Homeಮುಖಪುಟಜಯನಗರದ ಎಂಎಲ್‍ಎ ಸೌಮ್ಯರೆಡ್ಡಿ ಡೆಲ್ಲಿಯಲ್ಲಿ ಮಾಡಿದ್ದೇನು? ವಿಡಿಯೋ ನೋಡಿ

ಜಯನಗರದ ಎಂಎಲ್‍ಎ ಸೌಮ್ಯರೆಡ್ಡಿ ಡೆಲ್ಲಿಯಲ್ಲಿ ಮಾಡಿದ್ದೇನು? ವಿಡಿಯೋ ನೋಡಿ

- Advertisement -
- Advertisement -

ಕಾಂಗ್ರೆಸ್‍ನ ರೆಬೆಲ್ ನಾಯಕ ರಾಮಲಿಂಗಾರೆಡ್ಡಿಯವರ ಪುತ್ರಿ, ಜಯನಗರದ ಶಾಸಕಿ ಸೌಮ್ಯರೆಡ್ಡಿಯವರು ದೆಹಲಿಗೆ ತೆರಳಿ ಸೋನಿಯಾ ಗಾಂಧಿಯವರನ್ನು ಭೇಟಿಯಾಗಿದ್ದು ನಿಮಗೆಲ್ಲಾ ತಿಳಿದ ವಿಚಾರ. ಅದಾದ ನಂತರ ಅವರು ಮಾಡಿದ್ದೇನು ಗೊತ್ತೇ? ಅವರು ಎಲ್ಲಿಗೆ ಹೋಗಿದ್ದರು? ಏನು ಮಾಡಿದರು ಎಂಬುದನ್ನು ತಿಳಿಯಲು ಈ ವಿಡಿಯೋ ನೋಡಿ

ರಾಜಕೀಯ ಬಿಟ್ಟು ಸೌಮ್ಯರೆಡ್ಡಿಯವರು  ಪ್ರಸಿದ್ದವಾಗಿರುವ ದೆಹಲಿ ಸರ್ಕಾರಿ ಶಾಲೆ ಕಡೆ ಹೆಜ್ಜೆ ಹಾಕಿದ್ದಾರೆ. ಅಲ್ಲಿನ ಶಿಕ್ಷಕರು, ಮಕ್ಕಳು, ಮೂಲಭೂತ ಸೌಕರ್ಯಗಳನ್ನು ನೋಡಿ ನಿಬ್ಬೆರಗಾಗಿದ್ದಾರೆ. ಆನಂತರ ಅಲ್ಲಿನವರ ಕೋರಿಕೆಯ ಮೇಲೆ ವಿಡಿಯೋವೊಂದರಲ್ಲಿ ಮಾತಾಡಿದ್ದಾರೆ. ಅದರಲ್ಲಿ ಅವರೇಳುವದು ಇಷ್ಟು.

ಇಂದು ನಾನು ದೆಹಲಿಯ ರಾಜ್‍ಪೂತ್ ನಗರದ ಸರ್ಕಾರ ಶಾಲೆಯೊಂದಕ್ಕೆ ಬಂದು ಮಕ್ಕಳೊಡನೆ ಸಮಯ ಕಳೆಯುತ್ತಿದ್ದೇನೆ. ಇಲ್ಲಾಗಿರುವ ಬದಲಾವಣೆಗಳನ್ನು ನೋಡಿದರೆ ಬಹುದೊಡ್ಡ ಸ್ಫೂರ್ತಿಯೆನಿಸುತ್ತಿದೆ. ನಾನು ಇಲ್ಲಿನ ಮುಖ್ಯಶಿಕ್ಷಕರನ್ನು, ಸಹಶಿಕ್ಷಕರನ್ನು ಮಾತಾಡಿಸಿದೆ. ಇಲ್ಲಿರುವ ಮೂಲಭೂತ ಸೌಲಭ್ಯಗಳನ್ನು ಗಮನಿಸಿದೆ. ಕೇವಲ 4 ವರ್ಷದಲ್ಲಿ ಇಲ್ಲಾಗಿರುವ ಬದಲಾವಣೆಗಳು ನಮಗೆ ಅಚ್ಚರಿ ಮೂಡಿಸುತ್ತವೆ. ಅದು ಶಿಕ್ಷಕರ ತರಬೇತಿ ಇರಬಹುದು, ಕಟ್ಟಡ, ಕೊಠಡಿ ಸೇರಿದಂತೆ ಮೂಲಭೂತ ಸೌಕರ್ಯಗಳು, ಇಲ್ಲಿನ ವ್ಯವಸ್ಥೆ, ಮಕ್ಕಳ ಉತ್ತಮ ಕಲಿಕೆ, ಡ್ರಾಪ್‍ಔಟ್ ಕಡಿಮೆಯಾಗಿರುವುದು ಇವೆಲ್ಲವೂ ಒಳ್ಳೆಯ ಸಾಧನೆಗಳಾಗಿವೆ.

