Homeಮುಖಪುಟಏಷ್ಯಾ ಕಪ್ ಪಂದ್ಯದ ನಂತರ ಭಾರತದ ತ್ರಿವರ್ಣ ಧ್ವಜ ಹಿಡಿಯಲು ಜಯ್‌ ಶಾ ನಕಾರ: ವಿಪಕ್ಷಗಳ...

ಏಷ್ಯಾ ಕಪ್ ಪಂದ್ಯದ ನಂತರ ಭಾರತದ ತ್ರಿವರ್ಣ ಧ್ವಜ ಹಿಡಿಯಲು ಜಯ್‌ ಶಾ ನಕಾರ: ವಿಪಕ್ಷಗಳ ತರಾಟೆ

- Advertisement -
- Advertisement -

ಭಾನುವಾರ ಸಂಜೆ ನಡೆದ ಭಾರತ ಪಾಕಿಸ್ತಾನ ಎದುರಿನ ಏಷ್ಯಾಕಪ್ ಕ್ರಿಕೆಟ್ ಪಂದ್ಯದಲ್ಲಿ ಭಾರತ 5 ವಿಕೆಟ್‌ಗಳ ಜಯಗಳಿಸಿದ ನಂತರ ಭಾರತದ ತ್ರಿವರ್ಣ ಧ್ವಜ ಹಿಡಿಯಲು ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ನಿರಾಕರಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜಯ್ ಶಾ ನಡೆದ ವಿರೋಧ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ.

ಪಂದ್ಯದಲ್ಲಿ ಭಾರತ ತಂಡ ಗೆಲ್ಲಲು ಮೂರು ಎಸೆತಗಳಲ್ಲಿ 6 ರನ್ ಬೇಕಿದ್ದಾಗ ಹಾರ್ದಿಕ್ ಪಾಂಡ್ಯ ಸಿಕ್ಸರ್ ಸಿಡಿಸಿ ಗೆಲುವು ತಂದುಕೊಟ್ಟರು. ಆ ಸಂದರ್ಭದಲ್ಲಿ ಬಿಸಿಸಿಐ ಕಾರ್ಯದರ್ಶಿ ಮತ್ತು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷರಾದ ಜಯ್ ಶಾ ಸಂಭ್ರಮಿಸುತ್ತಿದ್ದಾಗ ವ್ಯಕ್ತಿಯೊಬ್ಬರು ಭಾರತದ ಧ್ವಜವನ್ನು ನೀಡಲು ಮುಂದಾಗುತ್ತಾರೆ. ಅದನ್ನು ತೆಗೆದುಕೊಳ್ಳಲು ಜಯ್ ಶಾ ನಿರಾಕರಿಸುತ್ತಾರೆ. 5 ಸೆಕೆಂಡ್‌ಗಳ ಈ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ.

ಪಾಕಿಸ್ತಾನದ ವಿರುದ್ಧ ಭಾರತ ಜಯಗಳಿಸಿದ ನಂತರ ತ್ರಿವರ್ಣ ಧ್ವಜವನ್ನು ಹಿಡಿಯಲು ಜಯ್‌ ಶಾ ಏಕೆ ನಿರಾಕರಿಸಿದರು? ಅವರಿಗೆ ಭಗವಧ್ವಜ ಅಥವಾ ಬಿಜೆಪಿ ಧ್ವಜ ಬೇಕಿತ್ತಾ? ಎಂದು ಮಾಜಿ ಶಾಸಕ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

ಹರ್ ಘರ್ ತಿರಂಗಕ್ಕಾಗಿ ಮೋದಿ ಸರ್ಕಾರ ಅಕ್ಷರಶಃ ಜನರ ಹಣವನ್ನು ಕಿತ್ತುಕೊಂಡಿತ್ತು. ಆದರೆ ಗೃಹ ಸಚಿವ ಅಮಿತ್‌ ಶಾ ರವರ ಮಗನಿಗೆ ರಾಷ್ಟ್ರಧ್ವಜ ಕೊಟ್ಟರೂ ಅದನ್ನು ಹಿಡಿಯಲು ನಿರಾಕರಿಸುತ್ತಾನೆ. ಹಾಗಾದರೆ “ದೇಶ ವಿರೋಧಿ” ಪ್ರಮಾಣಪತ್ರ ಎಲ್ಲಿದೆ ಎಂದು ಬಿಜೆಪಿ ಹೇಳುವುದೇ? ಅಥವಾ ಷಾ ರಾಜವಂಶಕ್ಕೆ ವಿನಾಯಿತಿ ಇದೆಯೇ? ಎಂದು ಟಿಎಂಸಿ ವಕ್ತಾರ ಸಾಕೇತ್ ಗೋಖಲೆ ಪ್ರಶ್ನಿಸಿದ್ದಾರೆ.

