆ ಇಷ್ಟೊತ್ತಿಗೆ ಅವರನ್ನು ದೇಶದ್ರೋಹಿಗಳೆಂದು ಇಡೀ ಬಿಜೆಪಿ ಐಟಿ ಸೆಲ್ ಕರೆಯುತ್ತಿತ್ತು. ಗೋಧಿ ಮೀಡಿಯಾ ದಿನವಿಡಿ ಅದರ ಕುರಿತು ಚರ್ಚಿಸುತ್ತಿತ್ತು. ಅದೃಷ್ಟವಶಾತ್ ಆ ಕೆಲಸ ಮಾಡಿರುವುದು ಶಾಹೆನ್‌ಶಾ ಅವರ ಮಗ ಜಯ್ ಶಾ ಎಂದು ಟಿಆರ್‌ಎಸ್‌ ಪಕ್ಷದ ಮುಖ್ಯಸ್ಥ ಕೃಷ್ಣನ್ ಟ್ವೀಟ್ ಮಾಡಿದ್ದಾರೆ.

ಭಾರತದ ಗೃಹ ಸಚಿವರ ಪುತ್ರ ರಾಷ್ಟ್ರಧ್ವಜವನ್ನು ಏಕೆ ಸ್ವೀಕರಿಸುತ್ತಿಲ್ಲ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಕೂಡ ಟೀಕಿಸಿದೆ. ಇಷ್ಟು ಮಾತ್ರವಲ್ಲದೆ ಜಯ್ ಶಾ ಏಕೆ ಭಾರತದ ಧ್ವಜವನ್ನು ಆ ಸಂದರ್ಭದಲ್ಲಿ ಸ್ವೀಕರಿಸಲಿಲ್ಲ ಎಂದು ಕೆಲವರು ವಿವರಣೆ ನೀಡಿದ್ದಾರೆ.

ಜಯ್ ಶಾ ಕೈಗೆ ಭಾರತದ ಬಾವುಟ ಕೊಡಲು ಹೋದಾಗ, ಆತ ನಿರಾಕರಿಸುವುದನ್ನು ಟ್ರಾಲ್ ಮಾಡಲಾಗುತ್ತಿದೆ. ಜಯ್ ಶಾ ಈಗ ಕೇವಲ ಬಿಸಿಸಿಐ ಕಾರ್ಯದರ್ಶಿ ಮಾತ್ರವಲ್ಲ, ಏಷಿಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ.ಆತನ ಜತೆ ಏಷಿಯಾದ ಇತರ ದೇಶಗಳ ಬೋರ್ಡ್ ಪದಾಧಿಕಾರಿಗಳೂ ಇದ್ದರು. ಹೀಗಾಗಿ ಆತ ಮಾಡಿದ್ದು ಸರಿಯಾಗೇ ಇದೆ ಎಂಬುದು ನನ್ನ ಅನಿಸಿಕೆ. ನಿಮಗೇನನ್ನಿಸುತ್ತದೆ? ಎಂದು ಪತ್ರಕರ್ತ ದಿನೇಶ್ ಕುಮಾರ್ ದಿನೂ ಬರೆದಿದ್ದಾರೆ. ನಿಮಗೆ ಈ ಕುರಿತು ಏನು ಅನ್ನಿಸುತ್ತದೆ ಎಂಬುದನ್ನು ಕಮೆಂಟ್ ಮಾಡಿ.

ಇದನ್ನೂ ಓದಿ: ಏಷ್ಯಾ ಕಪ್‌ನಲ್ಲಿ ಮತ್ತೆ ಎರಡು ಭಾರಿ ಭಾರತ – ಪಾಕ್ ಮುಖಾಮುಖಿಯಾಗಬಹುದು!: ಇಲ್ಲಿದೆ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...