Homeಮುಖಪುಟಜಯನಗರದ ಎಂಎಲ್‍ಎ ಸೌಮ್ಯರೆಡ್ಡಿ ಡೆಲ್ಲಿಯಲ್ಲಿ ಮಾಡಿದ್ದೇನು? ವಿಡಿಯೋ ನೋಡಿ

ಜಯನಗರದ ಎಂಎಲ್‍ಎ ಸೌಮ್ಯರೆಡ್ಡಿ ಡೆಲ್ಲಿಯಲ್ಲಿ ಮಾಡಿದ್ದೇನು? ವಿಡಿಯೋ ನೋಡಿ

- Advertisement -
- Advertisement -

ಕಾಂಗ್ರೆಸ್‍ನ ರೆಬೆಲ್ ನಾಯಕ ರಾಮಲಿಂಗಾರೆಡ್ಡಿಯವರ ಪುತ್ರಿ, ಜಯನಗರದ ಶಾಸಕಿ ಸೌಮ್ಯರೆಡ್ಡಿಯವರು ದೆಹಲಿಗೆ ತೆರಳಿ ಸೋನಿಯಾ ಗಾಂಧಿಯವರನ್ನು ಭೇಟಿಯಾಗಿದ್ದು ನಿಮಗೆಲ್ಲಾ ತಿಳಿದ ವಿಚಾರ. ಅದಾದ ನಂತರ ಅವರು ಮಾಡಿದ್ದೇನು ಗೊತ್ತೇ? ಅವರು ಎಲ್ಲಿಗೆ ಹೋಗಿದ್ದರು? ಏನು ಮಾಡಿದರು ಎಂಬುದನ್ನು ತಿಳಿಯಲು ಈ ವಿಡಿಯೋ ನೋಡಿ

ರಾಜಕೀಯ ಬಿಟ್ಟು ಸೌಮ್ಯರೆಡ್ಡಿಯವರು  ಪ್ರಸಿದ್ದವಾಗಿರುವ ದೆಹಲಿ ಸರ್ಕಾರಿ ಶಾಲೆ ಕಡೆ ಹೆಜ್ಜೆ ಹಾಕಿದ್ದಾರೆ. ಅಲ್ಲಿನ ಶಿಕ್ಷಕರು, ಮಕ್ಕಳು, ಮೂಲಭೂತ ಸೌಕರ್ಯಗಳನ್ನು ನೋಡಿ ನಿಬ್ಬೆರಗಾಗಿದ್ದಾರೆ. ಆನಂತರ ಅಲ್ಲಿನವರ ಕೋರಿಕೆಯ ಮೇಲೆ ವಿಡಿಯೋವೊಂದರಲ್ಲಿ ಮಾತಾಡಿದ್ದಾರೆ. ಅದರಲ್ಲಿ ಅವರೇಳುವದು ಇಷ್ಟು.

ಇಂದು ನಾನು ದೆಹಲಿಯ ರಾಜ್‍ಪೂತ್ ನಗರದ ಸರ್ಕಾರ ಶಾಲೆಯೊಂದಕ್ಕೆ ಬಂದು ಮಕ್ಕಳೊಡನೆ ಸಮಯ ಕಳೆಯುತ್ತಿದ್ದೇನೆ. ಇಲ್ಲಾಗಿರುವ ಬದಲಾವಣೆಗಳನ್ನು ನೋಡಿದರೆ ಬಹುದೊಡ್ಡ ಸ್ಫೂರ್ತಿಯೆನಿಸುತ್ತಿದೆ. ನಾನು ಇಲ್ಲಿನ ಮುಖ್ಯಶಿಕ್ಷಕರನ್ನು, ಸಹಶಿಕ್ಷಕರನ್ನು ಮಾತಾಡಿಸಿದೆ. ಇಲ್ಲಿರುವ ಮೂಲಭೂತ ಸೌಲಭ್ಯಗಳನ್ನು ಗಮನಿಸಿದೆ. ಕೇವಲ 4 ವರ್ಷದಲ್ಲಿ ಇಲ್ಲಾಗಿರುವ ಬದಲಾವಣೆಗಳು ನಮಗೆ ಅಚ್ಚರಿ ಮೂಡಿಸುತ್ತವೆ. ಅದು ಶಿಕ್ಷಕರ ತರಬೇತಿ ಇರಬಹುದು, ಕಟ್ಟಡ, ಕೊಠಡಿ ಸೇರಿದಂತೆ ಮೂಲಭೂತ ಸೌಕರ್ಯಗಳು, ಇಲ್ಲಿನ ವ್ಯವಸ್ಥೆ, ಮಕ್ಕಳ ಉತ್ತಮ ಕಲಿಕೆ, ಡ್ರಾಪ್‍ಔಟ್ ಕಡಿಮೆಯಾಗಿರುವುದು ಇವೆಲ್ಲವೂ ಒಳ್ಳೆಯ ಸಾಧನೆಗಳಾಗಿವೆ.

