Homeಮುಖಪುಟಜಯನಗರದ ಎಂಎಲ್‍ಎ ಸೌಮ್ಯರೆಡ್ಡಿ ಡೆಲ್ಲಿಯಲ್ಲಿ ಮಾಡಿದ್ದೇನು? ವಿಡಿಯೋ ನೋಡಿ

ಜಯನಗರದ ಎಂಎಲ್‍ಎ ಸೌಮ್ಯರೆಡ್ಡಿ ಡೆಲ್ಲಿಯಲ್ಲಿ ಮಾಡಿದ್ದೇನು? ವಿಡಿಯೋ ನೋಡಿ

- Advertisement -
- Advertisement -

ಕಾಂಗ್ರೆಸ್‍ನ ರೆಬೆಲ್ ನಾಯಕ ರಾಮಲಿಂಗಾರೆಡ್ಡಿಯವರ ಪುತ್ರಿ, ಜಯನಗರದ ಶಾಸಕಿ ಸೌಮ್ಯರೆಡ್ಡಿಯವರು ದೆಹಲಿಗೆ ತೆರಳಿ ಸೋನಿಯಾ ಗಾಂಧಿಯವರನ್ನು ಭೇಟಿಯಾಗಿದ್ದು ನಿಮಗೆಲ್ಲಾ ತಿಳಿದ ವಿಚಾರ. ಅದಾದ ನಂತರ ಅವರು ಮಾಡಿದ್ದೇನು ಗೊತ್ತೇ? ಅವರು ಎಲ್ಲಿಗೆ ಹೋಗಿದ್ದರು? ಏನು ಮಾಡಿದರು ಎಂಬುದನ್ನು ತಿಳಿಯಲು ಈ ವಿಡಿಯೋ ನೋಡಿ

ರಾಜಕೀಯ ಬಿಟ್ಟು ಸೌಮ್ಯರೆಡ್ಡಿಯವರು  ಪ್ರಸಿದ್ದವಾಗಿರುವ ದೆಹಲಿ ಸರ್ಕಾರಿ ಶಾಲೆ ಕಡೆ ಹೆಜ್ಜೆ ಹಾಕಿದ್ದಾರೆ. ಅಲ್ಲಿನ ಶಿಕ್ಷಕರು, ಮಕ್ಕಳು, ಮೂಲಭೂತ ಸೌಕರ್ಯಗಳನ್ನು ನೋಡಿ ನಿಬ್ಬೆರಗಾಗಿದ್ದಾರೆ. ಆನಂತರ ಅಲ್ಲಿನವರ ಕೋರಿಕೆಯ ಮೇಲೆ ವಿಡಿಯೋವೊಂದರಲ್ಲಿ ಮಾತಾಡಿದ್ದಾರೆ. ಅದರಲ್ಲಿ ಅವರೇಳುವದು ಇಷ್ಟು.

ಇಂದು ನಾನು ದೆಹಲಿಯ ರಾಜ್‍ಪೂತ್ ನಗರದ ಸರ್ಕಾರ ಶಾಲೆಯೊಂದಕ್ಕೆ ಬಂದು ಮಕ್ಕಳೊಡನೆ ಸಮಯ ಕಳೆಯುತ್ತಿದ್ದೇನೆ. ಇಲ್ಲಾಗಿರುವ ಬದಲಾವಣೆಗಳನ್ನು ನೋಡಿದರೆ ಬಹುದೊಡ್ಡ ಸ್ಫೂರ್ತಿಯೆನಿಸುತ್ತಿದೆ. ನಾನು ಇಲ್ಲಿನ ಮುಖ್ಯಶಿಕ್ಷಕರನ್ನು, ಸಹಶಿಕ್ಷಕರನ್ನು ಮಾತಾಡಿಸಿದೆ. ಇಲ್ಲಿರುವ ಮೂಲಭೂತ ಸೌಲಭ್ಯಗಳನ್ನು ಗಮನಿಸಿದೆ. ಕೇವಲ 4 ವರ್ಷದಲ್ಲಿ ಇಲ್ಲಾಗಿರುವ ಬದಲಾವಣೆಗಳು ನಮಗೆ ಅಚ್ಚರಿ ಮೂಡಿಸುತ್ತವೆ. ಅದು ಶಿಕ್ಷಕರ ತರಬೇತಿ ಇರಬಹುದು, ಕಟ್ಟಡ, ಕೊಠಡಿ ಸೇರಿದಂತೆ ಮೂಲಭೂತ ಸೌಕರ್ಯಗಳು, ಇಲ್ಲಿನ ವ್ಯವಸ್ಥೆ, ಮಕ್ಕಳ ಉತ್ತಮ ಕಲಿಕೆ, ಡ್ರಾಪ್‍ಔಟ್ ಕಡಿಮೆಯಾಗಿರುವುದು ಇವೆಲ್ಲವೂ ಒಳ್ಳೆಯ ಸಾಧನೆಗಳಾಗಿವೆ.