ಭಾರತದ ಧ್ವಜವನ್ನು ಹಿಡಿಯಲು ಬಿಜೆಪಿಯೇತರ ನಾಯಕರು ಯಾರಾದರೂ ನಿರಾಕರಿಸಿದರೆ ಇಷ್ಟೊತ್ತಿಗೆ ಅವರನ್ನು ದೇಶದ್ರೋಹಿಗಳೆಂದು ಇಡೀ ಬಿಜೆಪಿ ಐಟಿ ಸೆಲ್ ಕರೆಯುತ್ತಿತ್ತು. ಗೋಧಿ ಮೀಡಿಯಾ ದಿನವಿಡಿ ಅದರ ಕುರಿತು ಚರ್ಚಿಸುತ್ತಿತ್ತು. ಅದೃಷ್ಟವಶಾತ್ ಆ ಕೆಲಸ ಮಾಡಿರುವುದು ಶಾಹೆನ್‌ಶಾ ಅವರ ಮಗ ಜಯ್ ಶಾ ಎಂದು ಟಿಆರ್‌ಎಸ್‌ ಪಕ್ಷದ ಮುಖ್ಯಸ್ಥ ಕೃಷ್ಣನ್ ಟ್ವೀಟ್ ಮಾಡಿದ್ದಾರೆ.

ಭಾರತದ ಗೃಹ ಸಚಿವರ ಪುತ್ರ ರಾಷ್ಟ್ರಧ್ವಜವನ್ನು ಏಕೆ ಸ್ವೀಕರಿಸುತ್ತಿಲ್ಲ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಕೂಡ ಟೀಕಿಸಿದೆ. ಇಷ್ಟು ಮಾತ್ರವಲ್ಲದೆ ಜಯ್ ಶಾ ಏಕೆ ಭಾರತದ ಧ್ವಜವನ್ನು ಆ ಸಂದರ್ಭದಲ್ಲಿ ಸ್ವೀಕರಿಸಲಿಲ್ಲ ಎಂದು ಕೆಲವರು ವಿವರಣೆ ನೀಡಿದ್ದಾರೆ.

ಜಯ್ ಶಾ ಕೈಗೆ ಭಾರತದ ಬಾವುಟ ಕೊಡಲು ಹೋದಾಗ, ಆತ ನಿರಾಕರಿಸುವುದನ್ನು ಟ್ರಾಲ್ ಮಾಡಲಾಗುತ್ತಿದೆ. ಜಯ್ ಶಾ ಈಗ ಕೇವಲ ಬಿಸಿಸಿಐ ಕಾರ್ಯದರ್ಶಿ ಮಾತ್ರವಲ್ಲ, ಏಷಿಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ.ಆತನ ಜತೆ ಏಷಿಯಾದ ಇತರ ದೇಶಗಳ ಬೋರ್ಡ್ ಪದಾಧಿಕಾರಿಗಳೂ ಇದ್ದರು. ಹೀಗಾಗಿ ಆತ ಮಾಡಿದ್ದು ಸರಿಯಾಗೇ ಇದೆ ಎಂಬುದು ನನ್ನ ಅನಿಸಿಕೆ. ನಿಮಗೇನನ್ನಿಸುತ್ತದೆ? ಎಂದು ಪತ್ರಕರ್ತ ದಿನೇಶ್ ಕುಮಾರ್ ದಿನೂ ಬರೆದಿದ್ದಾರೆ. ನಿಮಗೆ ಈ ಕುರಿತು ಏನು ಅನ್ನಿಸುತ್ತದೆ ಎಂಬುದನ್ನು ಕಮೆಂಟ್ ಮಾಡಿ.

ಇದನ್ನೂ ಓದಿ: ಏಷ್ಯಾ ಕಪ್‌ನಲ್ಲಿ ಮತ್ತೆ ಎರಡು ಭಾರಿ ಭಾರತ – ಪಾಕ್ ಮುಖಾಮುಖಿಯಾಗಬಹುದು!: ಇಲ್ಲಿದೆ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ. ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ...

ಟಿವಿ ನ್ಯೂಸ್ ಚಾನೆಲ್‌ಗಳಲ್ಲಿ ಅನಗತ್ಯ ಯುದ್ಧೋನ್ಮಾದ, ಸುಳ್ಳು ವರದಿ : ನಾಲ್ಕು ವಾರ TRP ಸ್ಥಗಿತಕ್ಕೆ ಕೇಂದ್ರ ಆದೇಶ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದ ಕುರಿತು ಟಿವಿ ನ್ಯೂಸ್‌ ಚಾನೆಲ್‌ಗಳು ಅನಗತ್ಯ ಯುದ್ಧೋನ್ಮಾದ ಸೃಷ್ಟಿಸುತ್ತಿರುವ ಹಾಗೂ ಸುಳ್ಳು ವರದಿಗಳನ್ನು ಪ್ರಸಾರ ಮಾಡುತ್ತಿರುವ ಹಿನ್ನೆಲೆ, ಮುಂದಿನ ನಾಲ್ಕು ವಾರಗಳ ಕಾಲ...

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...

ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜೀನಾಮೆ; ರಾಜಕೀಯ ಒತ್ತಡದ ಆರೋಪ

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸುಮಾರು ಮೂರುವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದ ನಂತರ ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ಕ್ರಮವು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ...

Karnataka Budget 2026| ವಿಕ್ಟೋರಿಯಾ ಹೆಸರು ಬದಲಾವಣೆ; ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಬಜೆಟ್‌ ಭಾಷಣದಲ್ಲಿ ಘೋಷಿಸಿದರು. ತಮ್ಮ ಆಯವ್ಯಯದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಘೋಷಣೆಗಳನ್ನು ಮಾಡಿದ...