Homeಮುಖಪುಟಜಯನಗರದ ಎಂಎಲ್‍ಎ ಸೌಮ್ಯರೆಡ್ಡಿ ಡೆಲ್ಲಿಯಲ್ಲಿ ಮಾಡಿದ್ದೇನು? ವಿಡಿಯೋ ನೋಡಿ

ಜಯನಗರದ ಎಂಎಲ್‍ಎ ಸೌಮ್ಯರೆಡ್ಡಿ ಡೆಲ್ಲಿಯಲ್ಲಿ ಮಾಡಿದ್ದೇನು? ವಿಡಿಯೋ ನೋಡಿ

- Advertisement -
- Advertisement -

ಕಾಂಗ್ರೆಸ್‍ನ ರೆಬೆಲ್ ನಾಯಕ ರಾಮಲಿಂಗಾರೆಡ್ಡಿಯವರ ಪುತ್ರಿ, ಜಯನಗರದ ಶಾಸಕಿ ಸೌಮ್ಯರೆಡ್ಡಿಯವರು ದೆಹಲಿಗೆ ತೆರಳಿ ಸೋನಿಯಾ ಗಾಂಧಿಯವರನ್ನು ಭೇಟಿಯಾಗಿದ್ದು ನಿಮಗೆಲ್ಲಾ ತಿಳಿದ ವಿಚಾರ. ಅದಾದ ನಂತರ ಅವರು ಮಾಡಿದ್ದೇನು ಗೊತ್ತೇ? ಅವರು ಎಲ್ಲಿಗೆ ಹೋಗಿದ್ದರು? ಏನು ಮಾಡಿದರು ಎಂಬುದನ್ನು ತಿಳಿಯಲು ಈ ವಿಡಿಯೋ ನೋಡಿ

ರಾಜಕೀಯ ಬಿಟ್ಟು ಸೌಮ್ಯರೆಡ್ಡಿಯವರು  ಪ್ರಸಿದ್ದವಾಗಿರುವ ದೆಹಲಿ ಸರ್ಕಾರಿ ಶಾಲೆ ಕಡೆ ಹೆಜ್ಜೆ ಹಾಕಿದ್ದಾರೆ. ಅಲ್ಲಿನ ಶಿಕ್ಷಕರು, ಮಕ್ಕಳು, ಮೂಲಭೂತ ಸೌಕರ್ಯಗಳನ್ನು ನೋಡಿ ನಿಬ್ಬೆರಗಾಗಿದ್ದಾರೆ. ಆನಂತರ ಅಲ್ಲಿನವರ ಕೋರಿಕೆಯ ಮೇಲೆ ವಿಡಿಯೋವೊಂದರಲ್ಲಿ ಮಾತಾಡಿದ್ದಾರೆ. ಅದರಲ್ಲಿ ಅವರೇಳುವದು ಇಷ್ಟು.

ಇಂದು ನಾನು ದೆಹಲಿಯ ರಾಜ್‍ಪೂತ್ ನಗರದ ಸರ್ಕಾರ ಶಾಲೆಯೊಂದಕ್ಕೆ ಬಂದು ಮಕ್ಕಳೊಡನೆ ಸಮಯ ಕಳೆಯುತ್ತಿದ್ದೇನೆ. ಇಲ್ಲಾಗಿರುವ ಬದಲಾವಣೆಗಳನ್ನು ನೋಡಿದರೆ ಬಹುದೊಡ್ಡ ಸ್ಫೂರ್ತಿಯೆನಿಸುತ್ತಿದೆ. ನಾನು ಇಲ್ಲಿನ ಮುಖ್ಯಶಿಕ್ಷಕರನ್ನು, ಸಹಶಿಕ್ಷಕರನ್ನು ಮಾತಾಡಿಸಿದೆ. ಇಲ್ಲಿರುವ ಮೂಲಭೂತ ಸೌಲಭ್ಯಗಳನ್ನು ಗಮನಿಸಿದೆ. ಕೇವಲ 4 ವರ್ಷದಲ್ಲಿ ಇಲ್ಲಾಗಿರುವ ಬದಲಾವಣೆಗಳು ನಮಗೆ ಅಚ್ಚರಿ ಮೂಡಿಸುತ್ತವೆ. ಅದು ಶಿಕ್ಷಕರ ತರಬೇತಿ ಇರಬಹುದು, ಕಟ್ಟಡ, ಕೊಠಡಿ ಸೇರಿದಂತೆ ಮೂಲಭೂತ ಸೌಕರ್ಯಗಳು, ಇಲ್ಲಿನ ವ್ಯವಸ್ಥೆ, ಮಕ್ಕಳ ಉತ್ತಮ ಕಲಿಕೆ, ಡ್ರಾಪ್‍ಔಟ್ ಕಡಿಮೆಯಾಗಿರುವುದು ಇವೆಲ್ಲವೂ ಒಳ್ಳೆಯ ಸಾಧನೆಗಳಾಗಿವೆ.