ಇದರಿಂದ ನಾನು ವಿಶೇಷವಾಗಿ ಪ್ರಭಾವಿತನಾಗಿದ್ದೇನೆ. ನಾನು ಕೂಡ ಕರ್ನಾಟಕದ ಜಯನಗರದ ಶಾಸಕಿಯಾಗಿದ್ದು ನಮ್ಮಲ್ಲಿಯೂ 14 ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿವೆ. ಇದೇ ಮಾದರಿಯನ್ನು ಅಲ್ಲಿಯೂ ಅಳವಡಿಸಲು ಬಯಸಿದ್ದೇನೆ. ಏಕೆಂದರೆ ಶಿಕ್ಷಣವೂ ಬಹಳ ಮುಖ್ಯವಾದ ಅಂಶವಾಗಿದ್ದು ಆ ತಳಹದಿಯನ್ನು ನಾವು ಗಟ್ಟಿ ಮಾಡಿದರೆ ಮಕ್ಕಳು ಏನನ್ನು ಬೇಕಾದರೂ ಸಾಧಿಸುತ್ತಾರೆ.

“ಈ ನಿಟ್ಟಿನಲ್ಲಿ ಇಲ್ಲಿ ನೀವೆಲ್ಲರೂ ಬಹಳ ಕಾಳಜಿಯಿಂದ ಮತ್ತು ತಾದ್ಯಾತ್ಮವಾಗಿ ಇಲ್ಲಿನ ಶಿಕ್ಷಣ ಪದ್ದತಿಯನ್ನು ಬದಲಾಯಿಸಲು ತೊಡಗಿಸಿಕೊಂಡಿದ್ದೀರಿ. ಇಲ್ಲಿನ ಸರ್ಕಾರವೂ ಇದಕ್ಕೆ ಒತ್ತಾಸೆಯಾಗಿ ನಿಂತಿದೆ. ಶೈಕ್ಷಣಿಗೆ ಕ್ರಾಂತಿಗೆ ತೊಡಗಿರುವ ನಿಮಗೆ ಧನ್ಯವಾದಗಳು” ಎಂದಿದ್ದಾರೆ.

ಕರ್ನಾಟಕದ ಆಮ್ ಆದ್ಮಿ ಪಕ್ಷದ ವಕ್ತಾರರಾದ ಮೋಹನ್ ದಾಸರಿಯವರು ಈ ವಿಡಿಯೋವನ್ನು ಹಂಚಿಕೊಂಡಿದ್ದು ನೀವು ಕರ್ನಾಟಕದಲ್ಲಿ ದೆಹಲಿ ಶಿಕ್ಷಣ ಮಾದರಿಯನ್ನು ಜಾರಿಗೊಳಿಸುವುದಾದರೆ ಅಗತ್ಯ ನೆರವು ನೀಡಲು ಸಿದ್ದವಿದ್ದೇವೆ ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...