Homeಮುಖಪುಟಏಷ್ಯಾ ಕಪ್ ಪಂದ್ಯದ ನಂತರ ಭಾರತದ ತ್ರಿವರ್ಣ ಧ್ವಜ ಹಿಡಿಯಲು ಜಯ್‌ ಶಾ ನಕಾರ: ವಿಪಕ್ಷಗಳ...

ಏಷ್ಯಾ ಕಪ್ ಪಂದ್ಯದ ನಂತರ ಭಾರತದ ತ್ರಿವರ್ಣ ಧ್ವಜ ಹಿಡಿಯಲು ಜಯ್‌ ಶಾ ನಕಾರ: ವಿಪಕ್ಷಗಳ ತರಾಟೆ

- Advertisement -
- Advertisement -

ಭಾನುವಾರ ಸಂಜೆ ನಡೆದ ಭಾರತ ಪಾಕಿಸ್ತಾನ ಎದುರಿನ ಏಷ್ಯಾಕಪ್ ಕ್ರಿಕೆಟ್ ಪಂದ್ಯದಲ್ಲಿ ಭಾರತ 5 ವಿಕೆಟ್‌ಗಳ ಜಯಗಳಿಸಿದ ನಂತರ ಭಾರತದ ತ್ರಿವರ್ಣ ಧ್ವಜ ಹಿಡಿಯಲು ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ನಿರಾಕರಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜಯ್ ಶಾ ನಡೆದ ವಿರೋಧ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ.

ಪಂದ್ಯದಲ್ಲಿ ಭಾರತ ತಂಡ ಗೆಲ್ಲಲು ಮೂರು ಎಸೆತಗಳಲ್ಲಿ 6 ರನ್ ಬೇಕಿದ್ದಾಗ ಹಾರ್ದಿಕ್ ಪಾಂಡ್ಯ ಸಿಕ್ಸರ್ ಸಿಡಿಸಿ ಗೆಲುವು ತಂದುಕೊಟ್ಟರು. ಆ ಸಂದರ್ಭದಲ್ಲಿ ಬಿಸಿಸಿಐ ಕಾರ್ಯದರ್ಶಿ ಮತ್ತು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷರಾದ ಜಯ್ ಶಾ ಸಂಭ್ರಮಿಸುತ್ತಿದ್ದಾಗ ವ್ಯಕ್ತಿಯೊಬ್ಬರು ಭಾರತದ ಧ್ವಜವನ್ನು ನೀಡಲು ಮುಂದಾಗುತ್ತಾರೆ. ಅದನ್ನು ತೆಗೆದುಕೊಳ್ಳಲು ಜಯ್ ಶಾ ನಿರಾಕರಿಸುತ್ತಾರೆ. 5 ಸೆಕೆಂಡ್‌ಗಳ ಈ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ.

ಪಾಕಿಸ್ತಾನದ ವಿರುದ್ಧ ಭಾರತ ಜಯಗಳಿಸಿದ ನಂತರ ತ್ರಿವರ್ಣ ಧ್ವಜವನ್ನು ಹಿಡಿಯಲು ಜಯ್‌ ಶಾ ಏಕೆ ನಿರಾಕರಿಸಿದರು? ಅವರಿಗೆ ಭಗವಧ್ವಜ ಅಥವಾ ಬಿಜೆಪಿ ಧ್ವಜ ಬೇಕಿತ್ತಾ? ಎಂದು ಮಾಜಿ ಶಾಸಕ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

ಹರ್ ಘರ್ ತಿರಂಗಕ್ಕಾಗಿ ಮೋದಿ ಸರ್ಕಾರ ಅಕ್ಷರಶಃ ಜನರ ಹಣವನ್ನು ಕಿತ್ತುಕೊಂಡಿತ್ತು. ಆದರೆ ಗೃಹ ಸಚಿವ ಅಮಿತ್‌ ಶಾ ರವರ ಮಗನಿಗೆ ರಾಷ್ಟ್ರಧ್ವಜ ಕೊಟ್ಟರೂ ಅದನ್ನು ಹಿಡಿಯಲು ನಿರಾಕರಿಸುತ್ತಾನೆ. ಹಾಗಾದರೆ “ದೇಶ ವಿರೋಧಿ” ಪ್ರಮಾಣಪತ್ರ ಎಲ್ಲಿದೆ ಎಂದು ಬಿಜೆಪಿ ಹೇಳುವುದೇ? ಅಥವಾ ಷಾ ರಾಜವಂಶಕ್ಕೆ ವಿನಾಯಿತಿ ಇದೆಯೇ? ಎಂದು ಟಿಎಂಸಿ ವಕ್ತಾರ ಸಾಕೇತ್ ಗೋಖಲೆ ಪ್ರಶ್ನಿಸಿದ್ದಾರೆ.