ಇದರಿಂದ ನಾನು ವಿಶೇಷವಾಗಿ ಪ್ರಭಾವಿತನಾಗಿದ್ದೇನೆ. ನಾನು ಕೂಡ ಕರ್ನಾಟಕದ ಜಯನಗರದ ಶಾಸಕಿಯಾಗಿದ್ದು ನಮ್ಮಲ್ಲಿಯೂ 14 ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿವೆ. ಇದೇ ಮಾದರಿಯನ್ನು ಅಲ್ಲಿಯೂ ಅಳವಡಿಸಲು ಬಯಸಿದ್ದೇನೆ. ಏಕೆಂದರೆ ಶಿಕ್ಷಣವೂ ಬಹಳ ಮುಖ್ಯವಾದ ಅಂಶವಾಗಿದ್ದು ಆ ತಳಹದಿಯನ್ನು ನಾವು ಗಟ್ಟಿ ಮಾಡಿದರೆ ಮಕ್ಕಳು ಏನನ್ನು ಬೇಕಾದರೂ ಸಾಧಿಸುತ್ತಾರೆ.

“ಈ ನಿಟ್ಟಿನಲ್ಲಿ ಇಲ್ಲಿ ನೀವೆಲ್ಲರೂ ಬಹಳ ಕಾಳಜಿಯಿಂದ ಮತ್ತು ತಾದ್ಯಾತ್ಮವಾಗಿ ಇಲ್ಲಿನ ಶಿಕ್ಷಣ ಪದ್ದತಿಯನ್ನು ಬದಲಾಯಿಸಲು ತೊಡಗಿಸಿಕೊಂಡಿದ್ದೀರಿ. ಇಲ್ಲಿನ ಸರ್ಕಾರವೂ ಇದಕ್ಕೆ ಒತ್ತಾಸೆಯಾಗಿ ನಿಂತಿದೆ. ಶೈಕ್ಷಣಿಗೆ ಕ್ರಾಂತಿಗೆ ತೊಡಗಿರುವ ನಿಮಗೆ ಧನ್ಯವಾದಗಳು” ಎಂದಿದ್ದಾರೆ.

ಕರ್ನಾಟಕದ ಆಮ್ ಆದ್ಮಿ ಪಕ್ಷದ ವಕ್ತಾರರಾದ ಮೋಹನ್ ದಾಸರಿಯವರು ಈ ವಿಡಿಯೋವನ್ನು ಹಂಚಿಕೊಂಡಿದ್ದು ನೀವು ಕರ್ನಾಟಕದಲ್ಲಿ ದೆಹಲಿ ಶಿಕ್ಷಣ ಮಾದರಿಯನ್ನು ಜಾರಿಗೊಳಿಸುವುದಾದರೆ ಅಗತ್ಯ ನೆರವು ನೀಡಲು ಸಿದ್ದವಿದ್ದೇವೆ ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...