Homeಮುಖಪುಟಜಯನಗರದ ಎಂಎಲ್‍ಎ ಸೌಮ್ಯರೆಡ್ಡಿ ಡೆಲ್ಲಿಯಲ್ಲಿ ಮಾಡಿದ್ದೇನು? ವಿಡಿಯೋ ನೋಡಿ

ಜಯನಗರದ ಎಂಎಲ್‍ಎ ಸೌಮ್ಯರೆಡ್ಡಿ ಡೆಲ್ಲಿಯಲ್ಲಿ ಮಾಡಿದ್ದೇನು? ವಿಡಿಯೋ ನೋಡಿ

- Advertisement -
- Advertisement -

ಕಾಂಗ್ರೆಸ್‍ನ ರೆಬೆಲ್ ನಾಯಕ ರಾಮಲಿಂಗಾರೆಡ್ಡಿಯವರ ಪುತ್ರಿ, ಜಯನಗರದ ಶಾಸಕಿ ಸೌಮ್ಯರೆಡ್ಡಿಯವರು ದೆಹಲಿಗೆ ತೆರಳಿ ಸೋನಿಯಾ ಗಾಂಧಿಯವರನ್ನು ಭೇಟಿಯಾಗಿದ್ದು ನಿಮಗೆಲ್ಲಾ ತಿಳಿದ ವಿಚಾರ. ಅದಾದ ನಂತರ ಅವರು ಮಾಡಿದ್ದೇನು ಗೊತ್ತೇ? ಅವರು ಎಲ್ಲಿಗೆ ಹೋಗಿದ್ದರು? ಏನು ಮಾಡಿದರು ಎಂಬುದನ್ನು ತಿಳಿಯಲು ಈ ವಿಡಿಯೋ ನೋಡಿ

ರಾಜಕೀಯ ಬಿಟ್ಟು ಸೌಮ್ಯರೆಡ್ಡಿಯವರು  ಪ್ರಸಿದ್ದವಾಗಿರುವ ದೆಹಲಿ ಸರ್ಕಾರಿ ಶಾಲೆ ಕಡೆ ಹೆಜ್ಜೆ ಹಾಕಿದ್ದಾರೆ. ಅಲ್ಲಿನ ಶಿಕ್ಷಕರು, ಮಕ್ಕಳು, ಮೂಲಭೂತ ಸೌಕರ್ಯಗಳನ್ನು ನೋಡಿ ನಿಬ್ಬೆರಗಾಗಿದ್ದಾರೆ. ಆನಂತರ ಅಲ್ಲಿನವರ ಕೋರಿಕೆಯ ಮೇಲೆ ವಿಡಿಯೋವೊಂದರಲ್ಲಿ ಮಾತಾಡಿದ್ದಾರೆ. ಅದರಲ್ಲಿ ಅವರೇಳುವದು ಇಷ್ಟು.

ಇಂದು ನಾನು ದೆಹಲಿಯ ರಾಜ್‍ಪೂತ್ ನಗರದ ಸರ್ಕಾರ ಶಾಲೆಯೊಂದಕ್ಕೆ ಬಂದು ಮಕ್ಕಳೊಡನೆ ಸಮಯ ಕಳೆಯುತ್ತಿದ್ದೇನೆ. ಇಲ್ಲಾಗಿರುವ ಬದಲಾವಣೆಗಳನ್ನು ನೋಡಿದರೆ ಬಹುದೊಡ್ಡ ಸ್ಫೂರ್ತಿಯೆನಿಸುತ್ತಿದೆ. ನಾನು ಇಲ್ಲಿನ ಮುಖ್ಯಶಿಕ್ಷಕರನ್ನು, ಸಹಶಿಕ್ಷಕರನ್ನು ಮಾತಾಡಿಸಿದೆ. ಇಲ್ಲಿರುವ ಮೂಲಭೂತ ಸೌಲಭ್ಯಗಳನ್ನು ಗಮನಿಸಿದೆ. ಕೇವಲ 4 ವರ್ಷದಲ್ಲಿ ಇಲ್ಲಾಗಿರುವ ಬದಲಾವಣೆಗಳು ನಮಗೆ ಅಚ್ಚರಿ ಮೂಡಿಸುತ್ತವೆ. ಅದು ಶಿಕ್ಷಕರ ತರಬೇತಿ ಇರಬಹುದು, ಕಟ್ಟಡ, ಕೊಠಡಿ ಸೇರಿದಂತೆ ಮೂಲಭೂತ ಸೌಕರ್ಯಗಳು, ಇಲ್ಲಿನ ವ್ಯವಸ್ಥೆ, ಮಕ್ಕಳ ಉತ್ತಮ ಕಲಿಕೆ, ಡ್ರಾಪ್‍ಔಟ್ ಕಡಿಮೆಯಾಗಿರುವುದು ಇವೆಲ್ಲವೂ ಒಳ್ಳೆಯ ಸಾಧನೆಗಳಾಗಿವೆ.