ಇದರಿಂದ ನಾನು ವಿಶೇಷವಾಗಿ ಪ್ರಭಾವಿತನಾಗಿದ್ದೇನೆ. ನಾನು ಕೂಡ ಕರ್ನಾಟಕದ ಜಯನಗರದ ಶಾಸಕಿಯಾಗಿದ್ದು ನಮ್ಮಲ್ಲಿಯೂ 14 ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿವೆ. ಇದೇ ಮಾದರಿಯನ್ನು ಅಲ್ಲಿಯೂ ಅಳವಡಿಸಲು ಬಯಸಿದ್ದೇನೆ. ಏಕೆಂದರೆ ಶಿಕ್ಷಣವೂ ಬಹಳ ಮುಖ್ಯವಾದ ಅಂಶವಾಗಿದ್ದು ಆ ತಳಹದಿಯನ್ನು ನಾವು ಗಟ್ಟಿ ಮಾಡಿದರೆ ಮಕ್ಕಳು ಏನನ್ನು ಬೇಕಾದರೂ ಸಾಧಿಸುತ್ತಾರೆ.

“ಈ ನಿಟ್ಟಿನಲ್ಲಿ ಇಲ್ಲಿ ನೀವೆಲ್ಲರೂ ಬಹಳ ಕಾಳಜಿಯಿಂದ ಮತ್ತು ತಾದ್ಯಾತ್ಮವಾಗಿ ಇಲ್ಲಿನ ಶಿಕ್ಷಣ ಪದ್ದತಿಯನ್ನು ಬದಲಾಯಿಸಲು ತೊಡಗಿಸಿಕೊಂಡಿದ್ದೀರಿ. ಇಲ್ಲಿನ ಸರ್ಕಾರವೂ ಇದಕ್ಕೆ ಒತ್ತಾಸೆಯಾಗಿ ನಿಂತಿದೆ. ಶೈಕ್ಷಣಿಗೆ ಕ್ರಾಂತಿಗೆ ತೊಡಗಿರುವ ನಿಮಗೆ ಧನ್ಯವಾದಗಳು” ಎಂದಿದ್ದಾರೆ.

ಕರ್ನಾಟಕದ ಆಮ್ ಆದ್ಮಿ ಪಕ್ಷದ ವಕ್ತಾರರಾದ ಮೋಹನ್ ದಾಸರಿಯವರು ಈ ವಿಡಿಯೋವನ್ನು ಹಂಚಿಕೊಂಡಿದ್ದು ನೀವು ಕರ್ನಾಟಕದಲ್ಲಿ ದೆಹಲಿ ಶಿಕ್ಷಣ ಮಾದರಿಯನ್ನು ಜಾರಿಗೊಳಿಸುವುದಾದರೆ ಅಗತ್ಯ ನೆರವು ನೀಡಲು ಸಿದ್ದವಿದ್ದೇವೆ ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...