Homeಮುಖಪುಟಏಷ್ಯಾ ಕಪ್ ಪಂದ್ಯದ ನಂತರ ಭಾರತದ ತ್ರಿವರ್ಣ ಧ್ವಜ ಹಿಡಿಯಲು ಜಯ್‌ ಶಾ ನಕಾರ: ವಿಪಕ್ಷಗಳ...

ಏಷ್ಯಾ ಕಪ್ ಪಂದ್ಯದ ನಂತರ ಭಾರತದ ತ್ರಿವರ್ಣ ಧ್ವಜ ಹಿಡಿಯಲು ಜಯ್‌ ಶಾ ನಕಾರ: ವಿಪಕ್ಷಗಳ ತರಾಟೆ

- Advertisement -
- Advertisement -

ಭಾನುವಾರ ಸಂಜೆ ನಡೆದ ಭಾರತ ಪಾಕಿಸ್ತಾನ ಎದುರಿನ ಏಷ್ಯಾಕಪ್ ಕ್ರಿಕೆಟ್ ಪಂದ್ಯದಲ್ಲಿ ಭಾರತ 5 ವಿಕೆಟ್‌ಗಳ ಜಯಗಳಿಸಿದ ನಂತರ ಭಾರತದ ತ್ರಿವರ್ಣ ಧ್ವಜ ಹಿಡಿಯಲು ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ನಿರಾಕರಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜಯ್ ಶಾ ನಡೆದ ವಿರೋಧ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ.

ಪಂದ್ಯದಲ್ಲಿ ಭಾರತ ತಂಡ ಗೆಲ್ಲಲು ಮೂರು ಎಸೆತಗಳಲ್ಲಿ 6 ರನ್ ಬೇಕಿದ್ದಾಗ ಹಾರ್ದಿಕ್ ಪಾಂಡ್ಯ ಸಿಕ್ಸರ್ ಸಿಡಿಸಿ ಗೆಲುವು ತಂದುಕೊಟ್ಟರು. ಆ ಸಂದರ್ಭದಲ್ಲಿ ಬಿಸಿಸಿಐ ಕಾರ್ಯದರ್ಶಿ ಮತ್ತು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷರಾದ ಜಯ್ ಶಾ ಸಂಭ್ರಮಿಸುತ್ತಿದ್ದಾಗ ವ್ಯಕ್ತಿಯೊಬ್ಬರು ಭಾರತದ ಧ್ವಜವನ್ನು ನೀಡಲು ಮುಂದಾಗುತ್ತಾರೆ. ಅದನ್ನು ತೆಗೆದುಕೊಳ್ಳಲು ಜಯ್ ಶಾ ನಿರಾಕರಿಸುತ್ತಾರೆ. 5 ಸೆಕೆಂಡ್‌ಗಳ ಈ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ.

ಪಾಕಿಸ್ತಾನದ ವಿರುದ್ಧ ಭಾರತ ಜಯಗಳಿಸಿದ ನಂತರ ತ್ರಿವರ್ಣ ಧ್ವಜವನ್ನು ಹಿಡಿಯಲು ಜಯ್‌ ಶಾ ಏಕೆ ನಿರಾಕರಿಸಿದರು? ಅವರಿಗೆ ಭಗವಧ್ವಜ ಅಥವಾ ಬಿಜೆಪಿ ಧ್ವಜ ಬೇಕಿತ್ತಾ? ಎಂದು ಮಾಜಿ ಶಾಸಕ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

ಹರ್ ಘರ್ ತಿರಂಗಕ್ಕಾಗಿ ಮೋದಿ ಸರ್ಕಾರ ಅಕ್ಷರಶಃ ಜನರ ಹಣವನ್ನು ಕಿತ್ತುಕೊಂಡಿತ್ತು. ಆದರೆ ಗೃಹ ಸಚಿವ ಅಮಿತ್‌ ಶಾ ರವರ ಮಗನಿಗೆ ರಾಷ್ಟ್ರಧ್ವಜ ಕೊಟ್ಟರೂ ಅದನ್ನು ಹಿಡಿಯಲು ನಿರಾಕರಿಸುತ್ತಾನೆ. ಹಾಗಾದರೆ “ದೇಶ ವಿರೋಧಿ” ಪ್ರಮಾಣಪತ್ರ ಎಲ್ಲಿದೆ ಎಂದು ಬಿಜೆಪಿ ಹೇಳುವುದೇ? ಅಥವಾ ಷಾ ರಾಜವಂಶಕ್ಕೆ ವಿನಾಯಿತಿ ಇದೆಯೇ? ಎಂದು ಟಿಎಂಸಿ ವಕ್ತಾರ ಸಾಕೇತ್ ಗೋಖಲೆ ಪ್ರಶ್ನಿಸಿದ್ದಾರೆ.