ಇದರಿಂದ ನಾನು ವಿಶೇಷವಾಗಿ ಪ್ರಭಾವಿತನಾಗಿದ್ದೇನೆ. ನಾನು ಕೂಡ ಕರ್ನಾಟಕದ ಜಯನಗರದ ಶಾಸಕಿಯಾಗಿದ್ದು ನಮ್ಮಲ್ಲಿಯೂ 14 ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿವೆ. ಇದೇ ಮಾದರಿಯನ್ನು ಅಲ್ಲಿಯೂ ಅಳವಡಿಸಲು ಬಯಸಿದ್ದೇನೆ. ಏಕೆಂದರೆ ಶಿಕ್ಷಣವೂ ಬಹಳ ಮುಖ್ಯವಾದ ಅಂಶವಾಗಿದ್ದು ಆ ತಳಹದಿಯನ್ನು ನಾವು ಗಟ್ಟಿ ಮಾಡಿದರೆ ಮಕ್ಕಳು ಏನನ್ನು ಬೇಕಾದರೂ ಸಾಧಿಸುತ್ತಾರೆ.

“ಈ ನಿಟ್ಟಿನಲ್ಲಿ ಇಲ್ಲಿ ನೀವೆಲ್ಲರೂ ಬಹಳ ಕಾಳಜಿಯಿಂದ ಮತ್ತು ತಾದ್ಯಾತ್ಮವಾಗಿ ಇಲ್ಲಿನ ಶಿಕ್ಷಣ ಪದ್ದತಿಯನ್ನು ಬದಲಾಯಿಸಲು ತೊಡಗಿಸಿಕೊಂಡಿದ್ದೀರಿ. ಇಲ್ಲಿನ ಸರ್ಕಾರವೂ ಇದಕ್ಕೆ ಒತ್ತಾಸೆಯಾಗಿ ನಿಂತಿದೆ. ಶೈಕ್ಷಣಿಗೆ ಕ್ರಾಂತಿಗೆ ತೊಡಗಿರುವ ನಿಮಗೆ ಧನ್ಯವಾದಗಳು” ಎಂದಿದ್ದಾರೆ.

ಕರ್ನಾಟಕದ ಆಮ್ ಆದ್ಮಿ ಪಕ್ಷದ ವಕ್ತಾರರಾದ ಮೋಹನ್ ದಾಸರಿಯವರು ಈ ವಿಡಿಯೋವನ್ನು ಹಂಚಿಕೊಂಡಿದ್ದು ನೀವು ಕರ್ನಾಟಕದಲ್ಲಿ ದೆಹಲಿ ಶಿಕ್ಷಣ ಮಾದರಿಯನ್ನು ಜಾರಿಗೊಳಿಸುವುದಾದರೆ ಅಗತ್ಯ ನೆರವು ನೀಡಲು ಸಿದ್ದವಿದ್ದೇವೆ ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...