ಭಾರತದ ಧ್ವಜವನ್ನು ಹಿಡಿಯಲು ಬಿಜೆಪಿಯೇತರ ನಾಯಕರು ಯಾರಾದರೂ ನಿರಾಕರಿಸಿದರೆ ಇಷ್ಟೊತ್ತಿಗೆ ಅವರನ್ನು ದೇಶದ್ರೋಹಿಗಳೆಂದು ಇಡೀ ಬಿಜೆಪಿ ಐಟಿ ಸೆಲ್ ಕರೆಯುತ್ತಿತ್ತು. ಗೋಧಿ ಮೀಡಿಯಾ ದಿನವಿಡಿ ಅದರ ಕುರಿತು ಚರ್ಚಿಸುತ್ತಿತ್ತು. ಅದೃಷ್ಟವಶಾತ್ ಆ ಕೆಲಸ ಮಾಡಿರುವುದು ಶಾಹೆನ್‌ಶಾ ಅವರ ಮಗ ಜಯ್ ಶಾ ಎಂದು ಟಿಆರ್‌ಎಸ್‌ ಪಕ್ಷದ ಮುಖ್ಯಸ್ಥ ಕೃಷ್ಣನ್ ಟ್ವೀಟ್ ಮಾಡಿದ್ದಾರೆ.

ಭಾರತದ ಗೃಹ ಸಚಿವರ ಪುತ್ರ ರಾಷ್ಟ್ರಧ್ವಜವನ್ನು ಏಕೆ ಸ್ವೀಕರಿಸುತ್ತಿಲ್ಲ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಕೂಡ ಟೀಕಿಸಿದೆ. ಇಷ್ಟು ಮಾತ್ರವಲ್ಲದೆ ಜಯ್ ಶಾ ಏಕೆ ಭಾರತದ ಧ್ವಜವನ್ನು ಆ ಸಂದರ್ಭದಲ್ಲಿ ಸ್ವೀಕರಿಸಲಿಲ್ಲ ಎಂದು ಕೆಲವರು ವಿವರಣೆ ನೀಡಿದ್ದಾರೆ.

ಜಯ್ ಶಾ ಕೈಗೆ ಭಾರತದ ಬಾವುಟ ಕೊಡಲು ಹೋದಾಗ, ಆತ ನಿರಾಕರಿಸುವುದನ್ನು ಟ್ರಾಲ್ ಮಾಡಲಾಗುತ್ತಿದೆ. ಜಯ್ ಶಾ ಈಗ ಕೇವಲ ಬಿಸಿಸಿಐ ಕಾರ್ಯದರ್ಶಿ ಮಾತ್ರವಲ್ಲ, ಏಷಿಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ.ಆತನ ಜತೆ ಏಷಿಯಾದ ಇತರ ದೇಶಗಳ ಬೋರ್ಡ್ ಪದಾಧಿಕಾರಿಗಳೂ ಇದ್ದರು. ಹೀಗಾಗಿ ಆತ ಮಾಡಿದ್ದು ಸರಿಯಾಗೇ ಇದೆ ಎಂಬುದು ನನ್ನ ಅನಿಸಿಕೆ. ನಿಮಗೇನನ್ನಿಸುತ್ತದೆ? ಎಂದು ಪತ್ರಕರ್ತ ದಿನೇಶ್ ಕುಮಾರ್ ದಿನೂ ಬರೆದಿದ್ದಾರೆ. ನಿಮಗೆ ಈ ಕುರಿತು ಏನು ಅನ್ನಿಸುತ್ತದೆ ಎಂಬುದನ್ನು ಕಮೆಂಟ್ ಮಾಡಿ.

ಇದನ್ನೂ ಓದಿ: ಏಷ್ಯಾ ಕಪ್‌ನಲ್ಲಿ ಮತ್ತೆ ಎರಡು ಭಾರಿ ಭಾರತ – ಪಾಕ್ ಮುಖಾಮುಖಿಯಾಗಬಹುದು!: ಇಲ್ಲಿದೆ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...