ಇದರಿಂದ ನಾನು ವಿಶೇಷವಾಗಿ ಪ್ರಭಾವಿತನಾಗಿದ್ದೇನೆ. ನಾನು ಕೂಡ ಕರ್ನಾಟಕದ ಜಯನಗರದ ಶಾಸಕಿಯಾಗಿದ್ದು ನಮ್ಮಲ್ಲಿಯೂ 14 ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿವೆ. ಇದೇ ಮಾದರಿಯನ್ನು ಅಲ್ಲಿಯೂ ಅಳವಡಿಸಲು ಬಯಸಿದ್ದೇನೆ. ಏಕೆಂದರೆ ಶಿಕ್ಷಣವೂ ಬಹಳ ಮುಖ್ಯವಾದ ಅಂಶವಾಗಿದ್ದು ಆ ತಳಹದಿಯನ್ನು ನಾವು ಗಟ್ಟಿ ಮಾಡಿದರೆ ಮಕ್ಕಳು ಏನನ್ನು ಬೇಕಾದರೂ ಸಾಧಿಸುತ್ತಾರೆ.

“ಈ ನಿಟ್ಟಿನಲ್ಲಿ ಇಲ್ಲಿ ನೀವೆಲ್ಲರೂ ಬಹಳ ಕಾಳಜಿಯಿಂದ ಮತ್ತು ತಾದ್ಯಾತ್ಮವಾಗಿ ಇಲ್ಲಿನ ಶಿಕ್ಷಣ ಪದ್ದತಿಯನ್ನು ಬದಲಾಯಿಸಲು ತೊಡಗಿಸಿಕೊಂಡಿದ್ದೀರಿ. ಇಲ್ಲಿನ ಸರ್ಕಾರವೂ ಇದಕ್ಕೆ ಒತ್ತಾಸೆಯಾಗಿ ನಿಂತಿದೆ. ಶೈಕ್ಷಣಿಗೆ ಕ್ರಾಂತಿಗೆ ತೊಡಗಿರುವ ನಿಮಗೆ ಧನ್ಯವಾದಗಳು” ಎಂದಿದ್ದಾರೆ.

ಕರ್ನಾಟಕದ ಆಮ್ ಆದ್ಮಿ ಪಕ್ಷದ ವಕ್ತಾರರಾದ ಮೋಹನ್ ದಾಸರಿಯವರು ಈ ವಿಡಿಯೋವನ್ನು ಹಂಚಿಕೊಂಡಿದ್ದು ನೀವು ಕರ್ನಾಟಕದಲ್ಲಿ ದೆಹಲಿ ಶಿಕ್ಷಣ ಮಾದರಿಯನ್ನು ಜಾರಿಗೊಳಿಸುವುದಾದರೆ ಅಗತ್ಯ ನೆರವು ನೀಡಲು ಸಿದ್ದವಿದ್ದೇವೆ ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...