ಭಾರತದ ಧ್ವಜವನ್ನು ಹಿಡಿಯಲು ಬಿಜೆಪಿಯೇತರ ನಾಯಕರು ಯಾರಾದರೂ ನಿರಾಕರಿಸಿದರೆ ಇಷ್ಟೊತ್ತಿಗೆ ಅವರನ್ನು ದೇಶದ್ರೋಹಿಗಳೆಂದು ಇಡೀ ಬಿಜೆಪಿ ಐಟಿ ಸೆಲ್ ಕರೆಯುತ್ತಿತ್ತು. ಗೋಧಿ ಮೀಡಿಯಾ ದಿನವಿಡಿ ಅದರ ಕುರಿತು ಚರ್ಚಿಸುತ್ತಿತ್ತು. ಅದೃಷ್ಟವಶಾತ್ ಆ ಕೆಲಸ ಮಾಡಿರುವುದು ಶಾಹೆನ್‌ಶಾ ಅವರ ಮಗ ಜಯ್ ಶಾ ಎಂದು ಟಿಆರ್‌ಎಸ್‌ ಪಕ್ಷದ ಮುಖ್ಯಸ್ಥ ಕೃಷ್ಣನ್ ಟ್ವೀಟ್ ಮಾಡಿದ್ದಾರೆ.

ಭಾರತದ ಗೃಹ ಸಚಿವರ ಪುತ್ರ ರಾಷ್ಟ್ರಧ್ವಜವನ್ನು ಏಕೆ ಸ್ವೀಕರಿಸುತ್ತಿಲ್ಲ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಕೂಡ ಟೀಕಿಸಿದೆ. ಇಷ್ಟು ಮಾತ್ರವಲ್ಲದೆ ಜಯ್ ಶಾ ಏಕೆ ಭಾರತದ ಧ್ವಜವನ್ನು ಆ ಸಂದರ್ಭದಲ್ಲಿ ಸ್ವೀಕರಿಸಲಿಲ್ಲ ಎಂದು ಕೆಲವರು ವಿವರಣೆ ನೀಡಿದ್ದಾರೆ.

ಜಯ್ ಶಾ ಕೈಗೆ ಭಾರತದ ಬಾವುಟ ಕೊಡಲು ಹೋದಾಗ, ಆತ ನಿರಾಕರಿಸುವುದನ್ನು ಟ್ರಾಲ್ ಮಾಡಲಾಗುತ್ತಿದೆ. ಜಯ್ ಶಾ ಈಗ ಕೇವಲ ಬಿಸಿಸಿಐ ಕಾರ್ಯದರ್ಶಿ ಮಾತ್ರವಲ್ಲ, ಏಷಿಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ.ಆತನ ಜತೆ ಏಷಿಯಾದ ಇತರ ದೇಶಗಳ ಬೋರ್ಡ್ ಪದಾಧಿಕಾರಿಗಳೂ ಇದ್ದರು. ಹೀಗಾಗಿ ಆತ ಮಾಡಿದ್ದು ಸರಿಯಾಗೇ ಇದೆ ಎಂಬುದು ನನ್ನ ಅನಿಸಿಕೆ. ನಿಮಗೇನನ್ನಿಸುತ್ತದೆ? ಎಂದು ಪತ್ರಕರ್ತ ದಿನೇಶ್ ಕುಮಾರ್ ದಿನೂ ಬರೆದಿದ್ದಾರೆ. ನಿಮಗೆ ಈ ಕುರಿತು ಏನು ಅನ್ನಿಸುತ್ತದೆ ಎಂಬುದನ್ನು ಕಮೆಂಟ್ ಮಾಡಿ.

ಇದನ್ನೂ ಓದಿ: ಏಷ್ಯಾ ಕಪ್‌ನಲ್ಲಿ ಮತ್ತೆ ಎರಡು ಭಾರಿ ಭಾರತ – ಪಾಕ್ ಮುಖಾಮುಖಿಯಾಗಬಹುದು!: ಇಲ್ಲಿದೆ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...